ದಿನದ ಸುದ್ದಿ
ವೇದ ಗ್ರಂಥಗಳೇ ಹೇಳುತ್ತಿವೆ ‘ಬ್ರಾಹ್ಮಣರು ಗೋ ಮಾಂಸ’ ತಿನ್ನುತ್ತಿದ್ದರೆಂದು..! : ಓದಿ ಈ ಲೇಖನ
- ವಿ.ಎಸ್. ಬಾಬು
ಬ್ರಾಹ್ಮಣರು ಗೋಮಾಂಸ ತಿನ್ನುತ್ತಿದ್ದರು. ಎಂದು ಅವರು ಬರೆದಿರುವ ವೇದ ಗ್ರಂಥಗಳೇ ಹೇಳುತ್ತಿವೆ ನೋಡಿ…
1 – “ಅಧೋ ಅನ್ನಂ ವಾಯ್ ಗೋವಾ” – “ವಾಸ್ತವವಾಗಿ ಗೋವು ನಮ್ಮ ಆಹಾರವಾಗಿದೆ “. – [ಐತೇರಿಯ ಬ್ರಾಹ್ಮಣ್ಯ: – 111.9.8]
2 – “ಮಾಂಸವಿಲ್ಲದೆ ಮಧುವನನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ “[ಆಶ್ವಲಾಯನ ಗೃಹ್ಯ ಸೂತ್ರ: 1-4]
3 – “ಪಂಡಿತರು, ಪ್ರಸಿದ್ಧರು, ಸಾಮಾಜಿಕರು, ದೇವತೆ, ವೇದಪತಿ, ಕೇಳುಗನನ್ನು ಕೇಳಲು ಬಯಸುವ ತಾಯಿ, ಅಗುನ ಮಗ, ಎಮ್ಮೆ ಅಥವಾ ಎತ್ತು ಮಾಂಸವನ್ನು ತಿನ್ನಬೇಕು.”
[ಬೃಹದಾರಣ್ಯಕಂ]
4 – “ ವಯಸ್ಸಿನಲ್ಲಿದ್ದ ಕರುವನ್ನಾದರೂ, ಅಥವಾ
ಕಡು ವಯಸ್ಸಿನಲ್ಲಿದ್ದ ಎತ್ತನ್ನಾದರೂ ತಿನ್ನಬೇಕು ” [ಶಂಕರಾಚಾರ್ಯರು]
5 – “ ನನ್ನ ಶರೀರದಲ್ಲಿ ಮಾಂಸ ಇರುವ ತನಕ ನಾನು ಎಳೆ ಹಸುವಿನ ಮಾಂಸವನ್ನ ತಿನ್ನುತ್ತೇನೆ “. – [ ಯಜ್ಞವಲ್ಕ – ಶತಪದ ಬ್ರಾಹ್ಮಣ ]
6 – ಭಾರದ್ವಾಜನು ಒಂದು ಕರುವನ್ನು ಕೊಂದು ರಾಮನ ಊಟಕ್ಕೆ ಆಹ್ವಾನಿಸಿದನು
[ ರಾಮಾಯಣ ]
7 – ಯಜ್ಞಗಳು, ಯಾಗಗಳು ಮಾಡಿದ ಮಾಂಸವನ್ನು ತಿನ್ನದಿದ್ದರೆ ಅವನು ಬರುವ ಮುಂದಿನ ಇಪ್ಪತ್ತು ಜನ್ಮಗಳು ಪ್ರಾಣಿಗಳಂತೆ ಹುಟ್ಟುತ್ತಾನೆ. [ ಮನುಧರ್ಮ ಶಾಸ್ತ್ರ – ಸೂಕ್ತ 35 ]
8 – ಮನೆಯಲ್ಲಿ ಎತ್ತು ಮಾಂಸವನ್ನು ತಿನ್ನಬಹುದು, ಹಾಲು ಕೊಡುವ ಹಸುಗಳನ್ನು ಕರುಗಳನ್ನು ಬಲಿ ಕೊಡಬಹುದು ಆದರೆ ಕಟುಕನಿಗೆ ಮಾರಬಾರದು. [ ಕೌಟಿಲ್ಯನ ಅರ್ಥಶಾಸ್ತ್ರ ]
9 – ಉತ್ತರಕ್ರಿಯದಲ್ಲಿ (ದಶದಿನ ಕರ್ಮದಲ್ಲಿ) ಭಾಗವಾಗಿ ಹಸುವನ್ನಾದರೂ, ಎತ್ತನ್ನಾದರೂ ಕೊಂದು ಬ್ರಾಹ್ಮಣರಿಗೆ ಕೊಡುತ್ತಿದ್ದರು. [ ಋಗ್ವೇದ 10, 14-1 ]
10 – ರಂಡಿ ದೇವರ ಊಟ ಅಡುಗೆಮನೆಯಲ್ಲಿ ಎತ್ತನ್ನು ಕೊಂದು ಧಾನ್ಯದ ಜೊತೆಗೆ ಮಾಂಸವನ್ನು ಬಡಿಸುತ್ತಿದ್ದರು. [ ಅಥರ್ವಣ ವೇದ – 11.2, 4]
11 – ಇಂದ್ರನಿಗೆ, ಶಿವನಿಗೆ ಹಸುಗಳನ್ನು ಬಲಿಕೊಡಬೇಕು, ಗರ್ಭಿಣಿ ಸ್ತ್ರೀಯರು ಕೆಂಪು ಎತ್ತಿನ ಮಾಂಸವನ್ನು ತಿಂದರೆ ಶ್ರೇಷ್ಠ ಮಗುವಿಗೆ ಜನ್ಮಕೊಡುತ್ತಾರೆ. [ ಯಾಜ್ಞವಲ್ಕ ಸ್ಮೃತಿ ]
12 – ‘ನಿಮಗೆ ಆಶ್ಚರ್ಯವಾಗಬಹುದು ಪ್ರಾಚೀನ ಹಿಂದೂ ವಿಧಿ ಮತ್ತು ಆಚರಣೆಗಳ ಪ್ರಕಾರ, ದನದ ಮಾಂಸ ತಿನ್ನದಿದ್ದರೆ ಆತ ಒಳ್ಳೆಯ ಹಿಂದೂ ಆಗಲು ಸಾಧ್ಯವಿರಲಿಲ್ಲ’ ಈ ಭಾರತದಲ್ಲೇ ಒಂದು ಕಾಲವಿತ್ತು. ದನವನ್ನು ತಿನ್ನದೇ ಯಾವ ಬ್ರಾಹ್ಮಣನೂ ಬ್ರಾಹ್ಮಣನಾಗಿ ಇರಲು ಸಾಧ್ಯವಿರಲಿಲ್ಲ. ಸನ್ಯಾಸಿಗಳು ಅಥವಾ ರಾಜರು ಅಥವಾ ಯಾರಾದರೂ ಮಹಾಪುರುಷರು ಮನೆಗೆ ಬಂದಾಗ ಅತ್ಯುತ್ತಮವಾದ ಎತ್ತನ್ನು ಕಡಿಯಲಾಗುತ್ತಿತ್ತು ಎಂಬುದನ್ನು ವೇದಗಳಲ್ಲಿ ನೀವು ಓದಬಹುದು’
ಸ್ವಾಮಿ ವಿವೇಕಾನಂದ: [ ಸಮಗ್ರ ಕೃತಿಗಳು ಸಂಪುಟ-3, ಪುಟ-536 ]
ಈಗ ಅವರು ಗೋ ಹತ್ಯೆ ನಿಷೇಧ ಮಾಡಬೇಕೆಂದು ಹೇಳುತ್ತಿದ್ದಾರೆ ಹಾಗದರೆ ಅವರು ಬರೆದಿರುವ ವೇದಗಳನ್ನು ಅವರೆ ಸುಟ್ಟು ಹಾಕಲಿ. ಇಲ್ಲವೆ ಈ ಮಂಡು ವಾದವನ್ನಾದರೂ ಬಿಡಲಿ ಎಂದು ಮನವಿ ಮಾಡುತ್ತೇನೆ ನೀವು ಮಾಡಿಕೊಳ್ಳಿ.
ಎರಡು ದೋಣಿಯಲ್ಲಿ ಕಾಲಿಟ್ಟು ಸಮುದ್ರ ದಾಟಲು ಸಾಧ್ಯವಿಲ್ಲ. ತೀರ್ಮಾನ ಬ್ರಾಹ್ಮಣರಿಗೆ ಬಿಡೋಣ ಧನ್ಯವಾದಗಳು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.


