Connect with us

ದಿನದ ಸುದ್ದಿ

ವೇದ ಗ್ರಂಥಗಳೇ ಹೇಳುತ್ತಿವೆ ‘ಬ್ರಾಹ್ಮಣರು ಗೋ ಮಾಂಸ’ ತಿನ್ನುತ್ತಿದ್ದರೆಂದು..! : ಓದಿ ಈ ಲೇಖನ

Published

on

  • ವಿ.ಎಸ್. ಬಾಬು

ಬ್ರಾಹ್ಮಣರು ಗೋಮಾಂಸ ತಿನ್ನುತ್ತಿದ್ದರು. ಎಂದು ಅವರು ಬರೆದಿರುವ ವೇದ ಗ್ರಂಥಗಳೇ ಹೇಳುತ್ತಿವೆ ನೋಡಿ…

1 – “ಅಧೋ ಅನ್ನಂ ವಾಯ್ ಗೋವಾ” – “ವಾಸ್ತವವಾಗಿ ಗೋವು ನಮ್ಮ ಆಹಾರವಾಗಿದೆ “. – [ಐತೇರಿಯ ಬ್ರಾಹ್ಮಣ್ಯ: – 111.9.8]

2 – “ಮಾಂಸವಿಲ್ಲದೆ ಮಧುವನನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ “[ಆಶ್ವಲಾಯನ ಗೃಹ್ಯ ಸೂತ್ರ: 1-4]

3 – “ಪಂಡಿತರು, ಪ್ರಸಿದ್ಧರು, ಸಾಮಾಜಿಕರು, ದೇವತೆ, ವೇದಪತಿ, ಕೇಳುಗನನ್ನು ಕೇಳಲು ಬಯಸುವ ತಾಯಿ, ಅಗುನ ಮಗ, ಎಮ್ಮೆ ಅಥವಾ ಎತ್ತು ಮಾಂಸವನ್ನು ತಿನ್ನಬೇಕು.”
[ಬೃಹದಾರಣ್ಯಕಂ]

4 – “ ವಯಸ್ಸಿನಲ್ಲಿದ್ದ ಕರುವನ್ನಾದರೂ, ಅಥವಾ
ಕಡು ವಯಸ್ಸಿನಲ್ಲಿದ್ದ ಎತ್ತನ್ನಾದರೂ ತಿನ್ನಬೇಕು ” [ಶಂಕರಾಚಾರ್ಯರು]

5 – “ ನನ್ನ ಶರೀರದಲ್ಲಿ ಮಾಂಸ ಇರುವ ತನಕ ನಾನು ಎಳೆ ಹಸುವಿನ ಮಾಂಸವನ್ನ ತಿನ್ನುತ್ತೇನೆ “. – [ ಯಜ್ಞವಲ್ಕ – ಶತಪದ ಬ್ರಾಹ್ಮಣ ]

6 – ಭಾರದ್ವಾಜನು ಒಂದು ಕರುವನ್ನು ಕೊಂದು ರಾಮನ ಊಟಕ್ಕೆ ಆಹ್ವಾನಿಸಿದನು
[ ರಾಮಾಯಣ ]

7 – ಯಜ್ಞಗಳು, ಯಾಗಗಳು ಮಾಡಿದ ಮಾಂಸವನ್ನು ತಿನ್ನದಿದ್ದರೆ ಅವನು ಬರುವ ಮುಂದಿನ ಇಪ್ಪತ್ತು ಜನ್ಮಗಳು ಪ್ರಾಣಿಗಳಂತೆ ಹುಟ್ಟುತ್ತಾನೆ. [ ಮನುಧರ್ಮ ಶಾಸ್ತ್ರ – ಸೂಕ್ತ 35 ]

8 – ಮನೆಯಲ್ಲಿ ಎತ್ತು ಮಾಂಸವನ್ನು ತಿನ್ನಬಹುದು, ಹಾಲು ಕೊಡುವ ಹಸುಗಳನ್ನು ಕರುಗಳನ್ನು ಬಲಿ ಕೊಡಬಹುದು ಆದರೆ ಕಟುಕನಿಗೆ ಮಾರಬಾರದು. [ ಕೌಟಿಲ್ಯನ ಅರ್ಥಶಾಸ್ತ್ರ ]

9 – ಉತ್ತರಕ್ರಿಯದಲ್ಲಿ (ದಶದಿನ ಕರ್ಮದಲ್ಲಿ) ಭಾಗವಾಗಿ ಹಸುವನ್ನಾದರೂ, ಎತ್ತನ್ನಾದರೂ ಕೊಂದು ಬ್ರಾಹ್ಮಣರಿಗೆ ಕೊಡುತ್ತಿದ್ದರು. [ ಋಗ್ವೇದ 10, 14-1 ]

10 – ರಂಡಿ ದೇವರ ಊಟ ಅಡುಗೆಮನೆಯಲ್ಲಿ ಎತ್ತನ್ನು ಕೊಂದು ಧಾನ್ಯದ ಜೊತೆಗೆ ಮಾಂಸವನ್ನು ಬಡಿಸುತ್ತಿದ್ದರು. [ ಅಥರ್ವಣ ವೇದ – 11.2, 4]

11 – ಇಂದ್ರನಿಗೆ, ಶಿವನಿಗೆ ಹಸುಗಳನ್ನು ಬಲಿಕೊಡಬೇಕು, ಗರ್ಭಿಣಿ ಸ್ತ್ರೀಯರು ಕೆಂಪು ಎತ್ತಿನ ಮಾಂಸವನ್ನು ತಿಂದರೆ ಶ್ರೇಷ್ಠ ಮಗುವಿಗೆ ಜನ್ಮಕೊಡುತ್ತಾರೆ. [ ಯಾಜ್ಞವಲ್ಕ ಸ್ಮೃತಿ ]

12 – ‘ನಿಮಗೆ ಆಶ್ಚರ್ಯವಾಗಬಹುದು ಪ್ರಾಚೀನ ಹಿಂದೂ ವಿಧಿ ಮತ್ತು ಆಚರಣೆಗಳ ಪ್ರಕಾರ, ದನದ ಮಾಂಸ ತಿನ್ನದಿದ್ದರೆ ಆತ ಒಳ್ಳೆಯ ಹಿಂದೂ ಆಗಲು ಸಾಧ್ಯವಿರಲಿಲ್ಲ’ ಈ ಭಾರತದಲ್ಲೇ ಒಂದು ಕಾಲವಿತ್ತು. ದನವನ್ನು ತಿನ್ನದೇ ಯಾವ ಬ್ರಾಹ್ಮಣನೂ ಬ್ರಾಹ್ಮಣನಾಗಿ ಇರಲು ಸಾಧ್ಯವಿರಲಿಲ್ಲ. ಸನ್ಯಾಸಿಗಳು ಅಥವಾ ರಾಜರು ಅಥವಾ ಯಾರಾದರೂ ಮಹಾಪುರುಷರು ಮನೆಗೆ ಬಂದಾಗ ಅತ್ಯುತ್ತಮವಾದ ಎತ್ತನ್ನು ಕಡಿಯಲಾಗುತ್ತಿತ್ತು ಎಂಬುದನ್ನು ವೇದಗಳಲ್ಲಿ ನೀವು ಓದಬಹುದು’
ಸ್ವಾಮಿ ವಿವೇಕಾನಂದ: [ ಸಮಗ್ರ ಕೃತಿಗಳು ಸಂಪುಟ-3, ಪುಟ-536 ]

ಈಗ ಅವರು ಗೋ ಹತ್ಯೆ ನಿಷೇಧ ಮಾಡಬೇಕೆಂದು ಹೇಳುತ್ತಿದ್ದಾರೆ ಹಾಗದರೆ ಅವರು ಬರೆದಿರುವ ವೇದಗಳನ್ನು ಅವರೆ ಸುಟ್ಟು ಹಾಕಲಿ. ಇಲ್ಲವೆ ಈ ಮಂಡು ವಾದವನ್ನಾದರೂ ಬಿಡಲಿ ಎಂದು ಮನವಿ ಮಾಡುತ್ತೇನೆ ನೀವು ಮಾಡಿಕೊಳ್ಳಿ.

ಎರಡು ದೋಣಿಯಲ್ಲಿ ಕಾಲಿಟ್ಟು ಸಮುದ್ರ ದಾಟಲು ಸಾಧ್ಯವಿಲ್ಲ. ತೀರ್ಮಾನ ಬ್ರಾಹ್ಮಣರಿಗೆ ಬಿಡೋಣ ಧನ್ಯವಾದಗಳು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಳೆ ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆ ಅಣುಕು ಅಭ್ಯಾಸ

Published

on

ಸುದ್ದಿದಿನ, ಹರಿಹರ :ಇದೇ 14 ರಂದು ಗುರುವಾರ (ನಾಳೆ) ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆಯ ಅಣುಕು ಅಭ್ಯಾಸವನ್ನು ಬೆಳಗ್ಗೆ 8:30 ಕ್ಕೆ ನಡೆಸಲಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್‌ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳ ಸಮನ್ವಯದಲ್ಲಿ ಅಣಕು ಅಭ್ಯಾಸವು ನಡೆಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು

Published

on

ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್‌ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!

ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್‌ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;

ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್‌ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.

ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್‌ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.

ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್‌ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

Published

on

ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.

ನಡೆದಿದ್ದೇನು?

ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.

ಡೆತ್ ನೋಟ್‌ನಲ್ಲಿತ್ತು ಕೊನೆಯ ಆಸೆ

ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.

ತಮಿಳುನಾಡಿನಲ್ಲಿ ಅಂತ್ಯಕ್ರಿಯೆ

ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.

ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending