ದಿನದ ಸುದ್ದಿ
ವೇದ ಗ್ರಂಥಗಳೇ ಹೇಳುತ್ತಿವೆ ‘ಬ್ರಾಹ್ಮಣರು ಗೋ ಮಾಂಸ’ ತಿನ್ನುತ್ತಿದ್ದರೆಂದು..! : ಓದಿ ಈ ಲೇಖನ
- ವಿ.ಎಸ್. ಬಾಬು
ಬ್ರಾಹ್ಮಣರು ಗೋಮಾಂಸ ತಿನ್ನುತ್ತಿದ್ದರು. ಎಂದು ಅವರು ಬರೆದಿರುವ ವೇದ ಗ್ರಂಥಗಳೇ ಹೇಳುತ್ತಿವೆ ನೋಡಿ…
1 – “ಅಧೋ ಅನ್ನಂ ವಾಯ್ ಗೋವಾ” – “ವಾಸ್ತವವಾಗಿ ಗೋವು ನಮ್ಮ ಆಹಾರವಾಗಿದೆ “. – [ಐತೇರಿಯ ಬ್ರಾಹ್ಮಣ್ಯ: – 111.9.8]
2 – “ಮಾಂಸವಿಲ್ಲದೆ ಮಧುವನನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ “[ಆಶ್ವಲಾಯನ ಗೃಹ್ಯ ಸೂತ್ರ: 1-4]
3 – “ಪಂಡಿತರು, ಪ್ರಸಿದ್ಧರು, ಸಾಮಾಜಿಕರು, ದೇವತೆ, ವೇದಪತಿ, ಕೇಳುಗನನ್ನು ಕೇಳಲು ಬಯಸುವ ತಾಯಿ, ಅಗುನ ಮಗ, ಎಮ್ಮೆ ಅಥವಾ ಎತ್ತು ಮಾಂಸವನ್ನು ತಿನ್ನಬೇಕು.”
[ಬೃಹದಾರಣ್ಯಕಂ]
4 – “ ವಯಸ್ಸಿನಲ್ಲಿದ್ದ ಕರುವನ್ನಾದರೂ, ಅಥವಾ
ಕಡು ವಯಸ್ಸಿನಲ್ಲಿದ್ದ ಎತ್ತನ್ನಾದರೂ ತಿನ್ನಬೇಕು ” [ಶಂಕರಾಚಾರ್ಯರು]
5 – “ ನನ್ನ ಶರೀರದಲ್ಲಿ ಮಾಂಸ ಇರುವ ತನಕ ನಾನು ಎಳೆ ಹಸುವಿನ ಮಾಂಸವನ್ನ ತಿನ್ನುತ್ತೇನೆ “. – [ ಯಜ್ಞವಲ್ಕ – ಶತಪದ ಬ್ರಾಹ್ಮಣ ]
6 – ಭಾರದ್ವಾಜನು ಒಂದು ಕರುವನ್ನು ಕೊಂದು ರಾಮನ ಊಟಕ್ಕೆ ಆಹ್ವಾನಿಸಿದನು
[ ರಾಮಾಯಣ ]
7 – ಯಜ್ಞಗಳು, ಯಾಗಗಳು ಮಾಡಿದ ಮಾಂಸವನ್ನು ತಿನ್ನದಿದ್ದರೆ ಅವನು ಬರುವ ಮುಂದಿನ ಇಪ್ಪತ್ತು ಜನ್ಮಗಳು ಪ್ರಾಣಿಗಳಂತೆ ಹುಟ್ಟುತ್ತಾನೆ. [ ಮನುಧರ್ಮ ಶಾಸ್ತ್ರ – ಸೂಕ್ತ 35 ]
8 – ಮನೆಯಲ್ಲಿ ಎತ್ತು ಮಾಂಸವನ್ನು ತಿನ್ನಬಹುದು, ಹಾಲು ಕೊಡುವ ಹಸುಗಳನ್ನು ಕರುಗಳನ್ನು ಬಲಿ ಕೊಡಬಹುದು ಆದರೆ ಕಟುಕನಿಗೆ ಮಾರಬಾರದು. [ ಕೌಟಿಲ್ಯನ ಅರ್ಥಶಾಸ್ತ್ರ ]
9 – ಉತ್ತರಕ್ರಿಯದಲ್ಲಿ (ದಶದಿನ ಕರ್ಮದಲ್ಲಿ) ಭಾಗವಾಗಿ ಹಸುವನ್ನಾದರೂ, ಎತ್ತನ್ನಾದರೂ ಕೊಂದು ಬ್ರಾಹ್ಮಣರಿಗೆ ಕೊಡುತ್ತಿದ್ದರು. [ ಋಗ್ವೇದ 10, 14-1 ]
10 – ರಂಡಿ ದೇವರ ಊಟ ಅಡುಗೆಮನೆಯಲ್ಲಿ ಎತ್ತನ್ನು ಕೊಂದು ಧಾನ್ಯದ ಜೊತೆಗೆ ಮಾಂಸವನ್ನು ಬಡಿಸುತ್ತಿದ್ದರು. [ ಅಥರ್ವಣ ವೇದ – 11.2, 4]
11 – ಇಂದ್ರನಿಗೆ, ಶಿವನಿಗೆ ಹಸುಗಳನ್ನು ಬಲಿಕೊಡಬೇಕು, ಗರ್ಭಿಣಿ ಸ್ತ್ರೀಯರು ಕೆಂಪು ಎತ್ತಿನ ಮಾಂಸವನ್ನು ತಿಂದರೆ ಶ್ರೇಷ್ಠ ಮಗುವಿಗೆ ಜನ್ಮಕೊಡುತ್ತಾರೆ. [ ಯಾಜ್ಞವಲ್ಕ ಸ್ಮೃತಿ ]
12 – ‘ನಿಮಗೆ ಆಶ್ಚರ್ಯವಾಗಬಹುದು ಪ್ರಾಚೀನ ಹಿಂದೂ ವಿಧಿ ಮತ್ತು ಆಚರಣೆಗಳ ಪ್ರಕಾರ, ದನದ ಮಾಂಸ ತಿನ್ನದಿದ್ದರೆ ಆತ ಒಳ್ಳೆಯ ಹಿಂದೂ ಆಗಲು ಸಾಧ್ಯವಿರಲಿಲ್ಲ’ ಈ ಭಾರತದಲ್ಲೇ ಒಂದು ಕಾಲವಿತ್ತು. ದನವನ್ನು ತಿನ್ನದೇ ಯಾವ ಬ್ರಾಹ್ಮಣನೂ ಬ್ರಾಹ್ಮಣನಾಗಿ ಇರಲು ಸಾಧ್ಯವಿರಲಿಲ್ಲ. ಸನ್ಯಾಸಿಗಳು ಅಥವಾ ರಾಜರು ಅಥವಾ ಯಾರಾದರೂ ಮಹಾಪುರುಷರು ಮನೆಗೆ ಬಂದಾಗ ಅತ್ಯುತ್ತಮವಾದ ಎತ್ತನ್ನು ಕಡಿಯಲಾಗುತ್ತಿತ್ತು ಎಂಬುದನ್ನು ವೇದಗಳಲ್ಲಿ ನೀವು ಓದಬಹುದು’
ಸ್ವಾಮಿ ವಿವೇಕಾನಂದ: [ ಸಮಗ್ರ ಕೃತಿಗಳು ಸಂಪುಟ-3, ಪುಟ-536 ]
ಈಗ ಅವರು ಗೋ ಹತ್ಯೆ ನಿಷೇಧ ಮಾಡಬೇಕೆಂದು ಹೇಳುತ್ತಿದ್ದಾರೆ ಹಾಗದರೆ ಅವರು ಬರೆದಿರುವ ವೇದಗಳನ್ನು ಅವರೆ ಸುಟ್ಟು ಹಾಕಲಿ. ಇಲ್ಲವೆ ಈ ಮಂಡು ವಾದವನ್ನಾದರೂ ಬಿಡಲಿ ಎಂದು ಮನವಿ ಮಾಡುತ್ತೇನೆ ನೀವು ಮಾಡಿಕೊಳ್ಳಿ.
ಎರಡು ದೋಣಿಯಲ್ಲಿ ಕಾಲಿಟ್ಟು ಸಮುದ್ರ ದಾಟಲು ಸಾಧ್ಯವಿಲ್ಲ. ತೀರ್ಮಾನ ಬ್ರಾಹ್ಮಣರಿಗೆ ಬಿಡೋಣ ಧನ್ಯವಾದಗಳು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು
-
ದಿನದ ಸುದ್ದಿ2 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ