ದಿನದ ಸುದ್ದಿ
ಏಪ್ರಿಲ್ ಫೂಲ್ ಆಚರಣೆ ಬಗ್ಗೆ ನಿಮಗೆಷ್ಟು ಗೊತ್ತು?
ಸುದ್ದಿದಿನ ಡೆಸ್ಕ್ : ಏಪ್ರಿಲ್ 1ರಂದು ಸ್ನೇಹಿತರು ಹಾಗೂ ಕುಟುಂಬದ ಸದಸ್ಯರಿಗೆ ಯಾವುದೋ ವಿಚಾರದ ಕುರಿತು ಸುಳ್ಳು ಹೇಳಿ ಅವರನ್ನು ಮೂರ್ಖರನ್ನಾಗಿ ಮಾಡಿ ನಗುವ ಸಂಪ್ರದಾಯ ಜಗತ್ತಿನಾದ್ಯಂತ ನಡೆದುಕೊಂಡು ಬಂದಿದೆ. ಭಾರತದಲ್ಲಿ ಕೂಡ ಮೂರ್ಖರ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ.
ಆದರೆ ಏಪ್ರಿಲ್ ಫೂಲ್ ಆಚರಣೆಗೆ ಒಂದು ಸ್ಪಷ್ಟ ಇತಿಹಾಸ ಇಲ್ಲ. ಯಾವ ಕಾಲಘಟ್ಟದಿಂದ ಮೂರ್ಖರ ದಿನ ಆಚರಿಸಿಕೊಂಡು ಬರಲಾಗುತ್ತಿದೆ ಎಂಬುದರ ಕುರಿತು ಸರಿಯಾದ ದಾಖಲೆಗಳು ಇಲ್ಲ. ಆದರೆ ಪ್ರಾನ್ಸ್ ನಲ್ಲಿ ಮೊದಲು ಏಪ್ರಿಲ್ ಫೂಲ್ ಆಚರಣೆ ಆರಂಭವಾಯಿತು ಎಂದು ಹೇಳಲಾಗುತ್ತದೆ.
ಕೆಲ ದಾಖಲೆಗಳಂತೆ 1582ರಿಂದ ಪ್ರಾನ್ಸ್ ನಲ್ಲಿ ಈ ಏಪ್ರಿಲ್ ಫೂಲ್ ಆಚರಣೆ ನಡೆದುಕೊಂಡು ಬಂದಿದೆ ಎಂದು ನಂಬಲಾಗಿದೆ. ಪ್ರಾನ್ಸ್ ದೇಶದ ದೊರೆ ಚಾರ್ಲ್ಸ್ ಗ್ರಿಗೋರಿಯನ್ ಪಂಚಾಂಗ ಅನುಷ್ಠಾನಕ್ಕೆ ತಂದು ಹೊಸ ವರ್ಷದ
ಆಚರಣೆಯನ್ನು ಜನವರಿ ತಿಂಗಳಿನ 1ನೇ ತಾರೀಖಿಗೆ ಬದಲಾಯಿಸಿದ. 1581ರ ಹೊಸವರ್ಷದ ಸಂದರ್ಭವನ್ನು ಎಂಟು ದಿನಗಳ ಕಾಲ ಆಚರಿಸಲಾಗಿತ್ತು. ಏಪ್ರಿಲ್ 1ರಂದು ಕೊನೆ ದಿನವಾಗಿತ್ತು. ಆಗ ಸಂಪರ್ಕ ಮಾಧ್ಯಮಗಳ ಕೊರತೆ ಇದ್ದುದರಿಂದ ಈ ಬದಲಾವಣೆಯ ವಿಷಯ ವಿವಿಧ ದೇಶಗಳಿಗೆ ತಲುಪಲು ಹಲವು ವರ್ಷಗಳೇ ಬೇಕಾಯಿತು.
ಕೆಲವು ಸಂಪ್ರದಾಯಸ್ಥರು ಹೊಸ ಕ್ಯಾಲೆಂಡರ್ ಅನ್ನು ಒಪ್ಪಿಕೊಳ್ಳದೆ ಏಪ್ರಿಲ್ 1ರಂದೇ ಹೊಸ ವರ್ಷಾಚರಣೆ ಮಾಡುತ್ತಿದ್ದರು. ಆಗ ಅವರನ್ನು ಮೂರ್ಖರೆಂದು ಅಪಹಾಸ್ಯ ಮಾಡಲಾಗುತ್ತಿತ್ತು. ಅದೇ ಸಂಪ್ರದಾಯ ಕಾಲ ನಂತರದಲ್ಲಿ ನಡೆದುಕೊಂಡು ಬಂದಿದೆ ಎಂದು ಹೇಳಲಾಗುತ್ತದೆ.
ಇತ್ತೀಚಿನ ದಿನಗಳಲ್ಲಿ ಈ ಮೂರ್ಖರ ದಿನಾಚರಣೆ ಹೆಚ್ಚು ಪ್ರಚಲಿತವಾಗುತ್ತಿದೆ. ಪ್ರತಿಕೆಗಳು, ಟಿವಿ ಮಾಧ್ಯಮಗಳು ಕೂಡ ಏಪ್ರಿಲ್ ಫೂಲ್ ಆಚರಣೆ ಮಾಡುತ್ತಿವೆ. ಯಾವುದೋ ಅಸಾಧ್ಯ ವಿಚಾರದ ಕುರಿತು ಸುದ್ದಿ ಮಾಡಿ, ಇದು ನಿಜವೆಂದು ಹೇಳಿ ಕೊನೆಗೆ ಏಪ್ರಿಲ್ ಫೂಲ್ ಎಂದು ಹೇಳಿ ಓದುಗರಲ್ಲಿ ನಗೆ ಉಕ್ಕಿಸುವ ಪ್ರಯತ್ನ ನಮ್ಮ ಕನ್ನಡ ಮಾಧ್ಯಮಗಳಲ್ಲಿ ಕೂಡ ನಡೆಯುತ್ತಿದೆ.
ತೀರ ಗಂಭೀರ ಅಲ್ಲದ ವಿಷಯಗಳ ಕುರಿತು ಫೋಲ್ ಮಾಡಿದರೆ ತೊಂದರೆ ಇಲ್ಲ. ಆದರೆ ಕೆಲವು ಬಾರಿ ಸೂಕ್ಷ್ಮ ಧಾರ್ಮಿಕ ವಿಚಾರ ಹಾಗೂ ಗಣ್ಯ ವ್ಯಕ್ತಿಗಳ ಸಾವಿನ ಕುರಿತು ಹಾಸ್ಯ ಮಾಡಲಾಗುತ್ತಿದೆ. ಇದು ಕೆಲವರ ಮನಸ್ಸಿಗೆ ಘಾಸಿ ಮಾಡುವ ಸಂದರ್ಭ ಕೂಡ ಇರುತ್ತವೆ. ಈ ಕುರಿತ ಅರಿವು ಅವಶ್ಯ.
ಸುದ್ದಿಗಾಗಿ ಸುದ್ದಿದಿನ.ಕಾಂ ವಾಟ್ಸಾಪ್ ನಂಬರ್ | 9986715401
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ5 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!