ದಿನದ ಸುದ್ದಿ
ಅರಣ್ಯ ಕಾಯ್ದೆ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಬೇಕು : ಅರಣ್ಯ ಮಂತ್ರಿಗಳಿಗೆ ಬೃಂದಾ ಕಾರಟ್ ಪತ್ರ

ಇದು ಕೇಂದ್ರೀಕರಣ, ವ್ಯಾಪಾರೀಕರಣ, ಖಾಸಗೀಕರಣ ಮತ್ತು ಅಪರಾಧೀಕರಣದ ನೀಲನಕ್ಷೆ
ಅರಣ್ಯ ಕಾಯ್ದೆ, 1927ಕ್ಕೆ ಸರಕಾರ ಸೂಚಿಸಿರುವ ಕರಡು ತಿದ್ದುಪಡಿಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಅವನ್ನು ಹಿಂತೆದುಕೊಳ್ಳಬೇಕು. ಅದರ ಬದಲಿಗೆ, ಈ ಕಾಯ್ದೆಯನ್ನು ಅರಣ್ಯ ಹಕ್ಕುಗಳ ಕಾಯ್ದೆ ಮತ್ತು ಬುಡಕಟ್ಟು ಸಮುದಾಯಗಳು ಎದುರಿಸುತ್ತಿರುವ ಚಾರಿತ್ರಿಕ ಅನ್ಯಾಯಗಳನ್ನು, ಈಗ ಒಂದೆಡೆಯಲ್ಲಿ ಅಭಿವೃದ್ಧಿಯ ಹೆಸರಲ್ಲಿ, ಮತ್ತೊಂದೆಡೆಯಲ್ಲಿ ಸಂರಕ್ಷಣೆಯ ಹೆಸರಲ್ಲಿ ಆಧುನಿಕ ಸ್ವರೂಪಗಳಲ್ಲಿ ಎಸಗುತ್ತಿರುವ ಅನ್ಯಾಯಗಳನ್ನು ಸರಿಪಡಿಸಲು ಯತ್ನಿಸಿರುವ ಇತರ ಕಾಯ್ದೆಗಳಿಗೆ ಸರಿಹೊಂದುವ ರೀತಿಯಲ್ಲಿ ತರುವುದೇ ಅರಣ್ಯ ಸಂರಕ್ಷಣೆಯ ಹಿತರಕ್ಷಣೆಯ ದೃಷ್ಟಿಯಿಂದ ಉತ್ತಮ ಎಂದು ಸಿಪಿಐ(ಎಂ) ಪೊಲಿಟ್ಬ್ಯುರೊ ಸದಸ್ಯರಾದ ಬೃಂದಾ ಕಾರಟ್ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಮಂತ್ರಿ ಪ್ರಕಾಶ ಜಾವ್ಡೇಕರ್ ಅವರಿಗೆ ಜುಲೈ 9 ರಂದು ಬರೆದಿರುವ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಈ ಮಂತ್ರಾಲಯ ಚರ್ಚೆಗೆ ಬಿಡುಗಡೆ ಮಾಡಿರುವುದು ಅರಣ್ಯ ಕಾಯ್ದೆ, 1927ಕ್ಕೆ ತಿದ್ದುಪಡಿಗಳ ಮೊದಲ ಕರಡನ್ನು ಮಾತ್ರವಾದರೂ, ಲೋಕಸಭೆಯಲ್ಲಿ ಜೂನ್ 28ರಂದು ಪ್ರಕಾಶ್ ಜಾವ್ಡೇಕರ್ ಈ ಕುರಿತು ಸಲ್ಲಿಸಿರುವ ಲಿಖಿತ ಹೇಳಿಕೆ ಬಹಳಷ್ಟು ದಾರಿ ತಪ್ಪಿಸುವಂತದ್ದು. “ನೀವು ತಿದ್ದುಪಡಿಗಳನ್ನು ಸಮರ್ಥಿಸಿ ಕೊಂಡಿದ್ದೀರಿ. ಈ ಕಾಯ್ದೆಯಲ್ಲಿರುವ ಅತ್ಯಂತ ದಮನಕಾರಿ ಕ್ರಮಗಳನ್ನು ಅಷ್ಟೇನೂ ಮುಖ್ಯವಲ್ಲ ಎಂದು ಬದಿಗೆ ಸರಿಸುವ ಪ್ರಯತ್ನ ಮಾಡಿದ್ದೀರಿ, ಅದರಲ್ಲೂ ಬುಡಕಟ್ಟು ಸಮುದಾಯಗಳ ಹಕ್ಕುಗಳನ್ನು ದಮನಮಾಡುತ್ತಿರುವುದನ್ನು ಉಪೇಕ್ಷಿಸಿದ್ದೀರಿ. ಆದ್ದರಿಂದ ಈ ತಿದ್ದುಪಡಿಗಳ ಬಗ್ಗೆ ಹೆಚ್ಚು ವಿವರವಾದ ವಿಮರ್ಶೆಯನ್ನು ತಮಗೆ ಕೊಡುವುದು ಅಗತ್ಯ ಎಂದು ನನಗನಿಸಿದೆ. ಇದು ಸಂಸತ್ತಿಗೆ ಒಂದು ಹೆಚ್ಚು ಸರಿಯಾದ ಚಿತ್ರವನ್ನು ಕೊಡಲು ನೆರವಾಗಬಹುದು” ಎಂದು ಈ ಪತ್ರವನ್ನು ಬರೆದಿರುವುದಕ್ಕೆ ಕಾರಣವನ್ನು ತಿಳಿಸುತ್ತ ಬೃಂದಾ ಕಾರಟ್ ಹೇಳಿದ್ದಾರೆ.
1927ರ ಅರಣ್ಯ ಕಾಯ್ದೆ ಬ್ರಿಟಿಶ್ ವಸಾಹತುಶಾಹಿಗಳಿಗೆ ಭಾರತದ ಅರಣ್ಯಗಳ ಮೇಲೆ ಅವರ ಸರಕಾರದ ಒಡೆತನವನ್ನು ಸ್ಥಾಪಿಸುವ ಒಂದು ಸಾಧನವಾಗಿತ್ತು. ಈ ಕಾಯ್ದೆಯ ಮೂಲಕ ಅವರು ಬುಡಕಟ್ಟು ಸಮುದಾಯಗಳು ಅತಿಕ್ರಮಣಕಾರರು ಎಂದು ಸಾರಿದರು. ಈ ಸಮುದಾಯಗಳ ವಿರುದ್ಧ ಚಾರಿತ್ರಿಕ ಅನ್ಯಾಯಗಳಿಗೆ ಈ ಮೂಲಕ ಕಾನೂನಿನ ಮಂಜೂರಾತಿಯನ್ನು ಪಡೆಯಲಾಯಿತು. ಈಗ ಸೂಚಿಸಿರುವ ತಿದ್ದುಪಡಿಗಳು, ಕೆಲವು ಸಂಪೂರ್ಣ ಹೊಸದಾದ ವಿಭಾಗಗಳನ್ನೂ ಹೊಂದಿದ್ದು, ಈ 91 ಅಂಶಗಳು ಅರಣ್ಯ ಸಂರಕ್ಷಣೆಯನ್ನು ಮಿಲಿಟರೀಕರಿಸಿ ಬ್ರಿಟಿಶರನ್ನೂ ಮೀರಿಸಿವೆ, ಅವರು ಧೈರ್ಯಸಾಲದೆ ಮಾಡದಿರುವುದನ್ನೂ ಮಾಡ ಹೊರಟಿದೆ.
ಈ ತಿದ್ದುಪಡಿಗಳು ಬುಡಕಟ್ಟು ಬದುಕಿನ ಪ್ರತಿಯೊಂದು ಆಯಾಮವನ್ನೂ ಅಪರಾಧೀಕರಿಸಿವೆ, ಅರಣ್ಯ ಅಧಿಕಾರಶಾಹಿಗೆ ವಾರಂಟ್ ನೀಡದೆಯೇ ಬಂಧಿಸುವ, ಕಾನೂನು ಜಾರಿಗೊಳಿಸಲು ಶಸ್ತ್ರಾಸ್ತ್ರಗಳ ಬಳಕೆಗೂ ಲಂಗುಲಗಾಮಿಲ್ಲದ ಅಧಿಕಾರಗಳನ್ನು ಕೊಟ್ಟಿದೆ. ಪ್ರಸ್ತಾವಿತ ರಾಷ್ಟ್ರೀಯ ಅರಣ್ಯ ಮಂಡಳಿಯಲ್ಲಿ ಸೇನಾಪಡೆಗಳ ಮುಖ್ಯಸ್ಥರನ್ನು ಒಬ್ಬ ಸದಸ್ಯರಾಗಿ ಸೂಚಿಸಿರುವುದು ಈ ದಮನಕಾರೀ ನಿಲುವಿನ ಸಂಕೇತವಾಗಿದೆ. ಬಹುಶಃ ಭಾರತದ ಸೇನಾಧಿಪತಿಗಳು ಈಗ ದೇಶದ ಗಡಿಗಳ ಬದಲು ಅರಣ್ಯಗಳನ್ನು ರಕ್ಷಿಸುವುದು ಹೇಗೆ ಎಂಬ ಚರ್ಚೆಗೆ ಸಮಯ ಕೊಡಬೇಕಾಗಿದೆ ಎಂದು ಈ ಬಗ್ಗೆ ಬರೆಯುತ್ತ ಬೃಂದಾ ಅವರು ಗೇಲಿ ಮಾಡಿದ್ದಾರೆ.
ಇನ್ನೊಂದೆಡೆಯಲ್ಲಿ, ಅರಣ್ಯಗಳ ನಿರ್ವಹಣೆಗೆ, ಸಂರಕ್ಷಣೆಗೆ, ಕಾಯ್ದುಕೊಳ್ಳಲಿಕ್ಕೆ ಮತ್ತು ಬುಡಕಟ್ಟು ಹಕ್ಕುಗಳಿಗೆ ಎಷ್ಟೊಂದು ಅನಿವಾರ್ಯವಾದ ಗ್ರಾಮಸಭೆಗಳ, ಅದರಲ್ಲೂ ಬುಡಕಟ್ಟು ಪ್ರದೇಶಗಳಲ್ಲಿನ ಗ್ರಾಮಸಭೆಗಳ ಪಾತ್ರವನ್ನು ಅಳಿಸಿ ಬಿಡಲಾಗಿದೆ ಎಂಬುದನ್ನು ಎತ್ತಿ ತೋರುತ್ತ ಬೃಂದಾ ಕಾರಟ್ ಈ ತಿದ್ದುಪಡಿಗಳು ಕೇಂದ್ರೀಕರಣ, ವ್ಯಾಪಾರೀಕರಣ ಮತ್ತು ಅಪರಾಧೀಕರಣದ ಒಂದು ನೀಲನಕ್ಷೆ ಎಂದು ಟೀಕಿಸಿದ್ದಾರೆ. ಅರಣ್ಯ ಸಂರಕ್ಷಣೆ ಈ ತಿದ್ದುಪಡಿಗಳ ಘೋಷಿತ ಗುರಿ.
ಆದರೆ ಇವು ಆ ಗುರಿಸಾಧನೆಗೆ ನೆರವಾಗುವುದಿಲ್ಲ. ತದ್ವಿರುದ್ಧವಾಗಿ, ಇವು ಅರಣ್ಯ ಹಕ್ಕುಗಳ ಕಾಯ್ದೆಯಲ್ಲಿ, 2006ರಲ್ಲಿ ತಿದ್ದುಪಡಿಗೊಂಡ ವನ್ಯ ಪ್ರಾಣಿಗಳ ರಕ್ಷಣಾ ಕಾಯ್ದೆಯಲ್ಲಿ, ಪರಿಶಿಷ್ಟ ಪ್ರದೇಶಗಳಿಗೆ ಪಂಚಾಯತ್ ವಿಸ್ತರಣೆ ಕಾಯ್ದೆ(ಪಿಎಇಎಸ್ಎಎ), ಭೂಸ್ವಾಧೀನ ಮತ್ತು ಮರುವಸತಿ ಕಾಯ್ದೆ,2013ರಲ್ಲಿ ಮಾತ್ರವಲ್ಲ, ಸಂವಿಧಾನದ ಶೆಡ್ಯೂಲ್ 5 ಮತ್ತು 6ರಲ್ಲಿ ಮಾನ್ಯ ಮಾಡಿರುವ ಬುಡಕಟ್ಟುಗಳು ಮತ್ತು ಇತರ ಪಾರಂಪರಿಕ ಅರಣ್ಯವಾಸಿಗಳ ಈಗಿರುವ ಹಕ್ಕುಗಳನ್ನು ಅಳಿಸಿ ಹಾಕುತ್ತವೆ.
ಮೇಲೆ ಹೇಳಿದಂತೆ, ಈ ತಿದ್ದುಪಡಿಗಳು ಹೇಗೆ ಕೇಂದ್ರೀಕರಣ, ವ್ಯಾಪಾರೀಕರಣ ಮತ್ತು ಅಪರಾಧೀಕರಣದ ನೀಲನಕ್ಷೆ ಎಂಬುದಕ್ಕೆ ವಿವರಗಳನ್ನೂ ಈ ಪತ್ರ ಒಳಗೊಂಡಿದೆ. ಇನ್ನೂ ಗಮನಾರ್ಹ ಸಂಗತಿಯೆಂದರೆ, ಬುಡಕಟ್ಟು ಜನಗಳ ಹಕ್ಕುಗಳ ಪ್ರಶ್ನೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆಯ ವ್ಯಾಪ್ತಿಗೆ ಬರುವುದಿಲ್ಲ ಎಂಬುದನ್ನು ಪ್ರಕಾಶ ಜಾವ್ಡೇಕರ್ ಅವರಿಗೆ ಬೃಂದಾ ಕಾರಟ್ ಈ ಪತ್ರದಲ್ಲಿ ನೆನಪಿಸಬೇಕಾಗಿ ಬಂದಿದೆ.
“ಆದ್ದರಿಂದ ಈ ತಿದ್ದುಪಡಿಗಳು, ಒಟ್ಟಿನಲ್ಲಿ, ಸಂವಿಧಾನಕ್ಕೆ, ಪ್ರಜಾಪ್ರಭುತ್ವಕ್ಕೆ ಮತ್ತು ನಿರ್ದಿಷ್ಟವಾಗಿ ಬುಡಕಟ್ಟು ಜನಗಳ ಹಕ್ಕುಗಳನ್ನು, ಒಟ್ಟಾರೆಯಾಗಿ ಪಾರಂಪರಿಕ ಅರಣ್ಯವಾಸಿಗಳ ಹಕ್ಕುಗಳನ್ನು ರಕ್ಷಿಸುವ ಕಾನೂನು ಚೌಕಟ್ಟಿಗೆ ವ್ಯತಿರಿಕ್ತವಾಗಿವೆ. ಅಲ್ಲದೆ, ಬುಡಕಟ್ಟು ಹಕ್ಕುಗಳು ತಮ್ಮ ಮಂತ್ರಾಲಯದ ಕಾರ್ಯವ್ಯಾಪ್ತಿಗೆ ಸೇರಿದ್ದಲ್ಲ, ಅವು ಬುಡಕಟ್ಟು ವ್ಯವಹಾರಗಳ ಮಂತ್ರಾಲಯದ ವ್ಯಾಪ್ತಿಗೆ ಸೇರಿದವುಗಳು. ಆದರೂ ಈ ತಿದ್ದುಪಡಿಗಳ ಮೂಲಕ ತಮ್ಮ ಮಂತ್ರಾಲಯ ಬುಡಕಟ್ಟು ಹಕ್ಕುಗಳಿಗೆ ಸಂಬಂಧಪಟ್ಟ ಎಲ್ಲ ಶಾಸನಗಳನ್ನು ಮೀರಿ ನಿಲ್ಲಲು, ಅವನ್ನೆಲ್ಲ ಈ ಪ್ರಸ್ತಾವಿತ ಕಾಯ್ದೆಗೆ ಅಧೀನಗೊಳಿಸಲು ಪ್ರಯತ್ನಿಸುತ್ತಿದೆ. ಇದು ಯಾವುದೇ ರೀತಿಯಲ್ಲಿ ಒಪ್ಪತಕ್ಕಂತದ್ದಲ್ಲ” ಎಂದು ಬೃಂದಾ ಕಾರಟ್ ಪ್ರಕಾಶ ಜಾವ್ಡೇಕರ್ ಅವರಿಗೆ ಬರೆದ ಪತ್ರದಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ.
( ಈ ವಾರದ ಜನಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಆರಂಭಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ

ಸುದ್ದಿದಿನ,ದಾವಣಗೆರೆ: ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿ ಬಳಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಸ್ಥಾಪಿಸಲು ಭೂಮಿ ಖರೀದಿಸಿದ್ದು, ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೂಡಲೇ ಅನುದಾನ ಬಿಡುಗಡೆ ಮಾಡಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದರು.
ವಿಧಾನಸಭೆಯಲ್ಲಿ ಬುಧವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿವಮೊಗ್ಗ ಹಾಲು ಒಕ್ಕೂಟದಿಂದ ಬೇರ್ಪಡಿಸಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಒಳಗೊಂಡ ಮೆಗಾ ಡೈರಿ ಆರಂಭಿಸಲು ನನ್ನ ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿಯಲ್ಲಿ ಭೂಮಿ ಖರೀದಿಸಿದ್ದೇವೆ. ಸರ್ಕಾರ ಕೂಡಲೇ ಅನುದಾನ ಬಿಡುಗಡೆ ಮಾಡಿ ಡೈರಿ ಆರಂಭಿಸಿದರೆ ಈ ಭಾಗದ ರೈತರು ಆರ್ಥಿಕವಾಗಿ ಸಬಲರಾಗಲಿದ್ದಾರೆ ಎಂದು ಸದನದ ಗಮನ ಸೆಳೆದರು.
ಹೈನುಗಾರಿಕೆಯಲ್ಲಿ ಮಹಿಳೆಯರಿಗೆ ಶೇ.50ರಷ್ಟು ಸಬ್ಸಿಡಿ ಕೊಡುವುದನ್ನು ಶೇ.75ರಷ್ಟು ಹೆಚ್ಚಳ ಮಾಡಿದರೆ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಿ ಉತ್ತಮ ಬದುಕು ಕಟ್ಟಿಕೊಳ್ಳುತ್ತಾರೆ. ಈ ಬಗ್ಗೆ ಸರ್ಕಾರ ಗಮನ ಹರಿಸಬೇಕೆಂದರು.
ಮಧ್ಯ ಕರ್ನಾಟಕದ ಕೇಂದ್ರ ಬಿಂದು, ಹಿಂದುಳಿದ ಜಿಲ್ಲೆ ದಾವಣಗೆರೆ. ಅದರಲ್ಲೂ ಅತೀ ಹಿಂದುಳಿದ ಮೀಸಲು ಕ್ಷೇತ್ರ ಮಾಯಕೊಂಡ. ಸಿರಿಗೆರೆ ತರಳಬಾಳು ಜಗದ್ಗುರುಗಳ ಹೋರಾಟದ ಫಲವಾಗಿ ನನ್ನ ಕ್ಷೇತ್ರದಲ್ಲಿ 22 ಕೆರೆಗಳ ಯೋಜನೆ ಜಾರಿಗೊಂಡು ಎಲ್ ಅಂಡ್ ಟಿ ಕಂಪನಿ ಕಾಮಗಾರಿ ನಡೆಸಿತ್ತು. ಕಳಪೆ ಕಾಮಗಾರಿಯಿಂದ 100 ಹಳ್ಳಿಗಳಿಗೆ ಕುಡಿಯುವ ನೀರು, ನೀರಾವರಿ ಕಲ್ಪಿಸಬೇಕೆಂಬ ಉದ್ದೇಶ ಈಡೇರಿಲ್ಲ. ಪುನಃ ಹೊಸ ಪೈಪ್ಲೈನ್ ಕಾಮಗಾರಿಗೆ ಹಣ ನೀಡಿ ಕಾಮಗಾರಿ ಆರಂಭಿಸುವAತೆ ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಕೂಡಲೇ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.
ನನ್ನ ಕ್ಷೇತ್ರದಲ್ಲಿ ಹೆಚ್ಚು ಗುಡ್ಡಗಾಡು ಪ್ರದೇಶ ಹೊಂದಿದ್ದು, ಈ ಪ್ರದೇಶಗಳಲ್ಲಿ ಅತೀ ಹೆಚ್ಚು ಕೆರೆಗಳನ್ನು ನಿರ್ಮಾಣ ಮಾಡಿದರೆ ಜನಜಾನುವಾರುಗಳಿಗೆ ಕುಡಿಯುವ ನೀರು, ಅಂತರ್ಜಲ ಮಟ್ಟ ವೃದ್ಧಿಗೆ ಅನುಕೂಲವಾಗುತ್ತದೆ. ಅಲ್ಲದೇ ಬ್ರಿಟಿಷರು ನಿರ್ಮಿಸಿದ ಕೆರೆ ಇದೆ. ಅದನ್ನು ಜೀರ್ಣೋದ್ಧಾರ ಮಾಡಿದರೆ ಇಡೀ ಪಕ್ಷಿ ಸಂಕುಲ, ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸಬಹುದು ಎಂದು ಸದನ ಗಮನ ಸೆಳೆದರು.
ಎಸ್ಸಿ-ಎಸ್ಟಿ ಅಭಿವೃದ್ಧಿ ನಿಗಮಗಳಿಗೆ ಅನೇಕ ಸೌಲಭ್ಯ ಒದಗಿಸಲು ಅನುದಾನದ ಕೊರತೆ ಇದೆ. ಹೆಚ್ಚಿನ ಅನುದಾನ ನೀಡಬೇಕು. ಎಸ್ಸಿ-ಎಸ್ಟಿ ಸಮುದಾಯ ಆರ್ಥಿಕವಾಗಿ ಸಬಲರಾಗಲು ಭೂಒಡೆತನ ಯೋಜನೆ ಜಾರಿಗೊಳಿಸಿದ್ದು, ಕ್ಷೇತ್ರಕ್ಕೆ ಕೇವಲ ಒಂದೇ ಕೊಟ್ಟರೆ ಸಾಧ್ಯವಾಗುವುದಿಲ್ಲ. ಇದಕ್ಕೆ ಹೆಚ್ಚು ಒತ್ತು ಕೊಡಬೇಕು. ಖಾಸಗಿ ಕಾಲೇಜುಗಳಲ್ಲಿ ಡಿಪ್ಲೊಮಾ, ನರ್ಸಿಂಗ್, ಪ್ಯಾರಾ ಮೆಡಿಕಲ್ ಸೇರಿದಂತೆ ವೃತ್ತಿಪರ ಕೋರ್ಸ್ನಲ್ಲಿ ಅಭ್ಯಾಸ ಮಾಡುವ ಎಸ್ಸಿ-ಎಸ್ಟಿ ಮಕ್ಕಳಿಗೆ 2013-18ರಲ್ಲಿ ಹಾಸ್ಟೆಲ್ ಸೌಲಭ್ಯ ಇತ್ತು, ಈಗ ಇಲ್ಲ. ಕೂಡಲೇ ಈ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿದರು.
ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಪೌರ ಕಾರ್ಮಿಕರಿಗೆ ಹಗಲು ದರೋಡೆ ಮಾಡಲಾಗುತ್ತಿದೆ. ಹೊರ ಗುತ್ತಿಗೆ ತೆಗೆದು ನೇರವಾಗಿ ನೇಮಕಾತಿ ಮಾಡಿಕೊಂಡರೆ ಅವರ ಬದುಕು ಉಜ್ವಲವಾಗುತ್ತದೆ. ಶೋಷಿತ ಸಮುದಾಯಗಳಿಗೆ ತ್ವರಿತ ನ್ಯಾಯ ಒದಗಿಸಲು ಎಸ್ಸಿ-ಎಸ್ಟಿ ದೌರ್ಜನ್ಯ ಕಾಯ್ದೆಯಡಿ ರಾಜ್ಯದಲ್ಲಿ 33 ವಿಶೇಷ ಪೊಲೀಸ್ ಠಾಣೆ ತೆರೆಯಲು ಕ್ರಮ, ಅಲ್ಲದೇ ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ 2 ಕೋಟಿ ಮೀಸಲು, ಅದರಂತೆ ಒಬಿಸಿ, ಅಲ್ಪಸಂಖ್ಯಾತರಿಗೂ 2 ಕೋಟಿ ಮೀಸಲಿಡುವ ಮೂಲಕ ರೈತರು, ಕಾಯಕ ಜೀವಿಗಳು, ವಿಶೇಷವಾಗಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಎಸ್ಸಿಪಿ-ಎಸ್ಟಿಪಿ ಯೋಜನೆಯಡಿ 48,018 ಕೋಟಿ ರೂ. ಬಜೆಟ್ನಲ್ಲಿ ಮೀಸಲಿಟ್ಟಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದರು.
- ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿ
ಮಳೆಗಾಲದಲ್ಲಿ ತುಂಗಾ ಜಲಾಯಶದಿಂದ ಭದ್ರಾ ಜಲಾಶಯಕ್ಕೆ ನೀರು ತುಂಬಿಸಿ ಅಪರ್ ಭದ್ರಾ ಯೋಜನೆ ನೀರು ನೀಡುವ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಿದರೆ ಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ರೈತರಿಗೆ ಅನುಕೂಲವಾಗಲಿದೆ. ಇಲ್ಲದಿದ್ದರೆ, ನಮ್ಮ ಭಾಗದ ರೈತರಿಗೆ ಅನಾನುಕೂಲವಾಗಲಿದೆ. ಕೂಡಲೇ ಸರ್ಕಾರ ಈ ಯೋಜನೆಯ ಕಾಮಗಾರಿ ಪೂರ್ಣಗೊಳಿಸಬೇಕು. ರಾಗಿ, ಭತ್ತ, ತೊಗರಿ ಬೆಂಬಲ ಬೆಲೆಯಡಿ ಖರೀದಿಸಿದಂತೆ ಮೆಕ್ಕೆಜೋಳವನ್ನು ಬೆಂಬಲ ಬೆಲೆಯಡಿ ಖರೀದಿಸಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆರೆಬಿಳಚಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ಚನ್ನಗಿರಿ:ತಾಲೂಕಿನ ಕೆರೆಬಿಳಚಿಯಲ್ಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ ,ಕ್ರಿಶ್ಚಿಯನ್, ಜೈನ್ ,ಬೌದ್ಧ ಸಿಖ್ ಪಾರ್ಸಿ ಧರ್ಮದವರಿಗೆ 75% ಸ್ಥಾನ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ 25% ಸ್ಥಾನಗಳು ಮೀಸಲಾಗಿವೆ.ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆಯ ಆಧಾರದ ಮೇಲೆ ಮತ್ತು ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://sevasindhuservices.karnataka.gov.in/
ಪ್ರವೇಶ ಪಡೆಯಲು ಅರ್ಹತೆಗಳು
- 05 ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಪೋಷಕರ ಆದಾಯದ ಮಿತಿ ಎಸ್.ಸಿ/ಎಸ್.ಟಿ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ
- 1 ಲಕ್ಷ ರೂ.ಗಳು ಮತ್ತು ಅಲ್ಪಸಂಖ್ಯಾತರಿಗೆ 2.5ಲಕ್ಷ ರೂ.ಗಳು ಮತ್ತು ಹಿಂದುಳಿದ ವರ್ಗದವರಿಗೆ 44500/- ರೂ.ಗಳಿಗೆ ಮೀರಿರಬಾರದು.
ವಸತಿ ಶಾಲೆಯಲ್ಲಿ ದೊರೆಯುವ ಸೌಲಭ್ಯಗಳು
- ಆಯ್ಕೆಯಾದ ವಿದ್ಯಾರ್ಥಿಗಳಿಗೆ 6ನೇ ತರಗತಿಯಿಂದ 12 ತರಗತಿಯವರೆಗೆ ಉಚಿತ ಶಿಕ್ಷಣ.
- ಉಚಿತ ಪಠ್ಯ ಪುಸ್ತಕ, ಲೇಖನ ಸಾಮಗ್ರಿಗಳು, ಸಮವಸ್ತ್ರ, ಶೂ ಮತ್ತು ಸಾಕ್ಸ್, ಹಾಸಿಗೆ ಹೊದಿಕೆ ಜೊತೆಗೆ ಉತ್ತಮ ಮೂಲ ಸೌಲಭ್ಯ ಒದಗಿಸಲಾಗುವುದು.
- ಸುಸಜ್ಜಿತ ಕೊಠಡಿ ಹಾಗೂ ವಸತಿ ನಿಲಯಗಳು, ವಿದ್ಯುತ್ ವ್ಯವಸ್ಥೆ, 24×7 ಬಿಸಿ ನೀರಿನ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇದೆ.
- ನುರಿತ ಶಿಕ್ಷಕರು ಮತ್ತು ಉಪನ್ಯಾಸಕರಿಂದ ಭೋದನೆ, ಪ್ರತಿ ವಿಷಯಕ್ಕೆ ಸುಸಜ್ಜಿತ ಪ್ರಯೋಗಾಲಯ ಸೌಲಭ್ಯ ಹಾಗೂ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ ಇದೆ.
- ಉಚಿತ ವಸತಿ ಮತ್ತು ಭೋಜನ ವ್ಯವಸ್ಥೆ ಇದೆ. ಜೊತೆಗೆ 24×7 CCTV ನಿರೀಕ್ಷಣೆಯಲ್ಲಿ ಇರುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ : ಹೊಸ ಸದಸ್ಯರ ನೊಂದಣಿ, ನೊಂದಣಿಯಾದ ಸದಸ್ಯರನ್ನು ನವೀಕರಿಸಲು ಸೂಚನೆ

ಸುದ್ದಿದಿನ,ದಾವಣಗೆರೆ:ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ಹಾಗೂ ಸಹಕಾರ ಸಂಘಗಳ ನಿಯಮ 1960ರಡಿ ಜಿಲ್ಲೆಯಲ್ಲಿ ನೊಂದಣಿಯಾಗಿರುವ ಎಲ್ಲಾ ವಿಧದ ಸಹಕಾರ ಸಂಘಗಳ ಸದಸ್ಯರು ಮಾರ್ಚ್ 31ರೊಳಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೊಂದಾಯಿಸುವ ಮತ್ತು ನೊಂದಣಿಯಾದ ಸದಸ್ಯರನ್ನು ನವೀಕರಿಸಲು ಮತ್ತು ಯಾವುದೇ ಒಂದು ಸಹಕಾರ ಸಂಘದ ಸದಸ್ಯರಾಗಿದ್ದರೆ, ಈ ಯೋಜನೆಯ ಫಲಾನಭವಿಗಳಾಗಬಹುದು ಎಂದು ಸಹಕಾರ ಸಂಘಗಳ ಉಪನಿಬಂಧಕ ಮಧು ಶ್ರೀನಿವಾಸ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ ; ಸಂಜೆ ಬಿಐಇಟಿ ಸಾಂಸ್ಕೃತಿಕ ಕೇಂದ್ರದಲ್ಲಿ ಸಂಗೀತ ಪ್ರಭ
-
ದಿನದ ಸುದ್ದಿ7 days ago
ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ಖಾತ್ರಿ ಯೋಜನೆಯ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ7 days ago
ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ
-
ದಿನದ ಸುದ್ದಿ6 days ago
ದಾವಣಗೆರೆ | ಮನೆ ಬೋರ್ ವೆಲ್ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ ; ಕ್ರಮ ಕೈಗೊಳ್ಳಲು ಸರಸ್ವತಿ ಬಡಾವಣೆ ನಿವಾಸಿಗಳ ಆಗ್ರಹ
-
ದಿನದ ಸುದ್ದಿ7 days ago
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’
-
ದಿನದ ಸುದ್ದಿ6 days ago
2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ
-
ದಿನದ ಸುದ್ದಿ7 days ago
ದಾವಣಗೆರೆ | ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ