Connect with us

ದಿನದ ಸುದ್ದಿ

ಸರ್ದಾರ್ ಏಕತಾ ಮೂರ್ತಿ ತೆಗಳಿದ ಇಂಗ್ಲೆಂಡ್ ಸಂಸದ; ಯಾರ್ವರು, ಏನಂದ್ರು ಇಲ್ಲಿದೆ ಡಿಟೇಲ್ಸ್?

Published

on

ಸುದ್ದಿದಿನ ದೆಹಲಿ: ಕೆಲವು ದಿನಗಳ ಹಿಂದೆಯಷ್ಟೇ ಲೋಕಾರ್ಪಣೆ ಗೊಂಡಿದ್ದ ಭಾರತದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಏಕತಾ ಮೂರ್ತಿ ಬಗ್ಗೆ ಇಂಗ್ಲೆಂಡಿನ ಸಂಸದನೊಬ್ಬ ಅವಹೇಳನಕಾರಿ ಹೇಳಿಕೆ ನೀಡಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ಹಾಗಾದ್ರೆ ಆ ಸಂಸದ ಏನೆಂದು ಹೇಳಿಕೆ ನೀಡಿದ್ದಾರೆ. ಇಲ್ಲಿದೆ ಡಿಟೇಲ್ಸ್ ಓದಿ..!?

ಅಖಂಡ ಭಾರತದ ಏಕತೆಗೆ ಶ್ರಮಿಸಿದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಸ್ಮರಣಾರ್ಥ ಪ್ರಧಾನಿ ಮೋದಿ ಅವರು ಗುಜರಾತಿನ ನರ್ಮದಾ ಜಿಲ್ಲೆಯ ಸರ್ದಾರ್ ಸರೋವರ ಅಣೆಕಟ್ಟಿನ ಎದುರು 600 ಅಡಿ ಎತ್ತರದ ಏಕತಾ ಮೂರ್ತಿ ನಿರ್ಮಿಸಿ ಲೋಕಾರ್ಪಣೆ ಮಾಡಿದ್ದಾರೆ. ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಏಕತಾ ಮೂರ್ತಿಯನ್ನು ಇಂಗ್ಲೆಂಡಿನ ಸಂಸತ್ ಸದಸ್ಯ ಪೀಟರ್ ಬೋನ್ ‘ಟೋಟಲ್ ನಾನ್ಸೆನ್ಸ್’ ತೆಗಳಿದ್ದಾರೆ.

ಸಂಸದ ಪೀಟರ್ ಬೋನ್ಸ್ ಮುಂದುವರಿದ ಮಾತನಾಡಿ, “ಅವರು (ಭಾರತ) ಹಣವನ್ನು ಹೇಗೆ ಖರ್ಚು ಮಾಡುತ್ತಾರೆ. ಆದರೆ, ಬೃಹತ್ ಮೊತ್ತದಲ್ಲಿ ಮೂರ್ತಿ ನಿರ್ಮಿಸಿ, ನಿಭಾಯಿಸುತ್ತಾರೆ ಎಂದಾದರೆ ನಾವು ಅವರಿಗೆ (ಭಾರತಕ್ಕೆ) ನೆರವು ನೀಡಬೇಕಾಗಿಲ್ಲ ಎಂದು ವಿರೋಧ ವ್ಯಕ್ತಪಡಿಸುದ್ದಾರೆ.

ಕಳೆದ ವರ್ಷಗಳಲ್ಲಿ ಇಂಗ್ಲೆಂಡ್ ಭಾರತಕ್ಕೆ 9492 ಕೋಟಿ ರೂ. (1.17 ಬಿಲಿಯನ್ ಪೌಂಡ್ಸ್ ಹಣಕಾಸಿನ ನೆರವು ನೀಡಿದೆ. ಇಷ್ಟು ದೊಡ್ಡ ಮೊತ್ತವು ಮಹಿಳಾ ಹಕ್ಕು, ಸಾಮಾಜಿಕ ಸಮಸ್ಯೆ, ನವೀಕರಿಸಬಹುದಾದ ಇಂಧನ ಶಕ್ತಿ ಯೋಜನೆ ಸೇರಿದಂತೆ ವಿವಿಧ ಸೌಕರ್ಯಗಳ ಅಭಿವೃದ್ಧಿಗೆ ನೀಡಲಾಗಿತ್ತು. ಆದರೆ, ಭಾರತೀಯರ ಕಲ್ಯಾಣಕ್ಕೆ ನೆರವು ನೀಡಿದ್ದೆ ಹೊರತು 2000 ಟನ್ನಿನ ಸ್ಟ್ಯಾಚ್ಯುಗೆ ಅಲ್ಲ ಎಂದು ವಿರೋಧಿದಿದ್ದಾರೆ.

ಏಕತಾ ಮೂರ್ತಿಯನ್ನು ಟೋಟಲ್ ಮ್ಯಾಡ್ನೆಸ್ ಎಂದು ತೆಗಳಿರುವ ಬ್ರಿಟಿಷ್‌ ಸಂಸದ, 3000 ಕೋಟಿ ರೂ. ಹಣವನ್ನು ಒಳ್ಳೆಯ ಕಾರ್ಯಕ್ಕೆ ಬಳಸಬಹುದಿತ್ತು. 2989 ಕೋಟಿ ರೂ. ಮೊತ್ತದಲ್ಲಿ ಒಂದು ಮೂರ್ತಿ ನಿರ್ಮಿಸಲು ಸಾಧ್ಯವಿದೆ ಎಂದಾದರೆ ವಿದೇಶಿ ನೆರವು ಅಗತ್ಯವಿರಲಿಲ್ಲ ಎಂದ ಸಂಸದ ಬೋನ್, ಏಕತಾ ಮೂರ್ತಿ ನಿರ್ಮಾಣಕ್ಕೆ ಇಂಗ್ಲೆಂಡಿನಲ್ಲಿ ಮೊದಲು ವಿರೋಧ ವ್ಯಕ್ತವಾಗಿತ್ತು ಎಂದು ಆಂಗ್ಲ ಪತ್ರಿಕೆಯೊಂದಕ್ಕೆ ಹೇಳಿದ್ದಾರೆ.

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending