ದಿನದ ಸುದ್ದಿ
ಅಣ್ಣನನ್ನೇ ಕೊಲೆ ಮಾಡಿದ ತಮ್ಮ..!
ಸುದ್ದಿದಿನ,ಮಂಡ್ಯ : ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆಸ್ತೂರು ಗ್ರಾಮದ ಶಶಿಕುಮಾರ್ ಎಂಬುವರನ್ನು ಅವರ ಸ್ವಂತ ತಮ್ಮನಾದ ರವಿಕುಮಾರ್ ರವರು ನೆನ್ನೆ ರಾತ್ರಿ 12-30 ಗಂಟೆ ಸಮಯದಲ್ಲಿ ಕೊಲೆ ಮಾಡಿದ್ದಾನೆ.
ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿಯಲ್ಲಿ ನೌಕರರಾಗಿದ್ದ ಅವರನ್ನು ಶಶಿಕುಮಾರ್ ಕುಟುಂಬದ ವೈಮನಸಿಂದ ಅವರ ತಮ್ಮ ರವಿಕುಮಾರ್ ರಾತ್ರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ.
ಶಶಿಕುಮಾರ್ ರವರು ಮದ್ದೂರು ತಾಲ್ಲೂಕಿನ ಅರಣ್ಯ ಇಲಾಖೆಯಲ್ಲಿ ನೌಕರರಾಗಿದ್ದು ಎಂದು ತಿಳಿದುಬಂದಿದೆ. ಮೃತರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳು ಇದ್ದಾರೆ. ರವಿಕುಮಾರ್ನನ್ನ ವಶಕ್ಕೆ ಪಡೆದ ಪೊಲೀಸರು ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401