Connect with us

ದಿನದ ಸುದ್ದಿ

ಆತ್ಮಕತೆ | ನಮ್ಮ ಬಿಆರ್‌ಪಿ ಸ್ನಾತಕೋತ್ತರ ಕೇಂದ್ರ

Published

on

  • ರುದ್ರಪ್ಪ ಹನಗವಾಡಿ

ದಟ್ಟ ಮಲೆನಾಡಲ್ಲದಿದ್ದರೂ ಮಳೆಗಾಲದಲ್ಲಿ ಹೆಚ್ಚು ಮಳೆ ಸುರಿದು ನಿಸರ್ಗ ಸೌಂದರ್ಯವನ್ನು ಹೆಚ್ಚಿಸುತ್ತಿತ್ತು. ಆದರೆ ವಿಶ್ವವಿದ್ಯಾಲಯದಲ್ಲಿ ಹೆಚ್ಚಿನ ಶಾಖೆಗಳಾಗಲೀ, ಒಂದು ಸ್ವತಂತ್ರ ವಿಶ್ವವಿದ್ಯಾಲಯವಾಗುವ ಯಾವ ತಯಾರಿಯೂ ಕಾಣುತ್ತಿರಲಿಲ್ಲ.

ಪ್ರಾರಂಭದಿಂದ ಇದ್ದ, ನಾಲ್ಕು ವಿಭಾಗಗಳು ಮತ್ತು 15-16ಜನ ಅಧ್ಯಾಪಕರುಗಳಾಗಿದ್ದನ್ನು ಬಿಟ್ಟರೆ ವಿಕಾಸದ ಯಾವ ಲಕ್ಷಣಗಳೂ ಇರಲಿಲ್ಲ. ನಾನು ಬಂದು ನಾಲ್ಕು ವರ್ಷಗಳಲ್ಲಿ ನನ್ನ ಜೀವನದಲ್ಲಿ ಮದುವೆ ಮತ್ತು ನಮಗೆ ಮಗುವಾದುದ್ದನ್ನು ಬಿಟ್ಟರೆ ಸ್ನಾತಕೋತ್ತರ ಕೇಂದ್ರದ ಬೆಳವಣಿಗೆಯಲ್ಲಿ ಮತ್ತೇನೂ ಬೆಳವಣಿಗೆಗಳು ನಡೆಯಲಿಲ್ಲ.

ಸ್ವಂತ ವಿಷಯದಲ್ಲಿ ನಾನು ಆರ್ಥಿಕ ಸಂಕಷ್ಟಕ್ಕೆ ಬಿದ್ದಿದ್ದೆ. ಮದುವೆಯಾಗುವ ಯಾವ ಪೂರ್ವಭಾವಿ ತಯಾರಿ ಇಲ್ಲದೆ ತಕ್ಷಣ ಆಗಬೇಕಾದ ಕಾರಣ ಸುಮಾರು 15 ಸಾವಿರದಷ್ಟು ವಿಶ್ವಾಸಿಕ ಸ್ನೇಹಿತರಿಂದ ಸಾಲ ಮಾಡಿದ್ದೆ. ಹೊಸ ಸಂಸಾರ ಹೂಡಿಕೆಗೆ ಬೇಕಾದ ಕನಿಷ್ಠ ಸೌಕರ್ಯಗಳೂ ಇಲ್ಲದೆ ಇದ್ದರೂ ಸದ್ಯ ಪಿಡಬ್ಲೂಡಿ ಕ್ವಾಟ್ರಸ್ ಒಂದನ್ನು ಅಲಾಟ್‌ಮೆಂಟ್ ಮಾಡಿಸಿಕೊಂಡಿದ್ದೆ. ಹಾಗಾಗಿ ಮದುವೆಯಾದಾಕ್ಷಣ ಉಳಿದುಕೊಳ್ಳಲು ಅದು ಅನುಕೂಲವಾಗಿತ್ತು. ಪ್ರಭು ಮತ್ತು ರೈತಸಂಘದ ಮಂಜಪ್ಪ, ಸ್ಟೀಲ್ ಅಂಗಡಿ ಶಾಂತು ಎಲ್ಲ ಶಿವಮೊಗ್ಗದಲ್ಲಿ ಪ್ರಭುವಿನ ಸ್ನೇಹಿತರಾಗಿದ್ದರು. ಬೇಕಾದ ಕನಿಷ್ಠ ಪಾತ್ರೆಗಳನ್ನು ಅವನ ಸ್ನೇಹಿತನಿಂದಲೇ ಸಾಲವಾಗಿ ತಂದಿದ್ದೆ. ಉಳಿದಂತೆ ಅವಶ್ಯ ಬಿದ್ದಾಗ ನನ್ನ ಸ್ನೇಹಿತರಾಗಿದ್ದ ಪ್ರಭು, ಜಿಎನ್‌ಕೆ ಜೊತೆ ಸಾಲ ಮಾಡಿ ತೀರಿಸೋ ವ್ಯವಸ್ಥೆಯಲ್ಲಿ ದಿನಗಳು ಕಳೆಯುತ್ತಿದ್ದವು.

ಆರ್ಥಿಕ ಸಂಕಷ್ಟ ಬಿಟ್ಟರೆ ನಮ್ಮಿಬ್ಬರ ಹೊಂದಾಣಿಕೆ ಅನನ್ಯವಾಗಿತ್ತು. ಬೇಂದ್ರೆಯವರ ಕವನದ ಸಾಲಿನಂತೆ
‘ನಾನು ಬಡವಿ ಆತ ಬಡವ
ಒಲವೆ ನಮ್ಮ ಬದುಕು’ ಎಂಬಂತೆ ಪ್ರೀತಿಯಲ್ಲಿ ಮುಳುಗಿ ಹೋಗಿದ್ದೆವು.

ರಜಾ ದಿನಗಳಲ್ಲಿ ಬಿಆರ್‌ಪಿಯಲ್ಲಿ ಇದ್ದ ಟೆಂಟ್ ಸಿನಿಮಾಕ್ಕೆ ಇಲ್ಲವೇ ಶಿವಮೊಗ್ಗಕ್ಕೆ ರಾಜಕುಮಾರ್ ಅವರ ಹೊಸ ಸಿನಿಮಾಗಳಿಗೆ ಹೋಗಿ ಬರುತ್ತಿದ್ದೆವು. ಇಂದಿರಾ ಕೃಷ್ಣಪ್ಪನವರ ಭದ್ರಾವತಿ ಮನೆಗೆ ರಜಾ ದಿನಗಳಲ್ಲಿ ಹೋಗಿ ಬರುತ್ತಿದ್ದೆವು. ಮದುವೆಯಾದಾಕ್ಷಣ ಎಲ್ಲೂ ‘ಹನಿಮೂನ್’ಗೆಂದು ತಿರುಗಾಡಲು ಹೋಗಲಿಲ್ಲ. ಇದ್ದ ಸ್ನೇಹಿತರ ಮನೆ ಕಡೆಗೆ ಹೋಗಿ ಕಾಲ ಕಳೆದು ಬರುತ್ತಿದ್ದೆವು. ಕುಮ್ಮೂರ ಬಸವಣ್ಯಪ್ಪ, ಉಮಾ ಚಿತ್ರದುರ್ಗದಲ್ಲಿ ಇಬ್ಬರೂ ಜ್ಯೂನಿಯರ್ ಕಾಲೇಜಿನಲ್ಲಿ ಅಧ್ಯಾಪಕರಾಗಿದ್ದರು. ಅವರ ಮನೆಯಲ್ಲಿ ಉಳಿದು ಚಿತ್ರದುರ್ಗದ ಕೋಟೆಯನ್ನು ಇಬ್ಬರೇ ಸುತ್ತಿಕೊಂಡು ಬಂದು ಮಾರನೆ ದಿನ ಚಳ್ಳಕೆರೆಗೆ ಹೋಗಿದ್ದೆವು.

ಚಳ್ಳಕೆರೆಯಲ್ಲಿ ಗಾಯತ್ರಿಯ ಸೀನಿಯರ್ ಮತ್ತು ನನ್ನ ಹಳೇ ವಿದ್ಯಾರ್ಥಿನಿ ಶಾರದಾ, ಡಾ. ಚಂದ್ರಶೇಖರ್ ಎಂಬ ಅವರ ಸೋದರ ಮಾವನನ್ನು ಮದುವೆಯಾಗಿ ಅಲ್ಲಿನ ಪಿಹೆಚ್‌ಸಿಯಲ್ಲಿ ಡಾಕ್ಟರ್ ಆಗಿ ಕೆಲಸದಲ್ಲಿದ್ದರು. ನಾವಿದ್ದ ಎರಡೂ ದಿನಗಳಲ್ಲ್ಲಿ ಅಕ್ಕರೆಯಿಂದ ವಿಶೇಷ ಅಡುಗೆ ಮಾಡಿ ತುಂಬ ವಾತ್ಸಲ್ಯದಿಂದ ನಮ್ಮನ್ನು ಸತ್ಕರಿಸಿದ್ದಳು. ಅವರಿಬ್ಬರ ಅಕ್ಕರೆಯ ಆತಿಥ್ಯ ನಾವಿಬ್ಬರೂ ಎಂದೂ ಮರೆಯಲಾಗದ ನೆನಪಾಗಿ ಉಳಿದಿದೆ. ಆ ನಂತರದ ದಿನಗಳಲ್ಲಿ ಬದಲಾದ ಪರಿಸ್ಥಿತಿಯಲ್ಲಿ ಶಾರದ ಎಲ್ಲಿದ್ದಾರೆ ಎಂಬುದು ತಿಳಿಯದೆ 40 ವರ್ಷಗಳೇ ಕಳೆದು ಹೋಗಿದ್ದವು.

ಈಗ್ಗೆ ಎರಡು ವರ್ಷಗಳಲ್ಲಿ ಯರ‍್ಯಾರನ್ನೋ ಕೇಳಿ, ಅವರ ವಿಳಾಸ ಪಡೆದು ನಾವಿಬ್ಬರು ನೆನಪು ಮಾಡಿ ಮಾತಾಡಿದೆವು. ಮನೆಗೆ ಆಹ್ವಾನಿಸಿದ ಮೇರೆಗೆ ಇತ್ತೀಚೆಗಷ್ಟೆ ಬಂದು ಹೋಗಿದ್ದಳು. ಹೀಗೆ ಬಂದು ಹೋಗಿ 3 ತಿಂಗಳಲ್ಲಿ ಹೃದಯಾಘಾತದಿಂದ ಶಾರದಾ ತೀರಿಕೊಂಡಳು. ಇಷ್ಟು ದೀರ್ಘ ಕಾಲದ ಅಜ್ಞಾತವಾಸದ ಕಾರಣ ತಿಳಿದು ಬೇಸರವಾಗಿತ್ತು. ಶಾರದಾ-ಚಂದ್ರಶೇಖರ್ ಅವರಿಗೆ ಇಬ್ಬರು ಹೆಣ್ಣು ಮಕ್ಕಳಲ್ಲಿ ಒಬ್ಬಳು ಅಕಾಲಿಕ ಮರಣ ಹೊಂದಿದ್ದಳು.

ಇನ್ನೊಬ್ಬಳು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಳಾಗಿ ಕೆಲಸ ನಿರ್ವಹಿಸುತ್ತಿದ್ದಾಳೆ. ಗಂಡ ಡಾಕ್ಟರ್ ಆಗಿದ್ದರೂ ಮನೆಯಲ್ಲಿ ಒಂದು ಎಮ್ಮೆ ಸಾಕಿಕೊಂಡು ಮೇಯಿಸುತ್ತಾ ಗಂಡ ಮಕ್ಕಳಿಗೆ ಹಾಲು, ಮಜ್ಜಿಗೆ ಮಾಡಿ ಉಣಿಸುತ್ತಿದ್ದ ಶಾರದಾ ಅವರಿಗೆ ಬದುಕಿನಲ್ಲಿ ನೆಮ್ಮದಿಗಿಂತ ನೋವೇ ಜಾಸ್ತಿಯಾಗಿದ್ದೊಂದು ವಿಷಾದದ ಸಂಗತಿ. ಒಳ್ಳೆಯ ಮನಸ್ಸುಗಳಿಗೆ ನೋವುಗಳೇ ಹೆಚ್ಚೆಂಬುದು ಅವಳ ವಿಚಾರದಲ್ಲಿ ನಿಜವಾಗಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸರ್ಕಾರಿ ಪ್ರಥಮ‌ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ

Published

on

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.

ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.

ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.

ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.

ಇಂಗ್ಲೀಷ್ ಮೇಜರ್ ನಲ್ಲಿ ರ‌್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

Published

on

ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು

ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ.

ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್‌ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.

ಯುವಕರು ಸ್ಕೂಲ್, ಕಾಲೇಜ್‌ಗೆ ಬಂದಾಗ ಅಲ್ಲಿರುವಂತಹ ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್‌ಲೈನ್ ಕೋರ್ಸ್ಗಳಲ್ಲಿ ಭಾಗವಹಿಸಬೇಕು.
ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಮಾತನಾಡಿ ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು. ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.

ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು. ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.

ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.

ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್‌ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.

ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ, 4 ಸದಸ್ಯರಿರುವ ಪ್ರತಿ ಕಾರ್ಡಿಗೆ 40 ಕೆ.ಜಿ ಅಕ್ಕಿ, 5 ಸದಸ್ಯರಿರುವ ಪ್ರತಿ ಕಾರ್ಡಿಗೆ 50 ಕೆ.ಜಿ ಅಕ್ಕಿ, 6 ಸದಸ್ಯರಿರುವ ಪ್ರತಿ ಕಾರ್ಡಿಗೆ 60 ಕೆ.ಜಿ ಅಕ್ಕಿ, 7 ಸದಸ್ಯರಿರುವ ಪ್ರತಿ ಕಾರ್ಡಿಗೆ 70 ಕೆ.ಜಿ ಅಕ್ಕಿ, 8 ಸದಸ್ಯರಿರುವ ಪ್ರತಿ ಕಾರ್ಡಿಗೆ 80 ಕೆ.ಜಿ ಅಕ್ಕಿ, 9 ಸದಸ್ಯರಿರುವ ಪ್ರತಿ ಕಾರ್ಡಿಗೆ 90 ಕೆ.ಜಿ, 10 ಸದಸ್ಯರಿರುವ ಪ್ರತಿ ಕಾರ್ಡಿಗೆ 100 ಕೆ.ಜಿ ಅಕ್ಕಿಯನ್ನು ನೀಡಲಾಗುವುದು.

ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಅಂತರ್ ರಾಜ್ಯ ಅಥವಾ ಜಿಲ್ಲೆಯ ಪಡಿತರ ಚೀಟಿಗಳಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡೆಯಲು ಅವಕಾಶವಿರುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending