ದಿನದ ಸುದ್ದಿ
ದಾವಣಗೆರೆ | ಆ.14 ರಂದು ಬೃಹತ್ ಲೋಕ್ ಆದಾಲತ್ ; ರಾಜಿ ಸಂಧಾನ ಮೂಲಕ ಪ್ರಕರಣಗಳ ಇತ್ಯರ್ಥಕ್ಕೆ ಸದಾವಕಾಶ : ಕೆ.ಬಿ. ಗೀತಾ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಆ. 14 ರಂದು ಬೃಹತ್ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಪಕ್ಷಗಾರರು ರಾಜಿ ಅಥವಾ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭವಾಗಿ, ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೇ ಇತ್ಯರ್ಥಪಡಿಸಿಕೊಳ್ಳಲು ಸದಾವಕಾಶ ಕಲ್ಪಿಸಲಾಗಿದ್ದು, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಪರಿಹರಿಸಿಕೊಳ್ಳಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಬಿ. ಗೀತಾ ಅವರು ಹೇಳಿದರು.
ಜಿಲ್ಲೆಯಲ್ಲಿ ಏರ್ಪಡಿಸಲಾಗಿರುವ ಬೃಹತ್ ಲೋಕ ಅದಾಲತ್ ಕುರಿತಂತೆ ಜಿಲ್ಲಾ ನ್ಯಾಯಾಲಯದಲ್ಲಿ ಮಂಗಳವಾರ ಏರ್ಪಡಿಸಲಾದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಆ. 14 ರಂದು ಏರ್ಪಡಿಸಲಾಗಿರುವ ಬೃಹತ್ ಲೋಕ ಅದಾಲತ್ನಲ್ಲಿ ಕಕ್ಷಿಗಾರರು ಭೌತಿಕವಾಗಿ ನ್ಯಾಯಾಲಯಕ್ಕೆ ಹಾಜರಾಗಬಹುದು ಅಥವಾ ಇ-ಲೋಕ ಅದಾಲತ್ನಲ್ಲಿ ಆನ್ಲೈನ್ ಮೂಲಕವೂ ರಾಜಿ ಸಂಧಾನ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಬೃಹತ್ ಲೋಕ್ ಅದಾಲತ್ನ ಪ್ರತಿಯೊಂದು ಪೀಠದಲ್ಲಿ ಒಬ್ಬರು ಹಾಲಿ ನ್ಯಾಯಾಧೀಶರು ಹಾಗೂ ಒಬ್ಬರು ಪರಿಣತ ವಕೀಲರು ಸಂಧಾನಕಾರರಾಗಿರುತ್ತಾರೆ.
ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ದಾಖಲು ಮಾಡದೆ ಇರುವಂತಹ ವಾಹನ ಅಪಘಾತಕ್ಕೆ ಸಂಬಂಧಿಸಿದ ಪರಿಹಾರ ಪ್ರಕರಣಗಳು, ಭೂ-ಸ್ವಾಧೀನ ಪರಿಹಾರಕ್ಕೆ ಸಂಬಂಧಿತ ಪ್ರಕರಣಗಳು, ಪಾಲುವಿಭಾಗ ದಾವೆಗಳು, ಹಣ ವಾಪಾಸಾತಿ ದಾವೆಗಳು, ಬಾಡಿಗೆದಾರ ಮತ್ತು ಮಾಲೀಕರ ನಡುವಿನ ದಾವೆಗಳು, ಇತರೆ ಸಿವಿಲ್ ವ್ಯಾಜ್ಯಗಳು ಹಾಗೂ ರಾಜಿ ಮಾಡಿಕೊಳ್ಳಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಜೀವನಾಂಶದ ಅರ್ಜಿ ಪ್ರಕರಣಗಳು, ಕೌಟುಂಬಿಕ ಕಲಹಗಳು, (ವಿಚ್ಚೇದನಾ ಹೊರತುಪಡಿಸಿ) ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು. ಸಾರ್ವಜನಿಕರು ಕಕ್ಷಿಗಾರರು ಪಡೆದುಕೊಂಡು ಅತೀ ಹೆಚ್ಚು ಪ್ರಕರಣಗಳನ್ನು ಬಗೆಹರಿಸಿಕೊಳ್ಳಬೇಕೆಂದು ವಿನಂತಿಸಿದರು.
ಲೋಕ ಅದಾಲತ್ ಅಥವಾ ಜನತಾ ನ್ಯಾಯಾಲಯದ ಮೂಲ ಉದ್ದೇಶವೇನೆಂದರೆ ಪಕ್ಷಗಾರರು ರಾಜಿ ಅಥವಾ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭವಾಗಿ, ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೇ ಇತ್ಯರ್ಥಪಡಿಸಿಕೊಳ್ಳಬಹುದು.
ಇದರಿಂದ ಪಕ್ಷಗಾರರ ಮಧ್ಯದಲ್ಲಿರುವ ವೈಮನಸ್ಸು ಕಡಿಮೆಯಾಗಿ ನ್ಯಾಯಾಧೀಶರು ಹೆಚ್ಚು ಅವಶ್ಯಕತೆ ಇರುವಂತಹ, ಕಾನೂನಿನ ಸಂಕೀರ್ಣತೆ ಇರುವಂತಹ ಪ್ರಕರಣಗಳಿಗೆ ಹೆಚ್ಚು ಒತ್ತು ಕೊಟ್ಟು ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವಂತಹ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ.
2020ರ ಸೆ.19 ರಂದು ನಡೆದ ಬೃಹತ್ ಲೋಕ್ ಅದಾಲತ್ನಲ್ಲಿ ಜಿಲ್ಲೆಯ 4921 ಪ್ರಕರಣಗಳು ಇತ್ಯರ್ಥಗೊಂಡು 4.47 ಕೋಟಿ ರೂ. ಪರಿಹಾರ, 2020 ಡಿ.19 ರಂದು ನಡೆದ ಲೋಕ್ ಅದಾಲತ್ನಲ್ಲಿ 3988 ಪ್ರಕರಣಗಳು ಇತ್ಯರ್ಥಗೊಂಡು 10.16 ಕೋಟಿ ರೂ. ಹಾಗೂ ಮಾ.27ರಂದು ನಡೆದ ಬೃಹತ್ ಲೋಕ್ ಅದಾಲತ್ನಲ್ಲಿ 6041 ಪ್ರಕರಣಗಳು ಇತ್ಯರ್ಥಗೊಂಡು ರೂ.11.06 ಪರಿಹಾರ ಒದಗಿಸಲಾಗಿದೆ.
ಹೀಗಾಗಿ ದಿನದಿಂದ ದಿನಕ್ಕೆ ಲೋಕ್ಅದಾಲತ್ಗಳು ಯಶಸ್ವಿಯಾಗುತ್ತಿದ್ದು, ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಲೋಕ್ ಅದಾಲತ್ಗಳು ಯಶಸ್ವಿಯಾಗಲು ಸಮಸ್ತ ವಕೀಲ ವೃಂದದವರು, ಪೊಲೀಸ್ ಇಲಾಖೆಯವರು, ಬ್ಯಾಂಕ್ ಅಧಿಕಾರಿಗಳು, ವಿಮಾ ಅಧಿಕಾರಿಗಳು, ಕಂದಾಯ ಇಲಾಖೆಯವರು, ಕಕ್ಷಿದಾರರು, ಮುಖ್ಯವಾಗಿ ಮಾಧ್ಯಮಗಳು ತುಂಬಾ ಸಹಕಾರ ನೀಡಿದ್ದಾರೆ ಅವರೆಲ್ಲರಿಗೂ ದಾವಣಗೆರೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಧನ್ಯವಾದ ಸಲ್ಲಿಸುತ್ತೇವೆ ಎಂದರು.
ಇದೀಗ ಮತ್ತೊಮ್ಮೆ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರವು ಆ.14 ರಂದು ಬೃಹತ್ ಲೋಕತ್ ಅದಾಲತ್ ಮೂಲಕ ಅತಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಉದ್ದೇಶಿಸಿರುತ್ತಾರೆ. ಆ ಪ್ರಕಾರವಾಗಿ ಜಿಲ್ಲೆಗಳಲ್ಲಿರುವ ಎಲ್ಲಾ ತಾಲ್ಲೂಕು ಸೇವಾ ಸಮಿತಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬೃಹತ್ ಲೋಕ್ ಅದಾಲತ್ನ್ನು ನಡೆಸುವ ಬಗ್ಗೆ ವ್ಯವಸ್ಥೆಯನ್ನು ಮಾಡಿಕೊಂಡಿರುತ್ತೇವೆ. ಅದಾಲತ್ ಅನ್ನು ಯಶಸ್ವಿಗೊಳಿಸಲು ನಿತ್ಯ ಪೂರ್ವಭಾವಿ ಸಭೆಗಳನ್ನು ನಡೆಸಲಾಗುತ್ತಿದೆ ಎಂದರು.
ಪಕ್ಷಗಾರರು ಸ್ವಇಚ್ಚೆಯಿಂದ ರಾಜಿಗೆ ಒಪ್ಪಿಕೊಂಡರೆ ಮಾತ್ರ ಲೋಕ್ ಅದಾಲತ್ನಲ್ಲಿ ಪ್ರಕರಣಗಳು ತೀರ್ಮಾನವಾಗುತ್ತದೆ. ಒಂದು ವೇಳೆ ಉಭಯ ಪಕ್ಷಗಾರರಿಗೆ ಒಪ್ಪಿಗೆ ಇಲ್ಲದಿದ್ದರೆ ಯಾವುದೇ ತೀರ್ಮಾನವಾಗುವುದಿಲ್ಲ, ಅಂತಹ ಪ್ರಕರಣಗಳನ್ನು ಪುನ: ನ್ಯಾಯಾಲಯದಲ್ಲಿಯೇ ಕಾನೂನು ಬದ್ದವಾಗಿ ತೀರ್ಮಾನ ಮಾಡಲಾಗುತ್ತದೆ.
ಈ ರೀತಿ ರಾಜಿ ಮಾಡಿಕೊಂಡ ಪ್ರಕರಣಗಳು ನ್ಯಾಯಯುತವಾಗಿ ಮತ್ತು ಕಾನೂನು ಬದ್ಧವಾಗಿದ್ದರೆ ಮಾತ್ರ ಲೋಕ್ ಅದಾಲತ್ನಲ್ಲಿ ಇತ್ಯರ್ಥ ಮಾಡುತ್ತಾರೆ. ಲೋಕ್ ಅದಾಲತ್ನಲ್ಲಿ ಮಾಡುವ ಅವಾರ್ಡ್ ಕಾನೂನುಬದ್ಧವಾಗಿರುತ್ತದೆ ಮತ್ತು ನ್ಯಾಯಾಲಯದಲ್ಲಿ ತೀರ್ಮಾನವಾದ ಪ್ರಕರಣಗಳಂತೆ ಅದರ ತೀರ್ಪನ್ನು ಜಾರಿಗೊಳಿಸಬಹುದು.
ಕೋವಿಡ್-19ರ ಮೊದಲನೆ ಮತ್ತು ಎರಡನೇ ಅಲೆಯ ಹೊಡೆತಕ್ಕೆ ಸಿಲುಕಿ ಈಗಾಗಲೆ ಪಕ್ಷಗಾರರು ಮತ್ತು ವಕೀಲರು ಸಾಕಷ್ಟು ಸಂಕಷ್ಟ ಅನುಭವಿಸಿದ್ದಾರೆÉ. ಅಲ್ಲದೇ ಇತ್ತೀಚಿನ ಅತೀವೃಷ್ಠಿಯಿಂದ ರೈತರು ಹಾಗೂ ಸಾಮಾನ್ಯ ಜನರು ಬೆಳೆ ಹಾಗೂ ಆಸ್ತಿ-ಪಾಸ್ತಿ ಅನುಭವಿಸಿದ್ದು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುತ್ತಾರೆ.
ಇಂತಹ ಸಂದರ್ಭದಲ್ಲಿ ಹಾಗೂ ಆದಾಯ ಕಡಿಮೆ ಇರುವಂತಹ ಪರಿಸ್ಥಿತಿಯಲ್ಲಿ ತಮ್ಮ ವ್ಯಾಜ್ಯಗಳನ್ನು ಲೋಕ್ಅದಾಲತ್ ಮೂಲಕ ಇತ್ಯರ್ಥಪಡಿಸಿಕೊಂಡರೆ ಕಕ್ಷಿದಾರರಿಗೆ ಮತ್ತು ವಕೀಲರಿಗೆ ಹೆಚ್ಚನ ಅನುಕೂಲವಾಗುತ್ತದೆ. ಅದಾಲತ್ನಲ್ಲಿ ರಾಜಿ ಮೂಲಕ ಇತ್ಯರ್ಥ ಪಡಿಸಿಕೊಳ್ಳುವ ಪ್ರಕರಣಗಳ ಸಂಪೂರ್ಣ ಶುಲ್ಕವನ್ನು ನ್ಯಾಯಾಲಯವು ಮರುಪಾವತಿ ಮಾಡುತ್ತದೆ. ವ್ಯಾಜ್ಯಪೂರ್ವ ಪ್ರಕರಣಗಳಿಗೆ ನ್ಯಾಯಾಲಯ ಶುಲ್ಕ ಕೊಡಬೇಕಾಗಿಲ್ಲ.
ಅದಾಲತ್ನಲ್ಲಿ ಇತ್ಯರ್ಥ ಮಾಡಿಕೊಂಡ ಪ್ರಕರಣಗಳಿಗೆ ಯಾವುದೇ ಮೆಲ್ಮನವಿ ಹಾಗೂ ರಿವಿಜನ್ ಇರುವುದಿಲ್ಲ. ಮತ್ತು ಇದರಲ್ಲಿ ಆದ ತೀರ್ಮಾನವೆ ಅಂತಿಮ ತೀರ್ಮಾನವಾಗಿರುತ್ತದೆ. ಮತ್ತು ಪಕ್ಷಗಾರರು ಉಭಯತ್ರರು ಒಪ್ಪಿ ರಾಜಿ ಮಾಡಿಕೊಳ್ಳುವುದರಿಂದ ಅವರ ಮಧ್ಯೆ ಸೌಹಾರ್ದತೆ ಹೆಚ್ಚುತ್ತದೆ ಹಾಗೂ ವಿವಾದಗಳು ಕಡಿಮೆಯಾಗುತ್ತದೆ ಇದು ಉತ್ತಮ ಸಮಾಜ ನಿರ್ಮಾಣ ಮಾಡಲು ತುಂಬಾ ಸಹಕಾರಿಯಾಗುತ್ತದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಇಮೇಲ್ dlsadavanagere@gmail.com ಮೂಲಕ ಮತ್ತು ದೂರವಾಣಿ ಸಂಖ್ಯೆ- 08192-296364, 9481167005 ಮೂಲಕ ಜಿಲ್ಲೆಯ ಕಾನೂನು ಸೇವೆಗಳ ಪ್ರಾಧಿಕಾರದ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಾದ ಗೀತಾ.ಕೆ.ಬಿ ತಿಳಿಸಿದರು.
ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪ್ರವೀಣ್ ನಾಯಕ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಡಿ.ಪಿ. ಬಸವರಾಜು ಸೇರಿದಂತೆ ವಿವಿಧ ವಕೀಲರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.
ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243