Connect with us

ರಾಜಕೀಯ

ಆ ಮಹಾತ್ಯಾಗಿ ನುಡಿದ ಭವಿಷ್ಯ ಸುಳ್ಳಾಗಲಿಲ್ಲ

Published

on

ಕಾನ್ಷೀರಾಂ ಮತ್ತು ಮಾಯಾವತಿ

ಇಂದು ಅಕ್ಕ ಮಾಯಾವತಿಯವರ 64 ನೇ ಹುಟ್ಟು ಹಬ್ಬ. ಅವರಿಗೆ ಭೀಮ ಶುಭಾಶಯಗಳನ್ನು ಕೋರುತ್ತಾ..

  • ಮಹೇಶ್ ಸರಗೂರು

ಅದು 1977 ರ ಚಳಿಗಾಲದ ಸಮಯ. ದೆಹಲಿಯ ಚಳಿ ಎಂದರೆ ಕೇಳಬೇಕೆ? ಚಳಿ ಎಂದರೆ ಅಂತಿಂಥ ಚಳಿಯಲ್ಲ. ಅತ್ಯಂತ ಭೀಕರವಾದ ಚಳಿ. ನರನಾಡಿಗಳಲ್ಲಿ ನಡುಕ ಹುಟ್ಟಿಸುವ ಚಳಿ.ಇಂತಹ ವಿಪರೀತ ಚಳಿಯ ಅವಧಿಯಲ್ಲೂ ಕಾನ್ಷೀರಾಮ್ ಸಾಹೇಬರು ಬಾಂಸೆಫ್ ಸಂಘಟನೆಯನ್ನು ಹುಟ್ಟುಹಾಕಲು ಹಗಲಿರುಳು ಹೆಣಗುತ್ತಿದ್ದರು.

ಇಂತಹ ಸಮಯದಲ್ಲಿ ಒಂದು ದಿನ ಕಾನ್ಷೀರಾಮ್ ಸಾಹೇಬರು ಮನದಲ್ಲಿ ಅದೇನೋ ಒಂದು ಗಟ್ಟಿ ನಿರ್ಧಾರ ಮಾಡಿಕೊಂಡು ಮೇಲಕ್ಕೆದ್ದರು. ಕಿವಿಗೆ ಮತ್ತು ಕುತ್ತಿಗೆಗೆ ಉಲ್ಲನ್ ಸ್ಕಾರ್ಫ್ ಸುತ್ತಿಕೊಂಡು ಸಹೊದ್ಯೋಗಿಯೊಬ್ಬನನ್ನು ಜೊತೆಗೆ ಕರೆದುಕೊಂಡು ಹೊರನಡೆದರು. ಆಗ ಸಮಯ ರಾತ್ರಿ ಒಂಭತ್ತು ಗಂಟೆ.

ದೆಹಲಿಯ ಬಹುತೇಕ ಜನರು ಆ ಕೊರೆಯುವ ಚಳಿಗೆ ಹೆದರಿಕೊಂಡು, ಬೆಚ್ಚನೆಯ ಹಾಸಿಗೆಯಲ್ಲಿ ಮೈ ತುಂಬಾ ಹೊದ್ದುಕೊಂಡು ಮಲಗಿದ್ದರು. ಇಂತಹ ಸಮಯದಲ್ಲಿ ದೆಹಲಿಯ ಇಂದ್ರಪುರಿ ಪ್ರದೇಶವನ್ನು ಪ್ರವೇಶಿಸಿದ ಕಾನ್ಷೀರಾಮ್ ಸಾಹೇಬರು ಮತ್ತು ಅವರ ಸಹೋದ್ಯೋಗಿ ಇಕ್ಕಟ್ಟಾದ ಓಣಿಯಲ್ಲಿ ನಡೆದು ಮನೆಯೊಂದರ ಬಾಗಿಲು ಬಡಿದರು.

ಅದೇ ತಾನೇ ಊಟ ಮುಗಿಸಿ ಓದುತ್ತಿದ್ದ ಹೆಣ್ಣುಮಗಳೊಬ್ಬಳು ಇಂತಹ ಅಪರಾತ್ರಿಯಲ್ಲಿ ಅದ್ಯಾರು ಬಾಗಿಲು ಬಡಿಯುತ್ತಿರಬಹುದೆಂದು ಯೋಚಿಸುತ್ತಲೇ ಬಾಗಿಲು ತೆರೆದು ನೋಡಿದರೆ ಎದುರಿಗೆ ಕಾನ್ಷೀರಾಮ್ ಸಾಹೇಬರು ನಿಂತಿದ್ದರು.

ಬಾಗಿಲು ತೆರೆದ ಆ ಹೆಣ್ಣು ಮಗಳು ಬೇರಾರೂ ಆಗಿರಲಿಲ್ಲ. ಅವರೇ ಮಾಯಾವತಿ.
ಆಧುನಿಕ ಭಾರತದ ರಾಜಕೀಯ ಇತಿಹಾಸದಲ್ಲಿಯೇ ಅಚ್ಚರಿಯ ಪವಾಡ ಸೃಷ್ಟಿಸಿದ ಆ ಇಬ್ಬರು ಮಹಾಮಹಿಮರು ಒಬ್ಬರಿಗೊಬ್ಬರು ಎದುರುಗೊಂಡ ಮೊದಲ ಕ್ಷಣ ಅದಾಗಿತ್ತು.

ಅಕ್ಕ ಮಾಯಾವತಿಯವರಿಗೆ ಒಂದು ಕ್ಷಣ ಉಸಿರು ನಿಂತಂತಾಯಿತು. ಕಾರಣ ಅಲ್ಲಿ ನಿಂತವರು ವಾಸ್ತವವಾಗಿ ಕಾನ್ಷೀರಾಮ್ ಸಾಹೇಬರಾಗಿದ್ದರೂ ಅವರ ರೂಪ, ಪ್ರತಿರೂಪ ಸಾಕ್ಷಾತ್ ಭಗವಾನ್ ಬುದ್ದನಂತಿತ್ತು. ಭೋಧಿಸತ್ವ ಬಾಬಾಸಾಹೇಬ್ ಅಂಬೇಡ್ಕರ್ ರವರನ್ನು ಹೋಲುತ್ತಿತ್ತು.

ತನ್ನ ಕಣ್ಣನ್ನು ತಾನೇ ನಂಬದಾದ ಮಾಯಾವತಿಯವರು ಸಾವರಿಸಿಕೊಂಡು ಕಾನ್ಷೀರಾಮ್ ಸಾಹೇಬರನ್ನು ಮನೆಯೊಳಗೆ ಬರಮಾಡಿಕೊಂಡರು. ಕಾನ್ಷೀರಾಮ್ ಸಾಹೇಬರ ಆಕಸ್ಮಿಕ ಆಗಮನ ಮಾಯಾವತಿಯವರ ಮನೆಯಲ್ಲಿ ಮಿಂಚಿನ ಸಂಚಾರವನ್ನುಂಟುಮಾಡಿತ್ತು.

ಮಾಯಾವತಿಯವರ ತಂದೆತಾಯಿಗಳು ಗಡಬಡಿಸಿ ಬಂದು, ಆದರದಿಂದ ಸ್ವಾಗತಿಸಿ, ಪರಸ್ಪರ ಕ್ಷೇಮ ಸಮಾಚಾರ ವಿನಿಮಯ ಮಾಡಿಕೊಂಡರು. ಬಾಂಸೆಫ್ ಕೆಲಸದ ಮೂಲಕ ಅದಾಗಲೇ ಉತ್ತರ ಭಾರತದಾದ್ಯಂತ ಮನೆಮಾತಾಗಿದ್ದ ಕಾನ್ಷೀರಾಮ್ ಸಾಹೇಬರು ಇಂತಹ ಅಪರಾತ್ರಿ ಹೊತ್ತಲ್ಲಿ ಮನೆಗೆ ಬಂದಿದ್ದು ಪ್ರಭುದಾಸ್ ದಯಾಳ್ ಮತ್ತು ರಾಮರತಿಯವರಿಗೆ ಬಿಡಿಸಲಾಗದ ಒಗಟಿನಂತಾಗಿತ್ತು. ಏತಕ್ಕೆ ಬಂದಿದ್ದಾರೋ, ಏನು ಸುದ್ದಿ ತಂದಿದ್ದಾರೋ ಎಂಬ ಅಳುಕು ಅವರದಾಗಿತ್ತು.

ಅಂಬೇಡ್ಕರ್ ಆಶಯಗಳಿಗೆ ದ್ರೋಹವೆಸಗಿದ್ದೀರಿ

ಕಾನ್ಷೀರಾಮ್ ಸಾಹೇಬರು ಆ ಅಪರಾತ್ರಿಯಲ್ಲಿ ಮಾಯಾವತಿಯವರನ್ನು ಹುಡುಕಿಕೊಂಡು ಬರಲು ಕಾರಣವೊಂದಿತ್ತು. ಆ ಕಾರಣವೇನೆಂದರೆ, 1977 ರ ಸೆಪ್ಟೆಂಬರ್ ನಲ್ಲಿ ಸರ್ಕಾರದ ವತಿಯಿಂದ ದೆಹಲಿಯ Constitution club ನಲ್ಲಿ ಮೂರು ದಿನಗಳ ಕಾಲ ‘ಜಾತಿ ವಿನಾಶ’ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಆ ಕಾರ್ಯಕ್ರಮದಲ್ಲಿ ಅಂದಿನ ಕೇಂದ್ರ ಆರೋಗ್ಯ ಸಚಿವರಾಗಿದ್ದ ಮತ್ತು ಹೆಸರಾಂತ ಸಮಾಜವಾದಿ ನಾಯಕರಾಗಿದ್ದ ರಾಜ್ ನಾರಾಯಣ್ ರವರು ತಮ್ಮ ಭಾಷಣದಲ್ಲಿ ಅವಹೇಳನಕಾರಿಯಾದ ‘ಹರಿಜನ’ ಪದವನ್ನು ಪದೇ ಪದೇ ಬಳಸಿ ಮಾತನಾಡುತ್ತಿದ್ದರು.

ಅಲ್ಲೇ ಹಾಜರಿದ್ದ ಸರ್ಕಾರಿ ಶಿಕ್ಷಕಿ ಮಾಯಾವತಿಯವರು ಎದ್ದು ನಿಂತು ರಾಜ್ ನಾರಾಯಣ್ ರವರನ್ನು ತರಾಟೆಗೆ ತೆಗೆದುಕೊಂಡರು. ಪರಿಶಿಷ್ಟ ಜಾತಿಯವರಿಗೆ ಹರಿಜನರೆಂದು ಕರೆದು ಅಂಬೇಡ್ಕರ್ ಆಶಯಗಳಿಗೆ ದ್ರೋಹವೆಸಗಿದ್ದೀರಿ. ನಿಮ್ಮ ಘನತೆ ಮತ್ತು ಗೌರವಗಳನ್ನು ಮರೆತು ಬೇಜವಾಬ್ದಾರಿಯಿಂದ ಮಾತನಾಡಿದ್ದೀರಿ. ನೀವು ಈ ಕೂಡಲೇ ಬಹಿರಂಗ ಕ್ಷಮೆ ಕೇಳಬೇಕು ಎಂದು ಸಭೆಯಲ್ಲಿ ಕ್ಷಮೆ ಕೇಳಿಸಿ ಎಲ್ಲರ ಗಮನ ಸೆಳೆದಿದ್ದರು. ಈ ಘಟನೆಯಿಂದ ಮಾಯಾವತಿಯವರು ಎಲ್ಲರ ಕೇಂದ್ರ ಬಿಂದುವಾದರು.

ಇದೇ ಸಭೆಯಲ್ಲಿದ್ದ ಕೆಲವು ಬಾಂಸೆಫ್ ಕಾರ್ಯಕರ್ತರು ಮಾಯಾವತಿಯವರ ವಿಷಯವನ್ನು ಕಾನ್ಷೀರಾಮ್ ಸಾಹೇಬರಿಗೆ ವಿವರಿಸಿ, ಮಾಯಾವತಿಯವರು ನಮ್ಮ ಸಂಘಟನೆಯಲ್ಲಿದ್ದರೆ ಬಾಂಸೆಫ್ ಗೆ ಹೆಚ್ಚು ಬಲ ಬರುತ್ತದೆ ಎಂದು ತಿಳಿಸಿದರು. ಬಾಂಸೆಫ್ ಕಾರ್ಯಕರ್ತರ ಮಾತಿನಿಂದ ಉತ್ತೇಜಿತರಾದ ಕಾನ್ಷೀರಾಮ್ ಸಾಹೇಬರು ಮಾಯಾವತಿಯವರ ಅರಿವಿಗೆ ಬಾರದಂತೆ ಅವರ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಮಾಯಾವತಿಯವರ ಚಿಂತನೆಗಳನ್ನು ಗಮನವಿಟ್ಟು ಆಲಿಸಿದರು. ಅದಕ್ಕಾಗಿ ಮಾಯಾವತಿಯವರನ್ನು ಹುಡುಕಿಕೊಂಡು ಬಂದಿದ್ದರು.

ಐಎಎಸ್ ಅಧಿಕಾರಿಯಾಗಿ ಶೋಷಿತ ಜನಾಂಗಗಳ ಸೇವೆ ಮಾಡಬೇಕು

ಕಾನ್ಷೀರಾಮ್ ಸಾಹೇಬರು ಮಾಯಾವತಿಯವರ ಜೊತೆ ಸುಮಾರು ಒಂದು ಗಂಟೆಗಳ ಕಾಲ ಭಾರತದ ಸಾಮಾಜಿಕ ಮತ್ತು ರಾಜಕೀಯ ಸ್ಥಿತಿಗತಿಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದರು. ಮಹಾತ್ಮ ಜ್ಯೋತಿಭಾಫುಲೆಯವರಿಂದಿಡಿದು ಬಾಬಾಸಾಹೇಬ್ ಅಂಬೇಡ್ಕರ್ ವರೆಗಿನ ಎಲ್ಲಾ ಮಹಾಪುರುಷರ ಹೋರಾಟವನ್ನು ಮತ್ತು ಅದರ ಮುಂದುವರಿಕೆಯ ಮಹತ್ವವನ್ನು ಮನಮುಟ್ಟುವಂತೆ ವಿವರಿಸಿ ಹೇಳಿದರು.

ಇದಾದ ಬಳಿಕ ಮಾಯಾವತಿಯವರ ಜೀವನದ ಆಸೆ ಆಕಾಂಕ್ಷೆಗಳನ್ನು, ದ್ಯೇಯೋದ್ದೇಶಗಳನ್ನು ಕೇಳಿ ತಿಳಿದುಕೊಂಡರು. ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ತಾನು ಐಎಎಸ್ ಅಧಿಕಾರಿಯಾಗಿ ಶೋಷಿತ ಜನಾಂಗಗಳ ಸೇವೆ ಮಾಡಬೇಕು ಎನ್ನುವುದು ನನ್ನ ಗುರಿ ಎಂದು ಮಾಯಾವತಿಯವರು ತಿಳಿಸಿದರು.

ನಂತರ ಹೊರಡುವ ಸಮಯದಲ್ಲಿ ಅಂತಿಮವಾಗಿ ಒಂದು ನಿರ್ಧಾರಕ್ಕೆ ಬಂದ ಕಾನ್ಷೀರಾಮ್ ಸಾಹೇಬರು ” ನೀನು ಅಂದುಕೊಂಡಂತೆ ಖಂಡಿತವಾಗಿ ನೀನು ಐಎಎಸ್ ಅಧಿಕಾರಿ ಆಗಬಹುದು. ಆ ಅರ್ಹತೆ ನಿನಗಿದೆ. ಅದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ ನೀನು ಅಂದುಕೊಂಡಂತೆ ನಿನ್ನ ಜನರ ಸೇವೆ ಮಾಡುವುದು ಮಾತ್ರ ನಿಮ್ಮಿಂದ ಸಾಧ್ಯವಾಗುವುದಿಲ್ಲ.

ಕಾರಣ, ಒಬ್ಬ ಸರ್ಕಾರಿ ಅಧಿಕಾರಿಯಾಗಿ ನೀನು ಸರಕಾರ ನಡೆಸುವ ರಾಜಕಾರಿಣಿಗಳ ಇಚ್ಚೆಯಂತೆ ನಡೆಯಬೇಕಾಗುತ್ತದೆ. ಶ್ರೀಮಂತರ ನೋಟುಗಳಿಂದ ಬಡವರ ಓಟುಗಳನ್ನು ಖರೀದಿಸುವುದನ್ನೇ ಪ್ರಜಾಪ್ರಭುತ್ವ ಎಂದು ಪರಿಗಣಿಸಿರುವ ಭಾರತದಲ್ಲಿ ರಾಜಕೀಯ ನಾಯಕರ ಯೋಜನೆಗಳು ಮತ್ತು ಯೋಚನೆಗಳು ಜಾರಿಯಾಗುತ್ತವೆಯೇ ಹೊರತು ಐಎಎಸ್ ಅಧಿಕಾರಿಗಳ ಯೋಜನೆಗಳು ಮತ್ತು ಯೋಚನೆಗಳಲ್ಲ.

ಈಗ ನಮ್ಮ ಸಮಾಜದಲ್ಲಿ ಬೇಕಾದಷ್ಟು ಮಂದಿ ಐಎಎಸ್ ಅಧಿಕಾರಿಗಳಿದ್ದಾರೆ. ಆದರೆ ಅವರೆಲ್ಲ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿದ್ದಾರೆ. ಅವರಿಂದ ಏನನ್ನೂ ನಿರೀಕ್ಷಿಸುವಂತಿಲ್ಲ. ಇದು ಎಲ್ಲರಿಗೂ ತಿಳಿದಿರುವ ಸಂಗತಿ. ಹೀಗಾಗಿ ನಮಗೆ ಬೇಕಾಗಿರುವುದು ಐಎಎಸ್ ಅಧಿಕಾರಿಗಳಲ್ಲ. ರಾಜಕೀಯ ನಾಯಕರು. ಐಎಎಸ್ ಅಧಿಕಾರಿಗಳಿಂದ ಸರಿಯಾಗಿ ಕೆಲಸ ಮಾಡಿಸಬಲ್ಲ, ವಿಧಾನಸಭೆ ಮತ್ತು ಲೋಕಸಭೆಗಳಲ್ಲಿ ಕುಳಿತು ಜನಪರ ಶಾಸನಗಳನ್ನು ರೂಪಿಸಬಲ್ಲ , ಅವುಗಳನ್ನು ಜಾರಿಗೊಳಿಸಬಲ್ಲ ಸಮರ್ಥ ರಾಜಕೀಯ ನಾಯಕರು.

ನಮ್ಮ ಸಮಾಜದಲ್ಲಿ ಇಂಥ ನಾಯಕರ ಕೊರತೆ ಇದೆ. ‌ನೀನು ಆ ಕೊರತೆಯನ್ನು ನೀಗಿಸಬೇಕು. ನಿನ್ನಲ್ಲಿ ಆ ಶಕ್ತಿಯಿದೆ. ನನ್ನ ಮಾತನ್ನು ನೀನು ನಂಬುವುದಾದರೆ, ನಿನ್ನಲ್ಲಿ ಇಂತದ್ದೊಂದು ಬಯಕೆ ಇದ್ದುದಾದರೆ ನಾನು ನಿನ್ನನ್ನು ಅಂಥ ಒಬ್ಬ ಸಮರ್ಥ ನಾಯಕಿಯನ್ನಾಗಿ ತಯಾರು ಮಾಡುತ್ತೇನೆ. ಆಗ ನೂರಾರು ಜನ ಐಎಎಸ್ ಅಧಿಕಾರಿಗಳು ತಮ್ಮ ಫೈಲುಗಳನ್ನು ಹಿಡಿದುಕೊಂಡು ಬಂದು ನಿನ್ನ ಆದೇಶಕ್ಕಾಗಿ ಕಾಯುತ್ತಾರೆ.

ಒಳ್ಳೆಯ ಮತ್ತು ಕೆಟ್ಟ ಕೆಲಸ ಎರಡನ್ನೂ ಮಾಡುವ ಶಕ್ತಿ ಹೊಂದಿರುವ ಐಎಎಸ್ ಅಧಿಕಾರಿಗಳಿಂದ ನೀನು ನಿನ್ನೆಲ್ಲ ಒಳ್ಳೆಯ ಕೆಲಸಗಳನ್ನೇ ಮಾಡಿಸಬಹುದು. ಅದಕ್ಕಾಗಿ ನೀನು ಒಬ್ಬ ಐಎಎಸ್ ಅಧಿಕಾರಿಯಾಗುವ ಬದಲು ಒಬ್ಬ ಸಮರ್ಥ ರಾಜಕೀಯ ನಾಯಕಿಯಾಗುವುದು ಒಳ್ಳೆಯದು. ಯಾವುದಕ್ಕೂ ಯೋಚಿಸಿ ಒಂದು ಸರಿಯಾದ ನಿರ್ಧಾರಕ್ಕೆ ಬಾ… ನೀನು ತೆಗೆದುಕೊಳ್ಳುವ ನಿರ್ಧಾರದಲ್ಲಿ ಬಹುಜನರ ಭವಿಷ್ಯ ಅಡಗಿದೆ ಎಂದು ಹೇಳಿ ಅಲ್ಲಿಂದ ಹೊರಟು ಹೋದರು.

ಮುಂದೆ ನಡೆದಿದ್ದೆಲ್ಲವೂ ನಮ್ಮ ಕಣ್ಣ ಮುಂದಿರುವ ಇತಿಹಾಸ. ನುಡಿದಂತೆ ನಡೆದು, ಯಕಶ್ಚಿತ್ ಶಾಲಾ ಶಿಕ್ಷಕಿಯೊಬ್ಬಳನ್ನು ಉತ್ತರಪ್ರದೇಶದಂತಹ ಅತಿದೊಡ್ಡ ರಾಜ್ಯದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಯನ್ನಾಗಿ ಮಾಡಿ, ದೇಶವೇ ಕೊಂಡಾಡುವಂತೆ ಅದ್ಬುತ ಕಾರ್ಯಗಳನ್ನು ಸಾಧಿಸಿ ತೋರಿಸಿದ ಪವಾಡ ಪುರುಷ ಕಾನ್ಷೀರಾಮ್. ಅಂದು ಆ ಮಹಾತ್ಯಾಗಿ ನುಡಿದ ಭವಿಷ್ಯ ಸುಳ್ಳಾಗಲಿಲ್ಲ. ಕಾರಣ, ಮಹಾಜ್ಞಾನಿಗಳ ಮಾತುಗಳು ಸುಳ್ಳಾಗಲು ಸಾದ್ಯವೇ ಇಲ್ಲ..!

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ

Published

on

ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ ವೀರ ಯೋಧರಿಗೆ ಪ್ರಧಾನಿ ಗೌರವ ಸಮರ್ಪಣೆ ಮಾಡಲಿದ್ದಾರೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಶಿಂಕುನ್ ಲಾ ಸುರಂಗ ಮಾರ್ಗ ಯೋಜನೆಗೆ ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ.

ಈ ಯೋಜನೆಯಡಿ ನಿಮು-ಪದುಮ್-ಡಾರ್ಚಾ ರಸ್ತೆಯಿಂದ ಲೇಹ್‌ಗೆ ಎಲ್ಲಾ ಹವಾಮಾನಗಳಲ್ಲೂ ಸಂಪರ್ಕ ಕಲ್ಪಿಸಲು ಸುಮಾರು 15 ಸಾವಿರದ 800 ಅಡಿ ಎತ್ತರದಲ್ಲಿ 4.1 ಕಿಲೋಮೀಟರ್ ಉದ್ದದ ಜೋಡಿ ಸುರಂಗ ಮಾರ್ಗವನ್ನು ನಿರ್ಮಿಸಲಾಗುವುದು. ಈ ಕಾರ್ಯ ಪೂರ್ಣಗೊಂಡ ನಂತರ ವಿಶ್ವದಲ್ಲೇ ಇದು ಅತಿ ಎತ್ತರದ ಸುರಂಗ ಮಾರ್ಗವಾಗಲಿದೆ. ಸಶಸ್ತ್ರ ಪಡೆಗಳ ಸುಗಮ ಪ್ರಯಾಣಕ್ಕಷ್ಟೇ ಅಲ್ಲದೇ ಲಡಾಕ್‌ನಲ್ಲಿ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೂ ಈ ಸುರಂಗ ಮಾರ್ಗವು ಸಹಕಾರಿಯಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೇಂದ್ರ ಬಜೆಟ್ : ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

Published

on

ಸುದ್ದಿದಿನಡೆಸ್ಕ್:ಕೇಂದ್ರದ ಮುಂಗಡ ಪತ್ರ ದೇಶದ ಅಭಿವೃದ್ಧಿಗೆ ಪೂರಕವಾಗಿದೆ ಎಂದು ತೆಲುಗು ದೇಶಂ ನಾಯಕ ಕೇಂದ್ರ ಸಚಿವ ಕಿಂಜರಪು ರಾಮಮೋಹನ ನಾಯ್ಡು ಹೇಳಿದ್ದಾರೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಬಜೆಟ್ ಎಲ್ಲರ ಕನಸಾಗಿದೆ ಎಂದು ಹೇಳಿದ್ದಾರೆ. ಈಶಾನ್ಯ ರಾಜ್ಯಗಳ ಬೆಳವಣಿಗೆಗೆ ಆಯ-ವ್ಯಯ ಪೂರಕವಾಗಿದೆ ಎಂದು ಹೇಳಿದರು.

ಬಿಜೆಪಿ ಹಿರಿಯ ನಾಯಕ ರವಿಶಂಕರ್ ಪ್ರಸಾದ್, ಉದ್ಯೋಗ ಹೆಚ್ಚಿಸುವ ಕಾರ್ಯಕ್ರಮವನ್ನು ಹಣಕಾಸು ಸಚಿವರು ಪ್ರಕಟಿಸಿರುವುದಾಗಿ ಹೇಳಿದ್ದಾರೆ. ಜೆಡಿಯು ಮುಖಂಡ ರಾಜೀವ್ ರಂಜನ್ ಸಿಂಗ್, ಆಯ-ವ್ಯಯ ಬಿಹಾರ ಜನತೆಗೆ ಹಾಗೂ ಪ್ರವಾಸೋದ್ಯಮಕ್ಕೆ ಒತ್ತು ನೀಡಿದೆ ಎಂದರು.

ಕಾಂಗ್ರೆಸ್ ಮುಖಂಡ ಶಶಿತರೂರ್ ಪ್ರತಿಕ್ರಿಯೆಸಿ, ಉದ್ಯೋಗ ಖಾತರಿ ಯೋಜನೆಯ ರಾಜ್ಯಗಳ ತಾರತಮ್ಯವನ್ನು ನಿಭಾಯಿಸಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಶಿವಸೇನಾ ನಾಯಕ ಪ್ರಿಯಾಂಕ ಚತುರ್ವೇದಿ, ಮಹಾರಾಷ್ಟ್ರ ರಾಜ್ಯಕ್ಕೆ ನಿರ್ಧಿಷ್ಟವಾದ ಯೋಜನೆಗಳನ್ನು ಪ್ರಕಟಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಡಿಎಂಕೆ ನಾಯಕ ಟಿ.ಆರ್.ಬಾಲು, ಟಿಎಂಸಿ ನಾಯಕಿ ಕಲ್ಯಾಣ ಬ್ಯಾನರ್ಜಿ ಅವರು, ಆಯ-ವ್ಯಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕದ ಸಂಸದರಾದ ಬಸವರಾಜ ಬೊಮ್ಮಾಯಿ, ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಜಗದೀಶ್ ಶೆಟ್ಟರ್, ಜನಪರ ಸಾಮಾನ್ಯವರ್ಗದವರ ಆಯ-ವ್ಯಯವಾಗಿದೆ ಎಂದರು. ಕೇಂದ್ರ ಸಚಿವರಾದ ಎಚ್.ಡಿ.ಕುಮಾರ್‌ಸ್ವಾಮಿ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಅವರುಗಳು ಆಯ-ವ್ಯಯವನ್ನು ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ. ಭಾರತೀಯ ಕೈಗಾರಿಕಾ ಒಕ್ಕೂಟದ ಅಧ್ಯಕ್ಷ ಅನಿಶ್ ಶಹಾ ಪ್ರತಿಕ್ರಿಯಿಸಿ, ದೇಶದ ಬೆಳವಣಿಗೆಗೆ ಪೂರಕ ಆಯ-ವ್ಯಯ ರೈತರು, ಯುವಕರು, ಮಹಿಳೆಯರಿಗೆ ಸಹಕಾರಿ ಎಂದು ಹೇಳಿದ್ದಾರೆ.

ಶಿಕ್ಷಣ, ಆರೋಗ್ಯ, ರಕ್ಷಣಾ ಕ್ಷೇತ್ರಗಳಿಗೆ ಅನುದಾನವನ್ನು ಗಣನೀಯವಾಗಿ ಖಡಿತ ಮಾಡಿದ್ದಾರೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಹಲವು ಯೋಜನೆಗಳ ಅನುಷ್ಠಾನಕ್ಕೆ ನೆರವು ಕೋರಿದ್ದೆವು. ಮಾಹಿತಿ ತಂತ್ರಜ್ಞಾನಕ್ಕೆ ನೀಡಿದ್ದ ಅನುದಾನವನ್ನು ಕಡಿಮೆ ಮಾಡಿರುವ ಕೇಂದ್ರ ಸರ್ಕಾರ, ಪರಿಶಿಷ್ಟ ಸಮುದಾಯ ಮತ್ತು ಅಲ್ಪ ಸಂಖ್ಯಾತರ ಅಭಿವೃದ್ಧಿಗೆ ಅನುದಾನವನ್ನು ಖಡಿತ ಮಾಡಿ, ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮೂಲ ಸೌಕರ್ಯ ಅನ್ವೇಷಣೆ ಹಾಗೂ ಅಭಿವೃದ್ಧಿಗೆ ಆಯ-ವ್ಯಯ ಪೂರಕವಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಹಾಗೂ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಆಯ-ವ್ಯಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ದೇಶದ ಉತ್ಪಾದನೆ ಹಾಗೂ ಬೆಳವಣಿಗೆಯ ಪ್ರಮಾಣದಲ್ಲಿ ಕೃಷಿ, ಉದ್ಯೋಗ, ಕೌಶಲ್ಯಾಭಿವೃದ್ಧಿ ಜೊತೆಗೆ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಾಗಿದೆ ಎಂದು ಅವರು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending