ದಿನದ ಸುದ್ದಿ
ಬಿಎಸ್ವೈ ರಾಜೀನಾಮೆ ಘೋಷಣೆ..!
ಸುದ್ದಿದಿನ, ಬೆಂಗಳೂರು : ಸರ್ಕಾರದ ಎರಡು ವರ್ಷಗಳ ಸಾಧನಾ ಕಾರ್ಯಕ್ರಮದ ಭಾಷಣದಲ್ಲಿ ಭಾವುಕರಾಗಿ ಸಿಎಂ ಬಿಎಸ್ವೈ ಕಣ್ಣೀರು ಹಾಕಿದರು.
ಸಂಘದ ಕಾರ್ಯಕರ್ತನಾಗಿ ನಂತರ ಆರೆಸ್ಸೆಸ್ ಪ್ರಚಾರಕನಾಗಿ ಬಳಿಕ ರಾಜಕೀಯ ಜೀವನ ಪ್ರವೇಶಿಸಿ ಸಂದರ್ಭದಿಂದ ಹಿಡಿದು ತಮ್ಮ ಈಗಿನ ರಾಜಕೀಯದವರೆಗೂ ತಮ್ಮ ಹೋರಾಟಗಳನ್ನ ಅವರು ಮೆಲುಕು ಹಾಕಿದರು. ಭಾಷಣದ ಮಧ್ಯೆ ಅವರು ಗದ್ಗದಿತರಾಗಿ ಕಣ್ಣೀರು ಹಾಕಿದರು. ಕೊನೆಯಲ್ಲಿ ಗದ್ಗದಿತರಾಗಿ ಊಟದ ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಕಣ್ಣೀರು ಹಾಕಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243