ರಾಜಕೀಯ
ಲೋಕ ಸಭೆ ಉಪ ಚುನಾವಣೆ ಮುಗಿವವರೆಗೂ ವಿಧಾನ ಸೌಧಕ್ಕೆ ಬೀಗ ಹಾಕಿ : ಬಿ.ಎಸ್.ವೈ ಆಕ್ರೋಶ

ಸುದ್ದಿದಿನ,ಶಿವಮೊಗ್ಗ : ಹಣ ಬಲ, ಹೆಂಡದ ಬಲ, ಜಾತಿಬಲ, ತೋಳ್ಬಲದಿಂದ ಚುನಾವಣೆಗೆ ಇಳಿದವರಿಗೆ ಈ ಸಭೆ ಉತ್ತರ ನೀಡಿದೆ.ಚುನಾವಣೆಗೆ ಸ್ಪರ್ಧಿಸಿದವರು ಹಿಂದೆ ಅಧಿಕಾರದಲ್ಲಿದ್ದಾಗ ಏನು ಮಾಡಿದ್ದಾರೆ ಎಂಬುದನ್ನು ನೋಡಿಕೊಂಡು ಮತ ಚಲಾಯಿಸಿ ಎಂದು ಶಿವಮೊಗ್ಗ ತಾಲೂಕು ಆಯನೂರಿನ ಸಮಾವೇಶದಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಕೆರೆ ನೀಡಿದರು.
ನಂತರ ಮಾತನಾಡಿದ ಅವರು, ಕಳೆದ ಐದು ತಿಂಗಳಲ್ಲಿ ನೂರು ಜನರಿಗೆ ಭಾಗ್ಯ ಲಕ್ಷ್ಮೀ ಬಾಂಡ್ ನೀಡಿಲ್ಲ. ಇದು ನಿಮಗೆ ಇರುವ ಬಡವರ ಪರ ಕಾಳಜಿ ತೋರಿಸುತ್ತದೆ. ಯಾವ ಮುಖ ಇಟ್ಟುಕೊಂಡು ಮುಖ್ಯಮಂತ್ರಿ ಬಂದು ಇಲ್ಲಿ ಮತ ಕೇಳುತ್ತಾರೆ. ಬಡವರ ಶವ ಸಂಸ್ಕಾರಕ್ಕೆ ನಾನು ಅಧಿಕಾರದಲ್ಲಿದ್ದಾಗ ಹಣ ನೀಡುವ ಯೋಜನೆ ರೂಪಿಸಿದ್ದೆ ಆದರೆ ಈಗ ಮುಖ್ಯಮಂತ್ರಿ ಆ ಯೋಜನೆಯ ಹಣವನ್ನೂ ಸಾಲಮನ್ನಾಗೆ ಬಳಸಿಕೊಂಡಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸರ್ಕಾರ ದಿವಾಳಿಯಾಗಿದೆ ಎಂದು ಕಿಡಿಕಾರಿದರು.
ಉಪ ಚುನಾವಣೆ ಮುಗಿಯುವವರೆಗೆ ವಿಧಾನಸೌಧದ ಬಾಗಿಲು ಹಾಕಿಬಿಡಿ.ಬಳ್ಳಾರಿ ಪ್ರಚಾರಕ್ಕೆ 60 ಮಂದಿ ಹೋಗುತ್ತಾರಂತೆ. ಶಿವಮೊಗ್ಗಕ್ಕೆ ಇನ್ನೆಷ್ಟು ಜನ ಬರುತ್ತಾರೋ ಗೊತ್ತಿಲ್ಲ. ಹೀಗಾಗಿ ವಿಧಾನಸೌಧಕ್ಕೆ ಯಾರೂ ಹೋಗಲ್ಲ. ಹಾಗಾಗಿ ಬಾಗಿಲು ಹಾಕಿಬಿಡಿ. ಮೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿದರೆ ಕಾಂಗ್ರೆಸ್ ವರಿಷ್ಟ ರಾಹುಲ್ ಗಾಂಧಿ ಬಾಯಿ ಮುಚ್ಚಿಸಬಹುದು. ಈ ಸರ್ಕಾರ ಯಾವಾಗ ನೆಗೆದುಬಿದ್ದು ಹೋಗುತ್ತದೆಯೋ ಗೊತ್ತಿಲ್ಲ.ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಒಬ್ಬರ ಮುಖ ಒಬ್ಬರುನೋಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ ಎಂದು ಮೈತ್ರಿ ಸರ್ಕಾರದ ವಿರುದ್ಧ ಸಿಡಿದೆದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.
ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.
ಕೆಎಸ್ಆರ್ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.
ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ವಿಜ್ಞಾನಿಗಳ ಮೂಲಕ ರೈತರ ಸಮಸ್ಯೆಗಳಿಗೆ ಪರಿಹಾರ : ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್
-
ದಿನದ ಸುದ್ದಿ1 day ago
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ1 day ago
ರಾಜ್ಯದ ಹಲವೆಡೆ ಧಾರಾಕಾರ ಮಳೆ ; ಜನಜೀವನ ಅಸ್ತವ್ಯಸ್ತ
-
ದಿನದ ಸುದ್ದಿ1 day ago
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ
-
ದಿನದ ಸುದ್ದಿ5 days ago
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ1 day ago
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ಇಂಡಿಯಾ ಪ್ರಯಾಣಿಕ ವಿಮಾನ ಪತನ : 242 ಪ್ರಯಾಣಿಕರು ಸಾವು
-
ದಿನದ ಸುದ್ದಿ4 days ago
ಜೂನ್ 9, 2025 ರ ಅಡಿಕೆ ರೇಟು ಹೀಗಿದೆ
-
ದಿನದ ಸುದ್ದಿ1 day ago
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ