Connect with us

ದಿನದ ಸುದ್ದಿ

ರಾಜ್ಯ ಬಜೆಟ್ ನ ಪಾವಿತ್ರ್ಯವನ್ನೇ ಹಾಳು ಮಾಡಿದ ಬಿ.ಎಸ್.ಯಡಿಯೂರಪ್ಪ : ಸಿದ್ದರಾಮಯ್ಯ ಕಿಡಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು: ‘ಆಪರೇಷನ್ ಕಮಲ’ ಎಂಬ ಅನೈತಿಕ ರಾಜಕೀಯದ ಮೂಲಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ರಾಜ್ಯವನ್ನು ದಶಕಗಳ ಹಿಂದಕ್ಕೆ ಒಯ್ಯುವ “ಆಪರೇಷನ್ ಬರ್ಬಾದ್” ಕಾರ್ಯಕ್ರಮವನ್ನು ಯಶಸ್ವಿಯಾಗಿ ಮಾಡುತ್ತಿದೆ. ಇದಕ್ಕೆ ಕಳೆದ ಮತ್ತು ಈ ವರ್ಷದ ಎರಡು ಬಜೆಟ್‍ಗಳೇ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಇಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಿದ ಬಜೆಟ್ -2021 ರ ಬಗ್ಗೆ ಪ್ರತಿಜ್ರಿಯಿಸಿದ ಅವರು,
ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾಯಿತ ಸರ್ಕಾರ ಪಾರದರ್ಶಕವಾಗಿ ಕೆಲಸ ಮಾಡಬೇಕೆನ್ನುವುದು ಸಂವಿಧಾನಬದ್ಧ ಬದ್ಧತೆ. ಆದರೆ, ಇದೊಂದು ಮುಚ್ಚುಮರೆಯ ಸರ್ಕಾರ. ಈ ಬಜೆಟ್‍ನಲ್ಲಿ ಸರ್ಕಾರ ಬಿಚ್ಚಿಟ್ಟಿದ್ದಕ್ಕಿಂತ ಮುಚ್ಚಿಟ್ಟಿದ್ದೇ ಹೆಎಂದರು.ಎಂದು ಕಿಡಿಕಾರಿದರು.

ಆಯವ್ಯಯವನ್ನು ಇಲಾಖಾವಾರು ನೀಡದೆ ಆರು ವಲಯಗಳಾಗಿ ವಿಂಗಡಿಸಿ ಯಾವ ಇಲಾಖೆಗೆ ಎಷ್ಟು ಅನುದಾನ ನೀಡಲಾಗಿದೆ. ಇಲಾಖೆಗಳ ಕಾರ್ಯಕ್ರಮಗಳೇನು, ಕಳೆದ ವರ್ಷದ ಸಾಧನೆಗಳೇನು, ಹೊಸ ಯೋಜನೆಗಳೇನು ಎಂಬ ವಿವರಗಳೇ ಇಲ್ಲ.

ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಬಜೆಟ್‍ಗೆ ಇದ್ದ ಮಹತ್ವ ಮತ್ತು ಪಾವಿತ್ರ್ಯವನ್ನೇ ಹಾಳು ಮಾಡಿದ್ದಾರೆ. ರಾಜ್ಯದಲ್ಲಿರುವ 33 ಇಲಾಖೆಗಳನ್ನು ಆರು ವಲಯಗಳನ್ನಾಗಿ ಮಾಡಿ ಗೊಂದಲ ಸೃಷ್ಟಿಸಲಾಗಿದೆ. ಈ ಆರೂ ವಲಯಗಳಿಗೆ ಕಳೆದ ಬಜೆಟ್‍ನಲ್ಲಿ ನಿಗದಿಪಡಿಸಲಾಗಿದ್ದ ಅನುದಾನಕ್ಕಿಂತ ಕಡಿಮೆ ಹಣ ನಿಗದಿಪಡಿಸಲಾಗಿದೆ.

ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ರೂ 1231 ಕೋಟಿ , ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯಕ್ಕೆ ರೂ 9943 ಕೋಟಿ, ಆರ್ಥಿಕ ಅಭಿವೃದ್ಧಿ ಪ್ರಚೋದನೆ ವಲಯಕ್ಕೆ ರೂ 3203 ಕೋಟಿ, ಬೆಂಗಳೂರು ಸಮಗ್ರ ಅಭಿವೃದ್ಧಿಗೆ ರೂ 997 ಕೋಟಿ, ಸಂಸ್ಕೃತಿ – ಪರಂಪರೆ ಹಾಗೂ ನೈಸರ್ಗಿಕ ಸಂಪನ್ಮೂಲ ವಲಯಕ್ಕೆ 1907 ಕೋಟಿ ಕಡಿಮೆ ಅನುದಾನವನ್ನು ನಿಗದಿಪಡಿಸಲಾಗಿದೆ ಎಂದರು.

ಆಡಳಿತ ಸುಧಾರಣಾ ವಲಯಕ್ಕೆ ಮಾತ್ರ ರೂ.42,325 ಕೋಟಿಯಷ್ಟು ಅನುದಾವನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಈ ಹೆಚ್ಚುವರಿ ಅನುದಾನಕ್ಕೆ ಯಾವ ಹೊಸ ಯೋಜನೆಗಳನ್ನೂ ಪ್ರಕಟಮಾಡಿಲ್ಲ.

ಸಂಕಷ್ಟಗಳ ಸರಮಾಲೆಗೆ ಸಿಲುಕಿರುವ ರೈತರು ದೇಶಾದ್ಯಂತ ಬೀದಿಗಿಳಿದಿದ್ದಾರೆ. ಕೃಷಿ ವಿರೋಧಿ ಕಾಯ್ದೆಗಳ ಮೂಲಕ ರೈತರನ್ನು ದಿವಾಳಿ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ಜೊತೆ ಸೇರಿರುವ ರಾಜ್ಯ ಸರ್ಕಾರ ತನ್ನ ಬಜೆಟ್‍ನಲ್ಲೂ ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದರು.

ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲೂ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ‘ಒಂದು ಲಕ್ಷದವರೆಗಿನ ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರ ಬ್ಯಾಂಕ್‍ಗಳಲ್ಲಿನ ಕೃಷಿ ಸಾಲವನ್ನು ಮನ್ನಾ ಮಾಡುತ್ತೇವೆ’ ಎಂದು ಭರವಸೆ ನೀಡಿತ್ತು. ಈ ಸರಕಾರ ಅಧಿಕಾರಕ್ಕೆ ಬಂದ ನಂತರ ಮಂಡಿಸಿದ ಎರಡೂ ಬಜೆಟ್‍ಗಳಲ್ಲೂ ರೈತರ ಸಾಲ ಮನ್ನಾದ ಪ್ರಸ್ತಾಪವೇ ಇಲ್ಲ.

ಕೃಷಿ, ತೋಟಗಾರಿಕೆ, ಜಲಸಂಪನ್ಮೂಲ, ಸಹಕಾರ, ಮೀನುಗಾರಿಕೆ, ರೇಷ್ಮೆ ಮೊದಲಾದ ಕೃಷಿ ಸಂಬಂಧಿತ ಇಲಾಖೆಗಳಿಗೆ ಕಳೆದ ಬಜೆಟ್‍ನಲ್ಲಿ ರೂ. 32,259 ಕೋಟಿ ಅನುದಾನ ನೀಡಿದ್ದರೆ ಪ್ರಸಕ್ತ ಬಜೆಟ್‍ನಲ್ಲಿ ರೂ 31,028 ಕೋಟಿ ಅನುದಾನ ಒದಗಿಸಲಾಗಿದೆ. ಅಂದರೆ, ರೂ 1,231 ಕೋಟಿ ಅನುದಾನ ಕಡಿಮೆ ಮಾಡಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತನ್ನ ಎರಡನೇ ಬಜೆಟ್‍ನಲ್ಲಿ ಕೂಡ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಜಾತಿ ಹಾಗೂ ಅಲ್ಪಸಂಖ್ಯಾತ ವರ್ಗಗಳನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ ಎಂದು ಹೇಳಿದರು.

2020-21 ನೇ ಸಾಲಿನಲ್ಲಿ ಎಸ್‍ಸಿಎಸ್‍ಪಿ/ಟಿಎಸ್‍ಪಿ ಯೋಜನೆಗೆ 26,930 ಕೋಟಿ ಅನುದಾನ ಒದಗಿಸಲಾಗಿತ್ತು. ಈ ಬಾರಿ ಬಜೆಟ್ ಗಾತ್ರ ಹೆಚ್ಚಳಕ್ಕೆ ಅನುಗುಣವಾಗಿ ಈ ಯೋಜನೆಗೆ ಅನುದಾನವನ್ನು ಹೆಚ್ಚಿಸಬೇಕಿತ್ತು. ಆದರೆ ಈ ವರ್ಷದ ಬಜೆಟ್‍ನಲ್ಲಿ ನೀಡಲಾಗಿರುವ ಅನುದಾನ ರೂ 26,005 ಕೋಟಿ ಮಾತ್ರ.

ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಸಮಾಜದ ಅಭಿವೃದ್ಧಿಗಾಗಿ ನಿಗಮವನ್ನು ಸ್ಥಾಪಿಸಿ ತಲಾ ರೂ.500 ಕೋಟಿ ಅನುದಾನ ನಿಗದಿಪಡಿಸಿರುವುದನ್ನು ನಾನು ಸ್ವಾಗತಿಸುತ್ತೇನೆ. ಅಂಬೇಡ್ಕರ್, ವಾಲ್ಮೀಕಿ, ಆದಿಜಾಂಬವ, ಬೋವಿ, ವಿಶ್ವಕರ್ಮ, ಕಾಡುಗೊಲ್ಲರ, ಅಂಬಿಗರ ಚೌಡಯ್ಯ, ಸವಿತಾ ಸಮಾಜ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಒಟ್ಟು ಕೇವಲ 500 ಕೋಟಿ ಅನುದಾನ ನೀಡುವ ಮೂಲಕ ತಳಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ.

ಮುಖ್ಯಮಂತ್ರಿಗಳು ಆರ್ಥಿಕತೆ ಸಕಾರಾತ್ಮಕ ಹಾದಿಯಲ್ಲಿ ಇದೆ ಎಂದು ಬಜೆಟ್‍ನಲ್ಲಿ ಹೇಳಿದ್ದಾರೆ. ಆದರೆ ಶೇ.14 ರಷ್ಟು ಪ್ರಗತಿಯಲ್ಲಿದ್ದ ರಾಜ್ಯದ ಆರ್ಥಿಕತೆ ಈ ಬಾರಿಯ ಬಜೆಟ್‌ನಲ್ಲಿರುವ ಅಂಕಿಅಂಶಗಳನ್ನು ನೋಡಿದರೆ ಗಾಬರಿ ಹುಟ್ಟಿಸುವಂತೆ ಇವೆ.

ರಾಜ್ಯ ಆದಾಯ ಎಂದು ಹೇಳುತ್ತಿರುವುದು ಬರಿ ಸಾಲವನ್ನು. ತೆರಿಗೆ ಸಂಗ್ರಹವು ಮುಖ್ಯಮಂತ್ರಿಗಳ ಭಾಷಣದ ಪ್ರಕಾರ ಕರ್ನಾಟಕದಲ್ಲಿ ತುಸು ಸಮಾಧಾನಕರವಾಗಿದ್ದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಾದ ಪ್ರಮಾಣದಲ್ಲಿ ನೀಡದೆ ಹೋದ ಕಾರಣಕ್ಕೆ ರಾಜ್ಯವು ಭೀಕರ ಹಣಕಾಸಿನ ಸಮಸ್ಯೆಯನ್ನು ಎದುರಿಸುತ್ತಿದೆ.

ರಾಜ್ಯದ ಇತ್ತೀಚಿನ ವರ್ಷಗಳಲ್ಲಿಯೆ ಪ್ರಥಮ ಬಾರಿ ರೂ.19,485.84 ಕೋಟಿ ರಾಜಸ್ವ ಕೊರತೆ 2020-21 ರಲ್ಲಿ ಎದುರಾಗಿದೆ. 2021-22 ಕ್ಕೆ ರೂ.15,133 ಕೋಟಿ ರಾಜಸ್ವದ ಕೊರತೆ ಆಗುವುದೆಂದು ಬಜೆಟ್‍ನಲ್ಲಿ ತಿಳಿಸಿದ್ದಾರೆ. 2020-21 ರಲ್ಲಿ ಬಜೆಟ್ ಮಂಡಿಸಿದಾಗ ರೂ.143 ಕೋಟಿ ರಾಜಸ್ವ ಉಳಿಕೆ ಇರುತ್ತದೆ ಎಂದು ಅಂದಾಜಿಸಲಾಗಿತ್ತು ನಂತರದ ಪರಿಷ್ಕೃತ ಬಜೆಟ್‌ನಲ್ಲಿ ರಾಜಸ್ವ ಕೊರತೆ ಎದುರಾಯಿತು. 5 ವರ್ಷದ ನಮ್ಮ ಸರ್ಕಾರದಲ್ಲಿ ರಾಜಸ್ವದ ಕೊರತೆ ಎಂದೂ ಆಗಿಲ್ಲ.

ಬಜೆಟ್‍ನ ಅಂದಾಜಿನ ಪ್ರಕಾರ ವಿತ್ತೀಯ ಕೊರತೆ ಜಿ.ಎಸ್.ಡಿ.ಪಿ.ಯ ಶೇ.3.48 ರಷ್ಟು ಇರುತ್ತದೆ. ಇದರ ಪ್ರಕಾರ 2021-22 ರಲ್ಲಿ ವಿತ್ತೀಯ ಕೊರತೆ ರೂ.59,240 ಕೋಟಿ ಇರುತ್ತದೆ. ಈ ವರ್ಷ ರೂ.71,332 ಕೋಟಿಗಳಷ್ಟು ರಾಜ್ಯ ಸರ್ಕಾರ ಸಾಲ ಪಡೆಯುವುದಾಗಿ ಘೋಷಿಸಿದೆ. ಇದರಿಂದ ಸರ್ಕಾರದ ಮೇಲೆ ಬಹಳಷ್ಟು ಹೊರೆಯಾಗುತ್ತದೆ.

ಎಫ್.ಆರ್.ಬಿ.ಎಂ. ಕಾಯ್ದೆ ಪ್ರಕಾರ ವಿತ್ತೀಯ ಕೊರತೆಯು ಜಿ.ಡಿ.ಪಿ.ಯ ಶೇ.3 ಕ್ಕಿಂತ ಕಡಿಮೆ ಇರಬೇಕೆಂದು ನಿಯಮವಿದೆ. ಆದರೆ ಸರ್ಕಾರವು ಕೊರೋನಾ ಸಂದರ್ಭದಲ್ಲಿ ಸರಿಯಾದ ಆಡಳಿತವನ್ನು ನಡೆಸದೇ ಸರ್ಕಾರದ ವೈಫಲ್ಯವನ್ನು ಮುಚ್ಚಿ ಹಾಕಲು ಜಿ.ಎಸ್.ಡಿ.ಪಿ.ಯ ಶೇ.4 ರಷ್ಟು ಹೆಚ್ಚಿಗೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಿಕೊಳ್ಳಲಾಗಿದೆ. ಇದು ಒಳ್ಳೆಯ ಆರ್ಥಿಕ ನೀತಿಯ ಲಕ್ಷಣವಲ್ಲ.

5 ವರ್ಷದ ನಮ್ಮ ಸರ್ಕಾರದಲ್ಲಿ ವಿತ್ತೀಯ ಕೊರತೆಯು ಜಿ.ಎಸ್.ಡಿ.ಪಿಯ. ಶೇ.2.5 ರ ಆಸುಪಾಸಿನಲ್ಲೇ ಇತ್ತು.
2020-21 ರಲ್ಲಿ ಬಿಡುಗಡೆ ಮಾಡಿದ ಮಧ್ಯಮಾವಧಿ ವಿತ್ತೀಯ ಯೋಜನೆ – 2020-2024 ರ ಪ್ರಕಾರ ಹೆಚ್ಚುವರಿ ರಾಜಸ್ವ ನಿರೀಕ್ಷೆಯಲ್ಲಿದ್ದ ರಾಜ್ಯ 2020-21 ರಲ್ಲೇ ದೊಡ್ಡ ಮಟ್ಟದ ರಾಜಸ್ವ ಕೊರತೆಯನ್ನು ಎದುರಿಸುತ್ತಿದೆ.

2022-23 ರಿಂದ ಜಿ.ಎಸ್.ಟಿ. ಪರಿಹಾರ ಸ್ಥಗಿತಗೊಳ್ಳುವುದರಿಂದ ಇದರ ಜೊತೆಗೆ ರೂ.30,743 ಕೋಟಿ ರಾಜಸ್ವ ಕೊರತೆಯಾಗಲಿದೆ ಎಂದು ಅಂದಾಜು ಮಾಡಲಾಗಿದೆ. 2023-24 ರಲ್ಲಿ ಈ ರಾಜಸ್ವ ಕೊರತೆಯು ರೂ.46,831 ಕೋಟಿಯಾಗಲಿದೆ.

2020-21 ರಲ್ಲಿ ರೂ.70,411 ಕೋಟಿ ಸಾಲ ಮಾಡಿದೆ. 2019-20 ರವರೆಗೆ ರೂ.3,27,209 ಕೋಟಿ ಸಾಲ ರಾಜ್ಯದ ಮೇಲಿತ್ತು. ನಮ್ಮ ಸರ್ಕಾರದ ಅಂತಿಮ ವರ್ಷದಲ್ಲಿ (2017-18)ರಲ್ಲಿ ರೂ.2,42,420 ಕೋಟಿ ಸಾಲ ಮಾಡಲಾಗಿತ್ತು. ಜಿ.ಎಸ್.ಡಿ.ಪಿಯ ಮೇಲೆ ಸಾಲದ ಪ್ರಮಾಣ ಶೇ.18.93 ಇತ್ತು.

2020-21 ರ ಫೆಬ್ರವರಿ ಅಂತ್ಯಕ್ಕೆ ರಾಜ್ಯದ ಸಾಲ ರೂ.3,97,881 ಕೋಟಿ ಇದೆ. ಮುಂದಿನ ವರ್ಷಕ್ಕೆ ರೂ.4,57,889 ಕೋಟಿಗಳಷ್ಟು ಸಾಲ ರಾಜ್ಯದ ಜನರ ಮೇಲೆ ಇರುತ್ತದೆ ಎಂದು ಅಂದಾಜಿಸಲಾಗಿದೆ. ಇದು ಜಿ.ಎಸ್.ಡಿ.ಪಿ.ಯ ಶೇ.26.9 ರಷ್ಟು ಆಗಿದೆ. ಎಫ್.ಆರ್.ಬಿ.ಎಂ. ಕಾಯ್ದೆಯ ನಿಯಮದ ಪ್ರಕಾರ ಜಿ.ಎಸ್.ಡಿ.ಪಿಯ ಶೇ.25 ರಷ್ಟು ಕಡಿಮೆ ಇರಬೇಕು. 5 ವರ್ಷದ ನಮ್ಮ ಸರ್ಕಾರವು ಅದು ಶೇ.20 ರ ಆಸುಪಾಸಿನಲ್ಲಿ ಇತ್ತು.

ರಾಜಸ್ವ ಆದಾಯವು ಕಳೆದ ಬಜೆಟ್ ಅಂದಾಜಿಗಿಂತ ಈ ವರ್ಷದ ಅಂದಾಜಿನಲ್ಲಿ ಸುಮಾರು ರೂ.7,000 ಕೋಟಿಯಷ್ಟು ಕಡಿಮೆಯಾಗಿದೆ. ಕಳೆದ ಬಜೆಟ್‍ನ ಅಂದಾಜು ಮತ್ತು ಪರಿಷ್ಕೃತ ರಾಜಸ್ವ ಸ್ವೀಕೃತಿಯಲ್ಲಿ ರೂ.20,000 ಕೋಟಿಯಷ್ಟು ಕಡಿಮೆಯಾಗಿದೆ. ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ಮತ್ತು ಅನುದಾನದ ಕೊರತೆಯೇ ಇದಕ್ಕೆ ಹೊಣೆ.

2020-21 ರ ಪರಿಷ್ಕೃತ ವೆಚ್ಚವು ರೂ.2,29,924.73 ಕೋಟಿ ಇರುತ್ತದೆ ಎಂದು ಅಂದಾಜಿಸಲಾಗಿದೆ. ಇದು ಬಜೆಟ್‍ನ ಅಂದಾಜಿಗಿಂತ ರೂ.8,000 ಕೋಟಿಯಷ್ಟು ಕಡಿಮೆಯಾಗಿದೆ.

2020-21 ರಲ್ಲಿ ರೂ.2,37,893 ಕೋಟಿಗಳಷ್ಟು ಬಜೆಟ್ ಅನ್ನು ಮಂಡಿಸಿದ್ದರೂ ಕಡೆಯದಾಗಿ ಇಲಾಖೆಗಳಿಗೆ ನೀಡಲು ಉದ್ದೇಶಿಸಿದ್ದ ಮೊತ್ತ ರೂ.1,96,369.2 ಕೋಟಿ. ಅದರಲ್ಲಿ ಹಳೆಯ ಬಾಕಿ ರೂ.13,491.7 ಕೋಟಿ. ಒಟ್ಟಿಗೆ ಸೇರಿ ಖರ್ಚು ಮಾಡಲು ಲಭ್ಯವಿದ್ದ ಅನುದಾನ ರೂ.2,09,860 ಕೋಟಿ.

ಇಲಾಖೆಗಳಿಗೆ ಜನವರಿಯವರೆಗೆ ಬಿಡುಗಡೆ ಮಾಡಿದ್ದು ರೂ.1,42,851 ಕೋಟಿ. ಖರ್ಚಾಗಿರುವುದು ರೂ.1,30,998 ಕೋಟಿ ಮಾತ್ರ. 2020-21 ರಲ್ಲಿ ರೂ.2,37,893 ಕೋಟಿಯನ್ನು ಪರಿಷ್ಕರಿಸಿ ರೂ.2,29,925 ಕೋಟಿಗಳಿಗೆ ಇಳಿಸಿಕೊಂಡರು.

ಇದನ್ನೂ ಓದಿ | ರಾಜ್ಯ ಬಜೆಟ್-2021 ವಿಶ್ಲೇಷಣೆ | ಯಡ್ಡಿ ಬಜೆಟ್ – ಉತ್ಪ್ರೇಕ್ಷೆ, ತಾರತಮ್ಯ ಮತ್ತು ಸುಳ್ಳು ಅಂಕಿಅಂಶಗಳ ಕಣ್ಕಟ್ಟು..!

ಕೊರೋನಾ ನಿರ್ವಹಣೆಗಾಗಿ ರೂ.5,372 ಕೋಟಿ ಖರ್ಚು ಮಾಡಿಯೂ ಒಟ್ಟು ಖರ್ಚು ಅವರ ಬಜೆಟ್ ಅಂದಾಜಿಗಿಂತ ಕಡಿಮೆಯಿದೆ. ಇದರಲ್ಲಿ ಇಲಾಖೆಗಳಿಗೆ ಖರ್ಚು ಮಾಡಲು ಸಿಕ್ಕಿದ್ದು ರೂ.1,96,369 ಕೋಟಿ. ಇನ್ನು ಉಳಿದ ರೂ.33,556 ಕೋಟಿಗಳು ಸಾಲ ಮರುಪಾವತಿ ಮತ್ತು ಬಡ್ಡಿ ಪಾವತಿಗೆ ಖರ್ಚಾಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು 2021-22 ರಲ್ಲಿ ಜಿ.ಡಿ.ಪಿ.ಯು ಶೇ.11 ರಷ್ಟು ಬೆಳವಣಿಗೆ ಕಾಣುವುದಾಗಿ ಹೇಳಿಕೊಳ್ಳುತ್ತಿದ್ದಾರೆ. ಆದರೆ ರಾಜ್ಯದ ಸ್ವಂತ ತೆರಿಗೆಗಳ ಸಂಗ್ರಹಗಳ ಗುರಿಯು 2020-21 ರ ಮೂಲ ಬಜೆಟ್‍ಗೆ ಹೋಲಿಸಿದರೆ ಶೇ.3.12 ರಷ್ಟು ಕಡಿಮೆಯಾಗಿದೆ.

ಕೇಂದ್ರದ ತೆರಿಗೆ ಪಾಲು 2020-21ರ ಮೂಲ ಬಜೆಟ್‍ನಲ್ಲಿ ರೂ.28,591.23 ಕೋಟಿ ನಿರೀಕ್ಷೆ ಮಾಡಲಾಗಿತ್ತು. 2021-22 ರ ಆಯವ್ಯಯದಲ್ಲಿ ಇದು ರೂ.24,273.6 ಕೋಟಿಗೆ ಇಳಿಯಲಿದೆ. ರೂ.4,318 ಕೋಟಿಗಳಷ್ಟು ಕಡಿಮೆಯಾಗಿದೆ. ಅಂದರೆ ಶೇ.15 ರಷ್ಟು ಕಡಿಮೆಯಾಗಿದೆ.

ದೇಶದ ಜಿ.ಡಿ.ಪಿ.ಯು ಶೇ.11 ಕ್ಕೂ ಹೆಚ್ಚು ಪ್ರಗತಿಯಾಗುವುದಾದರೆ ನಮಗೆ ನೀಡಬೇಕಾದ ತೆರಿಗೆ ಹಂಚಿಕೆಯೂ ಅಷ್ಟೇ ಪ್ರಮಾಣದಲ್ಲಿ ಹೆಚ್ಚಾಗಿ ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಆದಾಯ ಬರಬೇಕಿತ್ತು ಅಲ್ಲವೇ? ಕೇಂದ್ರ ಮತ್ತು ರಾಜ್ಯಗಳಲ್ಲಿನ ಎರಡೂ ಬಿ.ಜೆ.ಪಿ. ಸರ್ಕಾರಗಳು ಜನರ ತಲೆಗೆ ಟೋಪಿ ಹಾಕುತ್ತಿವೆ ಎಂದರು.

ರಾಜ್ಯ ಬಜೆಟ್‌ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್‌ ಮೇಲೆ ವಿಧಿಸಲಾಗುತ್ತಿದ್ದ ಮಾರಾಟ ತೆರಿಗೆಯನ್ನು ಕಡಿಮೆ ಮಾಡುವ ಮೂಲಕ ಜನರಿಗೆ ನೆರವಾಗಬೇಕಿತ್ತು ಹಾಗೂ ಕೇಂದ್ರ ಸರ್ಕಾರದ ಮೇಲೆ ತೆರಿಗೆ ಕಡಿತಗೊಳಿಸುವಂತೆ ಒತ್ತಡ ಹೇರಬೇಕಿತ್ತು. ಈ ಅಂಶಗಳೇ ಇಂದಿನ ಬಜೆಟ್‌ನಲ್ಲಿ ಇಲ್ಲ ಎಂದು ಆರೋಪಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರತಿದಿನದ ಹಾಜರಾತಿಯನ್ನು ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯ ಮೂಲಕ ಕಡ್ಡಾಯವಾಗಿ ನಿರ್ವಹಿಸಲು ದಿನಾಂಕ: 12-07-2022 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರು ಸುತ್ತೋಲೆ ಹೊರಡಿಸಿದ್ದಾರೆ.

ಸದರಿ ಸುತ್ತೋಲೆಯಲ್ಲಿ ‘ಎಲ್ಲಾ ನಿಲಯಪಾಲಕರು/ ಮೇಲ್ವಿಚಾರಕರು ಬೆಲಗ್ಗೆ ತಿಂಡಿ ಸಮಯದಲ್ಲಿ ಹಾಗೂ ರಾತ್ರಿ ಊಟದ ಸಮಯದಲ್ಲಿ ವಸತಿ ಶಾಲೆ/ಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಹಾಜರಿದ್ದು, ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ಪಡೆಯತಕ್ಕದ್ದು’ ಎಂಬುದಾಗಿ ಸೂಚಿಸಲಾಗಿದೆ.

‘ಬಯೋಮೆಟ್ರಿಕ್ ಹಾಜರಾತಿ ಪಡೆಯದೆ ಆಹಾರ ವೆಚ್ಚ ಭರಿಸಿದ್ದಲ್ಲಿ ಸಂಬAಧಪಟ್ಟ ನಿಲಯಪಾಲಕರು, ಅಲ್ಪಸಂಖ್ಯಾತರ ತಾಲ್ಲೂಕು ವಿಸ್ತರಣಾಧಿಕಾರಿಗಳು/ ಪ್ರಾಂಶುಪಾಲರು, ಜಿಲ್ಲಾ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಿ ಅವರ ಮೇಲೆ ಶಿಸ್ತಿನ ಕ್ರಮ ಜರುಗಿಸಲಾಗುವುದು’ ಎಂಬುದಾಗಿ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿರುತ್ತದೆ.

ಆದರೆ ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳದೆ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವ ಮಾಹಿತಿ ಆಧಾರದಲ್ಲಿ ದಿನಾಂಕ: 28-11-2025 ರಂದು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರಿಗೆ ದಿನಾಂಕ: 28-11-2025 ರಂದು ದೂರು ನೀಡಿ ‘ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಅಳವಡಿಸಿರುವ ಬಯೋಮೆಟ್ರಿಕ್ ಹಾಜರಾತಿ ನಿರ್ವಹಣೆಯನ್ನು ತನಿಖೆಗೆ ಒಳಪಡಿಸುವಂತೆ’ ಕೋರಲಾಗಿತ್ತು.

ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರು ನೀಡಿದ ಹಿಂಬರಹದಲ್ಲಿ ‘ಈ ಸಂಬAಧ ಜಿಲ್ಲೆಯ ಕೆಲವು ವಸತಿ ನಿಲಯಗಳಲ್ಲಿ ಬಯೋಮೆಟ್ರಿಕ್ ಯಂತ್ರದಲ್ಲಿನ ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳ ಹಾಜರಾತಿಯನ್ನು ದಾಖಲಿಸಲು ಸಾಧ್ಯವಾಗಿರುವುದಿಲ್ಲವೆಂದು ಹಾಗೂ ಮತ್ತೆ ಕೆಲವು ವಸತಿ ಶಾಲೆ ಮತ್ತು ವಸತಿ ನಿಲಯಗಳಿಗೆ ಹೊಸ ಬಯೋಮೆಟ್ರಿಕ್ ಯಂತ್ರವನ್ನು ಪೂರೈಕೆ ಮಾಡುವಂತೆ ಪ್ರಾಂಶುಪಾಲರುಗಳು ಮತ್ತು ತಾಲ್ಲೂಕು ವಿಸ್ತರಣಾಧಿಕಾರಿಗಳು ಕೋರಿರುವ ಪತ್ರವನ್ನು ಲಗತ್ತಿಸಿ’ ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶಕರು, ಬೆಂಗಳೂರು ಇವರಿಗೆ ಪತ್ರ ಬರೆಯಲಾಗಿದೆ ಎಂಬುದಾಗಿ ತಿಳಿಸಿರುತ್ತಾರೆ.

ಆದ ಕಾರಣ ದಿನಾಂಕ: 17-02-2026 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರಿಗೆ ದೂರು ನೀಡಿ ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಒಂದು ತಿಂಗಳ ಒಳಗಾಗಿ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಕೋರಲಾಗಿತ್ತು. ಆದರೆ ದೂರು ನೀಡಿ 3 ತಿಂಗಳು ಕಳೆದರೂ ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?

Published

on

ಗಿರೀಶ್ ಬಳ್ಳಾರಿ

ಸುದ್ದಿದಿನ,ಬಳ್ಳಾರಿ:ನಗರದ ಗಾಂಧಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯ ನಂತರ ಕೊಂಡಯ್ಯ ಫ್ಯಾಕ್ಟರಿಯ ಹುಸೇನ್ ನಗರದ ಜಾಲಿ ಬೇಲಿಯ ಒಳಭಾಗದಲ್ಲಿ ಅಕ್ರಮವಾಗಿ ಇಸ್ಪೀಟ್ ಆಡುತ್ತಿದ್ದಾರೆ ಜೊತೆಗೆ ಆ ಪ್ರದೇಶಕ್ಕೆ ಹೋಗುವ ಈ ಜೂಜಾಟ ಆಡುವವರು ಬೈಕ್ ಗಳ ಶಬ್ದ ಮಾಡಿಕೊಂಡು, ಮನೆಗಳಲ್ಲಿ ಇರುವ ಮಹಿಳೆಯರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ ಎನ್ನುವ ಆರೋಪ ಸ್ಥಳೀಯ ನಿವಾಸಿಗಳಿಂದ ಕೇಳಿ ಬಂದಿದೆ.

ಇನ್ನು ಈ ಇಸ್ಪೀಟ್ ಜೂಜಾಟ ಆಡಿಸುತ್ತಿರುವ ವ್ಯಕ್ತಿಗಳು ದುಬ್ಬ ರಾಜು, ದಾದು ಮತ್ತು ಜಾನಿ, ರಘು ಎಂದು ತಿಳಿದು ಬಂದಿದೆ. ಇನ್ನು ಗಾಂಧಿನಗರ ಠಾಣೆಯ ಸಿಪಿಐ ಮತ್ತು ಪಿ.ಎಸ್.ಐ ಮತ್ತು ಕ್ರೈಂ ಸಿಬ್ಬಂದಿಗಳಿಗೆ ಮಾಹಿತಿ ಇದ್ದರು ಅವರಿಂದ ಹಣ ಪಡೆದುಕೊಂಡು ಈ ಜೂಜಾಟ ಆಡಿಸುತ್ತಿರುವ ಮಾಹಿತಿ ಸಹ ಲಭ್ಯವಾಗಿದೆ.

ಸಾಧಿಕ್ ಪೊಲೀಸರಿಗೆ ಸಾಥ್

ಇನ್ನು ಸಾಧಿಕ್ ಎನ್ನುವ ವ್ಯಕ್ತಿ ಗಾಂಧಿನಗರ ಠಾಣೆಯ ಅನೇಕ ಪೊಲೀಸರಿಗೆ ಪರಿಚಯ ಇದ್ದಾನೆ ಅಂತ ಹೇಳಿ ಜನ ಸಾಮಾನ್ಯರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಮಾಡಿ ಅವರ ವಿರುದ್ಧ ಠಾಣೆಯಲ್ಲಿ ಕೇಸ್ ಹಾಕಿಸುತ್ತೇನೆ ಎಂದು ಹಣ ವಸೂಲಿ ಸಹ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.

ಇನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ನ ಪನ್ನಿಕರ್ ಪೊಲೀಸ್ ಠಾಣೆಯ ಸಿಪಿಐ ಮತ್ತು ಪಿಎಸ್ಐ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ. ಇನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿದಾಗ ಅವರು ಕರೆಯನ್ನು ಸ್ವೀಕರಿಸಿಲಿಲ್ಲ.

“ಇನ್ನು ಗಾಂಧಿನಗರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರವಿಚಂದ್ರ ಅವರಿಗೆ ದೂರವಾಣಿ ಮೂಲಕ ಮಾತನಾಡಿಸಿದಾಗ ನಮ್ಮ ಗಮನಕ್ಕೆ ಇಲ್ಲ, ಗೋತ್ತಾದ್ರೆ ರೈಡ್ ಮಾಡುತ್ತೇವೆ ಎಂದರು.”

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ

Published

on

~ವಿದ್ಯಾನಾಯ್ಕ್ ಅರೇಹಳ್ಳಿ

ಸುದ್ದಿದಿನ,ದಾವಣಗೆರೆ:ಚನ್ನಗಿರಿ ತಾಲೂಕು ವ್ಯಾಪ್ತಿಯ ತ್ಯಾವಣಿಗೆ ಗ್ರಾಮದಲ್ಲಿ ಪಂಚಪಾಡಿ ಮತ್ತು ಆಧುನಿಕ ಪದ್ಧತಿಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಒಂದು ವಿನೂತನ ಕಾರ್ಯಕ್ಕೆ ಮುಂದಡಿ ಇಟ್ಟಿದ್ದಾರೆ. ಪಂಚಪಾಡಿ ಕಲಿಕೆ ಎನ್ನುವುದು ಶಿಕ್ಷಣ ಕ್ಷೇತ್ರದಲ್ಲಿ ಬಳಸಲಾಗುವ ಒಂದು ವ್ಯವಸ್ಥಿತ ಮತ್ತು ಪ್ರಭಾವಶಾಲಿ ಬೋಧನಾ ವಿಧಾನವಾಗಿದ್ದು, ವಿಶೇಷವಾಗಿ ಭಾರತೀಯ ಶಿಕ್ಷಣ ಪದ್ಧತಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ – NEP ಯಲ್ಲೂ ಇದರ ಪ್ರಸ್ತಾಪವಿದೆ ಎನ್ನಲಾಗಿದೆ.

ಪಂಚಪಾಡಿ ಎಂದರೇನು?

ಪಂಚಪಾಡಿ ಎಂದರೆ ಮಗುವಿನ ಸಮಗ್ರ ವಿಕಾಸಕ್ಕಾಗಿ ಐದು ಹಂತಗಳ ಕಲಿಕಾ ಪ್ರಕ್ರಿಯೆಯನ್ನು ಬಳಸಲಾಗುತ್ತದೆ.
​ಅಂದರೆ ಜ್ಞಾನರ್ಜನೆಗೆ ಐದು ಹೆಜ್ಜೆಗಳು ಅಥವಾ ಐದು ಹಂತಗಳು ಎಂದರ್ಥ.

ಜ್ಞಾನವನ್ನು ಕೇವಲ ನೆನಪಿನಲ್ಲಿಟ್ಟುಕೊಳ್ಳುವುದರ ಬದಲಾಗಿ, ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಈ ವಿಧಾನ ಸಹಾಯ ಮಾಡುತ್ತದೆ.

ಪಂಚಪಾಡಿ ಕಲಿಕೆಯ 5 ಹಂತಗಳು

ಅದಿತಿ ( ಪರಿಚಯ / ಗ್ರಹಿಕೆ): ​ಈ ಪದ್ಧತಿಯ ಮೊದಲ ಹಂತವೇ ಅದಿತಿ. ಇಲ್ಲಿ ವಿದ್ಯಾರ್ಥಿಗೆ ಹೊಸ ವಿಷಯವನ್ನು ಪರಿಚಯಿಸಲಾಗುತ್ತದೆ. ಶಿಕ್ಷಕರು ಕಥೆ,ಚಿತ್ರ ಉದಾಹರಣೆ ಅಥವಾ ಚಟುವಟಿಕೆಗಳ ಮೂಲಕ ಹೊಸ ವಿಷಯವನ್ನು ಮಗುವಿನ ಮುಂದೆ ಪ್ರಸ್ತುತಪಡಿಸುತ್ತಾರೆ. ಮಗು ವಿಷಯವನ್ನು ಕೇಳಿ, ನೋಡಿ ಗ್ರಹಿಸಲು ಆರಂಭಿಸುತ್ತದೆ.

ಬೋಧ : (ತಿಳುವಳಿಕೆ / ಅರ್ಥೈಸಿಕೊಳ್ಳುವಿಕೆ): ಪರಿಚಯಿಸಿಕೊಂಡ ವಿಷಯವನ್ನು ಆಳವಾಗಿ ಅರ್ಥಮಾಡಿಕೊಳ್ಳುವ ಹಂತವಿದು. ಮಗು ವಿಷಯದ ಹಿಂದಿರುವ ಪರಿಕಲ್ಪನೆ ಮತ್ತು ಕಾರಣಗಳನ್ನು ಅರ್ಥಮಾಡಿಕೊಳ್ಳುತ್ತದೆ. ಪ್ರಶ್ನೆಗಳನ್ನು ಕೇಳುವ ಮೂಲಕ ಮತ್ತು ಚರ್ಚೆಗಳಲ್ಲಿ ಭಾಗವಹಿಸುವ ಮೂಲಕ ತನ್ನ ಗೊಂದಲಗಳನ್ನು ನಿವಾರಿಸಿಕೊಳ್ಳುತ್ತದೆ.

ಅಭ್ಯಾಸ : (ರೂಢಿಸಿಕೊಳ್ಳುವುದು / ತರಬೇತಿ): ಕಲಿತ ವಿಷಯ ಮನಸ್ಸಿನಲ್ಲಿ ಗಟ್ಟಿಯಾಗಲು ನಿರಂತರ ಸ್ಮರಣೆ ಅಥವಾ ಅಭ್ಯಾಸದ ಅಗತ್ಯವಿದೆ. ಮಕ್ಕಳು ಕಲಿತ ವಿಷಯವನ್ನು ಬರವಣಿಗೆ, ಗಣಿತದ ಲೆಕ್ಕಗಳು, ಪ್ರಯೋಗಗಳು ಅಥವಾ ಪುನರಾವರ್ತನೆ (Revision) ಮೂಲಕ ಅಭ್ಯಾಸ ಮಾಡುತ್ತಾರೆ. ಇದು ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ. ಕೇವಲ ಪುಸ್ತಕದಲ್ಲಿ ಕಲಿತದ್ದನ್ನು ನಿಜ ಜೀವನದಲ್ಲಿ ಅಥವಾ ಹೊಸ ಸಂದರ್ಭಗಳಲ್ಲಿ ಬಳಸಿ ನೋಡುವುದೇ ಪ್ರಯೋಗ.

​ಉದಾಹರಣೆಗೆ, ಗಣಿತದಲ್ಲಿ ‘ಲಾಭ-ನಷ್ಟ’ ಕಲಿತ ನಂತರ ಮಗು ಮಾರುಕಟ್ಟೆಗೆ ಹೋಗಿ ವ್ಯವಹಾರ ಮಾಡುವುದು, ಅಥವಾ ವಿಜ್ಞಾನದ ತತ್ವವನ್ನು ಪ್ರಾಜೆಕ್ಟ್ ಮೂಲಕ ಮಾಡಿ ನೋಡುವುದು.

ಪ್ರಸಾರ : (ಹಂಚಿಕೊಳ್ಳುವುದು) ​ಕಲಿಕೆಯ ಅತ್ಯುನ್ನತ ಹಂತವೆಂದರೆ ತಾನು ಕಲಿತ ಜ್ಞಾನವನ್ನು ಇತರರಿಗೆ ಮನವರಿಕೆ ಮಾಡಿಕೊಡುವುದು. ​ವಿದ್ಯಾರ್ಥಿ ತನಗೆ ತಿಳಿದ ವಿಷಯವನ್ನು ತನ್ನ ಸಹಪಾಠಿಗಳಿಗೆ ವಿವರಿಸುವುದು, ಭಾಷಣ ಮಾಡುವುದು ಅಥವಾ ಗುಂಪು ಚರ್ಚೆಯಲ್ಲಿ ಹಂಚಿಕೊಳ್ಳುವುದು. “ಕಲಿಸುವುದರಿಂದ ಕಲಿಕೆ ಪೂರ್ಣವಾಗುತ್ತದೆ” ಎಂಬ ತತ್ವ ಇದರ ಹಿಂದಿದೆ.

ಪಂಚಪಾಡಿ ಕಲಿಕೆಯ ಮಹತ್ವ

​”ಶುಷ್ಕ ಜ್ಞಾನಕ್ಕಿಂತ ಪ್ರಾಯೋಗಿಕ ಜ್ಞಾನವೇ ಮೇಲು.”
​ಇದು ಮಕ್ಕಳಲ್ಲಿ ಸ್ವಯಂ ಕಲಿಕೆ ಮತ್ತು ಸೃಜನಶೀಲತೆಯನ್ನು ಹೆಚ್ಚಿಸುತ್ತದೆ.

​ಕಂಠಪಾಠ ಮಾಡುವ ಪದ್ಧತಿಯನ್ನು ತಪ್ಪಿಸಿ, ವಿಷಯದ ಆಳವಾದ ತಿಳುವಳಿಕೆಗೆ ನೆರವಾಗುತ್ತದೆ.
​ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಸಂವಹನ ಕೌಶಲ್ಯವನ್ನು ಬೆಳೆಸುತ್ತದೆ.

ಶಾಲೆಯ ವೈಶಿಷ್ಟ

ಶಿಕ್ಷಣದ ಜೊತೆಗೆ ಮಕ್ಕಳಿಗೆ ಸಂಸ್ಕಾರವನ್ನು ಕಲಿಸಬೇಕೆಂಬ ಮಹಾದಾಸೆಯಿಂದ ಶಾಲೆ ಪ್ರಾರಂಭ ಮಾಡಿರುವ ವೀಣಾ ಮಂಜುನಾಥ್ ಅವರು ಈ ಶಾಲೆಯಲ್ಲಿ ಸ್ಮಾರ್ಟ್ ತರಗತಿ, ಪ್ರೊಜೆಕ್ಟರ್ ಬಳಕೆ, 5ರಿಂದ 10ನೇ ತರಗತಿ ಮಕ್ಕಳಿಗೆ ವಿಶೇಷ ಬೋಧನೆ, ಚಟುವಟಿಕೆ ಆಧಾರಿತ ಕಲಿಕೆ, ಕರಾಟೆ, ಯೋಗ ಹೀಗೆ ವಿಭಿನ್ನ ರೀತಿಯ ಕಲಿಕೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ.

ಪ್ರಸ್ತುತ ಪೂರ್ವ ಪ್ರಾಥಮಿಕದಿಂದ 10ನೇ ತರಗತಿಯವರೆಗೆ ಮಕ್ಕಳಿಗೆ ಶಿಕ್ಷಣ ನೀಡುತ್ತಾ ಬಂದಿರುತ್ತದೆ. ಸಂಸ್ಥೆಯು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗಾಗಿ ಶಾಲೆಯಲ್ಲಿ ಪೀಠೋಪಕರಣಗಳು, ಪಾಠೋಪಕರಣಗಳು ,ಗ್ರಂಥಾಲಯ, ಆಟೋಪಕರಣಗಳು, ಕಂಪ್ಯೂಟರ್ ಮುಂತಾದ ಸೌಕರ್ಯಗಳನ್ನು ಹೊಂದಿರುತ್ತದೆ.

ಕಳೆದ ಕೆಲವು ವರ್ಷಗಳಿಂದ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ನಮ್ಮ ಶಾಲೆಯಲ್ಲಿ ಪರಿಚಯಿಸಿದ್ದು ಎಲ್ ಕೆ ಜಿ ತರಗತಿಯಿಂದ ಹತ್ತನೇ ತರಗತಿಯವರೆಗೆ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ಅಳವಡಿಸಲಾಗಿದೆ.

ಸಾಂಸ್ಕೃತಿಕ ವಾತಾವರಣವನ್ನು ಶಾಲೆಯಲ್ಲಿ ನಿರ್ಮಿಸಲು ಸಂಗೀತ , ಭರತನಾಟ್ಯ , ಯೋಗ , ಚಿತ್ರಕಲೆ , ಮುಂತಾದ ಚಟುವಟಿಕೆಗಳನ್ನು ಪರಿಚಯಿಸಲಾಗುವುದು. ಇಂಗ್ಲಿಷ್ , ಹಿಂದಿ ಭಾಷೆಗಳ ಕಲಿಕೆಗೆ ಮಕ್ಕಳಲ್ಲಿ ವಿಶೇಷ ಆಸಕ್ತಿಯನ್ನು ಬೆಳೆಸುವುದು.

ಒಟ್ಟಾರೆ ಸಂಸ್ಥೆಯು ವಿದ್ಯಾರ್ಥಿಗಳನ್ನು ಸರ್ವತೋಮುಖ ಅಭಿವೃದ್ಧಿಪಡಿಸಲು ಹಾಗೂ ದೇಶದ ಜವಾಬ್ದಾರಿಯುತ ಪ್ರಜೆಯನ್ನಾಗಿ ರೂಪಿಸುವ ಉದಾತ್ತ ಧ್ಯೇಯವನ್ನು ಇಟ್ಟುಕೊಂಡಿದ್ದೇವೆ ಎನ್ನುತ್ತಾರೆ ಶಾಲೆ ಮುಖ್ಯಸ್ಥರಾದ ವೀಣಾ ಮಂಜುನಾಥ್..

ಜೂನ್ 2ಕ್ಕೆ ಶಾಲಾ ಪ್ರವೇಶಕ್ಕೆ ಕೊನೆದಿನ

2010-11ನೇ ಸಾಲಿನಲ್ಲಿ ರಿಜಿಸ್ಟರ್ ಆದ ಈ ಶಾಲೆಯಲ್ಲಿ ಪ್ರಥಮವಾಗಿ 2012-13ರಲ್ಲಿ ಎಲ್ ಕೆಜಿ, ಯುಕೆಜಿ, 2014-15ನೇ ಸಾಲಿನಲ್ಲಿ 1ನೇ ತರಗತಿ, 2019-20ರಲ್ಲಿ 6ರಿಂದ 8ನೇ ತರಗತಿ, 2024-25ರಲ್ಲಿ 9ರಿಂದ 10ನೇ ತರಗತಿ ಹಂತ ಹಂತವಾಗಿ ಪ್ರಾರಂಭ ಮಾಡಲಾಗಿದೆ.

ಶಾಲೆಯ ವೈಶಿಷ್ಟ

ಶಿಕ್ಷಣದ ಜೊತೆಗೆ ಮಕ್ಕಳಿಗೆ ಸಂಸ್ಕಾರವನ್ನು ಕಲಿಸಬೇಕೆಂಬ ಮಹಾದಾಸೆಯಿಂದ ಶಾಲೆ ಪ್ರಾರಂಭ ಮಾಡಿರುವ ವೀಣಾ ಮಂಜುನಾಥ್ ಅವರು ಈ ಶಾಲೆಯಲ್ಲಿ ಸ್ಮಾರ್ಟ್ ತರಗತಿ, ಪ್ರೊಜೆಕ್ಟರ್ ಬಳಕೆ, 5ರಿಂದ 10ನೇ ತರಗತಿ ಮಕ್ಕಳಿಗೆ ವಿಶೇಷ ಬೋಧನೆ, ಚಟುವಟಿಕೆ ಆಧಾರಿತ ಕಲಿಕೆ, ಕರಾಟೆ, ಯೋಗ ಹೀಗೆ ವಿಭಿನ್ನ ರೀತಿಯ ಕಲಿಕೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ.

ಪ್ರಸ್ತುತ ಪೂರ್ವ ಪ್ರಾಥಮಿಕದಿಂದ 10ನೇ ತರಗತಿಯವರೆಗೆ ಮಕ್ಕಳಿಗೆ ಶಿಕ್ಷಣ ನೀಡುತ್ತಾ ಬಂದಿರುತ್ತದೆ. ಸಂಸ್ಥೆಯು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗಾಗಿ ಶಾಲೆಯಲ್ಲಿ ಪೀಠೋಪಕರಣಗಳು, ಪಾಠೋಪಕರಣಗಳು ,ಗ್ರಂಥಾಲಯ, ಆಟೋಪಕರಣಗಳು, ಕಂಪ್ಯೂಟರ್ ಮುಂತಾದ ಸೌಕರ್ಯಗಳನ್ನು ಹೊಂದಿರುತ್ತದೆ.

ಕಳೆದ ಕೆಲವು ವರ್ಷಗಳಿಂದ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ನಮ್ಮ ಶಾಲೆಯಲ್ಲಿ ಪರಿಚಯಿಸಿದ್ದು ಎಲ್ ಕೆ ಜಿ ತರಗತಿಯಿಂದ ಹತ್ತನೇ ತರಗತಿಯವರೆಗೆ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ಅಳವಡಿಸಲಾಗಿದೆ.

ಸಾಂಸ್ಕೃತಿಕ ವಾತಾವರಣವನ್ನು ಶಾಲೆಯಲ್ಲಿ ನಿರ್ಮಿಸಲು ಸಂಗೀತ , ಭರತನಾಟ್ಯ , ಯೋಗ , ಚಿತ್ರಕಲೆ , ಮುಂತಾದ ಚಟುವಟಿಕೆಗಳನ್ನು ಪರಿಚಯಿಸಲಾಗುವುದು. ಇಂಗ್ಲಿಷ್ , ಹಿಂದಿ ಭಾಷೆಗಳ ಕಲಿಕೆಗೆ ಮಕ್ಕಳಲ್ಲಿ ವಿಶೇಷ ಆಸಕ್ತಿಯನ್ನು ಬೆಳೆಸುವುದು.

ಒಟ್ಟಾರೆ ಸಂಸ್ಥೆಯು ವಿದ್ಯಾರ್ಥಿಗಳನ್ನು ಸರ್ವತೋಮುಖ ಅಭಿವೃದ್ಧಿಪಡಿಸಲು ಹಾಗೂ ದೇಶದ ಜವಾಬ್ದಾರಿಯುತ ಪ್ರಜೆಯನ್ನಾಗಿ ರೂಪಿಸುವ ಉದಾತ್ತ ಧ್ಯೇಯವನ್ನು ಇಟ್ಟುಕೊಂಡಿದ್ದೇವೆ ಎನ್ನುತ್ತಾರೆ ಶಾಲೆ ಮುಖ್ಯಸ್ಥರಾದ ವೀಣಾ ಮಂಜುನಾಥ್..

2010-11ನೇ ಸಾಲಿನಲ್ಲಿ ರಿಜಿಸ್ಟರ್ ಆದ ಈ ಶಾಲೆಯಲ್ಲಿ ಪ್ರಥಮವಾಗಿ 2012-13ರಲ್ಲಿ ಎಲ್ ಕೆಜಿ, ಯುಕೆಜಿ, 2014-15ನೇ ಸಾಲಿನಲ್ಲಿ 1ನೇ ತರಗತಿ, 2019-20ರಲ್ಲಿ 6ರಿಂದ 8ನೇ ತರಗತಿ, 2024-25ರಲ್ಲಿ 9ರಿಂದ 10ನೇ ತರಗತಿ ಹಂತ ಹಂತವಾಗಿ ಪ್ರಾರಂಭ ಮಾಡಲಾಗಿದೆ. ಕೇವಲ ಪುಸ್ತಕ ಆಧಾರಿತ ಆಧುನಿಕ ಪದ್ಧತಿಯ ಕಲಿಕೆ ಮಾತ್ರವಲ್ಲದೆ ಹಿಂದಿನ ಗುರುಕುಲ ಮತ್ತು ಪ್ರಾಯೋಗಿಕ ಕಲಿಕೆಗೆ ಮಹತ್ವ ನೀಡಿ ಮಕ್ಕಳಿಗೆ ಉತ್ತಮ ರೀತಿಯ ವಿದ್ಯಾಭ್ಯಾಸ ನೀಡುವ ಮಹಾದಾಸೆ ಇದೆ.”

|  ವೀಣಾ ಮಂಜುನಾಥ್ ಮುಖ್ಯಸ್ಥರು

ಪ್ರವೇಶ ಪ್ರಾರಂಭ : ಸದರಿ ಶಾಲೆಯಲ್ಲಿ 2026-27ನೇ ಸಾಲಿನ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದೆ. ಮೇ 17ರಿಂದ ಆರಂಭವಾದ ಪ್ರವೇಶ ಪ್ರಕ್ರಿಯೆ ಜೂನ್ 2ಕ್ಕೆ ಕೊನೆಗೂಳ್ಳುತ್ತದೆ. ಸಂಪರ್ಕಿಸಿ : Mandara School Tyavanige 919148141665

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending