Connect with us

ಬಹಿರಂಗ

ಆಷಾಢ ಪೂರ್ಣಿಮೆ ಮತ್ತು ಧಮ್ಮಚಕ್ಕಪವತ್ತನದಿನ

Published

on

ಜುಲೈ 05 ಆಷಾಢ ಪೂರ್ಣಿಮೆಯ ಪ್ರಯುಕ್ತ

  • ಶಿವಸ್ವಾಮಿ

ಗುರು ಎಂದರೆ ವ್ಯಕ್ತಿಯಲ್ಲ ಒಂದು ಶಕ್ತಿ ಕತ್ತಲೆಯ ಕಳೆದು ಸುಜ್ಞಾನದ ಬೆಳಕಿನಡೆಗೆ ಕರೆದುಕೊಂಡು ಹೋಗುವ ಶಬ್ದವೇ “ಗುರು

ಗೌತಮ ಬುದ್ಧ

ಭಾರತದ ಮೂಲನಿವಾಸಿಗಳ ಪಾಲಿಗೆ ಮಾತ್ರ ಆಷಾಢ ಮಾಸವು ಅನಿಷ್ಟ, ಅಶುಭ, ಈ ತಿಂಗಳಿನಲ್ಲಿ ಯಾವುದೇ ಶುಭಕಾರ್ಯಗಳನ್ನು ಮಾಡಬಾರದು, ಜಾತಿ ಧರ್ಮ ಶಾಸ್ತ್ರ ಪುರಾಣ ದೇವರು, ಪೂಜೆ ಪುನಸ್ಕಾರಗಳ ಹೆಸರಿನಲ್ಲಿ ಭಯದ ಉತ್ಪಾಧಕರೆನಿಸಿಕೊಂಡವರು ಸುಳ್ಳುಗಳನ್ನೇ ಸತ್ಯವೆಂದು ನಂಬಿಸಿ ಮಾನಸಿಕ ಗುಲಾಮಗಿರಿಗೆ ತಳ್ಳಿ ಇಲ್ಲಿನ ಮೂಲನಿವಾಸಿಗಳ ಮೆದುಳಿಗೆ ಬ್ರಾಹ್ಮಣ್ಯವೆಂಬ ಬೇಡಿಯನ್ನು ತೊಡಿಸಿ ಅದರಿಂದ ಹೊರಬರದಂತೆ ವಿಲ ವಿಲ ಹೊದ್ದಾಡುವಂತೆ ಮಾಡಿ, ತಾವುಗಳು ಮಾತ್ರ ತಮ್ಮ ಮದುವೆ ಮುಂಜಿ ಕಾರ್ಯಗಳನ್ನು ಕಡಿಮೆ ಖರ್ಚಿನಲ್ಲಿ ಮಾಡಿಕೊಳ್ಳುತ್ತಾರೆ.

ಆದರೆ, ಅವರಿಗೆ ಈ ಆಷಾಡ ಮಾಸದಿಂದ ಯಾವ ತೊಂದರೆಯು ಆಗುವುದಿಲ್ಲ, ಆಷಾಢ ಮಾಸ ಅಶುಭವೆಂದು ಇತಿಹಾಸದ ಕತ್ತಲ ಗರ್ಭದಲ್ಲಿ ಹೂತಿಟ್ಟು ನಮ್ಮ ಪೂರ್ವಿಕರ ಇತಿಹಾಸವು ನಮಗೆ ತಿಳಿಯದಂತೆ ಮಾಡಿದ್ದಾರೆ ಅದಕ್ಕೆ ಬಾಬಾಸಾಹೇಬರು ಹೇಳಿದ್ದು “ಇತಿಹಾಸ ಮರೆತವರು ಇತಿಹಾಸ ಸೃಷ್ಟಿಸಲಾರರು” ಅಂತ ಬಂಧುಗಳೇ ಸತ್ಯವನ್ನು ಸತ್ಯವೆಂದು ಸುಳ್ಳನ್ನು ಸುಳ್ಳೆಂದು ಸಾರಿದ ನಿಜವಾದ ಭಾರತೀಯಾರಾದ ನಾವು ಇತಿಹಾಸವನ್ನು ತಿಳಿದುಕೊಳ್ಳೋಣ.

ಎಲ್ಲಾ ತಿಂಗಳುಗಳಂತೆಯೇ ಆಷಾಡ ಮಾಸದಲ್ಲಿ ಸೂರ್ಯ ಚಂದ್ರರು ಬೆಳಗುತ್ತಾರೆ, ಮಳೆ ಸುರಿಯುತ್ತದೆ, ಗಿಡಮರಗಳು ಚಿಗುರುತ್ತವೆ, ಗಾಳಿ ಬೀಸುತ್ತದೆ, ಹೂವುಗಳು ಮೊಗ್ಗಾಗಿ ಅರಳಿ ಪರಿಮಳವನ್ನು ಬೀರುತ್ತ ಪ್ರಕೃತಿ ಎಂದಿನಂತೆ ತನ್ನ ಕೆಲಸದಲ್ಲಿ ನಿರತವಾಗಿರುತ್ತದೆ.

ಆದರೆ ಭಾರತದ ಮೂಲನಿವಾಸಿಗಳ ಪಾಲಿಗೆ ಮಾತ್ರ ಆಷಾಢ ಮಾಸವು ಅನಿಷ್ಟ, ಅಶುಭ ಈ ತಿಂಗಳಿನಲ್ಲಿ ಯಾವುದೇ ಶುಭ ಕಾರ್ಯಗಳನ್ನು ಮಾಡಬಾರದೆಂದು ಜಾತಿ ಧರ್ಮ ಶಾಸ್ತ್ರ ಪುರಾಣ ದೇವರು ದಿಂಡರುಗಳ ಹೆಸರಲ್ಲಿ ಭಯದ ಉತ್ಪಾಧಕರೆನಿಸಿಕೊಂಡ ವೈದಿಕ ಮಹಾಶೆಯರು ಸುಳ್ಳುಗಳನ್ನೇ ಸತ್ಯವೆಂದು ನಂಬಿಸಿ ಮಾನಸಿಕ ಗುಲಾಮಗಿರಿಗೆ ತಳ್ಳಿ ಇಲ್ಲಿನ ಮುಗ್ಧ ಜನರ ಮೆದುಳಿಗೆ ಬ್ರಾಹ್ಮಣ್ಯವೆಂಬ ಬೇಡಿಯನ್ನು ತೊಡಿಸಿ ಅದರಿಂದ ಹೊರ ಬರಲಾಗದಂತೆ ವಿಲ ವಿಲ ಹೊದ್ದಾಡುವಂತೆ ಮಾಡಿ, ತಾವುಗಳು ಮಾತ್ರ ತಮ್ಮ ತಮ್ಮ ಮದುವೆ ಮುಂಜಿ ಇನ್ನಿತರ ಶುಭ ಕಾರ್ಯಗಳನ್ನು ಕಡಿಮೆ ಖರ್ಚಿನಲ್ಲಿ ಹೊರೆಯಾಗದಂತೆ ಮಾಡಿಕೊಳ್ಳುತ್ತಾರೆ.ಆದರೆ, ಅವರಿಗೆ ಈ ಆಷಾಡ ಮಾಸದಿಂದ ಯಾವ ತೊಂದರೆಯು ಆಗುವುದಿಲ್ಲ.

ಆಷಾಢ ಮಾಸದಲ್ಲಿ ಧೋ..ಎಂದು ಸುರಿಯುವ ಜಿಟಿ ಜಿಟಿ ಮಳೆರಾಯನ ಹರ್ಷಕೆ ಇಳೆ ತಂಪಾಗಿ ಹಚ್ಚ ಹಸಿರಿನ ಸೀರೆಯನುಟ್ಟು ಭೂತಾಯಿ ಕಂಗೊಳಿಸುತ್ತಿರುವ ಆಷಾಡ ಮಾಸವನ್ನು ವಿಪ್ರರೆತಕೆ ಅನಿಷ್ಟ ಅಶುಭವೆಂದರು.. !?

ಬುದ್ಧ ಪೂರ್ವದಲ್ಲಿ ಶತಶತಮಾನಗಳಿಂದ ಇಡೀ ವ್ಯವಸ್ಥೆಯನ್ನೇ ತಮ್ಮ ಧಾರ್ಮಿಕ ಕಪಿಮುಸ್ಷ್ಠಿಯಲ್ಲಿ ಮೌಢ್ಯವನ್ನೇ ಬಿತ್ತುತ್ತಾ ಜಾತಿ ಧರ್ಮ, ಮರ್ಮ ಕರ್ಮ, ಸ್ವರ್ಗ ನರಕವೆಂಬ ಕಾಣದ ಕಲ್ಪನೆಯ ಶ್ರೇಣೀಕೃತ ಜಾತಿ ವ್ಯವಸ್ಥೆಯಲ್ಲಿ ಮುಗ್ಧ ಜನರನ್ನು ಬಂಧಿಸಿ ತಾವು ಮಾತ್ರ ಶ್ರೇಷ್ಠ ಇತರರು ಕನಿಷ್ಠವೆಂದು ಮೌಢ್ಯವನ್ನೇ ಬಂಡವಾಳ ಮಾಡಿಕೊಂಡು ಹೊಟ್ಟೆ ತುಂಬಿಸಿಕೊಳ್ಳುತಿದ್ದ ವೈದಿಕರಿಗೆ ಸೆಡ್ಡು ಹೊಡೆದ ಸಿದ್ಧಾರ್ಥ ಗೌತಮರು ಈ ಆಷಾಢ ಪೂರ್ಣಿಮೆಯಂದೇ ಜ್ಞಾನೋದಯವಾಗಿ ಬೋಧಿಯನ್ನು ಪಡೆದು ಬುದ್ಧರಾಗುತ್ತಾರೆ.

ನಂತರ ತಾವು ಪಡೆದು ಅನುಭವಿಸಿದ ಅಂತಿಮ ಸತ್ಯದ ಧಮ್ಮಮಾರ್ಗವನ್ನು ಇತರರಿಗೂ ಹಂಚಬೇಕೆಂದು ನಿಶ್ಚಯಿಸಿ ಯಾರಿಗೆ ಮೊದಲು ಧಮ್ಮವನ್ನು ಬೋಧಿಸಬೇಕೆಂದು ಯೋಚಿಸುವಾಗ ತಾನು ಕಠಿಣ ತಪಸ್ಸನ್ನು ಮಾಡುವಾಗ ತನ್ನೊಂದಿಗಿದ್ದ ಐದು ಜನ ಸಮಣ ಭಿಕ್ಕುಗಳು ನೆನಪಿಗೆ ಬಂದು ಅವರನ್ನು ಹುಡುಕುತ್ತಾ ಸಾರಾನಾಥದ ಇಸಿಪತನದ ಜಿಂಕೆವನಕ್ಕೆ ಬಂದು ತಮ್ಮ ಪ್ರಥಮ ಧಮ್ಮೋಪದೇಶವನ್ನು ನೀಡುವುದರ ಮೂಲಕ ಧಮ್ಮ ಪ್ರಸಾರದ ಚಕ್ರವನ್ನು ಉರುಳಿ ಬಿಡುತ್ತಾರೆ ಇದನ್ನು ಧಮ್ಮ ಚಕ್ಕ ಪವತ್ತನ ಸುತ್ತ ಎಂದೂ…ಇದೇ ದಿನವನ್ನು ಧಮ್ಮ ಚಕ್ಕ ಪವತ್ತನ ದಿನವೆಂದು ಕರೆಯುತ್ತಾರೆ.

ಧಮ್ಮಚಕ್ಕಪವತ್ತನ(ಸುತ್ತ) ದಿನ

ಗೌತಮರು ಭೋಧಿ ಪಡೆದು ಬುದ್ಧರಾದ ಮೇಲೆ ತಮ್ಮ ಮೊದಲ ಧಮ್ಮೋಪದೇಶವನ್ನು (ಧಮ್ಮಚಕ್ಕ ಪವತ್ತನ ಸುತ್ತ )ತನ್ನ ಶಿಷ್ಯರಾದ ಕೊಂಡಣ್ಣ, ಭದ್ದಿಯಾ, ವಪ್ಪ, ಮಹಾನಾಮ, ಅಸ್ಸಜ್ಜಿ, ಎಂಬ ಐದು ಜನ ಭಿಕ್ಕುಗಳಿಗೆ ಬೋಧಿಸಿದರು ಇದು ಧಮ್ಮ ಚಕ್ಕ ಪವತ್ತನ ಸುತ್ತವೆಂದೇ ಪ್ರಸಿದ್ದಿ ಪಡೆದು ಇಲ್ಲಿಂದಲೇ ಬುದ್ಧರ ಧಮ್ಮ ಚಕ್ರವು ಉರುಳಲಾರಂಭಿಸಿತು, ಬುದ್ಧರ ಹೃದಯದಲ್ಲಿ ಮಿಂಚಿದ ಜ್ಞಾನದ ಧರ್ಶನವೇ ಈ ಸುತ್ತದ ಸಾರವಾಗಿದೆ ಇದನ್ನು ಚತುರಾರ್ಯ ಸತ್ಯಗಳು ಅಥವಾ ನಾಲ್ಕು ಆರ್ಯ ಸತ್ಯಗಳೆಂದು ಕರೆಯುತ್ತಾರೆ.

ಪಾಳಿಯಲ್ಲಿ “ಚರಿತ ಭಿಕ್ಖವೇ ಚಾರಿಕಂ ಬಹುಜನ ಹಿತಾಯ ಬಹುಜನ ಸುಖಾಯ ಲೋಕಾನು ಕಂಪಾಯ ಅತ್ತಾಯ ಹಿತಾಯ ಸುಖಾಯ ದೇವಾ ಮನಸ್ಸಂ” ಕನ್ನಡದಲ್ಲಿ ನಾನೊಂದು ಧಮ್ಮ ಚಕ್ರ, ಮಾನವ ಚಕ್ರ, ಸಂಸಾರವೆಂಬ ಚಕ್ರವನ್ನು ಉರುಳಿಬಿಟ್ಟಿದ್ದೇನೆ, ಅದು ಬಹುಜನರ ಹಿತಕ್ಕಾಗಿ ಬಹುಜನರ ಸುಖಕ್ಕಾಗಿ ಲೋಕದ ಮೇಲೆ ಕರುಣೆ ನೆಲೆಗೊಳಿಸುವುದಾಗಿದೆ.
ಅದು ತನ್ನ ಹಿತಸುಖಕ್ಕಾಗಿ ದೇವಾ ಮಾನವರ ಹಿತಸುಖಕ್ಕಾಗಿ ಉರುಳಿಬಿಡಲಾಗಿದೆ.

4 ಆರ್ಯ ಸತ್ಯಗಳು

01. ದುಃಖ್ಖ ಸತ್ಯ

ಲೋಕದಲ್ಲಿ ದುಃಖ್ಖವಿದೆ ಹುಟ್ಟು ದುಃಖ್ಖ, ರೋಗ ದುಃಖ್ಖ, ವಯಸ್ಸಾಗುವುದು ದುಃಖ್ಖ, ಸಾವು ದುಃಖ್ಖ.ದೈಹಿಕ ಮತ್ತು ಮಾನಸಿಕ ನೋವು ಯಾತನೆ ಕೊರಗು ಇದೆಲ್ಲವೂ ದುಖ್ಖವೇ.

02. ದುಃಖ್ಖಕ್ಕೆ ಕಾರಣ ಸತ್ಯ

ದುರಾಸೆ ಅಥವಾ ತೃಷ್ಣೆ
ಮೂರು ವಿಧವಾದ ತೃಷ್ಣೆಗಳಿವೆ

  • ಕಾಮ ತೃಷ್ಣೆ

ಪಂಚ ಇಂದ್ರಿಯಗಳ ವಿಷಯಗಳನ್ನು ಅನುಭವಿಸಬೇಕೆನ್ನುವ ಇಚ್ಛೆಯೇ ಕಾಮತೃಷ್ಣೆ

  • ಭಾವತೃಷ್ಣೆ

ನಾನು ಶಾಶ್ವತವಾಗಿ ಜೀವಿಸಬೇಕೆಂಬುದು ಮತ್ತು ನಾನು ಶ್ರೀಮಂತನಾಗಿ ಸದಾ ಭೋಗಜೀವನದಲ್ಲಿರಬೇಕೆಂಬುದೇ ಆಗಿದೆ

  • ವಿಭವ ತೃಷ್ಣೆ

ನಾನು ಈ ಪ್ರಪಂಚದಲ್ಲಿ ನಾನು ಇರಲೇಬಾರದೆಂಬ ಹತಾಶೆಯ ಮನಸ್ಥಿತಿ.

03. ದುಃಖ್ಖ ನಿರೋಧ ಸತ್ಯ

ಈ ಲೋಕದಲ್ಲಿ ದುಃಖ್ಖವಿದೆ, ದುಃಖ್ಖಕ್ಕೆ ಕಾರಣವು ಇದೆ, ಎಂದಮೇಲೆ ದುಃಖ್ಖ ನಿರೋಧದ ಮೂಲಗಳಾದ ಅಜ್ಞಾನ ಮತ್ತು ದುರಾಸೆಗಳಿಂದ ಹೊರ ಬಂದರೆ ದುಖ್ಖವೂ ದೂರವಾಗುತ್ತದೆ.

04. ದುಃಖ್ಖ ನಿರೋಧ ಗಾಮಿನಿ ಪಟಿಪದ
(ದುಃಖ್ಖ ನಿರೋಧಕ್ಕೆ ಕೊಂಡೊಯ್ಯುವ ಮಾರ್ಗ)

ನಾಲ್ಕನೇ ಸತ್ಯವಾದ ದುಃಖ್ಖ ನಿರೋಧ ಮಾರ್ಗ ಅಥವಾ ಆರ್ಯ ಅಷ್ಟಾಂಗ ಮಾರ್ಗ ಅಥವಾ ಮಧ್ಯಮ ಮಾರ್ಗ,ಪಂಚ ಇಂದ್ರಿಯಗಳ ಸುಖಕ್ಕಾಗಿ ಭೋಗಜೀವನದಲ್ಲಿ ತೊಡಗಿರುವುದು ಮತ್ತು ನೋವಿನಿಂದ ಕೂಡಿದ ಕಠಿಣ ತಪಸ್ಸು ಅಥವಾ ದೇಹ ದಂಡನೆ ಎಂಬ ಎರಡು ಅತಿರೇಖಾ ಮಾರ್ಗಗಳನ್ನು ಬುದ್ಧ ಕೈ ಬಿಟ್ಟಿದ್ದೆ ಅಲ್ಲದೆ ಸುಖ ಶಾಂತಿ ಪ್ರಜ್ಞೆಯ ಮಾರ್ಗವಾದ ಮನುಷ್ಯರನ್ನು ನಿಬ್ಬಾಣದ ಸತ್ಯದ ಕಡೆಗೆ ಕರೆದೊಯ್ಯುವ ಮಾರ್ಗ ಕಂಡು ಹಿಡಿದರು ಅದುವೇ ಬುದ್ಧರ ಮಧ್ಯಮ ಮಾರ್ಗ ಅಥವಾ ಆರ್ಯ ಅಷ್ಟಾಂಗ ಮಾರ್ಗ.

ಅಷ್ಟಾಂಗ ಮಾರ್ಗ

ಬುದ್ಧರ ಧಮ್ಮ ಚಕ್ರದ 8 ಅಂಶಗಳು ದುಃಖ್ಖ ನಿವಾರಣೆಗಾಗಿ ಇರುವ ಮಧ್ಯಮ ಮಾರ್ಗವಾಗಿದೆ

1.ಸರಿಯಾದ ದೃಷ್ಟಿ

2.ಸರಿಯಾದ ಯೋಚನೆ

3.ಸರಿಯಾದ ಮಾತು

4.ಸರಿಯಾದ ಕೆಲಸ

5.ಸರಿಯಾದ ಜೀವನೋಪಾಯ

6.ಸರಿಯಾದ ಪ್ರಯತ್ನ

7.ಸರಿಯಾದ ಎಚ್ಚರಿಕೆ

8.ಸರಿಯಾದ ಏಕಾಗ್ರತೆ

ನಿಮಗೆ ನೀವೇ ಬೆಳಕಾಗಿ, ನಿಮಗೆ ನೀವೇ ಶ್ರಮಿಸಬೇಕು‌. ತಥಾಗತರು ಕೇವಲ ಮಾರ್ಗದಾತರಷ್ಟೇ, ಬುದ್ಧರ ಅಷ್ಟಾಂಗ ಮಾರ್ಗದ ಉಪದೇಶವು ಇಲ್ಲಿಯೇ ಈಗಲೇ ಪರಮಸುಖವನ್ನು ಪಡೆಯಲು ದಾರಿದೀಪವಾಗಿದೆ ಜಾತಿ ಮತ ಧರ್ಮಗಳ ಬೇಧವಿಲ್ಲದೆ ಸರ್ವರು ಈ ಮಾರ್ಗದಲ್ಲಿ ನಡೆದು ಬುದ್ಧರ ಬೋಧನೆಯಂತೆ ದುಃಖ್ಖದಿಂದ ಮುಕ್ತರಾಗಬಹುದು.

ನಾಲ್ಕು ಆರ್ಯ ಸತ್ಯಗಳನ್ನು ವಿಶ್ಲೇಷಿಸಿದಾಗ 24 ಅಂಶಗಳು ಕಂಡು ಬರುತ್ತವೆ ಆದ್ದರಿಂದ ಬುದ್ಧರು ಬೋಧಿಸಿದ ಈ ಸ್ಥಳದಲ್ಲಿ ಸಾಮ್ರಾಟ್ ಅಶೋಕ ಚಕ್ರವರ್ತಿಯು ಸ್ಟಂಭವನ್ನು ಸ್ಥಾಪಿಸಿ ಅದರ ಮೇಲೆ 4 ದಿಕ್ಕುಗಳಲ್ಲಿ ಸತ್ಯದ ಧಮ್ಮದ ಸಂದೇಶಗಳು ಸಿಂಹಗರ್ಜನೆಯಂತೆ ಹರಡಲಿ ಎಂದು 4 ಸಿಂಹ ಮತ್ತು 24 ಅರೆಗಳುಳ್ಳ ಧಮ್ಮಚಕ್ರವನ್ನು ಕೆತ್ತಿಸಿದರು ಅವುಗಳೇ ನಮ್ಮ ರಾಷ್ಟ್ರ ಲಾಂಛನವಾಗಿ ಸ್ವತಂತ್ರ ಸಮಾನತೆ ನ್ಯಾಯ ಸಹೋದರತೆಯ ಸಂಕೇತವಾಗಿ ಸದಾ ನಮ್ಮನ್ನು ನೆರಳಿನಂತೆ ಹಿಂಬಾಲಿಸುತ್ತವೆ.

ಹೀಗೆ ಭಗವಾನ್ ಬುದ್ಧರು ಧಮ್ಮಚಕ್ಕ ಪವತ್ತನ ಸುತ್ತವನ್ನು ಬೋಧಿಸುತ್ತಾರೆ, ಈ ದಿನವೂ ಜುಲೈ ತಿಂಗಳು ಆಷಾಡ ಮಾಸದ ಪೂರ್ಣಿಮೆಯಂದೇ ಬರುವುದರಿಂದ ಜಗತ್ತಿನಲ್ಲೆಡೆ ಇರುವ ಬೌದ್ಧರು ಧಮ್ಮ ಚಕ್ಕ ಪವತ್ತನಾ ದಿನವೆಂದು ತಮ್ಮ ತಮ್ಮ ಮನ ಮನೆಗಳಲ್ಲಿ ದೊಡ್ಡ ಹಬ್ಬದಂತೆ ಸಡಗರ ಸಂಭ್ರಮದಿಂದ ಆಚರಿಸಿ ಸರ್ವ ಜೀವಿಗಳಿಗೂ ಗುರುವಾಗಿ ಧಮ್ಮೋಪದೇಶ ನೀಡಿದ ಬುದ್ಧ ಗುರುವಿಗೆ ವಂದಿಸುತ್ತಾರೆ.

ಅದೇ ದಿನ ಮಹಾಮಾಯೆಯು ಗರ್ಭ ಧರಿಸಿದ ದಿನ, ಅದೇ ದಿನ ಸಿದ್ಧಾರ್ಥ ಗೌತಮರು ಗೃಹತ್ಯಾಗ ಮಾಡಿದ ದಿನ, ಅದೇ ದಿನ ಬೌದ್ಧ ಭಿಕ್ಕುಗಳಿಗೆ ವರ್ಷ ವಾಸ ಪ್ರಾರಂಭದ ದಿನ ಅಂದರೆ ಬೌದ್ಧ ಭಿಕ್ಕುಗಳು ಮಳೆಗಾಲದಲ್ಲಿ ಜುಲೈ, ಆಗಸ್ಟ್, ಸೆಪ್ಟೆಂಬರ್ ಮೂರು ತಿಂಗಳುಗಳ ಕಾಲ ಒಂದೇ ಸ್ಥಳದಲ್ಲಿ ಉಳಿದುಕೊಂಡು ಧಮ್ಮ ಶಮಣ ಮಾಡುವರು.

ಭಾರತದಲ್ಲಿ ಮಾತ್ರ ವೈದಿಕ ಮನುವಾದಿಗಳು ಗುರುಪೂರ್ಣಿಮೆಯೆಂದು ಆಚರಿಕೊಂಡು ಬರುತ್ತಲೇ ಇದ್ದಾರೆ ವೈದಿಕ ಪುರೋಹಿತರೆನಿಸಿಕೊಂಡವರು ಮಾತ್ರ ಶುಭ ಕಾರ್ಯಗಳನ್ನು ಮಾಡಬಹುದು, ಇತರೇ ಸಮುದಾಯಗಳು ಶುಭಕಾರ್ಯಗಳನ್ನು ಮಾಡಿದರೆ ಅವರಿಗೆ ಅನಿಷ್ಟ ಅಶುಭವಾಗುತ್ತದೆ ಹೇಗಿದೆ ನೋಡಿ ಮನುವಾದಿಗಳ ಆಷಾಡ ಮಾಸದ ಆಷಾಡ ಭೂತಿತನದ ಒಳಮರ್ಮ!?

ಬೌದ್ಧರಿಗೆ ಪ್ರತಿ ಹುಣ್ಣಿಮೆಯು ಶುಭಸೂಚಕವಾದರೆ, ಇತರರಿಗೆ ಹೇಗೆ ಅಶುಭವಾಗುತ್ತದೆ? ಆಷಾಢವು ಅಶುಭ ಮಾಸವೆಂದು ಇತಿಹಾಸದ ಕತ್ತಲ ಗರ್ಭದಲ್ಲಿ ಹೂತಿಟ್ಟು ನಮ್ಮ ಪೂರ್ವಿಕರ ಇತಿಹಾಸವು ನಮಗೆ ತಿಳಿಯದಂತೆ ಮಾಡಿದ್ದಾರೆ ಅದಕ್ಕೆ ಬಾಬಾಸಾಹೇಬರು ಹೇಳಿದ್ದು “ಇತಿಹಾಸ ಮರೆತವರು ಇತಿಹಾಸ ಸೃಷ್ಷ್ಠಿಸಲಾರರು”ಅಂತ ಆದರೆ ಆಷಾಡ ಮಾಸವು ಸಮಸ್ತ ಭಾರತೀಯರಿಗೆ ಜ್ಞಾನದ ಭಾಗಿಲನ್ನು ತೆರೆದ ತಿಂಗಳು, ಸತ್ಯವನ್ನು ಸತ್ಯವೆಂದು ಸುಳ್ಳನ್ನು ಸುಳ್ಳೆಂದು ಸಾರಿದ ಭಾರತೀಯರಾದ ನಾವುಗಳು ಬಹುಜನರಿಗೆ ನಿಜವಾದ ಇತಿಹಾಸವನ್ನು ತಿಳಿಸೋಣ.

ವೈದಿಕರಿಂದ ಸೃಷ್ಟಿಯಾದ ಅಸಮಾನತೆಯ ಕತ್ತಲ ಕೂಪದ ಈ ನೆಲದಲ್ಲಿ ಮಹಾ ಕಾರುಣಿಕನ ಮಾನವೀಯ ಲೋಕದ ಧಮ್ಮಚಕ್ರವು ಉರುಳಿ ಸಾಮಾನ್ಯರಿಂದಿಡಿದು ಸಾಮ್ರಾಟ್ ಅಶೋಕರಂತಹ ಆಳರಸರ ಮನಕ್ಕೆ ಬುದ್ಧತ್ವವು ಹೊಕ್ಕಿ ಮಾನವೀಯ ಮನುಷ್ಯರಾಗುತ್ತಾರೆ, ಇದರಿಂದ ಮೌಢ್ಯವನ್ನೇ ಬಂಡವಾಳ ಮಾಡಿಕೊಂಡು ಹೊಟ್ಟೆ ತುಂಬಿಸಿಕೊಳ್ಳುತಿದ್ದ ವೈದಿಕರು ನಿರುದ್ಯೋಗಿಗಳಾಗುತ್ತಾರೆ ತಮ್ಮ ನಿರುದ್ಯೋಗಕ್ಕೆ ಕಾರಣವಾದ ಆಷಾಡ ಮಾಸವು ಅನಿಷ್ಟ ಅಶುಭವೆಂದು ಜನರು ತಿರಸ್ಕರಿಸುವಂತೆ ಮಾಡಿ ಯಶಸ್ವಿಯಾಗುತ್ತಾರೆ.

ಬುದ್ಧರೆಂಬ ಅರಿವಿನ ಹಣತೆಯಿಂದ ಆಷಾಢಮಾಸದ ತಿಂಗಳು ಸಕಲ ಜೀವರಾಶಿಗಳಿಗೂ ಶ್ರೇಶ್ಟವಾದರೆ ವೈದಿಕ ಪುರೋಹಿತರ ದೃಷ್ಟಿಯಲ್ಲಿ ಮಾತ್ರ ಕನಿಷ್ಠವಾಗುತ್ತದೆ ಕುಟಿಲತೆಯಿಂದ ಅಧಿಕಾರವನ್ನು ಕಸಿದುಕೊಂಡು ತಮ್ಮದೇ ಸಾಮ್ರಾಜ್ಯವನ್ನು ಸ್ಥಾಪಿಸಿ ಬುದ್ಧ ಧಮ್ಮವನ್ನು ಈ ನೆಲದಿಂದಲೇ ಓಡಿಸಿದ ವೈದಿಕರು ತಾವು ಬರೆದುದೆಲ್ಲವನ್ನು ಕಾನೂನನ್ನಾಗಿಸಿ ಇದರ ವಿರುದ್ಧ ಯಾರು ಪ್ರಶ್ನಿಸಬಾರದೆಂದು ಇಲ್ಲಿನ ಮೂಲನಿವಾಸಿಗಳ ಮೇಲೆ ಧಾರ್ಮಿಕ ಗುಲಾಮಗಿರಿಯನ್ನೇರಿ ಅದನ್ನು ಒಪ್ಪಿಕೊಳ್ಳುವಂತೆ ಮಾಡಿರುವುದು ಈ ದೇಶದ ದುರಂತವೇ ಸರಿ.

ಸರ್ವರೂ ಕತ್ತಲೆಯಿಂದ ಬೆಳಕಿನ ಕಡೆ ಬರುವಂತಾಗಲಿ ಇಡೀ ವಿಶ್ವವು ಎಲ್ಲಾ ರೋಗ ರುಜಿನಗಳಿಂದ ಮುಕ್ತವಾಗಿ ಸುಖದಿಂದ ಜೀವಿಸುವಂತಾಗಲಿ

ಸರ್ವರಿಗೂ ಬುದ್ಧಗುರು ಮೊದಲ ಧಮ್ಮೋಪದೇಶ ನೀಡಿದ ದಿನವಾದ ಆಷಾಡ ಮಾಸದ ಹುಣ್ಣಿಮೆಯ ಧಮ್ಮ ಚಕ್ರ ಪರಿವರ್ತನಾ ದಿನದ ಶುಭಾಶಯಗಳು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ

Published

on

ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.

ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್‌ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್‌ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.

ಆರಂಭಿಕ ಜೀವನ ಮತ್ತು ಶಿಕ್ಷಣ

ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.

ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ

ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.

ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್‌ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.

ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.

ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್‌ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.

1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್‌ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.

ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.

ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’

ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.

ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ

2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.

ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್‌ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.

ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.

ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.

ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.

ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.

ಭವಿಷ್ಯದ ರಾಜಕೀಯ ಪಾತ್ರ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್‌ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.

ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್‌ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.

ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending