ಬಹಿರಂಗ

ಆಷಾಢ ಪೂರ್ಣಿಮೆ ಮತ್ತು ಧಮ್ಮಚಕ್ಕಪವತ್ತನದಿನ

Published

on

ಜುಲೈ 05 ಆಷಾಢ ಪೂರ್ಣಿಮೆಯ ಪ್ರಯುಕ್ತ

  • ಶಿವಸ್ವಾಮಿ

ಗುರು ಎಂದರೆ ವ್ಯಕ್ತಿಯಲ್ಲ ಒಂದು ಶಕ್ತಿ ಕತ್ತಲೆಯ ಕಳೆದು ಸುಜ್ಞಾನದ ಬೆಳಕಿನಡೆಗೆ ಕರೆದುಕೊಂಡು ಹೋಗುವ ಶಬ್ದವೇ “ಗುರು

ಗೌತಮ ಬುದ್ಧ

ಭಾರತದ ಮೂಲನಿವಾಸಿಗಳ ಪಾಲಿಗೆ ಮಾತ್ರ ಆಷಾಢ ಮಾಸವು ಅನಿಷ್ಟ, ಅಶುಭ, ಈ ತಿಂಗಳಿನಲ್ಲಿ ಯಾವುದೇ ಶುಭಕಾರ್ಯಗಳನ್ನು ಮಾಡಬಾರದು, ಜಾತಿ ಧರ್ಮ ಶಾಸ್ತ್ರ ಪುರಾಣ ದೇವರು, ಪೂಜೆ ಪುನಸ್ಕಾರಗಳ ಹೆಸರಿನಲ್ಲಿ ಭಯದ ಉತ್ಪಾಧಕರೆನಿಸಿಕೊಂಡವರು ಸುಳ್ಳುಗಳನ್ನೇ ಸತ್ಯವೆಂದು ನಂಬಿಸಿ ಮಾನಸಿಕ ಗುಲಾಮಗಿರಿಗೆ ತಳ್ಳಿ ಇಲ್ಲಿನ ಮೂಲನಿವಾಸಿಗಳ ಮೆದುಳಿಗೆ ಬ್ರಾಹ್ಮಣ್ಯವೆಂಬ ಬೇಡಿಯನ್ನು ತೊಡಿಸಿ ಅದರಿಂದ ಹೊರಬರದಂತೆ ವಿಲ ವಿಲ ಹೊದ್ದಾಡುವಂತೆ ಮಾಡಿ, ತಾವುಗಳು ಮಾತ್ರ ತಮ್ಮ ಮದುವೆ ಮುಂಜಿ ಕಾರ್ಯಗಳನ್ನು ಕಡಿಮೆ ಖರ್ಚಿನಲ್ಲಿ ಮಾಡಿಕೊಳ್ಳುತ್ತಾರೆ.

ಆದರೆ, ಅವರಿಗೆ ಈ ಆಷಾಡ ಮಾಸದಿಂದ ಯಾವ ತೊಂದರೆಯು ಆಗುವುದಿಲ್ಲ, ಆಷಾಢ ಮಾಸ ಅಶುಭವೆಂದು ಇತಿಹಾಸದ ಕತ್ತಲ ಗರ್ಭದಲ್ಲಿ ಹೂತಿಟ್ಟು ನಮ್ಮ ಪೂರ್ವಿಕರ ಇತಿಹಾಸವು ನಮಗೆ ತಿಳಿಯದಂತೆ ಮಾಡಿದ್ದಾರೆ ಅದಕ್ಕೆ ಬಾಬಾಸಾಹೇಬರು ಹೇಳಿದ್ದು “ಇತಿಹಾಸ ಮರೆತವರು ಇತಿಹಾಸ ಸೃಷ್ಟಿಸಲಾರರು” ಅಂತ ಬಂಧುಗಳೇ ಸತ್ಯವನ್ನು ಸತ್ಯವೆಂದು ಸುಳ್ಳನ್ನು ಸುಳ್ಳೆಂದು ಸಾರಿದ ನಿಜವಾದ ಭಾರತೀಯಾರಾದ ನಾವು ಇತಿಹಾಸವನ್ನು ತಿಳಿದುಕೊಳ್ಳೋಣ.

ಎಲ್ಲಾ ತಿಂಗಳುಗಳಂತೆಯೇ ಆಷಾಡ ಮಾಸದಲ್ಲಿ ಸೂರ್ಯ ಚಂದ್ರರು ಬೆಳಗುತ್ತಾರೆ, ಮಳೆ ಸುರಿಯುತ್ತದೆ, ಗಿಡಮರಗಳು ಚಿಗುರುತ್ತವೆ, ಗಾಳಿ ಬೀಸುತ್ತದೆ, ಹೂವುಗಳು ಮೊಗ್ಗಾಗಿ ಅರಳಿ ಪರಿಮಳವನ್ನು ಬೀರುತ್ತ ಪ್ರಕೃತಿ ಎಂದಿನಂತೆ ತನ್ನ ಕೆಲಸದಲ್ಲಿ ನಿರತವಾಗಿರುತ್ತದೆ.

ಆದರೆ ಭಾರತದ ಮೂಲನಿವಾಸಿಗಳ ಪಾಲಿಗೆ ಮಾತ್ರ ಆಷಾಢ ಮಾಸವು ಅನಿಷ್ಟ, ಅಶುಭ ಈ ತಿಂಗಳಿನಲ್ಲಿ ಯಾವುದೇ ಶುಭ ಕಾರ್ಯಗಳನ್ನು ಮಾಡಬಾರದೆಂದು ಜಾತಿ ಧರ್ಮ ಶಾಸ್ತ್ರ ಪುರಾಣ ದೇವರು ದಿಂಡರುಗಳ ಹೆಸರಲ್ಲಿ ಭಯದ ಉತ್ಪಾಧಕರೆನಿಸಿಕೊಂಡ ವೈದಿಕ ಮಹಾಶೆಯರು ಸುಳ್ಳುಗಳನ್ನೇ ಸತ್ಯವೆಂದು ನಂಬಿಸಿ ಮಾನಸಿಕ ಗುಲಾಮಗಿರಿಗೆ ತಳ್ಳಿ ಇಲ್ಲಿನ ಮುಗ್ಧ ಜನರ ಮೆದುಳಿಗೆ ಬ್ರಾಹ್ಮಣ್ಯವೆಂಬ ಬೇಡಿಯನ್ನು ತೊಡಿಸಿ ಅದರಿಂದ ಹೊರ ಬರಲಾಗದಂತೆ ವಿಲ ವಿಲ ಹೊದ್ದಾಡುವಂತೆ ಮಾಡಿ, ತಾವುಗಳು ಮಾತ್ರ ತಮ್ಮ ತಮ್ಮ ಮದುವೆ ಮುಂಜಿ ಇನ್ನಿತರ ಶುಭ ಕಾರ್ಯಗಳನ್ನು ಕಡಿಮೆ ಖರ್ಚಿನಲ್ಲಿ ಹೊರೆಯಾಗದಂತೆ ಮಾಡಿಕೊಳ್ಳುತ್ತಾರೆ.ಆದರೆ, ಅವರಿಗೆ ಈ ಆಷಾಡ ಮಾಸದಿಂದ ಯಾವ ತೊಂದರೆಯು ಆಗುವುದಿಲ್ಲ.

ಆಷಾಢ ಮಾಸದಲ್ಲಿ ಧೋ..ಎಂದು ಸುರಿಯುವ ಜಿಟಿ ಜಿಟಿ ಮಳೆರಾಯನ ಹರ್ಷಕೆ ಇಳೆ ತಂಪಾಗಿ ಹಚ್ಚ ಹಸಿರಿನ ಸೀರೆಯನುಟ್ಟು ಭೂತಾಯಿ ಕಂಗೊಳಿಸುತ್ತಿರುವ ಆಷಾಡ ಮಾಸವನ್ನು ವಿಪ್ರರೆತಕೆ ಅನಿಷ್ಟ ಅಶುಭವೆಂದರು.. !?

ಬುದ್ಧ ಪೂರ್ವದಲ್ಲಿ ಶತಶತಮಾನಗಳಿಂದ ಇಡೀ ವ್ಯವಸ್ಥೆಯನ್ನೇ ತಮ್ಮ ಧಾರ್ಮಿಕ ಕಪಿಮುಸ್ಷ್ಠಿಯಲ್ಲಿ ಮೌಢ್ಯವನ್ನೇ ಬಿತ್ತುತ್ತಾ ಜಾತಿ ಧರ್ಮ, ಮರ್ಮ ಕರ್ಮ, ಸ್ವರ್ಗ ನರಕವೆಂಬ ಕಾಣದ ಕಲ್ಪನೆಯ ಶ್ರೇಣೀಕೃತ ಜಾತಿ ವ್ಯವಸ್ಥೆಯಲ್ಲಿ ಮುಗ್ಧ ಜನರನ್ನು ಬಂಧಿಸಿ ತಾವು ಮಾತ್ರ ಶ್ರೇಷ್ಠ ಇತರರು ಕನಿಷ್ಠವೆಂದು ಮೌಢ್ಯವನ್ನೇ ಬಂಡವಾಳ ಮಾಡಿಕೊಂಡು ಹೊಟ್ಟೆ ತುಂಬಿಸಿಕೊಳ್ಳುತಿದ್ದ ವೈದಿಕರಿಗೆ ಸೆಡ್ಡು ಹೊಡೆದ ಸಿದ್ಧಾರ್ಥ ಗೌತಮರು ಈ ಆಷಾಢ ಪೂರ್ಣಿಮೆಯಂದೇ ಜ್ಞಾನೋದಯವಾಗಿ ಬೋಧಿಯನ್ನು ಪಡೆದು ಬುದ್ಧರಾಗುತ್ತಾರೆ.

ನಂತರ ತಾವು ಪಡೆದು ಅನುಭವಿಸಿದ ಅಂತಿಮ ಸತ್ಯದ ಧಮ್ಮಮಾರ್ಗವನ್ನು ಇತರರಿಗೂ ಹಂಚಬೇಕೆಂದು ನಿಶ್ಚಯಿಸಿ ಯಾರಿಗೆ ಮೊದಲು ಧಮ್ಮವನ್ನು ಬೋಧಿಸಬೇಕೆಂದು ಯೋಚಿಸುವಾಗ ತಾನು ಕಠಿಣ ತಪಸ್ಸನ್ನು ಮಾಡುವಾಗ ತನ್ನೊಂದಿಗಿದ್ದ ಐದು ಜನ ಸಮಣ ಭಿಕ್ಕುಗಳು ನೆನಪಿಗೆ ಬಂದು ಅವರನ್ನು ಹುಡುಕುತ್ತಾ ಸಾರಾನಾಥದ ಇಸಿಪತನದ ಜಿಂಕೆವನಕ್ಕೆ ಬಂದು ತಮ್ಮ ಪ್ರಥಮ ಧಮ್ಮೋಪದೇಶವನ್ನು ನೀಡುವುದರ ಮೂಲಕ ಧಮ್ಮ ಪ್ರಸಾರದ ಚಕ್ರವನ್ನು ಉರುಳಿ ಬಿಡುತ್ತಾರೆ ಇದನ್ನು ಧಮ್ಮ ಚಕ್ಕ ಪವತ್ತನ ಸುತ್ತ ಎಂದೂ…ಇದೇ ದಿನವನ್ನು ಧಮ್ಮ ಚಕ್ಕ ಪವತ್ತನ ದಿನವೆಂದು ಕರೆಯುತ್ತಾರೆ.

ಧಮ್ಮಚಕ್ಕಪವತ್ತನ(ಸುತ್ತ) ದಿನ

ಗೌತಮರು ಭೋಧಿ ಪಡೆದು ಬುದ್ಧರಾದ ಮೇಲೆ ತಮ್ಮ ಮೊದಲ ಧಮ್ಮೋಪದೇಶವನ್ನು (ಧಮ್ಮಚಕ್ಕ ಪವತ್ತನ ಸುತ್ತ )ತನ್ನ ಶಿಷ್ಯರಾದ ಕೊಂಡಣ್ಣ, ಭದ್ದಿಯಾ, ವಪ್ಪ, ಮಹಾನಾಮ, ಅಸ್ಸಜ್ಜಿ, ಎಂಬ ಐದು ಜನ ಭಿಕ್ಕುಗಳಿಗೆ ಬೋಧಿಸಿದರು ಇದು ಧಮ್ಮ ಚಕ್ಕ ಪವತ್ತನ ಸುತ್ತವೆಂದೇ ಪ್ರಸಿದ್ದಿ ಪಡೆದು ಇಲ್ಲಿಂದಲೇ ಬುದ್ಧರ ಧಮ್ಮ ಚಕ್ರವು ಉರುಳಲಾರಂಭಿಸಿತು, ಬುದ್ಧರ ಹೃದಯದಲ್ಲಿ ಮಿಂಚಿದ ಜ್ಞಾನದ ಧರ್ಶನವೇ ಈ ಸುತ್ತದ ಸಾರವಾಗಿದೆ ಇದನ್ನು ಚತುರಾರ್ಯ ಸತ್ಯಗಳು ಅಥವಾ ನಾಲ್ಕು ಆರ್ಯ ಸತ್ಯಗಳೆಂದು ಕರೆಯುತ್ತಾರೆ.

ಪಾಳಿಯಲ್ಲಿ “ಚರಿತ ಭಿಕ್ಖವೇ ಚಾರಿಕಂ ಬಹುಜನ ಹಿತಾಯ ಬಹುಜನ ಸುಖಾಯ ಲೋಕಾನು ಕಂಪಾಯ ಅತ್ತಾಯ ಹಿತಾಯ ಸುಖಾಯ ದೇವಾ ಮನಸ್ಸಂ” ಕನ್ನಡದಲ್ಲಿ ನಾನೊಂದು ಧಮ್ಮ ಚಕ್ರ, ಮಾನವ ಚಕ್ರ, ಸಂಸಾರವೆಂಬ ಚಕ್ರವನ್ನು ಉರುಳಿಬಿಟ್ಟಿದ್ದೇನೆ, ಅದು ಬಹುಜನರ ಹಿತಕ್ಕಾಗಿ ಬಹುಜನರ ಸುಖಕ್ಕಾಗಿ ಲೋಕದ ಮೇಲೆ ಕರುಣೆ ನೆಲೆಗೊಳಿಸುವುದಾಗಿದೆ.
ಅದು ತನ್ನ ಹಿತಸುಖಕ್ಕಾಗಿ ದೇವಾ ಮಾನವರ ಹಿತಸುಖಕ್ಕಾಗಿ ಉರುಳಿಬಿಡಲಾಗಿದೆ.

4 ಆರ್ಯ ಸತ್ಯಗಳು

01. ದುಃಖ್ಖ ಸತ್ಯ

ಲೋಕದಲ್ಲಿ ದುಃಖ್ಖವಿದೆ ಹುಟ್ಟು ದುಃಖ್ಖ, ರೋಗ ದುಃಖ್ಖ, ವಯಸ್ಸಾಗುವುದು ದುಃಖ್ಖ, ಸಾವು ದುಃಖ್ಖ.ದೈಹಿಕ ಮತ್ತು ಮಾನಸಿಕ ನೋವು ಯಾತನೆ ಕೊರಗು ಇದೆಲ್ಲವೂ ದುಖ್ಖವೇ.

02. ದುಃಖ್ಖಕ್ಕೆ ಕಾರಣ ಸತ್ಯ

ದುರಾಸೆ ಅಥವಾ ತೃಷ್ಣೆ
ಮೂರು ವಿಧವಾದ ತೃಷ್ಣೆಗಳಿವೆ

  • ಕಾಮ ತೃಷ್ಣೆ

ಪಂಚ ಇಂದ್ರಿಯಗಳ ವಿಷಯಗಳನ್ನು ಅನುಭವಿಸಬೇಕೆನ್ನುವ ಇಚ್ಛೆಯೇ ಕಾಮತೃಷ್ಣೆ

  • ಭಾವತೃಷ್ಣೆ

ನಾನು ಶಾಶ್ವತವಾಗಿ ಜೀವಿಸಬೇಕೆಂಬುದು ಮತ್ತು ನಾನು ಶ್ರೀಮಂತನಾಗಿ ಸದಾ ಭೋಗಜೀವನದಲ್ಲಿರಬೇಕೆಂಬುದೇ ಆಗಿದೆ

  • ವಿಭವ ತೃಷ್ಣೆ

ನಾನು ಈ ಪ್ರಪಂಚದಲ್ಲಿ ನಾನು ಇರಲೇಬಾರದೆಂಬ ಹತಾಶೆಯ ಮನಸ್ಥಿತಿ.

03. ದುಃಖ್ಖ ನಿರೋಧ ಸತ್ಯ

ಈ ಲೋಕದಲ್ಲಿ ದುಃಖ್ಖವಿದೆ, ದುಃಖ್ಖಕ್ಕೆ ಕಾರಣವು ಇದೆ, ಎಂದಮೇಲೆ ದುಃಖ್ಖ ನಿರೋಧದ ಮೂಲಗಳಾದ ಅಜ್ಞಾನ ಮತ್ತು ದುರಾಸೆಗಳಿಂದ ಹೊರ ಬಂದರೆ ದುಖ್ಖವೂ ದೂರವಾಗುತ್ತದೆ.

04. ದುಃಖ್ಖ ನಿರೋಧ ಗಾಮಿನಿ ಪಟಿಪದ
(ದುಃಖ್ಖ ನಿರೋಧಕ್ಕೆ ಕೊಂಡೊಯ್ಯುವ ಮಾರ್ಗ)

ನಾಲ್ಕನೇ ಸತ್ಯವಾದ ದುಃಖ್ಖ ನಿರೋಧ ಮಾರ್ಗ ಅಥವಾ ಆರ್ಯ ಅಷ್ಟಾಂಗ ಮಾರ್ಗ ಅಥವಾ ಮಧ್ಯಮ ಮಾರ್ಗ,ಪಂಚ ಇಂದ್ರಿಯಗಳ ಸುಖಕ್ಕಾಗಿ ಭೋಗಜೀವನದಲ್ಲಿ ತೊಡಗಿರುವುದು ಮತ್ತು ನೋವಿನಿಂದ ಕೂಡಿದ ಕಠಿಣ ತಪಸ್ಸು ಅಥವಾ ದೇಹ ದಂಡನೆ ಎಂಬ ಎರಡು ಅತಿರೇಖಾ ಮಾರ್ಗಗಳನ್ನು ಬುದ್ಧ ಕೈ ಬಿಟ್ಟಿದ್ದೆ ಅಲ್ಲದೆ ಸುಖ ಶಾಂತಿ ಪ್ರಜ್ಞೆಯ ಮಾರ್ಗವಾದ ಮನುಷ್ಯರನ್ನು ನಿಬ್ಬಾಣದ ಸತ್ಯದ ಕಡೆಗೆ ಕರೆದೊಯ್ಯುವ ಮಾರ್ಗ ಕಂಡು ಹಿಡಿದರು ಅದುವೇ ಬುದ್ಧರ ಮಧ್ಯಮ ಮಾರ್ಗ ಅಥವಾ ಆರ್ಯ ಅಷ್ಟಾಂಗ ಮಾರ್ಗ.

ಅಷ್ಟಾಂಗ ಮಾರ್ಗ

ಬುದ್ಧರ ಧಮ್ಮ ಚಕ್ರದ 8 ಅಂಶಗಳು ದುಃಖ್ಖ ನಿವಾರಣೆಗಾಗಿ ಇರುವ ಮಧ್ಯಮ ಮಾರ್ಗವಾಗಿದೆ

1.ಸರಿಯಾದ ದೃಷ್ಟಿ

2.ಸರಿಯಾದ ಯೋಚನೆ

3.ಸರಿಯಾದ ಮಾತು

4.ಸರಿಯಾದ ಕೆಲಸ

5.ಸರಿಯಾದ ಜೀವನೋಪಾಯ

6.ಸರಿಯಾದ ಪ್ರಯತ್ನ

7.ಸರಿಯಾದ ಎಚ್ಚರಿಕೆ

8.ಸರಿಯಾದ ಏಕಾಗ್ರತೆ

ನಿಮಗೆ ನೀವೇ ಬೆಳಕಾಗಿ, ನಿಮಗೆ ನೀವೇ ಶ್ರಮಿಸಬೇಕು‌. ತಥಾಗತರು ಕೇವಲ ಮಾರ್ಗದಾತರಷ್ಟೇ, ಬುದ್ಧರ ಅಷ್ಟಾಂಗ ಮಾರ್ಗದ ಉಪದೇಶವು ಇಲ್ಲಿಯೇ ಈಗಲೇ ಪರಮಸುಖವನ್ನು ಪಡೆಯಲು ದಾರಿದೀಪವಾಗಿದೆ ಜಾತಿ ಮತ ಧರ್ಮಗಳ ಬೇಧವಿಲ್ಲದೆ ಸರ್ವರು ಈ ಮಾರ್ಗದಲ್ಲಿ ನಡೆದು ಬುದ್ಧರ ಬೋಧನೆಯಂತೆ ದುಃಖ್ಖದಿಂದ ಮುಕ್ತರಾಗಬಹುದು.

ನಾಲ್ಕು ಆರ್ಯ ಸತ್ಯಗಳನ್ನು ವಿಶ್ಲೇಷಿಸಿದಾಗ 24 ಅಂಶಗಳು ಕಂಡು ಬರುತ್ತವೆ ಆದ್ದರಿಂದ ಬುದ್ಧರು ಬೋಧಿಸಿದ ಈ ಸ್ಥಳದಲ್ಲಿ ಸಾಮ್ರಾಟ್ ಅಶೋಕ ಚಕ್ರವರ್ತಿಯು ಸ್ಟಂಭವನ್ನು ಸ್ಥಾಪಿಸಿ ಅದರ ಮೇಲೆ 4 ದಿಕ್ಕುಗಳಲ್ಲಿ ಸತ್ಯದ ಧಮ್ಮದ ಸಂದೇಶಗಳು ಸಿಂಹಗರ್ಜನೆಯಂತೆ ಹರಡಲಿ ಎಂದು 4 ಸಿಂಹ ಮತ್ತು 24 ಅರೆಗಳುಳ್ಳ ಧಮ್ಮಚಕ್ರವನ್ನು ಕೆತ್ತಿಸಿದರು ಅವುಗಳೇ ನಮ್ಮ ರಾಷ್ಟ್ರ ಲಾಂಛನವಾಗಿ ಸ್ವತಂತ್ರ ಸಮಾನತೆ ನ್ಯಾಯ ಸಹೋದರತೆಯ ಸಂಕೇತವಾಗಿ ಸದಾ ನಮ್ಮನ್ನು ನೆರಳಿನಂತೆ ಹಿಂಬಾಲಿಸುತ್ತವೆ.

ಹೀಗೆ ಭಗವಾನ್ ಬುದ್ಧರು ಧಮ್ಮಚಕ್ಕ ಪವತ್ತನ ಸುತ್ತವನ್ನು ಬೋಧಿಸುತ್ತಾರೆ, ಈ ದಿನವೂ ಜುಲೈ ತಿಂಗಳು ಆಷಾಡ ಮಾಸದ ಪೂರ್ಣಿಮೆಯಂದೇ ಬರುವುದರಿಂದ ಜಗತ್ತಿನಲ್ಲೆಡೆ ಇರುವ ಬೌದ್ಧರು ಧಮ್ಮ ಚಕ್ಕ ಪವತ್ತನಾ ದಿನವೆಂದು ತಮ್ಮ ತಮ್ಮ ಮನ ಮನೆಗಳಲ್ಲಿ ದೊಡ್ಡ ಹಬ್ಬದಂತೆ ಸಡಗರ ಸಂಭ್ರಮದಿಂದ ಆಚರಿಸಿ ಸರ್ವ ಜೀವಿಗಳಿಗೂ ಗುರುವಾಗಿ ಧಮ್ಮೋಪದೇಶ ನೀಡಿದ ಬುದ್ಧ ಗುರುವಿಗೆ ವಂದಿಸುತ್ತಾರೆ.

ಅದೇ ದಿನ ಮಹಾಮಾಯೆಯು ಗರ್ಭ ಧರಿಸಿದ ದಿನ, ಅದೇ ದಿನ ಸಿದ್ಧಾರ್ಥ ಗೌತಮರು ಗೃಹತ್ಯಾಗ ಮಾಡಿದ ದಿನ, ಅದೇ ದಿನ ಬೌದ್ಧ ಭಿಕ್ಕುಗಳಿಗೆ ವರ್ಷ ವಾಸ ಪ್ರಾರಂಭದ ದಿನ ಅಂದರೆ ಬೌದ್ಧ ಭಿಕ್ಕುಗಳು ಮಳೆಗಾಲದಲ್ಲಿ ಜುಲೈ, ಆಗಸ್ಟ್, ಸೆಪ್ಟೆಂಬರ್ ಮೂರು ತಿಂಗಳುಗಳ ಕಾಲ ಒಂದೇ ಸ್ಥಳದಲ್ಲಿ ಉಳಿದುಕೊಂಡು ಧಮ್ಮ ಶಮಣ ಮಾಡುವರು.

ಭಾರತದಲ್ಲಿ ಮಾತ್ರ ವೈದಿಕ ಮನುವಾದಿಗಳು ಗುರುಪೂರ್ಣಿಮೆಯೆಂದು ಆಚರಿಕೊಂಡು ಬರುತ್ತಲೇ ಇದ್ದಾರೆ ವೈದಿಕ ಪುರೋಹಿತರೆನಿಸಿಕೊಂಡವರು ಮಾತ್ರ ಶುಭ ಕಾರ್ಯಗಳನ್ನು ಮಾಡಬಹುದು, ಇತರೇ ಸಮುದಾಯಗಳು ಶುಭಕಾರ್ಯಗಳನ್ನು ಮಾಡಿದರೆ ಅವರಿಗೆ ಅನಿಷ್ಟ ಅಶುಭವಾಗುತ್ತದೆ ಹೇಗಿದೆ ನೋಡಿ ಮನುವಾದಿಗಳ ಆಷಾಡ ಮಾಸದ ಆಷಾಡ ಭೂತಿತನದ ಒಳಮರ್ಮ!?

ಬೌದ್ಧರಿಗೆ ಪ್ರತಿ ಹುಣ್ಣಿಮೆಯು ಶುಭಸೂಚಕವಾದರೆ, ಇತರರಿಗೆ ಹೇಗೆ ಅಶುಭವಾಗುತ್ತದೆ? ಆಷಾಢವು ಅಶುಭ ಮಾಸವೆಂದು ಇತಿಹಾಸದ ಕತ್ತಲ ಗರ್ಭದಲ್ಲಿ ಹೂತಿಟ್ಟು ನಮ್ಮ ಪೂರ್ವಿಕರ ಇತಿಹಾಸವು ನಮಗೆ ತಿಳಿಯದಂತೆ ಮಾಡಿದ್ದಾರೆ ಅದಕ್ಕೆ ಬಾಬಾಸಾಹೇಬರು ಹೇಳಿದ್ದು “ಇತಿಹಾಸ ಮರೆತವರು ಇತಿಹಾಸ ಸೃಷ್ಷ್ಠಿಸಲಾರರು”ಅಂತ ಆದರೆ ಆಷಾಡ ಮಾಸವು ಸಮಸ್ತ ಭಾರತೀಯರಿಗೆ ಜ್ಞಾನದ ಭಾಗಿಲನ್ನು ತೆರೆದ ತಿಂಗಳು, ಸತ್ಯವನ್ನು ಸತ್ಯವೆಂದು ಸುಳ್ಳನ್ನು ಸುಳ್ಳೆಂದು ಸಾರಿದ ಭಾರತೀಯರಾದ ನಾವುಗಳು ಬಹುಜನರಿಗೆ ನಿಜವಾದ ಇತಿಹಾಸವನ್ನು ತಿಳಿಸೋಣ.

ವೈದಿಕರಿಂದ ಸೃಷ್ಟಿಯಾದ ಅಸಮಾನತೆಯ ಕತ್ತಲ ಕೂಪದ ಈ ನೆಲದಲ್ಲಿ ಮಹಾ ಕಾರುಣಿಕನ ಮಾನವೀಯ ಲೋಕದ ಧಮ್ಮಚಕ್ರವು ಉರುಳಿ ಸಾಮಾನ್ಯರಿಂದಿಡಿದು ಸಾಮ್ರಾಟ್ ಅಶೋಕರಂತಹ ಆಳರಸರ ಮನಕ್ಕೆ ಬುದ್ಧತ್ವವು ಹೊಕ್ಕಿ ಮಾನವೀಯ ಮನುಷ್ಯರಾಗುತ್ತಾರೆ, ಇದರಿಂದ ಮೌಢ್ಯವನ್ನೇ ಬಂಡವಾಳ ಮಾಡಿಕೊಂಡು ಹೊಟ್ಟೆ ತುಂಬಿಸಿಕೊಳ್ಳುತಿದ್ದ ವೈದಿಕರು ನಿರುದ್ಯೋಗಿಗಳಾಗುತ್ತಾರೆ ತಮ್ಮ ನಿರುದ್ಯೋಗಕ್ಕೆ ಕಾರಣವಾದ ಆಷಾಡ ಮಾಸವು ಅನಿಷ್ಟ ಅಶುಭವೆಂದು ಜನರು ತಿರಸ್ಕರಿಸುವಂತೆ ಮಾಡಿ ಯಶಸ್ವಿಯಾಗುತ್ತಾರೆ.

ಬುದ್ಧರೆಂಬ ಅರಿವಿನ ಹಣತೆಯಿಂದ ಆಷಾಢಮಾಸದ ತಿಂಗಳು ಸಕಲ ಜೀವರಾಶಿಗಳಿಗೂ ಶ್ರೇಶ್ಟವಾದರೆ ವೈದಿಕ ಪುರೋಹಿತರ ದೃಷ್ಟಿಯಲ್ಲಿ ಮಾತ್ರ ಕನಿಷ್ಠವಾಗುತ್ತದೆ ಕುಟಿಲತೆಯಿಂದ ಅಧಿಕಾರವನ್ನು ಕಸಿದುಕೊಂಡು ತಮ್ಮದೇ ಸಾಮ್ರಾಜ್ಯವನ್ನು ಸ್ಥಾಪಿಸಿ ಬುದ್ಧ ಧಮ್ಮವನ್ನು ಈ ನೆಲದಿಂದಲೇ ಓಡಿಸಿದ ವೈದಿಕರು ತಾವು ಬರೆದುದೆಲ್ಲವನ್ನು ಕಾನೂನನ್ನಾಗಿಸಿ ಇದರ ವಿರುದ್ಧ ಯಾರು ಪ್ರಶ್ನಿಸಬಾರದೆಂದು ಇಲ್ಲಿನ ಮೂಲನಿವಾಸಿಗಳ ಮೇಲೆ ಧಾರ್ಮಿಕ ಗುಲಾಮಗಿರಿಯನ್ನೇರಿ ಅದನ್ನು ಒಪ್ಪಿಕೊಳ್ಳುವಂತೆ ಮಾಡಿರುವುದು ಈ ದೇಶದ ದುರಂತವೇ ಸರಿ.

ಸರ್ವರೂ ಕತ್ತಲೆಯಿಂದ ಬೆಳಕಿನ ಕಡೆ ಬರುವಂತಾಗಲಿ ಇಡೀ ವಿಶ್ವವು ಎಲ್ಲಾ ರೋಗ ರುಜಿನಗಳಿಂದ ಮುಕ್ತವಾಗಿ ಸುಖದಿಂದ ಜೀವಿಸುವಂತಾಗಲಿ

ಸರ್ವರಿಗೂ ಬುದ್ಧಗುರು ಮೊದಲ ಧಮ್ಮೋಪದೇಶ ನೀಡಿದ ದಿನವಾದ ಆಷಾಡ ಮಾಸದ ಹುಣ್ಣಿಮೆಯ ಧಮ್ಮ ಚಕ್ರ ಪರಿವರ್ತನಾ ದಿನದ ಶುಭಾಶಯಗಳು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version