Connect with us

ನೆಲದನಿ

ಕಾಯಕ ಜೀವಿಗಳ ಚಳುವಳಿಯಲ್ಲಿ ಬುದ್ಧಪ್ರಜ್ಞೆ

Published

on

  • ಪ್ರೊ.ಹೆಚ್.ಲಿಂಗಪ್ಪ

ಕ್ರಿ.ಪೂ.ಐದನೆಯ ಶತಮಾನದ ಪೂರ್ವದಲ್ಲಿ ಏಷ್ಯಾದ ಮಹಾಬೆಳಕಾದ ಬುದ್ಧ ಮತ್ತು ಮಹಾವೀರರು ಶ್ರವಣ ಪರಂಪರೆಯ ಸಾಧಕರಿವರು. ಬ್ರಾಹ್ಮಣ್ಯದ ಬೌದ್ಧ ಧರ್ಮ ಭಾರತದಿಂದ ಏಷ್ಯಾಪೂರ್ವ ದೇಶಗಳಿಗೆ ವಲಸೆ ಹೋತ್ತು. ಜೈನ ಧರ್ಮ ದೇಶದಲ್ಲಿ ಜೀರ್ಣವಾಯಿತು. ವೈದಿಕ ಕದಂಬಬಾಹುಗಳಿಗೆ ಸಿಲುಕಿ ನರಳಿತು.

ಬಹು ಕಾಲದಿಂದಲೂ ವಲಸೆ ಪ್ರವೃತ್ತಿಯು ನಿರಂತರವಾಗಿ ನಡೆಯುತ್ತಾ ಬಂದಿದೆ. ಮಧ್ಯ ಏಷಿಯಾದಿಂದ ಹಲವು ಜನಾಂಗವು ವಲಸೆ ಬಂದಿದೆ. ಅವರ ಬಣ್ಣ, ಆಕಾರ, ಎತ್ತರ ಮತ್ತು ಮೈಕಟ್ಟು ಭಿನ್ನವಾಗಿದೆ. ಉತ್ತರದಲ್ಲಿ ಈ ಜನಾಂಗವು. ದಕ್ಷಿಣದಲ್ಲಿ ದ್ರಾವಿಡ ಮೂಲದವರು ನೆಲೆಸಿಕೊಂಡ ಅಖಂಡ ಭಾರತವಾಗಿದೆ. ಈ ರೀತಿಯಲ್ಲಿ ಬಣ್ಣದ ಆಧಾರದ ಮೇಲೆ ಮೂರು ಜನಾಂಗವಿರುವ ಭಾರತ ದೇಶ ನಮ್ಮದು!

ಆದ್ದರಿಂದ ಯಾರು ಆರ್ಯರು? ಯಾರು ಶೂದ್ರರು? ಎಂಬುದಾಗಿ ಸುದೀರ್ಘವಾದ ಸಂಶೋಧನೆಗಳು ನಡೆದುಕೊಂಡು ಬಂದಿವೆ. ಸಂಶೋಧನೆ ಮೂಲ ಸಾರ ಅರಿತರೆ ಭಾರತೀಯರಾದ ನಮಗೆ ನಮ್ಮೊಳಗೆಯಿರುವ ಕಿಚ್ಚಿಗೆ ಮುಲಾಮು ದೊರೆತಂತಾಗುತ್ತದೆ. ಜನಪರವಾದ ವಿಚಾರಗಳ ದಾಸೋಹದ ಮಾರ್ಗಗಳಾದ ಬುದ್ಧಮಾರ್ಗ-ಬಸವಮಾರ್ಗ ಮತ್ತು ಅಂಬೇಡ್ಕರ್ ಮಾರ್ಗಗಳು ನೆಲೆಕಂಡಿವೆ. ಇವು ಎಂದೂ ಮಾಸದ-ಇಂಗದ ಬತ್ತದ ವಿಚಾರ ಪರತೆಗಳು, ಸಮಾನತೆಯ ಬೀಜ ಬಿತ್ತಿ, ಸಮಾನತೆಯ ಬೆಳೆಯ ಬೆಳೆದು ಸಾಮರಸ್ಯದ ತೋರಣ ಕಟ್ಟಿದ್ದಾರೆ.

ಅವರಲ್ಲಿ ಪ್ರಮುಖರಾದ12ನೇ ಶತಮಾನದ ಬಸವಣ್ಣ ಸಾಮಾಜಿಕ ಕ್ರಾಂತಿಗೆ ಮುನ್ನೆಲೆಯಾಗುತ್ತಾರೆ. ಕನ್ನಡದ ನೆಲ, ಜಲ, ಭಾಷೆಯ ಬಗ್ಗೆ ಸರಳವಾಗಿ ಚಿಂತಿಸಿದ್ದು ಬಸವಣ್ಣ ಆಂದೋಲನವೊಂದರ ನಾಯಕರಾಗುತ್ತಾರೆ. ಕನ್ನಡ ಭಾಷೆಯಲ್ಲಿ, ದೇಶ-ಭಾಷೆಗಳ ಈ ಪರಿಮಿತಿ ಕಾರಣವಾಗಿ ನ್ಯಾಯವಾಗಿ ಸಿಗಬೇಕಾದ ಜಾಗತಿಕ ಪ್ರಸಿದ್ಧಿ ಸಿಕ್ಕಿಲ್ಲವಾದರೂ, ಇವರನ್ನು ಕುರಿತು ಹುಟ್ಟಿದಷ್ಟು ಸಾಹಿತ್ಯ ಕನ್ನಡದಲ್ಲಿ ಯಾರನ್ನು ಕುರಿತು ಹುಟ್ಟಿದಷ್ಟು ಬೇರೆಯವರಿಗೆ ಸಲ್ಲಿಕೆಯಾಗಿಲ್ಲ. ಇವನಷ್ಟು ಪ್ರಭಾವವನ್ನು ನಾಡಿನ ಯಾವ ಅನುಭಾವಿಕ ಪುರುಷನಿಲ್ಲಾ!

ಬಸವನ ವಚನಗಳ-ಚಿಂತನೆ ಒಂದು ಅಪೂರ್ವ ವಿಚಾರವಾಗಿತ್ತು. ವಚನವೆಂದರೆ ಪ್ರಜ್ಞೆ, ಆತ್ಮಸಾಕ್ಷಿಯ ಮಾತು ಎಂದು ಅರ್ಥ. ನಡೆ-ನುಡಿ ಮಾತ್ರ ಕಲಾತ್ಮಕವಾಗಿದ್ದುದು ರಚನೆಯಾಗಿ, ನಡೆದಂತೆ ನುಡಿದ ಆತ್ಮ ಸಾಕ್ಷಿ ವಾಣಿ ‘ವಚನ’ವೆನಿಸುತ್ತದೆ. ವಚನಗಳು ಪಂಡಿತ ಪಾಮರ ಸಾಹಿತ್ಯವಲ್ಲ. ಅನುಭಾವಿಗಳ ಸಾಹಿತ್ಯ, ಅವರು ಜೀವಿಸುರುವಾಗಲೇ ತಮ್ಮ ವಿಚಾರಗಳನ್ನು ಬರೆದು ಹೃದಯದಿಂದ ಹೃದಯಕ್ಕೆ ಮನಮುಟ್ಟವಂತೆ ಬಿಡಿ ಮಾತುಗಳ ಮೂಲಕ ಅನುಭವವೇದ್ಯವಾದ ವಿಚಾರಗಳ ಬುದ್ಧಪ್ರಜ್ಞೆಯ ಕಣಜವಾಗಿವೆ.

ನಾಡಿನ ಚರಿತ್ರೆಯಲ್ಲಿ ಇದೊಂದು ಜನಪರ ಆಂದೋಲನ, ನಮ್ಮ ನಾಡಿನ ಚರಿತ್ರೆಯಲ್ಲಿ ಒಂದು ವಿಶಿಷ್ಟ ಘಟನೆಯಾಗಿದೆ. ಆಂದೋಲನದ ನೇರ ಧ್ವನಿ, ವಚನ ಸಾಹಿತ್ಯ ಅದರಲ್ಲೂ ವರ್ಣಭೇದ, ವರ್ಗಭೇದ, ಲಿಂಗಭೇದ, ನಿರಾಕರಣೆಗಳಂಥ ವಿಚಾರಗಳು ಸ್ಫೋಟಗೊಂಡುದು ಲಕ್ಷಿತ ಸಂಗತಿಯಾಗಿವೆ. ಇಲ್ಲಿ ಪುರುಷರಷ್ಟೇ ಪ್ರಧಾನವಾಗಿ ಮಹಿಳೆಯರೂ, ಕುಲಜರಷ್ಟೇ ಪ್ರಧಾನವಾಗಿ ಅಂತ್ಯಜರೂ, ಪ್ರಭುಗಳಷ್ಟೇ ಪ್ರಧಾನವಾಗಿ ಪ್ರಜೆಗಳು ಬಾಳಿದರು. ಹಾಗೂ ಬರೆದದ್ದು ಕೂಡಾ ಚಾರಿತ್ರಿಕ ಸತ್ಯ. ವಚನ ವಾಙ್ಮಯ ನಮ್ಮ ಪರಂಪರೆಯ ಅಪೂರ್ವ ಸಾಹಿತ್ಯಿಕ ಸೃಷ್ಟಿಯಾಗಿದೆ. ಅತ್ಮಕಲ್ಯಾಣದೊಂದಿಗೆ ಸಮಾಜ ಕಲ್ಯಾಣವನ್ನು ಕಾರ್ಯಗತಗೊಳಿಸಲು ಹೋರಾಡಿ ಮಡಿದ ಹುತಾತ್ಮರ ಸಾಹಿತ್ಯವಿದು. ಅಂದು ಬಸವಣ್ಣ ಸುಮಾರು ಒಂದು ಸಾವಿರಾರು ನಾಲ್ಕು ನೂರು ಆರು (1406) ವಚನಗಳನ್ನು ಜನಮುಖಿಯಾಗಿ ರಚಿಸಿದ್ದಾರೆ.

ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಯುದ್ಧಗಳು ಜರುಗಿವೆ. ಇವುಗಳ ನಡುವೆ ಅನಂತವಾದ ವಿಭಜನೆಗಳು ಮನುಷ್ಯ ಸಮಾಜವನ್ನು ಸೀಳಿ-ಸೀಳಿ ಅಣಕಿಸುವ ರೀತಿಯಲ್ಲಿ ಅಸಮಾನತೆಯ ವಿಷಬೀಜ ಬಿತ್ತುತ್ತಿವೆ. ಭಾರತೀಯವಾದ ಸಂದರ್ಭದಲ್ಲಿ ಹಿಂದೂ ಹಾಗೂ ಅದರ ವರ್ಣವ್ಯವಸ್ಥೆಯ ಕಾರಣದಿಂದ ಸಮಾಜಶಾಸ್ತçಜ್ಞರ ಅಧ್ಯಯನದಿಂದ ಶ್ರೇಣೀಕರಣಗೊಂಡ ಜಾತಿಗಳು ಸುಮಾರು ಇಂದು ಆರು ಸಾವಿರಕ್ಕೂ ಅಧಿಕ ಜಾತಿ ಮತ್ತು ಉಪ-ಜಾತಿಗಳು ಸೃಷ್ಟಿಯಾಗಿ ಇಡೀ ಸಾಮಾಜಿಕ ವ್ಯವಸ್ಥೆಯಲ್ಲಿ ಜಾತಿಯ ಅಸಮಾನತೆಯ ತಲ್ಲಣ ತಲೆದೋರಿದೆ.

ಜಾತಿ ವ್ಯವಸ್ಥೆಗೆ ಪ್ರಬಲವಾದ ಆಕರ ಮೂಲ ವೈದಿಕ ಪರಂಪರೆಯಾಗಿದೆ! ವೈದಿಕ ಪರಂಪರೆಯ ಜೊತೆಗೆ ಪರಂಪರೆಯ ಮಾರ್ಗವು, ಚಾರ್ವಾಕ ಪರಂಪರೆಯು, ಬಸವಾದಿ ಶರಣರ ಜಂಗಮ ಗುಣಗಳು, ಸಂತರಾಮದೇವ, ತುಕಾರಾಮ, ಕಬೀರ, ತುಳಸೀದಾಸ, ಮೀರಾಬಾಯಿ, ರೈದಾಸ, ಸಂತಶಿಶುನಾಳ ಷರೀಫ್ ಮುಂತಾದ ಅಪರೂಫದ ಭಕ್ತಿ ಪರಂಪರೆ ಕಂಡುಬರುತ್ತದೆ.

ಅದರಂತೆ ಹನ್ನೆರಡನೆಯ ಶತಮಾನದ ಬಸವಾದಿ ಶರಣರ ವಚನಗಳು ಬದುಕಿನ ಜೀವದುಸಿರಾಗಿ ಸಮಾಜವನ್ನು ಹೇಗೆ ಅಂತರ್‌ಗತವಾಗಿ ಬೆಸೆಯುತ್ತಿದ್ದವು ಎಂಬುದು ಕೂಡಾ ಮುಖ್ಯ ಸಂಗತಿಯಾಗಿದೆ. ವ್ಯಕ್ತಿತ್ವದ ವಿಕಾಸದಿಂದ ತಮ್ಮ ಹುಟ್ಟಿನ ಕಲ್ಮಶವನ್ನು ಕಳೆದುಕೊಂಡು ಮನದ ಮಲಿನತೆಯನ್ನು ಅಳಿದು ಶ್ರೇಷ್ಠರಾಗಿದ್ದಾರೆ. ತಾವು ಬದುಕಿ ಇತರರು ಬದುಕಲು ಅವಕಾಶ ಕಲ್ಪಿಸಿದ್ದಾರೆ. ಸರ್ವ ಸಮಾನತೆಯನ್ನು ಬಿಂಬಿಸುವುದೇ ಶರಣರ ಜೀವನದ ಪರಮ ಧ್ಯೇಯ. ನಿಜವಾಗಿಯೂ ದಲಿತ ವರ್ಗದಲ್ಲಿ ಜನ್ಮವೆತ್ತಿ ಸದ್ಗುರುಗಳ ಉಪದೇಶಾಮೃತದಿಂದ ಮೇಲೆದ್ದು, ಶ್ರೇಷ್ಠ ತತ್ವಜ್ಞಾನಿಯಾಗಿ, ಜೀವನ ಚೇತೋಹಾರಿ, ಸ್ಫೂರ್ತಿದಾಯಕ.

ಇವರಂತೆ ದಲಿತವರ್ಗದಲ್ಲಿ ಜನಿಸಿದ ಗುರುಮಾತೆ ಅಕ್ಕನಾಗಲಾಂಬಿಕೆ, ಅಕ್ಕಮಹಾದೇವಿ ಜೀವನಧಾರೆ, ಸತ್ಯಕ್ಕ, ಆಯ್ದಕ್ಕ ಲಕ್ಕಮ್ಮ, ಕಾಲಣ್ಣಿಯ ಕಾಮಮ್ಮ, ಸೂಳೆ ಸಂಕವ್ವೆ, ಕೊಟ್ಟಣ ಸೋಮಮ್ಮ, ಕದಿರ ರೆಮ್ಮವ್ವೆ, ಕೊಟ್ಟಣದ ಸೋಮಮ್ಮ, ಕಾಳೆವ್ವೆ, ಗಣೇಶ್ ಮಸಣಯ್ಯಗಳ ಪುಣ್ಯಸ್ತಿç, ಈಡಿಗರ ಶರಣೆ ಅಕ್ಕಮ್ಮ, ದುಗ್ಗಳೆ, ಗೊಗ್ಗವ್ವೆ, ಬೊಂತಾದೇವಿ, ಗಂಗಾಂಬಿಕೆ, ನೀಲಾಂಬಿಕೆ, ಮೋಳಿಗೆ ಮಹಾದೇವಿ, ಅಮುಗೆ ರಾಯಮ್ಮ, ಬಸವಣ್ಣ, ಅಲ್ಲಮ, ಚನ್ನಬಸವಣ್ಣ, ಅಂಬಿಗರ ಚೌಡಯ್ಯ, ಚೆನ್ನಯ್ಯ, ಧೂಳಯ್ಯ, ಹರಳಯ್ಯ, ಕಕ್ಕಯ್ಯ, ಶಿವನಾಗಿದೇವ, ಮಡಿವಾಳ ಮಾಚಯ್ಯ, ಹಡಪದ ಅಪ್ಪಣ್ಣ, ನುಲಿಯ ಚಂದಯಕ್ಯ, ಉರಿಲಿಮಗದೇವ, ಉರಿಲಿಂಗಪೆದ್ದಿ ಮುಂತಾದವರು ಪ್ರಮುಖವಾಗಿ ನಿಲ್ಲುತ್ತಾರೆ.

ಆ ಕಾಲದ ಸಾಮಾಜಿಕ ಜೀವನದಲ್ಲಿ ಕಂಡುಬಂದ ಮೂಢನಂಬಿಕೆಗಳನ್ನು ಡಾಂಬಿಕ ಆಚರಣೆಗಳನ್ನು, ಅಜ್ಞಾನವನ್ನು ಪ್ರತಿಭಟಿಸಿ, ಪರಿಶುದ್ಧವಾದ ಜೀವನವನ್ನು ರೂಪಿಸುವುದಕ್ಕೆ ಕಾರಣರಾದರು. ಧರ್ಮ, ಸಮಾಜ, ಸಾಹಿತ್ಯ ಈ ಮೂರು ಅಂಶದಲ್ಲಿ ಏಕಕಾಲಕ್ಕೆ ಕ್ರಾಂತಿಯೆಬ್ಬಿಸಿದ ಕೀರ್ತಿ ವಚನಕಾರರಿಗೆ ಸಲ್ಲುತ್ತದೆ. ಅದರಲ್ಲಿ ವಿಶೇಷವಾಗಿ ಅಂಬಿಗರ ಚೌಡಯ್ಯ, ಮಡಿವಾಳ ಮಾಚಯ್ಯ ಇಂಥವರು ನಿರ್ದಾಕ್ಷಿಣ್ಯವಾದ ಕಟುವಚನಗಳನ್ನು ರಚಿಸಿದ್ದಾರೆ. ಅಂದಿನ ಹದಗೆಟ್ಟು ಸಾಮಾಜಿಕ ಜಾತಿವ್ಯವಸ್ಥೆ ಭೀಕರವಾದ ರೋಗಕ್ಕೆ ಎಲ್ಲಾ ಕಾಲಮಾನಕ್ಕೆ ಅನ್ವಯವಾಗುವಂತಹ ವಿಚಾರಗಳನ್ನು ಅರುವಿದ್ದಾರೆ.

ಅಂಬಿಗರ ಚೌಡಯ್ಯನ ವಚನಗಳು ಚಾಟಿ ಏಟಿನಂತೆ ಎಲ್ಲರನ್ನು ಗಾಸಿಗೊಳಿಸಿ ಹೊಡೆದೆಬ್ಬಿಸುತ್ತವೆ. ಪ್ರತಿಯೊಬ್ಬರಲ್ಲಿಯ ಕುಂದು ಕೊರತೆಗಳನ್ನು ನಿರ್ಧಾಕ್ಷಿಣ್ಯವಾಗಿ ಎತ್ತಿ ತೋರಿಸುತ್ತವೆ. ಅವನ ವಚನಗಳ ಮೇಲಿಂದ ಚೌಡಯ್ಯನು ಕಟು ಶಿವಭಕ್ತನಾಗಿದ್ದ. ಕೊಂಚವೂ ಅತ್ತಿತ್ತ ಅಲುಗದೆ ನೇರವಾಗಿ ಶಿವಭಕ್ತರತ್ತ ಸಾಗುವಂಥ ಅದ್ವಿತೀಯ ಶರಣನಾಗಿದ್ದನೆಂಬುದು ಆತನ (398) ಮುನ್ನೂರ ತೊಂಭತ್ತೆAಟು ವಚನಗಳು ಸಮಾಜವನ್ನು ವೈಚಾರಿಕವಾಗಿ ಮೆರೆಯುವಂತೆ ಅವರ ವಚನದಲ್ಲಿ ವಿಜೃಂಭಿಸಿದ್ದಾರೆ.

ವರ್ತಮಾನದ ದಿನಮಾನದಲ್ಲಿ ಭೌದ್ಧಿಕವಾಗಿ ಬೆಳೆದ ರಾಜಕಾರಣಿಗಳು, ಮಠಾಧೀಶರು, ಮುಲ್ಲಾಗಳು, ಪಾದ್ರಿಗಳು, ಚಿಂತಕರು ಅವರದೇ ಆದ ಬ್ಯಾರಿಕೇಡ್ ಹಾಕಿಕೊಂಡು ವ್ಯವಸ್ಥೆಯನ್ನು ಅನುಸಂಧಾನ ಮೂಲಕ ಬೆಸೆಯುವ ಪ್ರಯತ್ನದ ವಿರುದ್ಧ ಕಂಕಣ ಕಟ್ಟಿದ್ದಾರೆ. ನಾನು ಆರಂಭಿಕವಾಗಿ ಕಕೇಶಿಯನ್, ಮಂಗೋಲಿಯನ್, ದ್ರಾವಿಡ ಮೂಲ ಜನಾಂಗವನ್ನು ಗುರುತಿಸುವುದು ಇದೇ ಕಾರಣಕ್ಕೆ. ಆದರೆ ಇಂದು ಜಾತಿ ಮತ್ತು ಧರ್ಮಭೇದದ ವಿಷಬೀಜಕ್ಕೆ, ವಿಷ ಗೊಬ್ಬರ, ವಿಷದ ಔಷಧಿ ಮತ್ತು ಮಲಿನಗೊಂಡ ನೀರು ಎರೆದು ಮತಾಂಧತೆಯ ದೆವ್ವ ಗುಣಿತವನ್ನು ಕಾಣುವ ದುರದೃಷ್ಟ ಸಂಗತಿ ಒದಗಿಬಂದಿದೆ.

ನಮ್ಮ ಸಂಸ್ಕೃತಿ ಪರಾಕಾಷ್ಠೆಯ ಮುಗಿಲು ಮುಟ್ಟಿದರೂ ಜಾತಿಯೆಂಬ ಅರ್ಬುದ ರೋಗಕ್ಕೆ ಸಿಲುಕಿ ನರಳುತ್ತಿದೆ. ಪ್ರಜಾಪ್ರಭುತ್ವದ ಆಶಯ ಎಲ್ಲಾ ಕಾಲದಲ್ಲಿ ನೆಲೆಸಿರುತ್ತದೆ. ಸಾಮಾಜಿಕ ಅಸಮಾನತೆಯು ಶತ-ಶತಮಾನಗಳ ಯಾನ ಮುಂದುರೆದೆಯಿದೆ? ಅದರಲ್ಲೂ ಸಮಗ್ರಭಾಗವಾದ ತಳ ಸಮುದಾಯಗಳ ಅಲಕ್ಷಿತ ಜಾತಿಯ ಅನುಭಾವದ ವಚನಕಾರರು ಸಮಾಜವಿಜ್ಞಾನಿಗಳ ನಡೆಯಂತೆ ಮುಂದಾಗಿದ್ದಾರೆ.

ಅವರ ನಡೆ-ನುಡಿಯಲ್ಲಿ ಯಾವ ವ್ಯತ್ಯಾಸವಿಲ್ಲದ ಬದುಕಿನ, ಕ್ಲೇಶಭಾವ ತೋರದ ಅನುಭಾವಿ ವಚನಕಾರ ದಂಡು-ಹಿಂಡಾಗಿರುವುದನ್ನು ಅನುಭವ ಮಂಟಪದಲ್ಲಿ ವಿಜೃಂಭಿಸಿರುವುದು ಅವರವರ ಜಾತಿಯ ಮೂಲಕ ಪ್ರವೇಶ ಹೊಂದಿದ್ದಾರೆ. ಹನ್ನೆರಡನೆಯ ಶತಮಾನದಲ್ಲಿ ಬಸವಣ್ಣನವರು ಸರ್ವಸಮಾನತೆಯ ಚಳುವಳಿಯಿಂದ ಪ್ರೇರಿತರಾಗಿ ಬಸವನೆಂಬ ಮಹಾವೃಕ್ಷದ ನೆರಳಲ್ಲಿ ಆಶ್ರಯ ಪಡೆದು ಸೇರಿದವರಲ್ಲಿ “ಘನವಂತ ಅಂಬಿಗರ ಚೌಡಯ್ಯ” ಆದ್ಯ ವಚನಕಾರರಾಗಿದ್ದರು. ಎಲ್ಲಾ ಕಾಲಗಳಲ್ಲಿ ಕೂಡಾ ಹೀನ ಜನಾಂಗದವರು ಇದ್ದರು, ಆದರೆ ಅವರಾರು ಮಾನಸಿಕವಾಗಿ ಹೀನರಾಗಿದ್ದಿರಲಿಲ್ಲಾ. ಅಂಥವರನ್ನು ಅವರಿಗೆ ಮಾನವ ಲಿಂಗದೀಕ್ಷೆಯನ್ನು ಬಸವಣ್ಣ ದಯಪಾಲಿಸಿದ್ದರು.

ಅರಮನೆ-ಗುರುಮನೆ-ದೇವಸ್ಥಾನಗಳಿಂದ ದೂರವೇ ಉಳಿದಿದ್ದರು. ಅವರೆಲ್ಲಾ ಜಾತ್ಯಾತೀತ ನೆಲೆಯಲ್ಲಿ ಸಮಾಜ ನಿರ್ಮಾಣಕ್ಕಾಗಿ ಮೇಲು-ಕೀಳನ್ನದೇ, ಸರ್ವರಿಗೂ ಒಳ್ಳೆಯದು ಮಾಡುವ ಮೂಲಕ – “ಸಕಲ ಜೀವಾತ್ಮರಿಗೆ ಲೇಸನೆ ಬಯಸುವ ನಮ್ಮ ಕೂಡಲ ಸಂಗನ ಶರಣರೆ, ಕುಲಜನರು ಎಂದು ಸಾರಿದರು” ಅಂದು ದಲಿತ ಕುಲದವರೆಲ್ಲರೂ ಬಸವನ ತತ್ವಕ್ಕೆ ಆಕರ್ಷಿತರಾದರೆಂದರೆ ಅದೇನು ಯಾವ ಅತಿಶಯೋಕ್ತಿ ಎನಿಸುವುದಿಲ್ಲ. ಬಸವಣ್ಣನವರಂತೆ ಬ್ರಾಹ್ಮಣ ಕುಲದಲ್ಲಿ ಜನಿಸಿದವರೂ ಬಸವತತ್ವವನ್ನು ತಪ್ಪದೆ ಒಪ್ಪಿ ಪರಿಪಾಲಿಸಿ ಆತನ ವಿಚಾರಪಥವನ್ನು ಅರಿತ ಅನೇಕ ಘನವಂತ ಅನುಬಾವಿ ಶರಣ-ಶರಣೆಯರಿದ್ದರು.

ಶರಣ ಸಾಹಿತ್ಯದಲ್ಲಿ ಸರ್ವಜ್ಞವಾಣಿಯಿಂದ ಮೆರೆದ ವ್ಯಕ್ತಿ ಅಂಬಿಗರ ಚೌಡಯ್ಯ ಆ ಕಾಲಘಟ್ಟದ ವೈಚಾರಿಕ ಪ್ರಭೆಯಾಗಿದ್ದರು. ಅವರ ಚಿಂತನೆಯನ್ನು ಮಾಡಿದ ಬಂಡಾಯದ ಬಾವುಟ ಹಿಡಿದವರು. ಬದುಕೇ ಸ್ವರ್ಗ, ಆದರೆ ನಡೆಯುವ ಮಾರ್ಗ ನರಕವಾಗಬಾರದು. ಅದು ಮೂಢನಂಬಿಕೆ, ಅಜ್ಞಾನ, ಕಂದಾಚಾರ ದೇವರು, ಅಂಧಶ್ರದ್ಧೆ ಎಲ್ಲವನ್ನೂ ತಿರಸ್ಕರಿಸಿದ ಅಪರೂಪದ ಮೇರು ವ್ಯಕ್ತಿತ್ವದ ಪ್ರತಿಭೆ. “ಭೂತಕಾಲದ ಚರಿತ್ರೆಯನ್ನು ವರ್ತಮಾನ ಕಾಲದಲ್ಲಿ ಅವಲೋಕಿಸುವುದು ಬಹುಮುಖ್ಯ”.
ಈ ಹೊತ್ತಿನ ಅಂಬೇಡ್ಕರ್ ಮಾರ್ಗವು ಕೂಡ ಬಸವನ ವಿಚಾರಗಳನ್ನು ಅನುಸಂಧಾನದ ರೂಪದಲ್ಲಿ ಮುಂದುವರೆದಿದೆ.

ಆದ್ದರಿಂದ ಅಂಬೇಡ್ಕರ್ ಮಾತಿನಲ್ಲಿ “ಇತಿಹಾಸ ಅರಿಯದವ ಇತಿಹಾಸ ಸೃಷ್ಟಿಸಲಾರ, ಅಂದರೆ ಗತಕಾಲದ ಘಟನೆಯು ಇತಿಹಾಸವನ್ನು ವರ್ತಮಾನದ ಕನ್ನಡಿ ಸಹಾಯದಿಂದ ನೋಡಬೇಕಾಗುತ್ತದೆ” ಆದಕಾರಣ ಅಂಬಿಗರ ಚೌಡಯ್ಯ ಅವರ ಚಿಂತನ-ಮಂಥನ, ಅಗ್ನಿ-ನೀರಿನಂತೆ ನೋಡಿದಾಗ ಜಗತ್ತಿನ ದೇಶಗಳು ನಾಗರೀಕರಣದ ಕಾರಣದಿಂದ ಸಮೀಪವಾಗುತ್ತದೆ. ನಾಗರೀಕ ಸಾಧನವಿಲ್ಲದಲ್ಲಿ ದೇಶದ ಮೂಲೆ-ಮೂಲೆಗಳಿಂದ ಬಂದ ಶರಣರ ದಂಡು-ಹಿAಡಾಗಿ ಒಂದು ಸಾಮಾಜಿಕ ಕ್ರಾಂತಿಗೆ ಮುನ್ನುಡಿ ಬರೆದು ಬಹುದೊಡ್ಡ ಸಾಮಾಜಿಕ ಚರಿತ್ರೆಯನ್ನು ಕನ್ನಡ ನಾಡಿನಲ್ಲಿ ಬರೆದಿದ್ದು ಅದ್ಭುತವಾದ ಶಕ್ತಿಯೆಂದು ಪರಿಗ್ರಹಿಸಬಹುದು!

ಹೀಗೆ ಶರಣ-ಶರಣೆಯರು ಮಾಡಿದ ಸೇವೆ ಅನಂತವಾದುದು. ಅವರು ಚಿಂತಿಸಿದ ವಿಚಾರಪಥ ಜನಮಾನಸದಲ್ಲಿ ಬೆರೆತು ಪರಿವರ್ತನಾಶೀಲರಾಗಿದ್ದು, ಜಾತಿಯ ಮೋಹಕ್ಕೆ ಹಿಂಬು ನೀಡಿದವರಲ್ಲ, ಆದರೆ ಇಂದು ಅದು ಬೇರೆಯೇ ಆಗಿದೆ. ಆದಕಾರಣ ಈಗಾಗಲೇ ದಮನಿತ ಸಮುದಾಯಗಳಲ್ಲಿ ಜನಿಸಿದ ಬುದ್ಧಪ್ರಜ್ಞೆಯ ಅನುಭಾವಿಗಳನ್ನು ಕುರಿತು ಚರ್ಚಿಸಿದ್ದೇನೆ.

ವಚನಗಳ ಆಶಯವೇ ಸರಳವಾಗಿ ಜನಸಾಮಾನ್ಯರಿಗೆ ಅರ್ಥವಾಗಿರುವಂತವು, ಜೊತೆಗೆ ಅವರು ಜನಸಾಮಾನ್ಯರಾಗಿದ್ದವರು. ಚಳುವಳಿಯ ನಾಯಕ ಬಸವಣ್ಣ ಆಗಿದ್ದರು, ಅವರು ಎಂದು ನಾಯಕರಾಗಿರಲಿಲ್ಲ. ಅವರದು ಒಂದು ರೀತಿಯ ಕಿಂಗ್ ಮೇಕರ್‌ರಾಗಿದ್ದವರು. ಅವರುಗಳಲ್ಲಿ ಅಲ್ಲಮ, ಸಿದ್ಧರಾಮ, ಅಂಬಿಗರ ಚೌಡಯ್ಯ, ಹಡಪದ ಅಪ್ಪಣ, ಮಾಚಯ್ಯ, ಚನ್ನಯ್ಯ, ಧೂಳಯ್ಯ, ಹರಳಯ್ಯ ಮತ್ತು ಚನ್ನಬಸವನಂತಹ ಅನುಭಾವಿ ವಚನಕಾರರು ಚಳುವಳಿಯ ಪ್ರಮುಖ ನಾಯಕರಾಗಿದ್ದವರು ಎಂಬ ಸಂಗತಿಯನ್ನು ಬಸವಣ್ಣ ತನ್ನ ವಚನದಲ್ಲಿ ವಿಶ್ಲೇಷಿಸಿದ್ದಾರೆ.

ಬಸವಣ್ಣನವರ ಬದುಕು ಪಾರದರ್ಶಕವಾಗಿತ್ತು. ಅವರು ಬದುಕಿದ್ದನ್ನೇ ಬರೆದರು. ಬರೆದದ್ದನ್ನೇ ಉಪದೇಶಿಸಿದರು. ಅವರ ಬದುಕೇ ಒಂದು ಉಪದೇಶವಾಗಿತ್ತು. ಆದರೆ ಇಂದು ಉಪದೇಶವೇ ಬದುಕಿನ ಬಂಡವಾಳವಾಗುತ್ತದೆ. ನಮ್ಮ ಕೆಲವು ಧರ್ಮಾಧಿಕಾರಿಗಳ, ಮಠಾಧೀಶರ ನಿತ್ಯ ಬದುಕನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ. ಈ ಮಾತು ಉತ್ಪೆçÃಕ್ಷೆ ಎನಿಸುವುದಿಲ್ಲ. ಜನರಲ್ಲಿ ನೈತಿಕಪ್ರಜ್ಞೆ ಬೆಳಸಿ, ಸಮಾಜ ಸಂಘಟನೆ ಮಾಡಬೇಕಾಗಿದ್ದ ಈ ಗುರು ವರ್ಗದವರೇ ವಾಮಮಾರ್ಗಿಗಳಾಗಿ ಅಧಿಕಾರಕ್ಕಾಗಿ ಕಿತ್ತಾಡುವವರನ್ನು ನೋಡುತ್ತೇವೆ. ಜೊತೆಗೆ ಅನುಭಾವ ಪರಂಪರೆಗೆ ಮೋಸವೆಸಗುತ್ತಿದ್ದಾರೆ. ಬಡವರ ತೆರಿಗೆಯ ಅನ್ನವನ್ನು ಕೈಚಾಚಿ ಬೇಡುತ್ತಾರೆ. ಇದು ರೀತಿಯಲ್ಲಿ ಸಾಮಾಜಿಕ ದ್ರೋಹ ಹಾಗೂ ಕಲ್ಯಾಣದ ಚಿಂತನೆಗೆ ಎಳ್ಳು-ನೀರನ್ನು ಇವರೇ ಬಿಡಲು ಮುಂದಾಗಿದ್ದಾರೆ.

ಬದುಕಿನ ಬೆಳಕಾದ, ಮಹಾಬೆಳಕಾದ ಬುದ್ಧ, ಮಹಾವೀರ ಮತ್ತು ಬಸವನ ತತ್ವಗಳನ್ನು ಇವತ್ತಿನ ಸಮಾಜ ಸರಿಯಾಗಿ ಅರ್ಥಮಾಡಿಕೊಂಡರೆ ಯುದ್ಧ ಭೀತಿಯೂ ಬರದು. ಬುದ್ಧನು ಚಿಂತನೆಯಂತೆ ಮನುಕುಲದ ಮುಂದೆ ಎರಡು ಪ್ರಶ್ನೆಗಳೂ “ಯುದ್ಧ ಮತ್ತು ಬುದ್ಧ” ನಾವು ಬುದ್ಧನನ್ನು ಆಯ್ಕೆ ಮಾಡಿಕೊಂಡರೆ ನೆಮ್ಮದಿಯ ಬದುಕು ಕಾಣಲು ಸಾಧ್ಯವಾಗುತ್ತದೆ. ಅಂತಹ ಸುಂದರ ಕನಸಿನ ಬುದ್ಧನೊಂದಿಗೆ ಸಂವಾದಕ್ಕೆ ಇಳಿದರೆ, ಅದರ ಪಾತಳಿಯ ಅಂಶಗಳು ತ್ವೊರೆಯಂತೆ ಚಿಮ್ಮಿ ಹರಿಯುತ್ತದೆ!

ಬುದ್ಧ ಚಿಂತಿಸಿದ ಅತ್ಯಂತ ಸರಳವಾದ ವಿಚಾರಗಳು ಎಲ್ಲಾ ಕಾಲದಲ್ಲಿ ಅಳವಡಿಸಿಕೊಳ್ಳಲು ಯಾವ ಆತಂಕವಿಲ್ಲಾ. ಬುದ್ಧನ ಜೀವ ಪರ, ಮಾನವ ಪರ, ಕಲ್ಯಾಣ ಪರವಾದ ಚಿಂತನೆಗಳಾದ ಶೀಲ, ಸಮಾಧಿ ಮತ್ತು ಪ್ರಜ್ಞೆ ಈ ಮೂರು ಬುದ್ಧನ ಶ್ರೇಷ್ಠಮಟ್ಟದ ಚಿಂತನೆಗಳು. ಇವುಗಳಲ್ಲಿ ಒಂದನ್ನು ಬಿಟ್ಟು ಇನ್ನೊಂದನ್ನು ಸ್ವತಂತ್ರವಾಗಿ ಸಾಧಿಸಲು ಹೊರಟರೆ ಗುರಿಮುಟ್ಟಲು ಸಾಧ್ಯವಾಗುವುದಿಲ್ಲ. ಪೂರ್ಣಮಟ್ಟದ ಶೀಲವನ್ನು ಅಳವಡಿಸಿಕೊಂಡಾಗ ಮಾತ್ರ ಸಮಾಧಿ ತಲುಪಲು ಸಾಧ್ಯ. ಸಮಾಧಿ ಸಿದ್ಧಿಸದೆ ಪ್ರಜ್ಞೆ ಮೂಡುವುದಿಲ್ಲ.

ಪ್ರಜ್ಞೆ ಇಲ್ಲದೆ ನಿರ್ವಾಣದ ಪರಮ ಶಾಂತಿ ದೊರೆಯುದಿಲ್ಲ. ಶೀಲವೆಂದರೆ ಒಳ್ಳೆಯ ನಡೆತೆ, ಒಳ್ಳೆಯ ಚಾರಿತ್ರ್ಯ , ಸಮಸ್ತ ಜೀವ ಸಂಕುಲದ ಒಳಿತಿಗಾಗಿ ಚಿಂತನೆ ಮತ್ತು ಪ್ರಯತ್ನ ಎಂದು ಅರ್ಥ. ಸಮಾಧಿ ಎಂದರೆ ಧ್ಯಾನಭ್ಯಾಸದಲ್ಲಿ ಸಾಧಿಸುವ ಸ್ಥಿರ ಚಿತ್ತದ ಏಕಾಗ್ರತೆ. ಪ್ರಜ್ಞೆ ಎಂದರೆ ಸಮಾಧಿ ಸ್ಥಿತಿಯಲ್ಲಿ ದೊರೆಯುವ ಇಂದ್ರಿಯಾತೀತವಾದ ಜ್ಞಾನವೆಂದು ಅರ್ಥ.

ಇವು ಸಕಲ ಜೀವ ಸಂಕಲ್ಪಕ್ಕೂ ಅನ್ವಯವಾಗುತ್ತದೆ. ಹಾಗಾಗಿ ಬೌದ್ಧ ಧರ್ಮ ಪ್ರತಿಯೊಬ್ಬ ಕೂಡ ಪಂಚಶೀಲಗಳನ್ನು ತಪ್ಪದೆ ಪಾಲಿಸಬೇಕೆಂದು ಉಪದೇಶಿಸುತ್ತದೆ. ಕೊಲೆ, ಕಳ್ಳತನ, ಸುಳ್ಳು, ವ್ಯಭಿಚಾರ ಮತ್ತು ಮಧ್ಯಪಾನ ಇವುಗಳನ್ನು ಸಂಪೂರ್ಣವಾಗಿ ತ್ಯಜಿಸುವುದು. ಹೀಗೆ ಸಮಾಜದ ಮೂಲ ಘಟಕವಾದ ವ್ಯಕ್ತಿಶೀಲವಂತನಾದರೆ ಸಮಾಜವು ಶಾಂತಿಯಿಂದ, ನೆಮ್ಮದಿಯಿಂದ ಜೀವಿಸುತ್ತದೆ. ಸಮಾಜವು ಉತ್ತಮವಾದರೆ ರಾಷ್ಟç ಮತ್ತು ಜಗತ್ತು ಹಿಂಸೆ, ಶೋಷಣೆ ಇಲ್ಲದೆ ಶಾಂತಿ ನೆಮ್ಮದಿಯಿಂದಿರುತ್ತದೆ.

ಧ್ಯಾನಮಾರ್ಗದಿಂದ ಸಮಾಧಿ ಸ್ಥಿತಿಯನ್ನು ಹೊಂದುವುದರಿAದ ಮನಸ್ಸು ಪರಿಶುದ್ಧವಾಗುತ್ತದೆ. ಲೋಭ, ಮೋಹ, ದ್ವೇಷ, ಅಸೂಯೆ, ಅಹಂಕಾರ, ಕ್ರೌರ್ಯ ಮುಂತಾದ ದುರ್ಗಣಗಳನ್ನು ಧ್ಯಾನದ ಮೂಲಕ ನಾಶಮಾಡಿ ಸಮಚಿತ್ತವನ್ನು ಹೊಂದುವುದು. ತಮ್ಮ ಸಾಕ್ಷಾತ್ಕಾರಕ್ಕೆ ಅತ್ಯಂತ ಮುಖ್ಯವಾಗುವುದು. ಈ ರೀತಿಯಾಗಿ ಬುದ್ಧನು ತಾನು ಕಂಡುಹಿಡಿದ ಅನುಸರಿಸಿದ ಅಷ್ಟಾಂಗ ಮಾರ್ಗವನ್ನು ಅಭ್ಯಾಸ ಮಾಡಿದರೆ ಸಕಲ ದುಃಖಗಳಿಂದ ಮುಕ್ತಿ ಹೊಂದಿ ಬುದ್ಧನು ಅನುಭವಿಸಿದ ಪರಿಮಶಾಂತಿಯ ನಿರ್ವಾಣ ಸುಖವನ್ನು ಅನುಭವಿಸಿ ಹರಹಂತ ಸ್ಥಿತಿಯನ್ನು ತಲುಪಬಹುದೆಂದು ತಿಳಿಸಿದರು.

ವಚನ ಸಾಹಿತ್ಯ ಸುಲಭ, ಸರಳ, ಸುಸ್ಪಷ್ಟ ಎಂಬ ಸಂಗತಿಗಳಿಂದ ಕೂಡಿದೆ. ಇವು ವೈವಿಧ್ಯ ಮತ್ತು ವೈರುಧ್ಯಗಳ, ಲೋಕದೃಷ್ಟಿ, ಲೋಕಾನುಭಾವದ ಪರಿಣಾಮವಾಗಿ ಕಸುಬುದಾರರಿಗೆ ಹಾಗೂ ಮಹಿಳೆಯರು ಸೇರಿದಂತೆ ವಿವಿಧ ಕುಲ ಕಸುಬಗಳ ಜನರ, ಅವರ-ಅವರ ನಡುವೆಯೇ ಎತ್ತರದ ವಿಚಾರ ಪಥವನ್ನು ಮುಕ್ತವಾಗಿ ಸಾಮಾಜಿಕ ನೆಲೆಯಲ್ಲಿ ಮಂಡಿಸುತ್ತಿದ್ದರು.

ಅವರುಗಳಲ್ಲಿ ಪ್ರಮುಖವಾಗಿ ಅಧ್ಯಾತ್ಮಿಕ ಸಮಾನತೆಯ ಆದರ್ಶದ ನೆಲೆಯಲ್ಲಿ ಅಕ್ಕಿ ಆರಿಸುವರು, ಕಸಗುಡಿಸುವರು, ಕಟ್ಟಿಗೆ ಮಾರುವರು, ಜೋಡು ತಯಾರಿಸುವರು, ಬಟ್ಟೆ ತೊಳೆಯುವರು, ಹಡಪದ ಕೆಲಸ ಮಾಡುವವರು, ಅಗ್ಗ-ಕಣ್ಣಿ ಮತ್ತು ಕೃಷಿಯ ಪರಿಕರಗಳನ್ನು ರಾಟೆಯ ಕೆಲಸ, ಬಡಿಗೆ ಜಾತಿಯ, ಶುದ್ಧ-ಸಿದ್ಧ ಪ್ರಸಾದ ತಯಾರಿಸುವ, ಹೆಂಡದ ಮತ್ತನ್ನು ಬಿಡಿಸಿ, ಜ್ಞಾನದ ಮತ್ತನ್ನು ಕುಡಿಸಿ ಪಂಚಶೀಲವನ್ನು ನೆನಪಿಸುವ, ಧೂಪದ ಕಾಯಕ, ಸುಖ ಬೋಗವನ್ನು ತೊರೆದ ಬೊಂತಾದೇವಿ ಕಾಶ್ಮೀರದ ರಾಜನ ಮಗಳು, ಬುದ್ಧನ ಅರಮನೆ ತೊರೆದಂತೆ ಕಟ್ಟಿಗೆ ಮಾರುವ ಮಹಾದೇವಿ ರಾಯಮ್ಮ ನೆಯ್ಗೆಯ ಕಾಯಕ. ಕಾಯಕದ ಹಿಂಡು-ದಂಡಾಗಿರುವುದನ್ನು ಜಾತಿ ಮೂಲದ ವಚನಕಾರ ಮೂಲಕ ಸಾಮಾಜಿಕ ಅಸಮಾನತೆ ಮತ್ತು ಜಾತಿವಿನಾಶದ ಹೋರಾಟಗಳಿಗೆ ಸ್ಫೂರ್ತಿ ತುಂಬುವ ಪ್ರಾಚೀನ ವಿಚಾರಧಾರೆಗಳೆಂದು ನೆನೆಯಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending