Connect with us

ದಿನದ ಸುದ್ದಿ

ಕೇಂದ್ರ ಬಜೆಟ್ – 2024-25 | ‘ವಿಕಸಿತ ಭಾರತ್’ ಸಂಕಲ್ಪದ ಅನ್ವಯ ಮುಂಗಡಪತ್ರದ ಸಂಪೂರ್ಣ ಮಾಹಿತಿ ; ಮಿಸ್ ಮಾಡ್ದೆ ಓದಿ

Published

on

ಸುದ್ದಿದಿನಡೆಸ್ಕ್:’ವಿಕಸಿತ ಭಾರತ್’ ಸಂಕಲ್ಪದ ಅನ್ವಯ 2024-25ನೇ ಸಾಲಿನ ಪೂರ್ಣಪ್ರಮಾಣದ ಮುಂಗಡಪತ್ರವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿಂದು ಮಂಡನೆ ಮಾಡಿದರು.

ಬೆಳಗ್ಗೆ ಕಲಾಪ ಸಮಾವೇಶವಾಗುತ್ತಿದ್ದಂತೆಯೇ ಹಣಕಾಸು ಸಚಿವರಿಗೆ ಆಯ-ವ್ಯಯ ಮಂಡನೆ ಮಾಡುವಂತೆ ಲೋಕಸಭಾಧ್ಯಕ್ಷ ಓಂ ಬಿರ್ಲಾ ಸೂಚಿಸಿದರು. ನಿರ್ಮಲಾ ಸೀತಾರಾಮನ್, ಕೇಂದ್ರ ಸರ್ಕಾರದ ಧ್ಯೇಯೋಧ್ಯೇಶ ಹಾಗೂ ನಾಲ್ಕು ವಲಯದ ಅಭಿವೃದ್ಧಿಪಥ ಹೊಂದುವ 9 ಅಂಶಗಳ ಯೋಜನೆಯನ್ನು ಸುಮಾರು 3 ಗಂಟೆ 50 ನಿಮಿಷಗಳ ಕಾಲ ಸತತವಾಗಿ ಭಾಷಣ ಓದಿ, ಉದ್ದೇಶವನ್ನು ಸದನದ ಮುಂದಿಟ್ಟರು.

ಉದ್ಯೋಗ, ಕೌಶಲ್ಯಾಭಿವೃದ್ಧಿ, ಸಣ್ಣ ಅತೀ ಸಣ್ಣ ಉದ್ಯಮೆದಾರರಿಗೆ ಮತ್ತು ಮಧ್ಯಮ ವರ್ಗದವರ ಅನುಕೂಲಕ್ಕೆ ಯೋಜನೆಗಳ ಪ್ರಸ್ತಾವನೆಯನ್ನು ಸದನದ ಮುಂದೆ ಪ್ರಸ್ತಾಪಿಸಿದರು. ರೈತ ಸಮುದಾಯದ ಆದಾಯ ಹೆಚ್ಚಿಸುವ ಹಾಗೂ ಆರ್ಥಿಕ ಸಂಪನ್ಮೂಲ ದ್ವಿಗುಣ ಮಾಡುವ ಕಾರ್ಯಕ್ರಮಗಳನ್ನು ಪ್ರಕಟಿಸಿದರು.

ರಾಷ್ಟ್ರೀಯ ಸಹಕಾರ ನೀತಿ ಎಲ್ಲ ವಲಯದಲ್ಲಿಯೂ ಸಹಕಾರ ಬಲವರ್ಧನೆ ಮೂಲಕ ದೇಶದ ಆರ್ಥಿಕ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮಗಳನ್ನು ಸದನದ ಮುಂದೆ ಪ್ರಸ್ತಾಪಿಸಿದರು. ತೈಲ ಬೀಜ ಉತ್ಪಾದನೆ, ಸಾಸಿವೆ, ಕಡಲೆಕಾಯಿ, ಸೋಯಾ, ಸೂರ್ಯಕಾಂತಿ ಬೆಳೆ ಬೆಳೆಯಲು ರೈತ ಸಮುದಾಯಕ್ಕೆ ಪ್ರೋತ್ಸಾಹ ನೀಡುವ ಕಾರ್ಯಕ್ರಮ ಘೋಷಿಸಿದರು.

ತರಕಾರಿ, ಉತ್ಪಾದನೆ, ಸರಬರಾಜು ಮಾಡಲು ಕಾರ್ಯಕ್ರಮ ಪ್ರಕಟಿಸಿದ ಅವರು, 109 ಹೊಸ ಹೆಚ್ಚು ಉತ್ಪಾದನೆ ಮಾಡುವ ತಳಿಗಳನ್ನು ತೋಟಗಾರಿಕೆಯಲ್ಲಿ ಅಳವಡಿಸಿ, ಪ್ರೋತ್ಸಹಿಸಲು ಹಾಗೂ 32 ವಿಧದ ತೋಟಗಾರಿಕಾ ಬೆಳೆಗಳ ಆಧುನಿಕ ಬೆಳೆ ಬೆಳೆಯಲು ರೈತ ಸಮುದಾಯಕ್ಕೆ ಸಲಹೆ ಮಾರ್ಗದರ್ಶನ ನೀಡಲು, ಸಂಶೋಧನೆಗೆ ಹಾಗೂ ಅಭಿವೃದ್ಧಿಗೆ ಒತ್ತು ನೀಡುವುದಾಗಿ ಕೇಂದ್ರ ಹಣಕಾಸು ಸಚಿವರು ತಮ್ಮ ಆಯ-ವ್ಯಯ ಭಾಷಣದಲ್ಲಿ ಉಲ್ಲೇಖಿಸಿದರು.

ಮಾನವ ಸಂಪನ್ಮೂಲ ಮತ್ತು ಸಾಮಾಜಿಕ ನ್ಯಾಯ ಜೊತೆಗೆ ಇಂಧನ ಭದ್ರತೆ, ನಗರಗಳ ಅಭಿವೃದ್ಧಿ, ಮೂಲಸೌಕರ್ಯ, ಅನ್ವೇಷಣೆ, ಸಂಶೋಧನೆಗೆ ಕೇಂದ್ರ ಸರ್ಕಾರ ಮತ್ತಷ್ಟು ಒತ್ತು ನೀಡಲಿದೆ ಎಂದು ಸದನಕ್ಕೆ ಮಾಹಿತಿ ನೀಡಿದರು. ಮೂರು ಹೊಸ ಕಾರ್ಯಕ್ರಮಗಳನ್ನು ಪ್ರಕಟಿಸಿದ ಹಣಕಾಸು ಸಚಿವರು, ಮೂಲಸೌಕರ್ಯ ಅಭಿವೃದ್ಧಿಗೆ 11 ಲಕ್ಷ ಕೋಟಿ ರೂಪಾಯಿ ಮೀಸಲು. ಮಹಿಳೆ ಮತ್ತು ಮಕ್ಕಳ ಸಂರಕ್ಷಣೆಗೆ 3 ಲಕ್ಷ ಕೋಟಿ ರೂಪಾಯಿ ಹಣವನ್ನು ಮೀಸಲಿಡುವುದರ ಜೊತೆಗೆ, ದುಡಿಯುವ ಯುವ ಕೈಗಳಿಗೆ ಪ್ರೋತ್ಸಾಹ ನೀಡುವ ಯೋಜನೆಯನ್ನು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದರು.

ಮುದ್ರಾ ಸಾಲ ಮಿತಿಯನ್ನು 10 ಲಕ್ಷದಿಂದ 20 ಲಕ್ಷದವರಿಗೆ ಹೆಚ್ಚಿಸಲು ಉದ್ದೇಶಿಸಲಾಗಿದೆ. ಸ್ವ-ಉದ್ಯೋಗ ಕಾರ್ಯಕ್ರಮಕ್ಕೆ ನೆರವಿನ ಪ್ರಮಾಣ ಏರಿಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು. ಮುಂದಿನ ಐದು ವರ್ಷಗಳಲ್ಲಿ ಇ-ವಾಣಿಜ್ಯ ವಹಿವಾಟು, ಖಾಸಗಿ, ಸಾರ್ವಜನಿಕವಾಗಿ ಪಿಪಿಪಿ ಯೋಜನೆಯಡಿ ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ. ಇದರಿಂದ 1 ಕೋಟಿಗೂ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿವೆ ಎಂದು ಅವರು ತಿಳಿಸಿದರು.

ದೇಶೀಯವಾಗಿ ಖನಿಜ ಉತ್ಪಾದನಾ ವಲಯದಲ್ಲಿ ಹಾಗೂ ಪುನರ್‌ಬಳಕೆ ಖನಿಜ ವಲಯದಲ್ಲಿ ಹಲವು ಕಾರ್ಯಕ್ರಮಗಳನ್ನು ಪ್ರಕಟಿಸಿದ ಅವರು, 14 ಪ್ರಮುಖ ನಗರಗಳಲ್ಲಿ ಸುಸ್ಥಿರ ಅಭಿವೃದ್ಧಿ ಕಾರ್ಯಕ್ರಮ ಕೈಗೆತ್ತಿಕೊಳ್ಳಲಾಗುವುದು ಎಂದರು.

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 1 ಕೋಟಿ ಕಡು ಬಡವರು ಹಾಗೂ ಮಧ್ಯಮ ವರ್ಗದವರಿಗೆ ಮನೆ ನಿರ್ಮಾಣ ಮಾಡಿಕೊಳ್ಳಲು 10 ಲಕ್ಷ ಕೋಟಿ ರೂಪಾಯಿ ಹಣವನ್ನು ನಾಲ್ಕು ಹಂತದಲ್ಲಿ ಜಾರಿಗೆ ತರಲಾಗುವುದು ಎಂದರು. ದೇಶದ ಆರ್ಥಿಕ ಬೆಳವಣಿಗೆ 6.4 ರಷ್ಟು ಇರಲಿದ್ದು, ಸುಸ್ಥಿರ ಬೆಳವಣಿಗೆಗೆ ಹಾಗೂ ಹೂಡಿಕೆಗೆ 1. 25 ಲಕ್ಷ ಕೋಟಿ ರೂಪಾಯಿ ತೆಗೆದಿರಿಸಲಾಗಿದೆ ಎಂದರು.

ಆದಾಯ ತೆರಿಗೆ ಪಾವತಿಸುವವರಿಗೆ 75 ಸಾವಿರ ರೂಪಾಯಿವರೆಗೆ ಯಾವುದೇ ತೆರಿಗೆ ಇರುವುದಿಲ್ಲ. 3 ಲಕ್ಷ ರೂಪಾಯಿ ವರೆಗೆ ವಾರ್ಷಿಕ ಆದಾಯ ತೆರಿಗೆ ವಿನಾಯಿತಿ. ಮೂರರಿಂದ ಏಳು ಲಕ್ಷ ರೂಪಾಯಿವರೆಗೆ ಶೇಕಡ 5 ರಷ್ಟು ಹಾಗೂ 7 ರಿಂದ 10 ಲಕ್ಷದವರಿಗೆ ಶೇಕಡ 10 ರಷ್ಟು, 10 ರಿಂದ 12 ಲಕ್ಷದವರಿಗೆ ಶೇಕಡ 15 ಹಾಗೂ 12 ರಿಂದ 15 ಲಕ್ಷದ ವರೆಗೆ ಶೇಕಡ 20 ರಷ್ಟು ಮತ್ತು 15 ಲಕ್ಷ ಮೇಲ್ಪಟವರಿಗೆ ಶೇಕಡ 30 ರಷ್ಟು ತೆರಿಗೆ ಪಾವತಿಸಬೇಕು ಎಂದು ಸದನದಲ್ಲಿ ಪ್ರಸ್ತಾವ ಮಂಡಿಸಿದರು.

ಇದಕ್ಕೂ ಮುನ್ನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಜೆಟ್ ಪ್ರತಿಯನ್ನು ರಾಷ್ಟ್ರಪತಿಯವರಿಗೆ ಮುಂದೆ ಪ್ರಸ್ತಾಪಿಸಿದರು. ಇದಕ್ಕೂ ಮೊದಲು ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ದೊರೆಯಿತು. ಕಾರ್ಮಿಕರ ಭವಿಷ್ಯ ನಿಧಿ ಮೇಲಿನ ಬಡ್ಡಿದರ ಮುಂದುವರಿದಿದ್ದು, ಸುಮಾರು 30 ಲಕ್ಷ ಯುವಕರಿಗೆ ಅನುಕೂಲವಾಗಿದೆ. 1 ಸಾವಿರಕ್ಕೂ ಹೆಚ್ಚು ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಮೇಲ್ದರ್ಜೆಗೇರಿಸಲಾಗುವುದು.

20 ಲಕ್ಷಕ್ಕೂ ಹೆಚ್ಚು ಯುವಕರಿಗೆ ಮುಂದಿನ ಐದು ವರ್ಷಗಳಲ್ಲಿ ಕೌಶಲ್ಯ ತರಬೇತಿ ನೀಡಲು ಉದ್ದೇಶಿಸಲಾಗಿದೆ. ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ನೀಡುತ್ತಿರುವ ನೆರವಿನ ಮೊತ್ತವನ್ನು ಹೆಚ್ಚಿಸಲಾಗಿದ್ದು, ಸುಮಾರು 25 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ಇದರ ಪ್ರಯೋಜನ ಪಡೆಯಲಿದ್ದಾರೆ ಎಂದು ಅಂದಾಜು ಮಾಡಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

Published

on

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಹಾಗೂ ಆನ್‌ಲೈನ್ ಪೇಮೆಂಟ್ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.

ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂಪಾಯಿ ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿಯೋಜನೆ ಅಡಿ ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.

ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

Published

on

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ ಅದರಂತೆ ಬೆಂಗಳೂರು ಜನತೆ ಮನೆ ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶನ ಮೂರ್ತಿಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸಲು ಬೆಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇನ್ನೂ ಗಣೇಶ ಚತುರ್ಥಿ ವಿಶೇಷವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತ್ತೆ ಅನೇಕ ಸಚಿವರು ಹಾಗೂ ಗಣ್ಯರು ಶುಭ ಹಾರೈಸಿದ್ದಾರೆ.

ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಗಲಭೆಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ನಿಯಮಗಳಡಿ ಇಂದಿನಿಂದ ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಇದೇ 9 ಮತ್ತು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 2 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ನೈಸರ್ಗಿಕವಾಗಿ ತಯಾರಿಸಿದ ಮಣ್ಣಿನ ಗಣೇಶನ ವಿಗ್ರಹಗಳನ್ನು ಮಾತ್ರ ಬಳಸುವ ಮೂಲಕ ಕೆರೆ, ನದಿ ಮೂಲಗಳು ಕಲುಷಿತಗೊಳಿಸದಂತೆ ಕಾಪಾಡುವುದು ನಮ್ಮ ಕರ್ತವ್ಯ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending