Connect with us

ದಿನದ ಸುದ್ದಿ

ಕೇಂದ್ರ ಸರ್ಕಾರದ 2021-22ರ ಬಜೆಟ್ ವಿಶ್ಲೇಷಣೆ : ಮಿಸ್ ಮಾಡ್ದೆ ಓದಿ

Published

on

  • ಬಿ. ಶ್ರೀಪಾದ ಭಟ್

1. ಕಳೆದ ವರ್ಶದ (2020-21) ಬಜೆಟ್ ವೆಚ್ಚ 34.50 ಲಕ್ಷ ಕೋಟಿ. ಈ ವರ್ಶದ (2021-22) ಬಜೆಟ್ ವೆಚ್ಚ 34.82 ಲಕ್ಷ ಕೋಟಿ. ಅಂದರೆ ಕಳೆದ ವರ್ಶಕ್ಕಿಂತ 0.92% ಮಾತ್ರ ಜಾಸ್ತಿ.
ಕಳೆದ ವರ್ಶ (ಕೋವಿಡ್ ಪೂರ್ವದಲ್ಲಿ ) ಜಿಡಿಪಿ 4% ಇತ್ತು ಮತ್ತು ಕೋವಿಡ್ ನಂತರ ಅದು -7.7% ಗೆ ಕುಸಿಯಿತು.
ಆದರೆ ಈ ಮೋದಿ ಸರಕಾರ ವು ಈ ವರ್ಶದ ಜಿಡಿಪಿ ಗುರಿ 11.1% ಸಾದಿಸುತ್ತೇವೆ ಎಂದು ಜುಮ್ಲಾ ಬಿಡುತ್ತಿದ್ದಾರೆ.

ಅಂದರೆ ಇವರ ಪ್ರಕಾರ ಕಳೆದ ವರ್ಶಕ್ಕೂ ಮತ್ತು ಈ ವರ್ಶಕ್ಕೂ ಬಜೆಟ್ ವೆಚ್ಚ ಕೇವಲ 0.92% ರಶ್ಟು ಹೆಚ್ಚಾಗಿದೆ, ಆದರೆ ಜಿಡಿಪಿ ಮಾತ್ರ 142% ಹೆಚ್ಚಾಗುತ್ತದೆ! ಇದು ಹೇಗೆ ಎಂದು ಪ್ರಶ್ನಿಸುವವನೇ ಮೂರ್ಖ!!! ವಿತ್ತೀಯ ಕೊರತೆ 6.6% ಎಂದು ಅಂದಾಜಿಸಿದ್ದಾರೆ. ಇದಕ್ಕೆ ನೇರವಾಗಿ ಕೋವಿಡ್ ಸಾಂಕ್ರಾಮಿಕ ಕಾಯಿಲೆಯನ್ನು ಹೊಣೆಗಾರಿಕೆ ಮಾಡಿರುವುದು ಸರಕಾರವು ತನ್ನ ವೈಫಲ್ಯದಿಂದ ನುಣಿಚಿಕೊಂಡಂತೆ.

2. ಶೇ. 1% ಪ್ರಮಾಣದಲ್ಲಿರುವ ಅತಿ ಶ್ರೀಮಂತರಿಗೆ ಶೇ. 2% ಪ್ರಮಾಣದ ಸಂಪತ್ತು ತೆರಿಗೆ ವಿದಿಸಿ ಆ ಮೂಲಕ ನೇರ ತೆರಿಗೆ ಸಂಗ್ರಹಿಸಬಹುದಾಗಿತ್ತು. ಆದರೆ ಈ ಕುರಿತು ಪ್ರಸ್ತಾಪವೇ ಇಲ್ಲ. ಬದಲಿಗೆ ಈ ಬಾರಿಯ ಬಜೆಟ್ ನ ಪ್ರಕಾರ ಪರೋಕ್ಷ ತೆರಿಗೆ ಪ್ರಮಾಣ ಮತ್ತಶ್ಟು ಹೆಚ್ಚಲಿದ್ದು , ನೇರ ತೆರಿಗೆ ಪ್ರಮಾಣ ಪರೋಕ್ಷ ತೆರಿಗೆಗಿಂತ ತುಂಬಾ ಕಡಿಮೆಯಾಗಲಿದೆ.

ಅಂದರೆ ಅತಿ ಶ್ರೀಮಂತರು ಮತ್ತಶ್ಟು ಶ್ರೀಮಂತರಾಗುತ್ತಾರೆ, ಬಡವರು ಮತ್ತಶ್ಟು ಬಡವರಾಗುತ್ತಾರೆ. ಯಾವುದೇ ದೇಶದ ಪರೋಕ್ಷ ತೆರಿಗೆಯು ನೇರ ತೆರಿಗೆಗಿಂತ ಹೆಚ್ಚಾಗಿದ್ದರೆ ಆ ದೇಶವೆಂದೂ ಉದ್ದಾರವಾಗುವುದಿಲ್ಲ. ಭಾರತವೂ ಸಹ.

3. ಈ ಬಜೆಟ್ ನ ಪ್ರಸ್ತಾಪದ ಪ್ರಕಾರ ರೈಲ್ವೆ, ಅರಣ್ಯ, ಕೃಶಿ ಇತ್ಯಾದಿ ಸರಕಾರಿ ಇಲಾಖೆಗಳ ಜಮೀನು ಖಾಸಗಿಯವರ ಪಾಲಾಗಲಿದೆ. ಬಡವರ ಬದುಕು ಮತ್ತಶ್ಟು ಹದಗೆಡಲಿದೆ.

4. 2018ರ ಹಣಕಾಸು ವರ್ಶದಲ್ಲಿ ಶಿಕ್ಷಣ, ಆರೋಗ್ಯ ಒಳಗೊಂಡಂತೆ 42 ಸೆಸ್ ಗಳನ್ನು ಜಡಿದ ಮೋದಿ ಸರಕಾರ ಆ ಮೂಲಕ 2.5 ಲಕ್ಷ ಕೋಟಿಯನ್ನು ಸಂಗ್ರಹ ಮಾಡಿತ್ತು. ಆದರೆ ಆ ಮೊತ್ತವನ್ನು ಮರಳಿ ಸಂಬಂದಪಟ್ಟ ಇಲಾಖೆಗಳ ಅಬಿವೃದ್ದಿಗೆ ವೆಚ್ಚ ಮಾಡಲೇ ಇಲ್ಲ. ಉದಾಹರಣೆಗೆ ಸ್ವಚ್ಚ ಭಾರತ ಸೆಸ್ ಎಂದು ಪಡೆದ ಹಣದ 4891 ಕೋಟಿ ಹಣವನ್ನು ಆ ಉದ್ದೇಶಕ್ಕೆ ಬಳಸಲಿಲ್ಲ.

2011ರಿಂದ ರಸ್ತೆ ಸೆಸ್ ಎಂದು ಹಣ ಪಡೆದು 72,726 ಕೋಟಿ ಮೊತ್ತವನ್ನು ಮರಳಿ ಆ ಉದ್ದೇಶಕ್ಕೆ ಬಳಸಲಿಲ್ಲ. 2007 ರಿಂದ 2018ರ ವರೆಗೆ ಸೆಕೆಂಡರಿ ಮತ್ತು ಉನ್ನತ ಶಿಕ್ಷಣದ ಸೆಸ್ ಎಂದು ಬಾಚಿಕೊಂಡ 1 ಲಕ್ಷ ಕೋಟಿ ರೊಕ್ಕವನ್ನು ಮರಳಿ ಶಿಕ್ಷಣಕ್ಕೆ ವೆಚ್ಚ ಮಾಡಲೇ ಇಲ್ಲ. ಹಾಗಿದ್ದರೆ ಆ ಹಣ ಎಲ್ಲಿ ಹೋಯಿತು? ಕೇಳುವರಾರು? ಹೇಳುವರಾರು? ಇದು ಹಗಲು ದರೋಡೆ.
ಈ ಬಾರಿ ಕೃಶಿ ಸೆಸ್ ಎಂದು ಅನೇಕ ತೆರಿಗೆಗಳನ್ನು ಪ್ರಸ್ತಾಪಿಸಿದ್ದಾರೆ. ಆದರೆ ಅದರ ಹಣೆಬರಹವೂ ಸಹ ಅಶ್ಟೇನೆ. ಕೃಶಿ ಹೆಸರಿನಲ್ಲಿ ಕೋಟಿಗಟ್ಟಲೆ ಹಣ ಸಂಗ್ರಹವಾಗುತ್ತದೆ, ಆದರೆ ಕೃಶಿಗೆ ನಯಾ ಪೈಸೆ ವೆಚ್ಚ ಮಾಡುವುದಿಲ್ಲ. ಇಂತಹ ವಂಚನೆ ಬೇರೆಲ್ಲಿಯೂ ಕಂಡು ಬರುವುದಿಲ್ಲ

5. ಬಂಡವಾಳ ಹಿಂತೆಗೆತ ( disinvestment) ಕ್ಕೆ 1.75 ಲಕ್ಷ ಕೋಟಿ ಗುರಿಯನ್ನು ಪ್ರಸ್ತಾಪಿಸಿದ್ದಾರೆ. ಒಂದು ಸಾರ್ವಜನಿಕ ಬ್ಯಾಂಕ್, ಎರಡು ವಿಮಾ ಕಂಪನಿಗಳನ್ನು ಖಾಸಗೀಕರಣಗೊಳಿಸಲಾಗುವುದು.

6. ವಿಮಾ ವಲಯದಲ್ಲಿನ ವಿದೇಶಿ ಬಂಡವಾಳ ಹೂಡಿಕೆಯನ್ನು (ಎಫ್ ಡಿಐ) ಯನ್ನು ಶೇ. 49 ರಿಂದ
ಶೇ. 74ಕ್ಕೆ ಏರಿಸಲಾಗಿದೆ. ಆತ್ಮ ಬರ್ಬಾದ್.

7. ‘ಯುಜಿಸಿ’ ರದ್ದುಗೊಳಿಸಿ ‘ಉನ್ನತ ಶಿಕ್ಷಣ ಆಯೋಗ’ (HEC) ರಚಿಸಲು ಈ ವರ್ಶ ಚಾಲನೆ. ಶಿಕ್ಷಣದ ಕೇಂದ್ರೀಕರಣಕ್ಕೂ ಚಾಲನೆ. ಇನ್ನು ವಿಶ್ವ ವಿದ್ಯಾಲಯಗಳ ಧನ ಸಹಾಯ ಮತ್ತು ಅನುದಾನವು ನೇರವಾಗಿ ಕೇಂದ್ರ ಶಿಕ್ಷಣ ಇಲಾಖೆಯ ಸುಪರ್ದಿಗೆ ಹೋಗುತ್ತದೆ. ಅಲ್ಲಿಗೆ ಕತೆ ಮುಗೀತು.

8. ಮುಂದಿನ 6 ವರ್ಶಗಳಲ್ಲಿ ದಲಿತ ಸಮುದಾಯದ ವಿದ್ಯಾರ್ಥಿಗಳಿಗಾಗಿ 35,219 ಕೋಟಿ ಹಣ ವೆಚ್ಚ ಮಾಡಲಾಗುವುದು ಎಂದು ಬಜೆಟ್ ಘೋಶಣೆ ಮಾಡಿದ್ದಾರೆ. ಇದು ಎಂತಹ ವಂಚನೆ, ಮರೆಮೋಸವೆಂದರೆ :
ಮೊದಲಿಗೆ ಇದು 1944ರಿಂದ ಜಾರಿಯಲ್ಲಿರುವ ಪ.ಜಾತಿ ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಯೋಜನೆ. ಇದರಲ್ಲಿ ಹೊಸದೇನೂ ಇಲ್ಲ.

ದೇಶದಾದ್ಯಂತ ಸುಮಾರು 57 ಲಕ್ಷ ಪ.ಜಾತಿ ವಿದ್ಯಾರ್ಥಿಗಳಿದ್ದಾರೆ ಎಂದು ಅಂದಾಜಿಸಿದರೆ ಒಬ್ಬ ವಿದ್ಯಾರ್ಥಿಗೆ ಪ್ರತಿ ವರ್ಶ 10,000 ರೂ, ಪ್ರತಿ ತಿಂಗಳು 858 ರೂ. ದೊರಕುತ್ತದೆ. ಈ ಕೇವಲ ಹಣದಿಂದ ಆ ವಿದ್ಯಾರ್ಥಿಗೆ ಯಾವ ಆರ್ಥಿಕ ಅನುಕೂಲವೂ ದೊರಕುವುದಿಲ್ಲ. ಮತ್ತು ಈ ಹಣವನ್ನು ಕೇಂದ್ರ ಮತ್ತು ರಾಜ್ಯಗಳು 60:40 ಅನುಪಾತದಲ್ಲಿ ಕೊಡಬೇಕು. ರಾಜ್ಯ ಎಂದಿಗೂ ಕೊಡುವುದಿಲ್ಲ, ಹಾಗಾಗಿ ಕೇಂದ್ರವೂ ಕೊಡುವುದಿಲ್ಲ.
ಇದು ದಲಿತರಿಗೆ ಮಾಡುವ ವಂಚನೆಯಲ್ಲವೇ?

1. ಶಿಕ್ಷಣವು ಸಂವಿದಾನದ ಶೆಡ್ಯೂಲ್ 7ರ (ಅನುಚ್ಚೇದ 246) ಸಮವರ್ತಿ ಪಟ್ಟಿ ( concurrent list) ಯಲ್ಲಿ ಬರುತ್ತದೆ. (ಎಂಟ್ರಿ 25)

2. ರಾಜ್ಯದ ಪಟ್ಟಿಯಲ್ಲಿನ
(list 2) ಎಂಟ್ರಿ 32ರ ಅನುಸಾರ
‘ಪಟ್ಟಿ 1 ( ಕೇಂದ್ರದ ಪಟ್ಟಿ) ಯಲ್ಲಿರುವ ಸಂಸ್ಥೆಗಳನ್ನು ಹೊರತುಪಡಿಸಿ ವಿಶ್ವವಿದ್ಯಾಯಗಳನ್ನು ಒಳಗೊಂಡಂತೆ ಮಿಕ್ಕ ಸಂಸ್ಥೆಗಳ ಸಂಯೋಜನೆ, ನಿಯಂತ್ರಣ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ’.

ಮೇಲಿನ ಎರಡೂ ಎಂಟ್ರಿಗಳ ಪ್ರಕಾರ ಶಿಕ್ಷಣವು ರಾಜ್ಯಕ್ಕೆ ಸಂಬಂದಪಟ್ಟ ವಿಶಯವಾಗಿದೆ.

ಆದರೆ 2021-22ರ ಕೇಂದ್ರ ಬಜೆಟ್ ನಲ್ಲಿ ನಾಲ್ಕು ವಿಬಿನ್ನ ಕೌನ್ಸಿಲ್ ಗಳನ್ನೊಳಗೊಂಡ ‘ಉನ್ನತ ಶಿಕ್ಷಣ ಆಯೋಗ’ ವನ್ನು ಸ್ಥಾಪಿಸುವುದಾಗಿ ಏಕಪಕ್ಷೀಯವಾಗಿ ಘೋಶಿಸುವುದು ಮೇಲೆ ಪ್ರಸ್ತಾಪಿಸಿದ ಸಂವಿದಾನದ ನೀತಿಸಂಹಿತೆಗೆ ವಿರುದ್ದವಾಗಿದೆ. ಶಿಕ್ಷಣದ ವಿಶಯದಲ್ಲಿ ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಬೇಕಿತ್ತು. ಆದರೆ ಕೇಂದ್ರ ಸರಕಾರವು ಇಲ್ಲಿ ಸಂವಿದಾನವನ್ನು ಉಲ್ಲಂಘಿಸಿದೆ.

2. ಬಜೆಟ್ ನಲ್ಲಿ 15,000 ಶಾಲೆಗಳನ್ನು ಸಂಪೂರ್ಣವಾಗಿ ಸದೃಡಗೊಳಿಸಲಾಗುವುದು ಎಂದು ಹೇಳಿದ್ದಾರೆ. ಸ್ವಾತಂತ್ರ್ಯ ಬಂದು 73 ವರ್ಶಗಳ ನಂತರವೂ ಕೇವಲ 15,000 ಶಾಲೆಗಳನ್ನು ಮಾತ್ರ ಬಲಪಡಿಸುವಲ್ಲಿಗೆ ಸರಕಾರವು ಸೀಮಿತಗೊಂಡಿರುವುದು ಎಂತಹ ದುರಂತದ ಸಂಗತಿ!!

3. ಸೇನೆಯಲ್ಲಿ ನೇಮಕಾತಿಗಾಗಿ 100 ಸೈನಿಕರ ಶಾಲೆಗಳನ್ನು ಆರಂಬಿಸುವುದಾಗಿ ಬಜೆಟ್ ನಲ್ಲಿ ಹೇಳಿದ್ದಾರೆ.ಬವಿಶ್ಯದ ತಲೆಮಾರು ಗಳನ್ನು ರೂಪಿಸುವ ನೆರೆಹೊರೆ ಶಾಲಾ ವ್ಯವಸ್ಥೆ, ಸಮಾನ ಶಿಕ್ಷಣದ ಕುರಿತು ಒಂದೂ ಮಾತನಾಡದೆ, ಕೇವಲ ಸೈನಿಕರನ್ನು ತಯಾರಿಸುವುದು ಸರಕಾರದ ಆದ್ಯತೆಯಾದರೆ ಆ ದೇಶ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ನಿಮ್ಮ ಊಹೆಗೆ ಬಿಡುತ್ತೇನೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

Published

on

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.

ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.

ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.

ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್‌ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.

ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.

ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.

ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್‌ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್‌ನಾಯ್ಕ್.

ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending