Connect with us

ದಿನದ ಸುದ್ದಿ

ಕೇಂದ್ರ ಸರ್ಕಾರದ 2021-22ರ ಬಜೆಟ್ ವಿಶ್ಲೇಷಣೆ : ಮಿಸ್ ಮಾಡ್ದೆ ಓದಿ

Published

on

  • ಬಿ. ಶ್ರೀಪಾದ ಭಟ್

1. ಕಳೆದ ವರ್ಶದ (2020-21) ಬಜೆಟ್ ವೆಚ್ಚ 34.50 ಲಕ್ಷ ಕೋಟಿ. ಈ ವರ್ಶದ (2021-22) ಬಜೆಟ್ ವೆಚ್ಚ 34.82 ಲಕ್ಷ ಕೋಟಿ. ಅಂದರೆ ಕಳೆದ ವರ್ಶಕ್ಕಿಂತ 0.92% ಮಾತ್ರ ಜಾಸ್ತಿ.
ಕಳೆದ ವರ್ಶ (ಕೋವಿಡ್ ಪೂರ್ವದಲ್ಲಿ ) ಜಿಡಿಪಿ 4% ಇತ್ತು ಮತ್ತು ಕೋವಿಡ್ ನಂತರ ಅದು -7.7% ಗೆ ಕುಸಿಯಿತು.
ಆದರೆ ಈ ಮೋದಿ ಸರಕಾರ ವು ಈ ವರ್ಶದ ಜಿಡಿಪಿ ಗುರಿ 11.1% ಸಾದಿಸುತ್ತೇವೆ ಎಂದು ಜುಮ್ಲಾ ಬಿಡುತ್ತಿದ್ದಾರೆ.

ಅಂದರೆ ಇವರ ಪ್ರಕಾರ ಕಳೆದ ವರ್ಶಕ್ಕೂ ಮತ್ತು ಈ ವರ್ಶಕ್ಕೂ ಬಜೆಟ್ ವೆಚ್ಚ ಕೇವಲ 0.92% ರಶ್ಟು ಹೆಚ್ಚಾಗಿದೆ, ಆದರೆ ಜಿಡಿಪಿ ಮಾತ್ರ 142% ಹೆಚ್ಚಾಗುತ್ತದೆ! ಇದು ಹೇಗೆ ಎಂದು ಪ್ರಶ್ನಿಸುವವನೇ ಮೂರ್ಖ!!! ವಿತ್ತೀಯ ಕೊರತೆ 6.6% ಎಂದು ಅಂದಾಜಿಸಿದ್ದಾರೆ. ಇದಕ್ಕೆ ನೇರವಾಗಿ ಕೋವಿಡ್ ಸಾಂಕ್ರಾಮಿಕ ಕಾಯಿಲೆಯನ್ನು ಹೊಣೆಗಾರಿಕೆ ಮಾಡಿರುವುದು ಸರಕಾರವು ತನ್ನ ವೈಫಲ್ಯದಿಂದ ನುಣಿಚಿಕೊಂಡಂತೆ.

2. ಶೇ. 1% ಪ್ರಮಾಣದಲ್ಲಿರುವ ಅತಿ ಶ್ರೀಮಂತರಿಗೆ ಶೇ. 2% ಪ್ರಮಾಣದ ಸಂಪತ್ತು ತೆರಿಗೆ ವಿದಿಸಿ ಆ ಮೂಲಕ ನೇರ ತೆರಿಗೆ ಸಂಗ್ರಹಿಸಬಹುದಾಗಿತ್ತು. ಆದರೆ ಈ ಕುರಿತು ಪ್ರಸ್ತಾಪವೇ ಇಲ್ಲ. ಬದಲಿಗೆ ಈ ಬಾರಿಯ ಬಜೆಟ್ ನ ಪ್ರಕಾರ ಪರೋಕ್ಷ ತೆರಿಗೆ ಪ್ರಮಾಣ ಮತ್ತಶ್ಟು ಹೆಚ್ಚಲಿದ್ದು , ನೇರ ತೆರಿಗೆ ಪ್ರಮಾಣ ಪರೋಕ್ಷ ತೆರಿಗೆಗಿಂತ ತುಂಬಾ ಕಡಿಮೆಯಾಗಲಿದೆ.

ಅಂದರೆ ಅತಿ ಶ್ರೀಮಂತರು ಮತ್ತಶ್ಟು ಶ್ರೀಮಂತರಾಗುತ್ತಾರೆ, ಬಡವರು ಮತ್ತಶ್ಟು ಬಡವರಾಗುತ್ತಾರೆ. ಯಾವುದೇ ದೇಶದ ಪರೋಕ್ಷ ತೆರಿಗೆಯು ನೇರ ತೆರಿಗೆಗಿಂತ ಹೆಚ್ಚಾಗಿದ್ದರೆ ಆ ದೇಶವೆಂದೂ ಉದ್ದಾರವಾಗುವುದಿಲ್ಲ. ಭಾರತವೂ ಸಹ.

3. ಈ ಬಜೆಟ್ ನ ಪ್ರಸ್ತಾಪದ ಪ್ರಕಾರ ರೈಲ್ವೆ, ಅರಣ್ಯ, ಕೃಶಿ ಇತ್ಯಾದಿ ಸರಕಾರಿ ಇಲಾಖೆಗಳ ಜಮೀನು ಖಾಸಗಿಯವರ ಪಾಲಾಗಲಿದೆ. ಬಡವರ ಬದುಕು ಮತ್ತಶ್ಟು ಹದಗೆಡಲಿದೆ.

4. 2018ರ ಹಣಕಾಸು ವರ್ಶದಲ್ಲಿ ಶಿಕ್ಷಣ, ಆರೋಗ್ಯ ಒಳಗೊಂಡಂತೆ 42 ಸೆಸ್ ಗಳನ್ನು ಜಡಿದ ಮೋದಿ ಸರಕಾರ ಆ ಮೂಲಕ 2.5 ಲಕ್ಷ ಕೋಟಿಯನ್ನು ಸಂಗ್ರಹ ಮಾಡಿತ್ತು. ಆದರೆ ಆ ಮೊತ್ತವನ್ನು ಮರಳಿ ಸಂಬಂದಪಟ್ಟ ಇಲಾಖೆಗಳ ಅಬಿವೃದ್ದಿಗೆ ವೆಚ್ಚ ಮಾಡಲೇ ಇಲ್ಲ. ಉದಾಹರಣೆಗೆ ಸ್ವಚ್ಚ ಭಾರತ ಸೆಸ್ ಎಂದು ಪಡೆದ ಹಣದ 4891 ಕೋಟಿ ಹಣವನ್ನು ಆ ಉದ್ದೇಶಕ್ಕೆ ಬಳಸಲಿಲ್ಲ.

2011ರಿಂದ ರಸ್ತೆ ಸೆಸ್ ಎಂದು ಹಣ ಪಡೆದು 72,726 ಕೋಟಿ ಮೊತ್ತವನ್ನು ಮರಳಿ ಆ ಉದ್ದೇಶಕ್ಕೆ ಬಳಸಲಿಲ್ಲ. 2007 ರಿಂದ 2018ರ ವರೆಗೆ ಸೆಕೆಂಡರಿ ಮತ್ತು ಉನ್ನತ ಶಿಕ್ಷಣದ ಸೆಸ್ ಎಂದು ಬಾಚಿಕೊಂಡ 1 ಲಕ್ಷ ಕೋಟಿ ರೊಕ್ಕವನ್ನು ಮರಳಿ ಶಿಕ್ಷಣಕ್ಕೆ ವೆಚ್ಚ ಮಾಡಲೇ ಇಲ್ಲ. ಹಾಗಿದ್ದರೆ ಆ ಹಣ ಎಲ್ಲಿ ಹೋಯಿತು? ಕೇಳುವರಾರು? ಹೇಳುವರಾರು? ಇದು ಹಗಲು ದರೋಡೆ.
ಈ ಬಾರಿ ಕೃಶಿ ಸೆಸ್ ಎಂದು ಅನೇಕ ತೆರಿಗೆಗಳನ್ನು ಪ್ರಸ್ತಾಪಿಸಿದ್ದಾರೆ. ಆದರೆ ಅದರ ಹಣೆಬರಹವೂ ಸಹ ಅಶ್ಟೇನೆ. ಕೃಶಿ ಹೆಸರಿನಲ್ಲಿ ಕೋಟಿಗಟ್ಟಲೆ ಹಣ ಸಂಗ್ರಹವಾಗುತ್ತದೆ, ಆದರೆ ಕೃಶಿಗೆ ನಯಾ ಪೈಸೆ ವೆಚ್ಚ ಮಾಡುವುದಿಲ್ಲ. ಇಂತಹ ವಂಚನೆ ಬೇರೆಲ್ಲಿಯೂ ಕಂಡು ಬರುವುದಿಲ್ಲ

5. ಬಂಡವಾಳ ಹಿಂತೆಗೆತ ( disinvestment) ಕ್ಕೆ 1.75 ಲಕ್ಷ ಕೋಟಿ ಗುರಿಯನ್ನು ಪ್ರಸ್ತಾಪಿಸಿದ್ದಾರೆ. ಒಂದು ಸಾರ್ವಜನಿಕ ಬ್ಯಾಂಕ್, ಎರಡು ವಿಮಾ ಕಂಪನಿಗಳನ್ನು ಖಾಸಗೀಕರಣಗೊಳಿಸಲಾಗುವುದು.

6. ವಿಮಾ ವಲಯದಲ್ಲಿನ ವಿದೇಶಿ ಬಂಡವಾಳ ಹೂಡಿಕೆಯನ್ನು (ಎಫ್ ಡಿಐ) ಯನ್ನು ಶೇ. 49 ರಿಂದ
ಶೇ. 74ಕ್ಕೆ ಏರಿಸಲಾಗಿದೆ. ಆತ್ಮ ಬರ್ಬಾದ್.

7. ‘ಯುಜಿಸಿ’ ರದ್ದುಗೊಳಿಸಿ ‘ಉನ್ನತ ಶಿಕ್ಷಣ ಆಯೋಗ’ (HEC) ರಚಿಸಲು ಈ ವರ್ಶ ಚಾಲನೆ. ಶಿಕ್ಷಣದ ಕೇಂದ್ರೀಕರಣಕ್ಕೂ ಚಾಲನೆ. ಇನ್ನು ವಿಶ್ವ ವಿದ್ಯಾಲಯಗಳ ಧನ ಸಹಾಯ ಮತ್ತು ಅನುದಾನವು ನೇರವಾಗಿ ಕೇಂದ್ರ ಶಿಕ್ಷಣ ಇಲಾಖೆಯ ಸುಪರ್ದಿಗೆ ಹೋಗುತ್ತದೆ. ಅಲ್ಲಿಗೆ ಕತೆ ಮುಗೀತು.

8. ಮುಂದಿನ 6 ವರ್ಶಗಳಲ್ಲಿ ದಲಿತ ಸಮುದಾಯದ ವಿದ್ಯಾರ್ಥಿಗಳಿಗಾಗಿ 35,219 ಕೋಟಿ ಹಣ ವೆಚ್ಚ ಮಾಡಲಾಗುವುದು ಎಂದು ಬಜೆಟ್ ಘೋಶಣೆ ಮಾಡಿದ್ದಾರೆ. ಇದು ಎಂತಹ ವಂಚನೆ, ಮರೆಮೋಸವೆಂದರೆ :
ಮೊದಲಿಗೆ ಇದು 1944ರಿಂದ ಜಾರಿಯಲ್ಲಿರುವ ಪ.ಜಾತಿ ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಯೋಜನೆ. ಇದರಲ್ಲಿ ಹೊಸದೇನೂ ಇಲ್ಲ.

ದೇಶದಾದ್ಯಂತ ಸುಮಾರು 57 ಲಕ್ಷ ಪ.ಜಾತಿ ವಿದ್ಯಾರ್ಥಿಗಳಿದ್ದಾರೆ ಎಂದು ಅಂದಾಜಿಸಿದರೆ ಒಬ್ಬ ವಿದ್ಯಾರ್ಥಿಗೆ ಪ್ರತಿ ವರ್ಶ 10,000 ರೂ, ಪ್ರತಿ ತಿಂಗಳು 858 ರೂ. ದೊರಕುತ್ತದೆ. ಈ ಕೇವಲ ಹಣದಿಂದ ಆ ವಿದ್ಯಾರ್ಥಿಗೆ ಯಾವ ಆರ್ಥಿಕ ಅನುಕೂಲವೂ ದೊರಕುವುದಿಲ್ಲ. ಮತ್ತು ಈ ಹಣವನ್ನು ಕೇಂದ್ರ ಮತ್ತು ರಾಜ್ಯಗಳು 60:40 ಅನುಪಾತದಲ್ಲಿ ಕೊಡಬೇಕು. ರಾಜ್ಯ ಎಂದಿಗೂ ಕೊಡುವುದಿಲ್ಲ, ಹಾಗಾಗಿ ಕೇಂದ್ರವೂ ಕೊಡುವುದಿಲ್ಲ.
ಇದು ದಲಿತರಿಗೆ ಮಾಡುವ ವಂಚನೆಯಲ್ಲವೇ?

1. ಶಿಕ್ಷಣವು ಸಂವಿದಾನದ ಶೆಡ್ಯೂಲ್ 7ರ (ಅನುಚ್ಚೇದ 246) ಸಮವರ್ತಿ ಪಟ್ಟಿ ( concurrent list) ಯಲ್ಲಿ ಬರುತ್ತದೆ. (ಎಂಟ್ರಿ 25)

2. ರಾಜ್ಯದ ಪಟ್ಟಿಯಲ್ಲಿನ
(list 2) ಎಂಟ್ರಿ 32ರ ಅನುಸಾರ
‘ಪಟ್ಟಿ 1 ( ಕೇಂದ್ರದ ಪಟ್ಟಿ) ಯಲ್ಲಿರುವ ಸಂಸ್ಥೆಗಳನ್ನು ಹೊರತುಪಡಿಸಿ ವಿಶ್ವವಿದ್ಯಾಯಗಳನ್ನು ಒಳಗೊಂಡಂತೆ ಮಿಕ್ಕ ಸಂಸ್ಥೆಗಳ ಸಂಯೋಜನೆ, ನಿಯಂತ್ರಣ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ’.

ಮೇಲಿನ ಎರಡೂ ಎಂಟ್ರಿಗಳ ಪ್ರಕಾರ ಶಿಕ್ಷಣವು ರಾಜ್ಯಕ್ಕೆ ಸಂಬಂದಪಟ್ಟ ವಿಶಯವಾಗಿದೆ.

ಆದರೆ 2021-22ರ ಕೇಂದ್ರ ಬಜೆಟ್ ನಲ್ಲಿ ನಾಲ್ಕು ವಿಬಿನ್ನ ಕೌನ್ಸಿಲ್ ಗಳನ್ನೊಳಗೊಂಡ ‘ಉನ್ನತ ಶಿಕ್ಷಣ ಆಯೋಗ’ ವನ್ನು ಸ್ಥಾಪಿಸುವುದಾಗಿ ಏಕಪಕ್ಷೀಯವಾಗಿ ಘೋಶಿಸುವುದು ಮೇಲೆ ಪ್ರಸ್ತಾಪಿಸಿದ ಸಂವಿದಾನದ ನೀತಿಸಂಹಿತೆಗೆ ವಿರುದ್ದವಾಗಿದೆ. ಶಿಕ್ಷಣದ ವಿಶಯದಲ್ಲಿ ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಬೇಕಿತ್ತು. ಆದರೆ ಕೇಂದ್ರ ಸರಕಾರವು ಇಲ್ಲಿ ಸಂವಿದಾನವನ್ನು ಉಲ್ಲಂಘಿಸಿದೆ.

2. ಬಜೆಟ್ ನಲ್ಲಿ 15,000 ಶಾಲೆಗಳನ್ನು ಸಂಪೂರ್ಣವಾಗಿ ಸದೃಡಗೊಳಿಸಲಾಗುವುದು ಎಂದು ಹೇಳಿದ್ದಾರೆ. ಸ್ವಾತಂತ್ರ್ಯ ಬಂದು 73 ವರ್ಶಗಳ ನಂತರವೂ ಕೇವಲ 15,000 ಶಾಲೆಗಳನ್ನು ಮಾತ್ರ ಬಲಪಡಿಸುವಲ್ಲಿಗೆ ಸರಕಾರವು ಸೀಮಿತಗೊಂಡಿರುವುದು ಎಂತಹ ದುರಂತದ ಸಂಗತಿ!!

3. ಸೇನೆಯಲ್ಲಿ ನೇಮಕಾತಿಗಾಗಿ 100 ಸೈನಿಕರ ಶಾಲೆಗಳನ್ನು ಆರಂಬಿಸುವುದಾಗಿ ಬಜೆಟ್ ನಲ್ಲಿ ಹೇಳಿದ್ದಾರೆ.ಬವಿಶ್ಯದ ತಲೆಮಾರು ಗಳನ್ನು ರೂಪಿಸುವ ನೆರೆಹೊರೆ ಶಾಲಾ ವ್ಯವಸ್ಥೆ, ಸಮಾನ ಶಿಕ್ಷಣದ ಕುರಿತು ಒಂದೂ ಮಾತನಾಡದೆ, ಕೇವಲ ಸೈನಿಕರನ್ನು ತಯಾರಿಸುವುದು ಸರಕಾರದ ಆದ್ಯತೆಯಾದರೆ ಆ ದೇಶ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ನಿಮ್ಮ ಊಹೆಗೆ ಬಿಡುತ್ತೇನೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಿಶ್ವ ಮೊಸಳೆಗಳ ದಿನ ; ಮೊಸಳೆ ಬಗ್ಗೆ ನಿಮಗಿಷ್ಟು ತಿಳಿದಿರಲಿ

Published

on

  • ಸಂಜಯ್ ಹೊಯ್ಸಳ

ಪ್ರತಿ ವರ್ಷದ ಜೂನ್ 17 ನ್ನು ವಿಶ್ವ ಮೊಸಳೆ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವದಲ್ಲಿ ಪ್ರಮುಖವಾಗಿ 24 ಜಾತಿಯ ಮೊಸಳೆಗಳಿದ್ದು, ಭಾರತದಲ್ಲಿ ಸದ್ಯಕ್ಕೆ 3 ಪ್ರಬೇಧದ ಮೊಸಳೆ ಸಂತತಿಗಳಿವೆ. ಅವುಗಳೆಂದರೆ..

ಉಪ್ಪು ನೀರಿನ ಮೊಸಳೆ (Saltwater crocodile) 
ಮಗ್ಗರ್/ಮಾರ್ಷ್ (Mugger)
ಘಾರಿಯಲ್ (Gharial)

ಇವುಗಳಲ್ಲಿ ಕರ್ನಾಟಕದಲ್ಲಿನ ನದಿಗಳಲ್ಲಿ, ಕೆಲವು ದೊಡ್ಡ ಕೆರೆಗಳಲ್ಲಿ ಕಂಡುಬರುವ ಮೊಸಳೆಗಳು ಮಗ್ಗರ್/ಮಾರ್ಷ್ ಮೊಸಳೆಗಳಾಗಿವೆ. ಕರ್ನಾಟಕದಲ್ಲಿ ಮೊಸಳೆಗಳು ಹೆಚ್ಚಾಗಿ ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿ ಪಾತ್ರದಲ್ಲಿ ಕಂಡುಬರುತ್ತವೆ. ಇತ್ತೀಚೆಗೆ ಮೊಸಳೆಯ ದವಣೆಗೆ ಸಿಲುಕಿ‌ ಕೆಲವು ಸಾವು ನೋವಿನ ಪ್ರಕರಣಗಳು ಆ ಭಾಗದಲ್ಲಿ ವರದಿಯಾಗಿವೆ‌.

ಇನ್ನು ಉತ್ತರ ಕರ್ನಾಟಕದ ಭಾಗದ ಕೆಲವು ಪ್ರಮುಖ ನದಿಗಳ ಪಾತ್ರದಲ್ಲೂ ಮೊಸಳೆಗಳು ಆಗಾಗ್ಗೆ ಕಂಡುಬರುತ್ತವೆ. ನಾನು ನೋಡಿದಂತೆ ಉತ್ತರ ಕರ್ನಾಟಕ ಭಾಗಕ್ಕೆ ಹೋಲಿಸಿದರೆ ದಕ್ಷಿಣ ಕರ್ನಾಟಕ ಭಾಗದಲ್ಲಿ ಮೊಸಳೆಗಳ ದಾಳಿ ಪ್ರಕರಣಗಳು ತುಂಬಾ ಕಡಿಮೆ ಎನ್ನಬಹುದು. ಈ‌ ಭಾಗದ ನದಿಗಳಲ್ಲಿ ಮೊಸಳೆಗಳ ಸಂಖ್ಯೆ ಕಡಿಮೆ ಇರುವುದು ಇದಕ್ಕೆ ಕಾರ ಇರಬಹುದು.

ಕಾವೇರಿ ನದಿಯಲ್ಲಿ ಅತಿಹೆಚ್ಚು ಮೊಸಳೆಗಳು‌ ಕಂಡು ಬರುವುದು ಮಂಡ್ಯದ ಶ್ರೀರಂಗಪಟ್ಟಣ ತಾಲ್ಲೂಕಿನ ವಿಶ್ವವಿಖ್ಯಾತ ಪಕ್ಷಿ ಧಾಮವಾದ ರಂಗನತಿಟ್ಟು ಪಕ್ಷಿಧಾಮದಲ್ಲಿ. ಹಿಂದೆ ಪಂಚತಂತ್ರದಲ್ಲಿ ಮೊಸಳೆ ಮತ್ತು ಕೋತಿ‌ಕತೆಯಲ್ಲಿ ಮೊಸಳೆಯ ಹೆಂಡತಿಗೆ ಕೋತಿ‌ ನೇರಳೆ ಹಣ್ಣುಗಳನ್ನು ಹೊತ್ತೊಯ್ಯುವ ಕತೆಯಲ್ಲಿ ಗಂಡ ಮತ್ತು‌ ಹೆಂಡತಿ‌ ಮೊಸಳೆಯನ್ನು ಕಲ್ಪಿಸಿಕೊಂಡು ಮಾತ್ರ ನಾನು ಮೊದಲು ಅವುಗಳ ಸಹಜ ಆವಾಸಸ್ಥಾನದಲ್ಲಿ ಮೊಸಳೆಯನ್ನು ನೋಡಿದ್ದು ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಹರಿಯುವ ಲಕ್ಷ್ಮಣತೀರ್ಥ ನದಿಯಲ್ಲಿ. ನಂತರ ಬಂಡೀಪುರ ದಟ್ಟಡವಿಯಲ್ಲಿ ಹರಿಯುವ ಮೂಲೆಹೊಳೆ/ ನುಗು ನದಿಯಲ್ಲಿ…‌ ನಂತರದ ದಿನಗಳಲ್ಲಿ ಕಬಿನಿ, ಪಾಲರ್ ಸೇರಿ ಬಹಳಷ್ಟು ಕಡೆ ಬಹಳಷ್ಟು ಮೊಸಳೆಗಳನ್ನು ನೋಡುವ ಅವಕಾಶ ಸಿಕ್ಕಿತು.

ಘಾರಿಯಲ್ ಗಳು ತುಂಬಾ ಅಪರೂಪದ ಮೊಸಳೆ ಸಂತತಿಗಳಾಗಿದ್ದು, ಸದ್ಯ ಉತ್ತರ ಭಾರತದ ಕೆಲವು ನದಿಗಳು ಹಾಗೂ ನೇಪಾಳದಲ್ಲಿ ಮಾತ್ರ ಇವು ಕಾಣಸಿಗುತ್ತಿವೆ. ಇವುಳನ್ನು IUCN red list ಗೆ ಸೇರಿಸಿದ್ದು, ಇವುಗಳ ಸಂರಕ್ಷಣೆಗೆ ವಿಶೇಷ ಗಮನ ನೀಡಲಾಗಿದೆ.

ನಮಗೆಲ್ಲಾ ಗೊತ್ತಿರುವಂತೆ ಜೀವವೈವಿಧ್ಯತೆಯ ರಕ್ಷಣೆಯಲ್ಲಿ ಎಲ್ಲಾ ಜೀವಿಗಳ‌ ಇರುವಿಕೆ ಬಹಳ ಮುಖ್ಯ. ಜಲಚರಗಳಲ್ಲಿ ಅಗ್ರ ಪರಪಕ್ಷಕಗಳಲ್ಲಿ ಒಂದೆನಿಸಿದ ಮೊಸಳೆ ಜಲಚರ ಜೀವಿಗಳ ಸಮತೋಲನ ಸಾಧಿಸಿ ಅಲ್ಲಿನ ಜೀವವೈವಿಧ್ಯ ಕಾಪಾಡುವಲ್ಲಿ ಇವು ಪ್ರಮುಖ ಪಾತ್ರ ವಹಿಸುತ್ತವೆ. ಹೀಗಾಗಿ ನಾವು ಮೊಸಳೆಗಳನ್ನು ಕೂಡ ಇತರ ಪ್ರಾಣಿಗಳಂತೆ ರಕ್ಷಿಸಬೇಕು.

ಮುಖ್ಯವಾಗಿ ಅವುಗಳ ಆವಾಸಸ್ಥಾನವಾದ ನದಿ, ಸರೋವರದಂತಹ ಜಲಮೂಲಗಳನ್ನು ಸಂರಕ್ಷಿಸಬೇಕು. ಅಲ್ಲಿ ಅಕ್ರಮ ಮರಳುಗಾರಿಗೆ ತಡೆದು, ಜಲಮಾಲಿನ್ಯ ನಿಯಂತ್ರಣ ಮಾಡಬೇಕು. ಹಾಗೆ ಪ್ಲಾಸ್ಟಿಕ್ ತ್ಯಾಜ್ಯಗಳು ನದಿ, ಸರೋವರಗಳನ್ನು ಸೇರದಂತೆ ಕ್ರಮವಹಿಸಬೇಕು. ಹಾಗೆಯೇ ಎಲ್ಲಾದರೂ ಮೊಸಳೆಗಳು ಕಂಡುಬಂದರೆ ಗಾಬರಿಯಾಗದೆ ತಕ್ಷಣ ಅರಣ್ಯ ಇಲಾಖೆಯ ಗಮನಕ್ಕೆ ತರಬೇಕು. (ಬರಹ:ಸಂಜಯ್ ಹೊಯ್ಸಳ,ಫೇಸ್ ಬುಕ್ ನಿಂದ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ

Published

on

ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ.

ಭಾರತೀಯ ದಂಡ ಸಂಹಿತೆ 1860, ಭಾರತೀಯ ಸಾಕ್ಷ್ಯ ಕಾಯ್ದೆ 1872 ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ 1973 ಅನ್ನು ಬದಲಿಸುವ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಅವರು ಹೇಳಿದ್ದಾರೆ. ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.

“ಐಪಿಸಿ, ಸಿಆರ್‌ಪಿಸಿ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳು ಬದಲಾಗುತ್ತಿವೆ. ಸೂಕ್ತ ಸಮಾಲೋಚನೆ ಪ್ರಕ್ರಿಯೆ ಅನುಸರಣೆ ಹಾಗೂ ಕಾನೂನು ಆಯೋಗದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಮೂರು ಕಾನೂನುಗಳನ್ನು ಬದಲಾಯಿಸಲಾಗಿದೆ” ಎಂದು ಮೇಘವಾಲ್ ತಿಳಿಸಿದರು.”

ಈ ಮೂರು ಕಾನೂನುಗಳನ್ನು ಜುಲೈ 1 ರಿಂದ ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೆಸರಿನಲ್ಲಿ ಜಾರಿಗೆ ತರಲಾಗುವುದು. ಮೂರು ಹೊಸ ಕಾನೂನುಗಳ ತರಬೇತಿ ಸೌಲಭ್ಯಗಳನ್ನು ಎಲ್ಲಾ ರಾಜ್ಯಗಳಿಗೂ ಒದಗಿಸಲಾಗುತ್ತಿದೆ” ಎಂದು ಮೇಘವಾಲ್ ವಿವರಿಸಿದ್ದಾರೆ.”

ನಮ್ಮ ನ್ಯಾಯಾಂಗ ಅಕಾಡೆಮಿಗಳು, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು ಸಹ ಈ ಬಗ್ಗೆ ತರಬೇತಿ ನೀಡುತ್ತಿವೆ. ಎಲ್ಲವೂ ಜೊತೆಜೊತೆಯಾಗಿ ಸಾಗುತ್ತಿದೆ ಮತ್ತು ಜುಲೈ 1 ರಿಂದ, ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ನಿರ್ಣಾಯಕವಾದ ಈ ಎಲ್ಲಾ ಮೂರು ಕಾನೂನುಗಳನ್ನು ದೇಶದಲ್ಲಿ ಜಾರಿಗೆ ತರಲಾಗುವುದು” ಎಂದು ಅವರು ಸ್ಪಷ್ಟಪಡಿಸಿದರು.

ದೇಶದಲ್ಲಿ ಅಪರಾಧ ನ್ಯಾಯ ಸುಧಾರಣೆಯು ದೇಶದ ನ್ಯಾಯದಾನ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಇದು ಸೂಚಿಸುತ್ತದೆ. ಮಹಿಳೆಯರು, ಮಕ್ಕಳು ಮತ್ತು ರಾಷ್ಟ್ರದ ವಿರುದ್ಧದ ಅಪರಾಧಗಳನ್ನು ಇದು ಮುಂಚೂಣಿಯಲ್ಲಿರಿಸುತ್ತದೆ. ಅಲ್ಲದೆ ಇದು ವಸಾಹತುಶಾಹಿ ಯುಗದ ಕಾನೂನುಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ವ್ಯಾಪಕ ಟೀಕೆ

Published

on

ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ.

ರಾಜ್ಯ ಸರ್ಕಾರ ಮೊನ್ನೆಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ ನಂತರ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡೀಸೆಲ್ 3.5 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 8 ಸಾವಿರದ 500 ರೂಪಾಯಿಗಳನ್ನು ವರ್ಗಾವಣೆ ಮಾಡುವ ಭರವಸೆಯನ್ನು ಈಡೇರಿಸುವ ಬದಲು, ಕಾಂಗ್ರೆಸ್ ಆಡಳಿತದ ಕರ್ನಾಟಕ ಸರ್ಕಾರವು, ರಾಜ್ಯದ ಜನರಿಗೆ ಹೊರೆಯಾಗಿದೆ ಎಂದು ಹರ್ದೀಪ್ ಸಿಂಗ್ ಪುರಿ ಸಾಮಾಜಿಕ ಜಾಲತಾಣದಲ್ಲಿ ದೂರಿದ್ದಾರೆ. ಇಂತಹ ನಿರ್ಧಾರ ಹಣದುಬ್ಬರದ ಬಗ್ಗೆ ಮಾತನಾಡುವ ಕಾಂಗ್ರೆಸ್‌ನ ಬೂಟಾಟಿಕೆ ಬಹಿರಂಗಪಡಿಸುತ್ತದೆ. ಆದರೆ ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರತಿ ಲೀಟರ್‌ಗೆ ಸುಮಾರು 8 ರೂಪಾಯಿಗಳಿಂದ 12 ರೂಪಾಯಿಗಳಷ್ಟು ಹೆಚ್ಚುವರಿ ವ್ಯಾಟ್ ಅನ್ನು ವಿಧಿಸುತ್ತಿದೆ ಎಂದು ಸಚಿವರು ಆರೋಪಿಸಿದ್ದಾರೆ.

ಈ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಈಗ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ಆರೋಪಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಬಸ್ ದರ, ಹಾಲಿನ ದರ, ಅಗತ್ಯ ವಸ್ತುಗಳ ದರ ಹೆಚ್ಚಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಆಡಳಿತದ ವ್ಯವಸ್ಥೆ ಕುಸಿದುಹೋಗಿದೆ ಎಂದು ದೂರಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಪ್ರಲ್ಹಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ, ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ವ್ಯಾಟ್ ಹೆಚ್ಚಳ ಬಳಿಕ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲಿಯೇ ದರ ಕಡಿಮೆ ಇದೆ. ಆರ್ಥಿಕವಾಗಿ ಬಲಿಷ್ಠವಾಗಿರುವ ಮಹಾರಾಷ್ಟ್ರಕ್ಕಿಂತಲ್ಲೂ ಹಾಗೂ ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತಲ್ಲೂ ನಮ್ಮ ರಾಜ್ಯದಲ್ಲಿ ದರ ಕಡಿಮೆ ಇದೆ ಎಂದು ಹೇಳಿದ್ದಾರೆ.

ಈ ಹಿಂದಿನ ಬಿಜೆಪಿ ಸರ್ಕಾರ ತೆರಿಗೆ ಕಡಿಮೆ ಮಾಡಿದ್ದರೂ, ಕೇಂದ್ರ ಸರ್ಕಾರ ಪದೇ ಪದೆ ವ್ಯಾಟ್ ಹೆಚ್ಚಳ ಮಾಡಿತ್ತು ಎಂದು ಆರೋಪಿಸಿದ್ದಾರೆ. ರಾಜ್ಯದ ತೆರಿಗೆ ಹೆಚ್ಚಳದಿಂದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending