ದಿನದ ಸುದ್ದಿ
2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ
ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.
ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.
ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್ಪಿಯನ್ನು ಕ್ವಿಂಟಲ್ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.
ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243