ದಿನದ ಸುದ್ದಿ
ಬುಲೆಟ್ ರೈಲು
ಸುದ್ದಿದಿನ ಡೆಸ್ಕ್: ಜಪಾನ್ ಸಹಯೋಗದಲ್ಲಿ ಕೈಗೆತ್ತಿಕೊಂಡಿರುವ ದೇಶದ ಮೊದಲ ಬುಲೆಟ್ ರೈಲು ಯೋಜನೆಗೆ ಸಂಬಂಧಿಸಿದಂತೆ ನ್ಯಾಷನಲ್ ಹೈಸ್ಪೀಡ್ ರೈಲ್ವೆ ಕಾರ್ಪೋರೇಷನ್ ಲಿಮಿಟೆಡ್ ಸಾಬರಮತಿ ಬಳಿ ರೈಲ್ವೆ ನಿಲ್ದಾಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿದೆ.
ಸಾಬರಮತಿ ಹಳೇ ನಿಲ್ದಾಣ ಮತ್ತು ಹೊಸ ನಿಲ್ದಾಣಗಳ ನಡುವೆ ಬುಲೆಟ್ ರೈಲು ನಿಲ್ದಾಣ ನಿರ್ಮಿಸಲಾಗುತ್ತಿದೆ.
ಒಟ್ಟು 1.1 ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಬುಲೆಟ್ ರೈಲು ಮಾರ್ಗ ಒಟ್ಟು 508 ಕಿ.ಮೀ. ಉದ್ದವಿದೆ. * ಕಾಮಗಾರಿ ಪೂರ್ಣಗೊಂಡ ನಂತರ ಸಾಬರಮತಿ- ಮುಂಬೈ ನಡುವಿನ ಸಂಚಾರ ಕೇವಲ 2 ಗಂಟೆಗೆ ಇಳಿಯಲಿದೆ.
ಬುಲೆಟ್ ರೈಲಿನ ಪ್ರಮುಖ ಮಾಹಿತಿಗಳು
2017ರ ಸೆಪ್ಟೆಂಬರ್ 14ರಂದು ಪ್ರಧಾನಿ ಮೋದಿ ಮತ್ತು ಜಪಾನ್ ಪ್ರಧಾನಿ ಶಿಂಜೋ ಅಬೆ ಅವರಿಂದ ಶಂಕುಸ್ಥಾಪನೆ.
2018ರ ಜೂನ್ನಿಂದ ಕಾಮಗಾರಿ ಆರಂಭಿಸುವ ಗುರಿ.
2022ರ ಆಗಸ್ಟ್ 15ರ (ಸ್ವಾತಂತ್ರ್ಯ ದಿನದ 75ನೇ ವಾರ್ಷಿಕೋತ್ಸವ ವೇಳೆಗೆ) ಕಾಮಗಾರಿ ಪೂರ್ಣಗೊಳಿ ಸುವಗುರಿ. ಈ ಮೊದಲು 2023ರೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿತ್ತು.
ಆರಂಭದಲ್ಲಿ ಒಂದು ಟೈನ್ನಲ್ಲಿ 750 ಪ್ರಯಾಣಿಕರು ಸಂಚರಿಸಬಹುದು. ನಂತರದಲ್ಲಿ ಪ್ರಯಾಣಿಕರ ಗರಿಷ್ಠ ಸಾಮರ್ಥ್ಯವನ್ನು 1250ಕ್ಕೆ ಹೆಚ್ಚಿಸಲಾಗುತ್ತದೆ.
ಪ್ರತಿ ಗಂಟೆಗೆ ಸರಾಸರಿ 320 ಕಿ.ಮೀ. ವೇಗದಲ್ಲಿ ಚಲನೆ. ಗರಿಷ್ಠ ವೇಗ ಗಂಟೆಗೆ 350 ಕಿ.ಮೀ. ಬುಲೆಟ್ ರೈಲು ಮಾರ್ಗ ಒಟ್ಟು 12 ನಿಲ್ದಾಣಗಳನ್ನು ಹೊಂದಿರಲಿದೆ.
ಸಾಬರಮತಿ- ಮುಂಬೈ ನಡುವೆ ಫಾಸ್ಟ್ ರೈಲಿನಲ್ಲಾದರೆ ಕೇವಲ 2 ಗಂಟೆ 7 – ನಿಮಿಷದಲ್ಲಿ ತಲುಪಬಹುದು.12 ನಿಲ್ದಾಣಗಳಲ್ಲಿ ನಿಲುಗಡೆ ಮಾಡಿ ಪ್ರಯಾಣಿಸಿದರೆ 2 ಗಂಟೆ 58 ನಿಮಿಷ ಬೇಕಾಗುತ್ತದೆ.
ಜಪಾನ್ ಸಹಕಾರ:
1.1 ಲಕ್ಷ ಕೋಟಿ ಮೌಲ್ಯದ ಈ ಬುಲೆಟ್ ಟೈನ್ ಯೋಜನೆಯನ್ನು ಭಾರತೀಯ ರೈಲ್ವೆ ಮತ್ತು ಜಪಾನಿನ ಶಿಂಕನ್ಸೆನ್ ಟೆಕ್ನಾಲಜಿಯ ಜಂಟಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲಾಗಿದೆ.
2023 ರೊಳಗೆ ಯೋಜನೆ ಮುಗಿಸಿಕೊಡುವುದಾಗಿ ಜಪಾನ್ ತಂಡ ತಿಳಿಸಿತ್ತು.
ಆದರೆ, 2022 ಆಗಸ್ಟ್ 15ಕ್ಕೆ ಭಾರತಕ್ಕೆ ಸ್ವಾತಂತ್ರ್ಯ ದೊರತೆ 75ನೇ ವರ್ಷದ ಸಂಭ್ರಮಾಚರಣೆ ಆಗಿರುವ ಕಾರಣ, ಆ ಅವಧಿಯೊಳಗೆ ಯೋಜನೆಯನ್ನು ಸಂಪೂರ್ಣ ಮುಕ್ತಾಯಗೊಳಿಸುವುದು ಪ್ರಧಾನಿ ಮೋದಿ ಇಂಗಿತವಾಗಿದೆ.
ಈ ಯೋಜನೆಗೆ ಜಪಾನ್ ಶೇ.81 ರಷ್ಟು ಹಣ ನೀಡಲಿದೆ.
ಸುಮಾರು 88,000 ಕೋಟಿ ರೂಪಾಯಿಯನ್ನು ಜಪಾನ್ ಸಾಲದ ರೂಪದಲ್ಲಿ ನೀಡಲಿದೆ.
ಇದಕ್ಕೆ ಕೇವಲ ಶೇ. 0.1ರಷ್ಟು ಮಾತ್ರ ಬಡ್ಡಿ ವಿಧಿಸಲಾಗುತ್ತದೆ.
ಈ ಸಾಲವನ್ನು ಮುಂದಿನ 50 ವರ್ಷಗಳೊಳಗೆ ಮರುಪಾವತಿಸಬೇಕು.
ಈ ಬುಲೆಟ್ ರೈಲು ಗುಜರಾತ್ ಮತ್ತು ಮಹಾರಾಷ್ಟ್ರ ನಡುವೆ ಓಡಾಡಲಿದ್ದು, ಪ್ರಸ್ತುತ ಈ ಅಂತರದ ಸಂಚಾರಕ್ಕೆ 8 ಗಂಟೆ ಬೇಕಿತ್ತು.
ಈ ಅವಧಿ ಬುಲೆಟ್ ಟೈನ್ ಮೂಲಕ ಕೇವಲ 2 ಗಂಟೆಗೆ ಇಳಿಯಲಿದೆ.
ಬುಲೆಟ್ ಟೈನ್ನಲ್ಲಿ ಪ್ರಯಾಣಿಸಲು ಟಿಕೆಟ್ ಬೆಲೆ 1500 ರೂ
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!