ದಿನದ ಸುದ್ದಿ
ಬುಲೆಟ್ ರೈಲು
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
Warning: Trying to access array offset on value of type bool in /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
&description=ಬುಲೆಟ್ ರೈಲು', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
Warning: Trying to access array offset on value of type bool in /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
&description=ಬುಲೆಟ್ ರೈಲು', 'pinterestShare', 'width=750,height=350'); return false;" title="Pin This Post">
ಸುದ್ದಿದಿನ ಡೆಸ್ಕ್: ಜಪಾನ್ ಸಹಯೋಗದಲ್ಲಿ ಕೈಗೆತ್ತಿಕೊಂಡಿರುವ ದೇಶದ ಮೊದಲ ಬುಲೆಟ್ ರೈಲು ಯೋಜನೆಗೆ ಸಂಬಂಧಿಸಿದಂತೆ ನ್ಯಾಷನಲ್ ಹೈಸ್ಪೀಡ್ ರೈಲ್ವೆ ಕಾರ್ಪೋರೇಷನ್ ಲಿಮಿಟೆಡ್ ಸಾಬರಮತಿ ಬಳಿ ರೈಲ್ವೆ ನಿಲ್ದಾಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿದೆ.
ಸಾಬರಮತಿ ಹಳೇ ನಿಲ್ದಾಣ ಮತ್ತು ಹೊಸ ನಿಲ್ದಾಣಗಳ ನಡುವೆ ಬುಲೆಟ್ ರೈಲು ನಿಲ್ದಾಣ ನಿರ್ಮಿಸಲಾಗುತ್ತಿದೆ.
ಒಟ್ಟು 1.1 ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಬುಲೆಟ್ ರೈಲು ಮಾರ್ಗ ಒಟ್ಟು 508 ಕಿ.ಮೀ. ಉದ್ದವಿದೆ. * ಕಾಮಗಾರಿ ಪೂರ್ಣಗೊಂಡ ನಂತರ ಸಾಬರಮತಿ- ಮುಂಬೈ ನಡುವಿನ ಸಂಚಾರ ಕೇವಲ 2 ಗಂಟೆಗೆ ಇಳಿಯಲಿದೆ.
ಬುಲೆಟ್ ರೈಲಿನ ಪ್ರಮುಖ ಮಾಹಿತಿಗಳು
2017ರ ಸೆಪ್ಟೆಂಬರ್ 14ರಂದು ಪ್ರಧಾನಿ ಮೋದಿ ಮತ್ತು ಜಪಾನ್ ಪ್ರಧಾನಿ ಶಿಂಜೋ ಅಬೆ ಅವರಿಂದ ಶಂಕುಸ್ಥಾಪನೆ.
2018ರ ಜೂನ್ನಿಂದ ಕಾಮಗಾರಿ ಆರಂಭಿಸುವ ಗುರಿ.
2022ರ ಆಗಸ್ಟ್ 15ರ (ಸ್ವಾತಂತ್ರ್ಯ ದಿನದ 75ನೇ ವಾರ್ಷಿಕೋತ್ಸವ ವೇಳೆಗೆ) ಕಾಮಗಾರಿ ಪೂರ್ಣಗೊಳಿ ಸುವಗುರಿ. ಈ ಮೊದಲು 2023ರೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿತ್ತು.
ಆರಂಭದಲ್ಲಿ ಒಂದು ಟೈನ್ನಲ್ಲಿ 750 ಪ್ರಯಾಣಿಕರು ಸಂಚರಿಸಬಹುದು. ನಂತರದಲ್ಲಿ ಪ್ರಯಾಣಿಕರ ಗರಿಷ್ಠ ಸಾಮರ್ಥ್ಯವನ್ನು 1250ಕ್ಕೆ ಹೆಚ್ಚಿಸಲಾಗುತ್ತದೆ.
ಪ್ರತಿ ಗಂಟೆಗೆ ಸರಾಸರಿ 320 ಕಿ.ಮೀ. ವೇಗದಲ್ಲಿ ಚಲನೆ. ಗರಿಷ್ಠ ವೇಗ ಗಂಟೆಗೆ 350 ಕಿ.ಮೀ. ಬುಲೆಟ್ ರೈಲು ಮಾರ್ಗ ಒಟ್ಟು 12 ನಿಲ್ದಾಣಗಳನ್ನು ಹೊಂದಿರಲಿದೆ.
ಸಾಬರಮತಿ- ಮುಂಬೈ ನಡುವೆ ಫಾಸ್ಟ್ ರೈಲಿನಲ್ಲಾದರೆ ಕೇವಲ 2 ಗಂಟೆ 7 – ನಿಮಿಷದಲ್ಲಿ ತಲುಪಬಹುದು.12 ನಿಲ್ದಾಣಗಳಲ್ಲಿ ನಿಲುಗಡೆ ಮಾಡಿ ಪ್ರಯಾಣಿಸಿದರೆ 2 ಗಂಟೆ 58 ನಿಮಿಷ ಬೇಕಾಗುತ್ತದೆ.
ಜಪಾನ್ ಸಹಕಾರ:
1.1 ಲಕ್ಷ ಕೋಟಿ ಮೌಲ್ಯದ ಈ ಬುಲೆಟ್ ಟೈನ್ ಯೋಜನೆಯನ್ನು ಭಾರತೀಯ ರೈಲ್ವೆ ಮತ್ತು ಜಪಾನಿನ ಶಿಂಕನ್ಸೆನ್ ಟೆಕ್ನಾಲಜಿಯ ಜಂಟಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲಾಗಿದೆ.
2023 ರೊಳಗೆ ಯೋಜನೆ ಮುಗಿಸಿಕೊಡುವುದಾಗಿ ಜಪಾನ್ ತಂಡ ತಿಳಿಸಿತ್ತು.
ಆದರೆ, 2022 ಆಗಸ್ಟ್ 15ಕ್ಕೆ ಭಾರತಕ್ಕೆ ಸ್ವಾತಂತ್ರ್ಯ ದೊರತೆ 75ನೇ ವರ್ಷದ ಸಂಭ್ರಮಾಚರಣೆ ಆಗಿರುವ ಕಾರಣ, ಆ ಅವಧಿಯೊಳಗೆ ಯೋಜನೆಯನ್ನು ಸಂಪೂರ್ಣ ಮುಕ್ತಾಯಗೊಳಿಸುವುದು ಪ್ರಧಾನಿ ಮೋದಿ ಇಂಗಿತವಾಗಿದೆ.
ಈ ಯೋಜನೆಗೆ ಜಪಾನ್ ಶೇ.81 ರಷ್ಟು ಹಣ ನೀಡಲಿದೆ.
ಸುಮಾರು 88,000 ಕೋಟಿ ರೂಪಾಯಿಯನ್ನು ಜಪಾನ್ ಸಾಲದ ರೂಪದಲ್ಲಿ ನೀಡಲಿದೆ.
ಇದಕ್ಕೆ ಕೇವಲ ಶೇ. 0.1ರಷ್ಟು ಮಾತ್ರ ಬಡ್ಡಿ ವಿಧಿಸಲಾಗುತ್ತದೆ.
ಈ ಸಾಲವನ್ನು ಮುಂದಿನ 50 ವರ್ಷಗಳೊಳಗೆ ಮರುಪಾವತಿಸಬೇಕು.
ಈ ಬುಲೆಟ್ ರೈಲು ಗುಜರಾತ್ ಮತ್ತು ಮಹಾರಾಷ್ಟ್ರ ನಡುವೆ ಓಡಾಡಲಿದ್ದು, ಪ್ರಸ್ತುತ ಈ ಅಂತರದ ಸಂಚಾರಕ್ಕೆ 8 ಗಂಟೆ ಬೇಕಿತ್ತು.
ಈ ಅವಧಿ ಬುಲೆಟ್ ಟೈನ್ ಮೂಲಕ ಕೇವಲ 2 ಗಂಟೆಗೆ ಇಳಿಯಲಿದೆ.
ಬುಲೆಟ್ ಟೈನ್ನಲ್ಲಿ ಪ್ರಯಾಣಿಸಲು ಟಿಕೆಟ್ ಬೆಲೆ 1500 ರೂ

ದಿನದ ಸುದ್ದಿ
ಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್
ಸುದ್ದಿದಿನ,ದಾವಣಗೆರೆ: 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಣಿವೆಬಿಳಚಿ ಗ್ರಾಮದ ವಿದ್ಯಾರ್ಥಿ ಭರತ್ ಜಿ. ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
625ಕ್ಕೆ 625 ಅಂಕಗಳನ್ನು ಪಡೆದ ಭರತ್ ಅವರು ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ವಿದ್ಯಾರ್ಥಿ. ರಾಜ್ಯದ ಇತರ ಐದು ವಿದ್ಯಾರ್ಥಿಗಳೊಂದಿಗೆ ಅಗ್ರಸ್ಥಾನವನ್ನು ಭರತ್ ಅವರು ಹಂಚಿಕೊಂಡಿದ್ದಾರೆ. ಭರತ್ ಅವರ ತಂದೆ ಗಿರೀಶ್ ಕೃಷಿ ಹಾಗೂ ಗುತ್ತಿಗೆ ದಾರರು, ತಾಯಿ ಶಿಲ್ಪ ಗೃಹಿಣಿ.
ಗ್ರಾಮೀಣ ಭಾಗದಿಂದ ಬಂದ ಭರತ್ ರಾಜ್ಯಕ್ಕೆ ಟಾಪರ್ ಆಗಿ ದೊಡ್ಡ ಸಾಧನೆ ಮಾಡಿದ್ದಾರೆ.ನಮ್ಮ ಶಾಲೆಯು ಎರಡು ಬಾರಿ ಜಿಲ್ಲೆಗೆ ಹಾಗೂ ಎರಡು ಬಾರಿ ತಾಲ್ಲೂಕಿಗೆ ಟಾಪರ್ ಆಗಿತ್ತು. ಇದೀಗ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಾಲೆಯು ನಿರಂತರವಾಗಿ ಸಾಧನೆ ಮಾಡುತ್ತಿದ್ದು ಈ ಬಾರಿಯೂ ಶೇ 100ರಷ್ಟು ಫಲಿತಾಂಶ ನೀಡಿದೆ ಎಂದು ಮುಖ್ಯ ಶಿಕ್ಷಕಿ ಲಕ್ಷ್ಮೀದೇವಿ ಎ.ಎನ್ ಹರ್ಷ ವ್ಯಕ್ತಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ
ಸುದ್ದಿದಿನ,ಬೆಂಗಳೂರು : ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 23) ಮಧ್ಯಾಹ್ನ 12ಕ್ಕೆ ಪ್ರಕಟಿಸಲಾಗುತ್ತದೆ.
ಫಲಿತಾಂಶವನ್ನು ವೆಬ್ಸೈಟ್ (https://karresults.nic.in) ಲಿಂಕ್ ಮೂಲಕ ಹಾಗೂ KarnatakaOne mobile app ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ಗೆ ವಾಟ್ಸ್ಆ್ಯಪ್/ ಎಸ್ಎಂಎಸ್ ಮೂಲಕ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುತ್ತದೆ.
ಈ ವರ್ಷ ಪ್ರಥಮ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್ (https://www.digilocker.gov.in) ಮೂಲಕ ಲಭ್ಯಗೊಳಿಸಲಾಗುತ್ತದೆ. ಈ ಮೂಲಕವೂ ಡೌನ್ಲೋಡ್ ಮಾಡಿಕೊಳ್ಳಬಹುದು. ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಶಾಲೆಗಳಿಗೆ ಮಧ್ಯಾಹ್ನ 12 ಗಂಟೆಗೆ ಲಭ್ಯಗೊಳಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಮ್ಮ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಆದರೆ ತಮ್ಮ ಶ್ರೇಣಿಗಳ ಬಗ್ಗೆ ಅತೃಪ್ತರಾಗಿರುವ ವಿದ್ಯಾರ್ಥಿಗಳು ಮಂಡಳಿಯು ಏರ್ಪಡಿಸಿದ ಕರ್ನಾಟಕ SSLC ಸುಧಾರಣಾ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಹೊಂದಿರುತ್ತಾರೆ. ಇದು ನಿರ್ದಿಷ್ಟ ವಿಷಯಗಳಲ್ಲಿ ಅಂಕಗಳನ್ನು ಸುಧಾರಿಸಲು ಅವಕಾಶವನ್ನು ನೀಡುತ್ತದೆ.
ಒಂದು ಅಥವಾ ಹೆಚ್ಚಿನ ವಿಷಯಗಳಲ್ಲಿ ಒಬ್ಬ ವಿದ್ಯಾರ್ಥಿ ಅನುತ್ತೀರ್ಣನಾದರೆ, ಅವರು ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳದೆ ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ
ಸುದ್ದಿದಿನ,ದಾವಣಗೆರೆ: ಉತ್ತಮ ಗುಣಮಟ್ಟದ ಜಿ-9 ತಳಿಯ ಅಂಗಾಂಶ ಕೃಷಿ ಬಾಳೆಗಳನ್ನು ಕೃಷಿ ಇಲಾಖೆ ಮಾರಾಟ ಮಾಡಲಾಗುತ್ತಿದೆ.
ಆಸಕ್ತ ರೈತರು ಸಹಾಯಕ ತೋಟಗಾರಿಕಾ ಅಧಿಕಾರಿ, ಅಂಗಾಂಶ ಕೃಷಿ ಬಾಳೆ, ಜೈವಿಕ ಕೇಂದ್ರ, ಎಪಿಎಂಸಿ ಈ ಬ್ಲಾಕ್, ಹಣ್ಣಿನ ಮಾರುಕಟ್ಟೆ ಹತ್ತಿರ ಮೊ.ಸಂ:6360950904, 8192296196 ಸಂಪರ್ಕಿಸಿ ಇಲಾಖೆ ದರದಲ್ಲಿ ಬಾಳೆಸಸಿಗಳನ್ನು ಕೊಂಡುಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
-
ದಿನದ ಸುದ್ದಿ5 days agoಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
-
ದಿನದ ಸುದ್ದಿ2 days agoಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ22 hours agoಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ
-
ದಿನದ ಸುದ್ದಿ21 hours agoನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ
-
ದಿನದ ಸುದ್ದಿ2 hours agoಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್

