ದಿನದ ಸುದ್ದಿ
ವ್ಯಕ್ತಿಗೆ ಡಿಕ್ಕಿ ಹೊಡೆದು ಮನೆಗೆ ನುಗ್ಗಿದ ಬಸ್: ವಾಟರ್ಮ್ಯಾನ್ ಸಾವು
ಸುದ್ದಿದಿನ ಮಂಡ್ಯ: ಕರ್ತವ್ಯ ನಿರ್ವಹಿಸಲು ಹೋಗುತ್ತಿದ್ದ ವಾಟರ್ ಮ್ಯಾನ್ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದು ವಾಟರ್ ಮ್ಯಾನ್ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಮಳವಳ್ಳಿ ಪಟ್ಟಣದ ಮಳವಳ್ಳಿ-ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದೆ. ಮಾದೇಶ್ (48) ಮೃತ ಪಟ್ಟ ದುದೈವಿ. ಸರ್ವಮಂಗಳ, ನಾಗರತ್ನ, ಶೃತಿ, ಮಹದೇವಮ್ಮ ಗಾಯಗೊಂಡವರು. ವಾಟರ್ ಮ್ಯಾನ್ಗೆ ಡಿಕ್ಕಿ ಹೊಡೆದ ಸಾರಿಗೆ ಬಸ್, ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಬಳಿಕ ರಸ್ತೆ ಪಕ್ಕದಲ್ಲಿರುವ ಮನೆಯ ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮನೆಯಲ್ಲಿ ಮಲಗಿದ್ದ ಸರ್ವಮಂಗಳ ಹಾಗೂ ನಾಗರತ್ನ ಎಂಬವರಿಗೆ ಗಂಭೀರ ಗಾಯಗಳಾಗಿವೆ.
ಇನ್ನು ಬಸ್ನಲ್ಲಿದ್ದ ಮಹದೇವಮ್ಮ, ಶೃತಿ ಎಂಬುವರಿಗೂ ಗಂಭೀರ ಗಾಯಗಳಾಗಿದ್ದು, ಮಳವಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಳವಳ್ಳಿ
ಪಟ್ಟಣದ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.