Connect with us

ದಿನದ ಸುದ್ದಿ

ಉತ್ತರಾಖಂಡ್ ನಲ್ಲಿ ಭೀಕರ ಬಸ್ ಅಪಘಾತ; 26 ಯಾತ್ರಾರ್ಥಿಗಳು ಸಾವು; ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ

Published

on

ಸುದ್ದಿದಿನ ಡೆಸ್ಕ್ : ಉತ್ತರಾಖಂಡದಲ್ಲಿ ಸಂಭವಿಸಿದ ಬಸ್ ಅಪಘಾತ ನೋವಿನ ಸಂಗತಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ಸಂತಾಪ ಸೂಚಿಸಿದ್ದಾರೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ, ಸ್ಥಳೀಯ ಆಡಳಿತವು ಸ್ಥಳದಲ್ಲೇ ಸಾಧ್ಯವಿರುವ ಎಲ್ಲಾ ಸಹಾಯವನ್ನು ಒದಗಿಸುವಲ್ಲಿ ತೊಡಗಿದೆ ಎಂದು ಅವರು ಹೇಳಿದ್ದಾರೆ.

ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ಪಿ.ಎಂ.ಎನ್.ಆರ್.ಎಫ್.ನಿಂದ ತಲಾ ಎರಡು ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿಗಳ ಪರಿಹಾರವನ್ನು ಪ್ರಧಾನಿ ಘೋಷಿಸಿದ್ದಾರೆ.

ಏತನ್ಮಧ್ಯೆ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ಮಾತನಾಡಿದ್ದಾರೆ. ಸ್ಥಳೀಯ ಆಡಳಿತ ಮತ್ತು ಎಸ್ ಡಿಆರ್ ಎಫ್ ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ ಮತ್ತು ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ ಎಂದು ಶಾ ಟ್ವೀಟ್ ಮಾಡಿದ್ದಾರೆ.

ಯಮುನೋತ್ರಿಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಕಳೆದ ಸಂಜೆ ದಮ್ಟಾ ಎಂಬಲ್ಲಿ ಉರುಳಿಬಿದ್ದಿ ಪರಿಣಾಮ ಕನಿಷ್ಠ 26 ಯಾತ್ರಾರ್ಥಿಗಳು ಮೃತಪಟ್ಟಿದ್ದು, ಇತರರು ಗಾಯಗೊಂಡಿದ್ದಾರೆ.

ಮಧ್ಯಪ್ರದೇಶದ ಪನ್ನಾ ಜಿಲ್ಲೆಯಿಂದ ಕನಿಷ್ಠ 32 ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್, ದಮ್ಟಾ ಮತ್ತು ಬರ್ನಿಗಡ್ ನಡುವಿನ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿ ಬಿದ್ದಿದೆ. ಮುಖ್ಯಮಂತ್ರಿ ಪುಷ್ಕರ್ ಧಾಮಿ ಅವರು ಅಪಘಾತದ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

ಮಾಹಿತಿ ಬಂದ ತಕ್ಷಣ, ತ್ವರಿತ ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಅಧಿಕೃತ ಮೂಲಗಳ ಪ್ರಕಾರ, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಧಾಮಿ ಇಂದು ದಮಾತಾಗೆ ಧಾವಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending