Connect with us

ದಿನದ ಸುದ್ದಿ

ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲ್ಲರ್ಸ್‌ | ದಾವಣಗೆರೆಯಲ್ಲಿ ಅಪರೂಪದ ವಿನ್ಯಾಸದ ಆಭರಣಗಳ ಪ್ರದರ್ಶನ- ಮೇಳಕ್ಕೆ ಚಾಲನೆ ನೀಡಿದ ರೇಖಾ ಎಸ್ ಎಸ್ ಗಣೇಶ್

Published

on

ಸುದ್ದಿದಿನ,ದಾವಣಗೆರೆ: ನಗರದ ಸದರನ್ ಸ್ಟಾರ್‌ನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲ್ಲರ್ಸ್ ನ ಚಿನ್ನಾಭರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಶ್ರೀಮತಿ ರೇಖಾ ಎಸ್. ಎಸ್ ಗಣೇಶ್ ಅವರು ಟೇಪು ಕತ್ತರಿಸುವುದರ ಮೂಲಕ ಉದ್ಘಾಟಿಸಿದರು.

ಚಿನ್ನಾಭರಣಗಳ ಮಾರಾಟ ಮೇಳಕ್ಕೆ ಎಸ್.ಎಸ್. ಗಣೇಶ್ ಅವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.

ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲ್ಲರ್ಸ್ ನ ವಿಶೇಷತೆ

150 ವರ್ಷಗಳ ಇತಿಹಾಸವಿರುವ ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲ್ಲರ್ಸ್, ಕಲ್ಪನೆ ಹಾಗೂ ಸೃಜನಶೀಲತೆಯನ್ನು ಒಟ್ಟುಗೂಡಿಸಿರುವ ವ್ಯಕ್ತಿತ್ವ, ಸಲಹೆಗಳು ಮತ್ತು ಬೆರಗುಗೊಳಿಸುವ ಆಭರಣಗಳನ್ನು ತಯಾರಿಸಿದೆ.

ಕಾಸುಮಾಲಾ ಸಂಗ್ರಹಣೆ ಕಾಸುಮಾಲ ಎಂಬುದು ದಕ್ಷಿಣ ಭಾರತದ ರಾಜ್ಯಗಳಲ್ಲಿ ಬೇಡಿಕೆಯಿರುವ ಸಾಂಪ್ರದಾಯಿಕ ಉದ್ಧದ ನೆಕ್ಲೆಸ್ ಆಗಿದೆ. ಇದರಲ್ಲಿರುವ ಸಣ್ಣ ನಾಣ್ಯಗಳು ನೆಕ್ಲೇಸ್‌ಗೆ ಒಂದು ಹೊಸ ಮೆರುಗು ನೀಡುತ್ತದೆ. ‘ಕಾಸು’ ಎಂದರೆ ನಾಣ್ಯ ಮತ್ತು ‘ಮಾಲಾ’ ಎಂದರೆ ನೆಕ್ಲೇಸ್.

ಸಮಕಾಲೀನ ದೇವಾಲಯದ ವಿನ್ಯಾಸದ ಆಭರಣಗಳ ಜೊತೆಗೆ ಸಾಂಪ್ರದಾಯಿಕ ದೇವತೆಯಾದ ಲಕ್ಷ್ಮಿ ಕಾಸು ನೆಕ್ಲೇಸ್ ನಿಮ್ಮನ್ನು ಇತರರರಿಗಿಂತ ಭಿನ್ನವಾಗಿಸುತ್ತದೆ. ಈ ನೆಕ್ಲೇಸ್‌ಗಳನ್ನು ಪ್ರಕೃತಿ ಅಥವಾ ದೇವಾಲಯದ ಕಲೆಯಿಂದ ಸ್ಫೂರ್ತಿ ಪಡೆದು ಅದೇ ಪರಿಕಲ್ಪನೆಯೊಂದಿಗೆ ವಿನ್ಯಾಸಗೊಳಿಸಲಾಗಿದೆ. ಉತ್ತಮವಾದ ವಜ್ರಗಳು ಮತ್ತು ಅಮೂಲ್ಯ ರತ್ನಗಳ ಸೇರ್ಪಡೆಯೊಂದಿಗೆ – ಮಾಣಿಕ್ಯ ಮತ್ತು ಪಚ್ಚೆ ಅದರ ಶ್ರೀಮಂತಿಕೆಯನ್ನು ಹೆಚ್ಚಿಸುತ್ತದೆ. ಜೊತೆಗೆ ನಾವು ಅತ್ಯುದ್ಭುತವಾದವಿಫ್ ಆಫ್ ದಿ ಎಕ್ಸೋಟಿಕ್ ಅನ್ನು ಪ್ರದರ್ಶಿಸಲಾಗುತ್ತಿದೆ.

ನಾವು ಭಾರತದ ಏಕೈಕ ಪ್ರೀಮಿಯಮ್, ಐಷರಾಮಿ ಪರ್ಫ್ಯೂಮ್ ರೇರ್ ಸೆಂಟ್ಸ್ ಅನ್ನು ಬಿಡುಗಡೆಗೊಳಿಸಿದ್ದೇವೆ.
ಭಾರತೀಯ ಪರ್ಫ್ಯೂಮ್ ಮಾರುಕಟ್ಟೆ ಹೊಸ, ವಿಭಿನ್ನ ಬ್ರ್ಯಾಂಡ್ ಒಂದು ಎಂಟ್ರಿ ನೀಡುತ್ತಿದೆ. ಅದೇ ‘ರೇರ್ ಸೆಂಟ್ಸ್’. ಇದು ಭಾರತದ ಏಕೈಕ ಪ್ರೀಮಿಯಂ ಹಾಗೂ ಐಷಾರಾಮಿ ಸುಗಂಧ ಬ್ರ್ಯಾಂಡ್ ಆಗಿದ್ದು, ಸಿ.ಕೃಷ್ಣಯ್ಯ ಚೆಟ್ಟಿ ಅವರು 150 ವರ್ಷಗಳ ಹಿಂದೆ ಆರಂಭಿಸಿದ ಪುರಾತನ ಐಷಾರಾಮಿ ಆಭರಣ ಬ್ರ್ಯಾಂಡ್ ಆಗಿದೆ.

24 ಕ್ಯಾರೆಟ್ ಚಿನ್ನ ಹೊಂದಿರುವ ರೇರ್ ಸೆಂಟ್ಸ್ 5 ಆಕರ್ಷಕ ರೂಪಗಳಲ್ಲಿ ಲಭ್ಯವಿದೆ- ಆಡಮಸ್, ಔರಮ್, ಬೆರಿಲ್, ಕೊರಂಡಮ್ ಮತ್ತು ಪ್ಲಾಟಿನಂ. ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲ್ಲರ್ಸ್ ನಿಮ್ಮನ್ನು ದಾವಣಗೆರೆಯಲ್ಲಿ ನಡೆಯುತ್ತಿರುವ ಶುದ್ಧ ಚಿನ್ನ ಮತ್ತು ವಜ್ರದ ಆಭರಣ ಮತ್ತು ಬೆಳ್ಳಿಯ ಪ್ರದರ್ಶನ ಮತ್ತು ಮಾರಾಟಕ್ಕೆ ಆಹ್ವಾನಿಸುತ್ತಿದೆ.

ಇದು ನಮ್ಮ ಸಾಂಪ್ರದಾಯಿಕ ಮತ್ತು ಸಮಕಾಲೀನ ಸಂಗ್ರಹದಿಂದ ವಿಶೇಷ ಆಭರಣಗಳನ್ನು ಸಾರ್ವಜನಿಕರಿಗೆ ಪ್ರದರ್ಶಿಸುವ ಮತ್ತು ಮಾರಾಟ ಮೇಳವಾಗಿದೆ.
ಚಿನ್ನ, ವಜ್ರ ಮತ್ತು ಬೆಳ್ಳಿ ಮಾರಾಟ ದರಗಳೊಂದಿಗೆ ಹೆಚ್ಚುವರಿ ಪ್ರಯೋಜನವನ್ನು ಪಡೆಯಬಹುದು.

1869ರೂ.ಗಳಿಗೆ ಆಡಂಬರ ಮತ್ತು ಸಂಭ್ರಮದಿಂದ ಆಚರಣೆ

ಚಿನ್ನ, ಬೆಳ್ಳಿ ಮತ್ತು ವಜ್ರದ ದರಗಳು ಕೇವಲ ರೂ.1869ರಿಂದ ಪ್ರಾರಂಭವಾಗುತ್ತವೆ – ನಾವು ಮತ್ತೊಮ್ಮೆ ಇತಿಹಾಸವನ್ನು ನಿರ್ಮಿಸುತ್ತಿದ್ದೇವೆ. ಈ ಕೊಡುಗೆ 29.4.2022 ರಂದು ಆರಂಭಗೊಂಡು01.05.2022 ರಂದು ಅಂತ್ಯಗೊಳ್ಳುತ್ತದೆ.

ದರಗಳಲ್ಲಿ ಹೀಗೆ ಲೆಕ್ಕಾಚಾರ ಮಾಡಲಾಗುತ್ತದೆ

ಚಿನ್ನ- ಪ್ರತಿ ಗ್ರಾಂಗೆ 1869ರೂ.ಗಳಿಂದ ಪ್ರಾರಂಭ
ವಜ್ರ- ಪ್ರತಿ ಕ್ಯಾರಟೆಗೆ1869 ರೂ.ಗಳಿಂದ ಪ್ರಾರಂಭ
ಮತ್ತು ಬೆಳ್ಳಿ ಪ್ರತಿ ಗ್ರಾಂಗೆ 18.69 ರೂ.ಗಳಿಂದ ಪ್ರಾರಂಭ
ಷರತ್ತು ಮತ್ತು ನಿಯಮಗಳು ಅನ್ವಯ.

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ :
ಶ್ರೀ ಶ್ರೀಹರಿ +91 99809 50819
ಶ್ರೀ ಸಂತೋಷ್ + 91 96861 01869

ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲ್ಲರ್ಸ್‌ ಬಗ್ಗೆ    ಎಸ್.ಎಸ್.ಗಣೇಶ್ ಮಾತು

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.

ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.

ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.

ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending