ದಿನದ ಸುದ್ದಿ
ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲ್ಲರ್ಸ್ | ದಾವಣಗೆರೆಯಲ್ಲಿ ಅಪರೂಪದ ವಿನ್ಯಾಸದ ಆಭರಣಗಳ ಪ್ರದರ್ಶನ- ಮೇಳಕ್ಕೆ ಚಾಲನೆ ನೀಡಿದ ರೇಖಾ ಎಸ್ ಎಸ್ ಗಣೇಶ್
ಸುದ್ದಿದಿನ,ದಾವಣಗೆರೆ: ನಗರದ ಸದರನ್ ಸ್ಟಾರ್ನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲ್ಲರ್ಸ್ ನ ಚಿನ್ನಾಭರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಶ್ರೀಮತಿ ರೇಖಾ ಎಸ್. ಎಸ್ ಗಣೇಶ್ ಅವರು ಟೇಪು ಕತ್ತರಿಸುವುದರ ಮೂಲಕ ಉದ್ಘಾಟಿಸಿದರು.
ಚಿನ್ನಾಭರಣಗಳ ಮಾರಾಟ ಮೇಳಕ್ಕೆ ಎಸ್.ಎಸ್. ಗಣೇಶ್ ಅವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.
ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲ್ಲರ್ಸ್ ನ ವಿಶೇಷತೆ
150 ವರ್ಷಗಳ ಇತಿಹಾಸವಿರುವ ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲ್ಲರ್ಸ್, ಕಲ್ಪನೆ ಹಾಗೂ ಸೃಜನಶೀಲತೆಯನ್ನು ಒಟ್ಟುಗೂಡಿಸಿರುವ ವ್ಯಕ್ತಿತ್ವ, ಸಲಹೆಗಳು ಮತ್ತು ಬೆರಗುಗೊಳಿಸುವ ಆಭರಣಗಳನ್ನು ತಯಾರಿಸಿದೆ.
ಕಾಸುಮಾಲಾ ಸಂಗ್ರಹಣೆ ಕಾಸುಮಾಲ ಎಂಬುದು ದಕ್ಷಿಣ ಭಾರತದ ರಾಜ್ಯಗಳಲ್ಲಿ ಬೇಡಿಕೆಯಿರುವ ಸಾಂಪ್ರದಾಯಿಕ ಉದ್ಧದ ನೆಕ್ಲೆಸ್ ಆಗಿದೆ. ಇದರಲ್ಲಿರುವ ಸಣ್ಣ ನಾಣ್ಯಗಳು ನೆಕ್ಲೇಸ್ಗೆ ಒಂದು ಹೊಸ ಮೆರುಗು ನೀಡುತ್ತದೆ. ‘ಕಾಸು’ ಎಂದರೆ ನಾಣ್ಯ ಮತ್ತು ‘ಮಾಲಾ’ ಎಂದರೆ ನೆಕ್ಲೇಸ್.
ಸಮಕಾಲೀನ ದೇವಾಲಯದ ವಿನ್ಯಾಸದ ಆಭರಣಗಳ ಜೊತೆಗೆ ಸಾಂಪ್ರದಾಯಿಕ ದೇವತೆಯಾದ ಲಕ್ಷ್ಮಿ ಕಾಸು ನೆಕ್ಲೇಸ್ ನಿಮ್ಮನ್ನು ಇತರರರಿಗಿಂತ ಭಿನ್ನವಾಗಿಸುತ್ತದೆ. ಈ ನೆಕ್ಲೇಸ್ಗಳನ್ನು ಪ್ರಕೃತಿ ಅಥವಾ ದೇವಾಲಯದ ಕಲೆಯಿಂದ ಸ್ಫೂರ್ತಿ ಪಡೆದು ಅದೇ ಪರಿಕಲ್ಪನೆಯೊಂದಿಗೆ ವಿನ್ಯಾಸಗೊಳಿಸಲಾಗಿದೆ. ಉತ್ತಮವಾದ ವಜ್ರಗಳು ಮತ್ತು ಅಮೂಲ್ಯ ರತ್ನಗಳ ಸೇರ್ಪಡೆಯೊಂದಿಗೆ – ಮಾಣಿಕ್ಯ ಮತ್ತು ಪಚ್ಚೆ ಅದರ ಶ್ರೀಮಂತಿಕೆಯನ್ನು ಹೆಚ್ಚಿಸುತ್ತದೆ. ಜೊತೆಗೆ ನಾವು ಅತ್ಯುದ್ಭುತವಾದವಿಫ್ ಆಫ್ ದಿ ಎಕ್ಸೋಟಿಕ್ ಅನ್ನು ಪ್ರದರ್ಶಿಸಲಾಗುತ್ತಿದೆ.
ನಾವು ಭಾರತದ ಏಕೈಕ ಪ್ರೀಮಿಯಮ್, ಐಷರಾಮಿ ಪರ್ಫ್ಯೂಮ್ ರೇರ್ ಸೆಂಟ್ಸ್ ಅನ್ನು ಬಿಡುಗಡೆಗೊಳಿಸಿದ್ದೇವೆ.
ಭಾರತೀಯ ಪರ್ಫ್ಯೂಮ್ ಮಾರುಕಟ್ಟೆ ಹೊಸ, ವಿಭಿನ್ನ ಬ್ರ್ಯಾಂಡ್ ಒಂದು ಎಂಟ್ರಿ ನೀಡುತ್ತಿದೆ. ಅದೇ ‘ರೇರ್ ಸೆಂಟ್ಸ್’. ಇದು ಭಾರತದ ಏಕೈಕ ಪ್ರೀಮಿಯಂ ಹಾಗೂ ಐಷಾರಾಮಿ ಸುಗಂಧ ಬ್ರ್ಯಾಂಡ್ ಆಗಿದ್ದು, ಸಿ.ಕೃಷ್ಣಯ್ಯ ಚೆಟ್ಟಿ ಅವರು 150 ವರ್ಷಗಳ ಹಿಂದೆ ಆರಂಭಿಸಿದ ಪುರಾತನ ಐಷಾರಾಮಿ ಆಭರಣ ಬ್ರ್ಯಾಂಡ್ ಆಗಿದೆ.
24 ಕ್ಯಾರೆಟ್ ಚಿನ್ನ ಹೊಂದಿರುವ ರೇರ್ ಸೆಂಟ್ಸ್ 5 ಆಕರ್ಷಕ ರೂಪಗಳಲ್ಲಿ ಲಭ್ಯವಿದೆ- ಆಡಮಸ್, ಔರಮ್, ಬೆರಿಲ್, ಕೊರಂಡಮ್ ಮತ್ತು ಪ್ಲಾಟಿನಂ. ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲ್ಲರ್ಸ್ ನಿಮ್ಮನ್ನು ದಾವಣಗೆರೆಯಲ್ಲಿ ನಡೆಯುತ್ತಿರುವ ಶುದ್ಧ ಚಿನ್ನ ಮತ್ತು ವಜ್ರದ ಆಭರಣ ಮತ್ತು ಬೆಳ್ಳಿಯ ಪ್ರದರ್ಶನ ಮತ್ತು ಮಾರಾಟಕ್ಕೆ ಆಹ್ವಾನಿಸುತ್ತಿದೆ.
ಇದು ನಮ್ಮ ಸಾಂಪ್ರದಾಯಿಕ ಮತ್ತು ಸಮಕಾಲೀನ ಸಂಗ್ರಹದಿಂದ ವಿಶೇಷ ಆಭರಣಗಳನ್ನು ಸಾರ್ವಜನಿಕರಿಗೆ ಪ್ರದರ್ಶಿಸುವ ಮತ್ತು ಮಾರಾಟ ಮೇಳವಾಗಿದೆ.
ಚಿನ್ನ, ವಜ್ರ ಮತ್ತು ಬೆಳ್ಳಿ ಮಾರಾಟ ದರಗಳೊಂದಿಗೆ ಹೆಚ್ಚುವರಿ ಪ್ರಯೋಜನವನ್ನು ಪಡೆಯಬಹುದು.
1869ರೂ.ಗಳಿಗೆ ಆಡಂಬರ ಮತ್ತು ಸಂಭ್ರಮದಿಂದ ಆಚರಣೆ
ಚಿನ್ನ, ಬೆಳ್ಳಿ ಮತ್ತು ವಜ್ರದ ದರಗಳು ಕೇವಲ ರೂ.1869ರಿಂದ ಪ್ರಾರಂಭವಾಗುತ್ತವೆ – ನಾವು ಮತ್ತೊಮ್ಮೆ ಇತಿಹಾಸವನ್ನು ನಿರ್ಮಿಸುತ್ತಿದ್ದೇವೆ. ಈ ಕೊಡುಗೆ 29.4.2022 ರಂದು ಆರಂಭಗೊಂಡು01.05.2022 ರಂದು ಅಂತ್ಯಗೊಳ್ಳುತ್ತದೆ.
ದರಗಳಲ್ಲಿ ಹೀಗೆ ಲೆಕ್ಕಾಚಾರ ಮಾಡಲಾಗುತ್ತದೆ
ಚಿನ್ನ- ಪ್ರತಿ ಗ್ರಾಂಗೆ 1869ರೂ.ಗಳಿಂದ ಪ್ರಾರಂಭ
ವಜ್ರ- ಪ್ರತಿ ಕ್ಯಾರಟೆಗೆ1869 ರೂ.ಗಳಿಂದ ಪ್ರಾರಂಭ
ಮತ್ತು ಬೆಳ್ಳಿ ಪ್ರತಿ ಗ್ರಾಂಗೆ 18.69 ರೂ.ಗಳಿಂದ ಪ್ರಾರಂಭ
ಷರತ್ತು ಮತ್ತು ನಿಯಮಗಳು ಅನ್ವಯ.
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ :
ಶ್ರೀ ಶ್ರೀಹರಿ +91 99809 50819
ಶ್ರೀ ಸಂತೋಷ್ + 91 96861 01869
ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲ್ಲರ್ಸ್ ಬಗ್ಗೆ ಎಸ್.ಎಸ್.ಗಣೇಶ್ ಮಾತು
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ದಿನದ ಸುದ್ದಿ
ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.
http://Visit : www.suddidina.com
ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.
ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:
1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.
2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.
3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.
4. ಖರಗ್ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.
ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.
ಕರ್ನಾಟಕಕ್ಕೆ ಏನು ಲಾಭ?
ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.
ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.
ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದಿನದ ಸುದ್ದಿ
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:
ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
http://Visit : www.suddidina.com
ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ
ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ದೃಢ ಕರ್ನಾಟಕದ ಸಂಕಲ್ಪ
ಶತಕದ ಪಥ – ಪ್ರಗತಿಯ ರಥ100 ದಿನಗಳು.. ಇದು ಕೇವಲ ಆರಂಭವಷ್ಟೇ. ಜನರ ಆಶಯಗಳಿಗೆ ಸ್ಪಂದಿಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಕಳೆದ 100 ದಿನಗಳಲ್ಲಿ ಹಲವು ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ, ಶಿಕ್ಷಣ, ಕೃಷಿ ಹಾಗೂ… pic.twitter.com/NDViSWw6LV
— DK Shivakumar (@DKShivakumar) September 10, 2026
ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.
100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

-
ದಿನದ ಸುದ್ದಿ4 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ4 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ4 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ4 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ4 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ4 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ4 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ4 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್






