ದಿನದ ಸುದ್ದಿ
ದೇಶದಲ್ಲಿ ಪೌರತ್ವ ಕಾಯಿದೆ ತಿದ್ದುಪಡಿ ಮಾಡಲು ಕಾಣದ ಕೈಗಳು ಕೆಲಸ ಮಾಡಿವೆ : ಸಿ.ಎಂ ಇಬ್ರಾಹಿಂ
ಸುದ್ದಿದಿನ,ಚನ್ನಗಿರಿ : ದೇಶದಲ್ಲಿ ಪೌರತ್ವ ಕಾಯಿದೆ ಜಾರಿಯಾಗಲು ಪ್ರಧಾನಿ ಮೋದಿ, ಹಾಗೂ ಅಮಿತ್ ಷಾ ಕಾರಣರಲ್ಲಾ ಬದಲಾಗಿ ಅವರ ಹಿಂದೆ ಕಾಣದ ಕೈಗಳು ಕೆಲಸ ಮಾಡಿಸಿದ್ದಾವೆ ಎಂದು ವಿಧಾನ ಪರಿಷತ್ ಸದಸ್ಯ ಸಿ,ಎಂ ಇಬ್ರಾಹಿಂ ಅಭಿಪ್ರಾಯ ಪಟ್ಟರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೌರತ್ವ ಕಾಯಿದೆ ತಿದ್ದುಪಡಿ ಮಾಡಿದ್ದಾರೆ ಮುಂದಿನ ದಿನಗಳಲ್ಲಿ ಸಂವಿಧಾನ ತೆಗೆದುಹಾಕುತ್ತಾರೆ ಇದರಲ್ಲಿ ಯಾವುದೇ ಅನುಮಾನವಿಲ್ಲ, ಈಗಾಗಲೇ ಆನಂತ್ ಕುಮಾರ್ ಹೆಗಡೆ ಮತ್ತು ತೇಜಸ್ವಿಸೂರ್ಯ ಅವರು ನಾವು ಬಂದಿರೊದೇ ಸಂವಿಧಾನ ಬದಲಾಯಿಸಲು ಎಂದು ಹೇಳಿದ್ದಾರೆ.
ಸಂವಿಧಾನ ತೆಗೆದುಹಾಕಿ ನಮ್ಮದೇ ಸಂವಿಧಾನ ಅಂದರೆ ಚರ್ತುವರ್ಣ ಪಧ್ದತಿಯನ್ನು ಈ ರಾಷ್ಟ್ರದಲ್ಲಿ ಜಾರಿಗೆ ತರಬೇಕೆಂಬುದು ಇವರ ಗುರಿಯಾಗಿದ್ದು, ಇದರ ವಿರುಧ್ದ ರಾಷ್ಟ್ರದಲ್ಲೇ ಈಗಾಗಲೇ ಪ್ರತಿಭಟನೆಗಳು ನಡೆಯುತ್ತಿದ್ದು, ಅಂತರ್ ರಾಷ್ಟ್ರೀಯ ಸಂಸ್ಥೆಯಾದ ಸಿ.ಎಸ್.ಡಿ.ಎ ಸುಮಾರು 300 ಲೋಕಸಭಾ ಕ್ಷೇತ್ರಗಳಲ್ಲಿ ಸರ್ವೇ ಮಾಡಿದ್ದು, ಈ ದೇಶ ಹಿಂದೂ ದೇಶ ಆಗಬೇಕು ಅನ್ನುವವರ ಸಂಖ್ಯೆ 17% ಇದ್ದು, ಇನ್ನುಳಿದ ಜನತೆ ಇಲ್ಲ ಇದು ಜ್ಯಾತ್ಯಾತೀತ ರಾಷ್ಟ್ರವಾಗಬೇಕು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ ಅತ್ಯಂತ ಶ್ರೇಷ್ಠವಾದದ್ದು, ಮಹಾತ್ಮ ಗಾಂಧಿ ಅವರು ರಾಷ್ಟ್ರಪಿತ ನಮ್ಮ ದೇಶದ ತತ್ವ ಸಿಧ್ಧಾಂತದ ಆದಾರದ ಮೇಲೆ ನಿಂತಿರುವಂತಹವರು ಎಂದಿದ್ದಾರೆ, ಇದೀಗಾ ದೆಹಲಿಯ ಚುನಾವಣೆಯಲ್ಲಿ ಇದೇ ವಿಚಾರವನ್ನು ಮಂಡಿಸಿದ್ದು ಫಲಿತಾಂಶದ ಬಳಿಕ ಸಂಘಪರಿವಾರಗಳು ಮೋದಿಯವರನ್ನು ಇಟ್ಟುಕೊಳ್ಳುತ್ತಾರೋ ಇಲ್ಲವೋ ಎಂಬುವುದನ್ನು ಕಾದು ನೋಡಬೇಕಿದೆ.
ಬಿ.ಎಸ್.ವೈ ಅವರ ಪರಿಸ್ಥಿಯೂ ಅದೇ ಗತಿಯಾಗಿದೆ, ಪಾಪ ಅವರಿಗೆ ಮದುವೆ ಮಾಡಿದ್ದಾರೆ ಆದರೆ ಹೆಣ್ಣು ಗಂಡನ್ನು ಕೂಡಲು ಬಿಡುತ್ತಿಲ್ಲ, ಅವರ ಸಚಿವ ಸಂಪುಟ ರಚನೆ ಮಾಡಲು ಇವತ್ತು, ನಾಳೆ, ನಾಡಿದ್ದು ಎನ್ನುತಿದ್ದು, ಅವರ ಸಮಸ್ಯೆಯಲ್ಲಿ ಅವರಿದ್ದಾರೆ.
ಅದ್ದರಿಂದ ರಾಜ್ಯದಲ್ಲಿ ಈ ಅಂದೋಲನ ರಾಜಕೀಯ ಪಕ್ಷ ಜಾತಿ ಭಾಷೆ ಬಿಟ್ಟು ಹೊಂದಾಗಿ ಹೋರಾಟ ಮಾಡುತ್ತಿದ್ದಾರೆ, ಸಿರಿಗೆರೆಯ ಸಾಣಿಹಳ್ಳಿ ಸ್ವಾಮೀಜಿ ಅವರ ಮಾತುಗಳನ್ನು ನೆನೆದು ಹಿಂದೂ ಧರ್ಮ ಸಮಾಜವನ್ನು ಕೂಡಿಸುವುದೇ ಹೊರತು ಹೊಡೆಯುವುದಲ್ಲ ಎಂದಿದ್ದಾರೆ, ಕರುಣಾ ಮೂರ್ತಿಯಾದ ಶ್ರೀರಾಮ ಎಂದರೆ ಎಲ್ಲರ ಮನಸಲ್ಲಿ ಪ್ರೀತಿ ಮೂಡಬೇಕು ಆದರೆ ಜೈ ಶ್ರೀರಾಮ್ ಎಂದರೆ ಎಲ್ಲರಲ್ಲೂ ಭಯ ಶುರುವಾಗುವಂತಾಗಿದೆ, ಇಂದು ರಾಮಾಯಣ ಬೇಕು ವಾಲ್ಮೀಕಿ ಬೇಡವಾಗಿದೆ.
ಚಾಣುಕ್ಯನ ಮಾತಿನಂತೆ ಯಾವ ದೇಶದ ರಾಜ ವ್ಯಾಪಾರಿಯಾಗುತ್ತಾನೋ ಅ ದೇಶದ ಜನ ಬಿಕಾರಿಯಾಗುತ್ತಾರೆ ಎಂಬುವಂತೆ ಅದು ನಮ್ಮ ದೇಶದಲ್ಲಿ ಆಗಿದ್ದಾಗದೆ. ಎನೇ ಆಗಲಿ ಹಿಂಸೆಗೆ ಅವಕಾಶ ಕೊಡದೇ ಗಾಂಧಿ, ಅಂಬೇಡ್ಕರ್ ಅವರಂತೆ ರಾಷ್ಟ್ರ ಧ್ವಜ ಹಿಡಿದು ಹೋರಾಟ ಮಾಡಬೇಕು ಎಂದು ಸರ್ವ ಸಮಾಜದ ಜನತೆಗೆ ಕರೆ ಕೊಡಲಾಗಿದೆ ಒಟ್ಟಾರೆ ರಾಜ್ಯ. ದೇಶದ ಅಭಿವೃಧ್ದಿ ನಾವೆಲ್ಲರೂ ಕೈ ಜೋಡಿಸಬೇಕಿದೆ ಎಂದರು.
ಈ ವೇಳೆ ಮುಸ್ಲಿಂ ಸಮಾಜದ ಮುಖಂಡರಾದ ಅಸಾದುಲ್ಲಾ, ಸಯ್ಯದ್ ಸರ್ದಾರ್, ಖದೀರ್ ಮತ್ತು ಜೋಳದಾಳ್ಕುಮಾರ್, ರುದ್ರಪ್ಪ ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ
ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.
ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.
ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್ಪಿಯನ್ನು ಕ್ವಿಂಟಲ್ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.
ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.
ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್ಆರ್ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.
ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು 15 ಜನವರಿ 2026 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ
-
ದಿನದ ಸುದ್ದಿ4 days agoಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ
-
ದಿನದ ಸುದ್ದಿ4 days agoಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ
-
ದಿನದ ಸುದ್ದಿ2 days agoಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
-
ದಿನದ ಸುದ್ದಿ1 day agoಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
-
ದಿನದ ಸುದ್ದಿ1 day ago2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ

