Connect with us

ರಾಜಕೀಯ

ಕೇಜ್ರಿವಾಲ್ ಮತ್ತು ದೆಹಲಿ ಗಲಭೆ

Published

on

  • ವಿ.ನಟರಾಜ್

ದೆಹಲಿಯ ಮತೀಯ ಗಲಭೆಗಳ ನಿರ್ವಹಣೆಯ ವಿಚಾರದಲ್ಲಿ ಅಗತ್ಯಕ್ಕಿಂತಲೂ ಹೆಚ್ಚಿನ ಅಸಹಾಯಕತೆಯನ್ನು ಪ್ರದರ್ಶಿಸಿರುವ ದೆಹಲಿಯ ಮುಖ್ಯಮಂತ್ರಿ ಕೇಜ್ರಿವಾಲ್‌ ಅವರ ಬಗ್ಗೆ‌ ಬಹುತೇಕ ಗೆಳೆಯರು ಧಿಡೀರನೆ ಭ್ರಮನಿರಸನಗೊಂಡಿದ್ದಾರೆ.

ಮತೀಯ ಗಲಭೆ ವಿಚಾರದಲ್ಲಿ ಮೋದಿ-ಶಾ ಜೋಡಿಯ ‘ಎಂದಿನ ಸಂವೇದನಾಶೂನ್ಯತೆ’ಯನ್ನು, ಅದರಲ್ಲಿಯೂ ವಿಶೇಷವಾಗಿ ಕಾಶ್ಮೀರದ ವಿಚಾರದಲ್ಲಿ ತಾನು ಭಲೇ ಭಲೇ ಉಕ್ಕಿನ ಮನುಷ್ಯ ಎಂದು ಸಾಬೀತು ಪಡಿಸಿರುವುದಾಗಿ ತೊಡೆ ತಟ್ಟುತ್ತಿದ್ದ ಗೃಹ ಸಚಿವ ಅಮಿತ್‌ ಶಾ, ದೆಹಲಿ ಗಲಭೆಯ ವಿಚಾರದಲ್ಲಿ ಬೇಕೆಂದೇ ಬೆನ್ನುಮೂಳೆ ಕಳೆದುಕೊಂಡ ಬಗ್ಗೆ ಹೆಚ್ಚಿನ ತಕರಾರು ಪ್ರಗತಿಪರರಿಗೂ ಇದ್ದಂತಿಲ್ಲ.

ಯಾಕೆಂದರೆ, ಇಂಥದ್ದನ್ನೆಲ್ಲಾ ಈ ಜೋಡಿಯ ಆಡಳಿತ ಕಾಲದಲ್ಲಿ ನೋಡಲು ಬಹುಶಃ ಎಲ್ಲ ಪ್ರಗತಿಪರರೂ ಮಾನಸಿಕವಾಗಿ ಸಿದ್ಧರಾಗಿದ್ದಂತಿದೆ. ಆದರೆ, ಕೇಜ್ರಿವಾಲ್‌ ಕೂಡಾ ಇಷ್ಟು ಬೇಗನೇ ಮತೀಯಗಲಭೆಗಳಂತಹ ಗಂಭೀರ ವಿಷಯದಲ್ಲಿ ಶುದ್ಧಾತಿಶುದ್ಧ ರಾಜಕಾರಣಿಯಾಗಿ ಹೊರಹೊಮ್ಮುತ್ತಾರೆ, ಆಪ್ ನ ದೆಹಲಿ ರಾಜಕಾರಣಿಗಳು ರಂಗೋಲಿ ಕೆಳಗೆ ತೂರುವಂತಹ ಮಾತುಗಳನ್ನು ಆಡತೊಡಗುತ್ತಾರೆ ಎನ್ನುವುದನ್ನು ಬಹುತೇಕ ಗೆಳೆಯರು ನಿರೀಕ್ಷಿಸಿರಲಿಲ್ಲ.

ಇದೀಗ ದೇಶದ್ರೋಹ ಪ್ರಕರಣದಲ್ಲಿ ಜೆಎನ್‌ಯು ಮಾಜಿ ಮುಖಂಡ ಕನ್ಹಯ್ಯ ಕುಮಾರ್ ಹಾಗೂ ಸಂಗಡಿಗರ ವಿರುದ್ಧ ದೇಶದ್ರೋಹದ ಪ್ರಕರಣದ ವಿಚಾರಣೆಗೆ ದೆಹಲಿ ಸರ್ಕಾರ ಅನುಮತಿ ನೀಡಿರುವುದು ಸಹ ಅನೇಕರಿಗೆ ಅಚ್ಚರಿ ಉಂಟುಮಾಡಿದೆ. ದೆಹಲಿ ಗಲಭೆಯ ವಿಚಾರದಲ್ಲಿ ಆಪ್‌ ನ ಧೋರಣೆಯನ್ನು ಖಂಡಿಸಿದ್ದ ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಪರೋಕ್ಷವಾಗಿ ಕೇಜ್ರಿ ಸರ್ಕಾರ ಚಾಟಿ ಬೀಸಿದೆಯೇ ಎನ್ನುವ ಅನುಮಾನ ಮೇಲುನೋಟಕ್ಕೇ ಗೋಚರಿಸುತ್ತಿದೆ.

ದೆಹಲಿ ಮತೀಯ ಗಲಭೆಗಳ ಮೊದಲ ಮೂರು ದಿನ ಆಪ್ ವರ್ತಿಸಿದ ರೀತಿ ಹೇಗಿತ್ತೆಂದರೆ, ಇಂತಹದ್ದೊಂದು ಗಲಭೆ ಸಂಭವಿಸಿದರೆ ಮಾತ್ರ ದೆಹಲಿ ಸರ್ಕಾರದ ಕೆಳಗೆ ಪೊಲೀಸ್‌ ಇಲಾಖೆ ಹಾಗೂ ಆ ಮೂಲಕ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹೊಣೆ ಬರಬೇಕು ಎನ್ನುವ ತನ್ನ ವಾದಕ್ಕೆ ಬಲ ಬರುತ್ತದೆ ಎನ್ನುವಂತಿತ್ತು. ಕೇಜ್ರಿವಾಲ್‌ ಅವರಂತೂ ‘ಹೆಚ್ಚುವರಿ’ ಅಸಹಾಯಕತೆಯನ್ನೇ ತಮ್ಮ ಮೇಲೆ ಆವಾಹಿಸಿಕೊಂಡವರಂತೆ ‘ಪೊಲೀಸ್‌ ಇಲಾಖೆ ನಮ್ಮ ಬಳಿ ಇಲ್ಲ’, ಎನ್ನುವುದನ್ನು ಸಾರಿ ಸಾರಿ ಹೇಳುವಂತೆ ಪ್ರತಿಕ್ರಿಯಿಸಿದರು.

ಇಂತಹದ್ದೊಂದು ‘ಚಾಲಾಕಿತನದ ರಾಜಕಾರಣ’ವನ್ನು ಕೇಜ್ರಿವಾಲ್ ಯಾವತ್ತಿದ್ದರೂ‌ ಪ್ರದರ್ಶಿಸುತ್ತಾರೆ ಎನ್ನುವುದು ಅವರ ಹೋರಾಟಗಳನ್ನು ಹತ್ತಿರದಿಂದ ಗಮನಿಸಿದವರಿಗೆ ತಿಳಿಯದ ವಿಷಯವೇನಲ್ಲ. ಎಷ್ಟಾದರೂ ಕೇಜ್ರಿವಾಲ್ ಇಂದಿನ ಪೀಳಿಗೆ ಬಯಸುವ ಫಟಾಫಟ್ ಕಾರ್ಪೊರೆಟ್‌ ಮಾದರಿ ರಾಜಕಾರಣವನ್ನು ಅನುಸರಿಸುತ್ತಾ‌ ಅಡಳಿತಾತ್ಮಕ ವಿಷಯಗಳ ಮೂಲಕ ಅಂಕಗಳಿಸುವ ರಾಜಕಾರಣಿಯೇ ಹೊರತು ಸೈದ್ಧಾಂತಿಕವಾಗಿ ಗಟ್ಟಿಯಾದ, ದಿಟ್ಟ ಹೆಜ್ಜೆಯನ್ನು ಇಡಬಹುದಾದ ರಾಜಕಾರಣಿ ಅಲ್ಲ.

ಈ ಬಗ್ಗೆ ತಕರಾರು ತೆಗೆಯ ಬಯಸುವವರ ವಾದಗಳಿಗೆ ಕೇಜ್ರಿವಾಲ್ ರ ಈವರೆಗಿನ ನಡೆಗಳಲ್ಲಿ ಹೆಚ್ಚಿನ ಸಾಕ್ಷ್ಯಗಳೂ ಸಿಗುವುದಿಲ್ಲ. ಕೇಜ್ರಿ ಹೀಗೇಕೆ ಎಂದು ಕಾರಣ ಹುಡುಕುತ್ತಾ ಹೊರಟವರಿಗೆ, ಇದೆಲ್ಲದರ ಬೀಜಗಳು ಇರುವುದು ಅವರನ್ನು ಅಧಿಕಾರ ರಾಜಕಾರಣದ ಕೇಂದ್ರಕ್ಕೆ ತಂದ “ಭ್ರಷ್ಟಾಚಾರದ ವಿರುದ್ಧ”ದ ಹೋರಾಟದಲ್ಲಿ ಎನ್ನುವುದನ್ನು ಇಲ್ಲಿ ಮತ್ತೊಮ್ಮೆ ನೆನಪಿಸಬೇಕಾಗುತ್ತದೆ.

ಭ್ರಷ್ಟಾಚಾರದ ವಿರುದ್ಧದ ಹೋರಾಟ ಎನ್ನುವ ಅಣ್ಣಾ ಹಜಾರೆಯವರ ನೇತೃತ್ವದಲ್ಲಿ ನಡೆದ ‘ದೆಹಲಿ ಕೇಂದ್ರಿತ’ ಹೋರಾಟವನ್ನು ಬಿಜೆಪಿ ಹೈಜಾಕ್‌ ಮಾಡದಂತೆ ಕೇಜ್ರಿವಾಲ್‌ ತಡೆದರು ಎನ್ನುವುದನ್ನು ಹೊರತುಪಡಿಸಿದರೆ, ಅವರು ಭ್ರಷ್ಟಾಚಾರದ ಹೋರಾಟವನ್ನು ಮತೀಯವಾದಿ ಮನಸ್ಸುಗಳನ್ನು ದೂರವಿಟ್ಟು ಕಟ್ಟಿದರು ಎಂದು ಯಾರೂ ಎದೆತಟ್ಟಿ ಹೇಳಲಾರರು.

ಒಂದೆಡೆ ಕಾಂಗ್ರೆಸ್‌ನ ಅಹಿಂದ ವೋಟ್‌ ಬ್ಯಾಂಕ್‌, ಮತ್ತೊಂದೆಡೆ ಬಿಜೆಪಿಯ ಮತೀಯವಾದಿ ರಾಜಕಾರಣ ಈ ಎರಡರಿಂದ ಸೈದ್ಧಾಂತಿಕವಾಗಿ ಸಮಾನಾಂತರವಾಗಿ ಇದ್ದುಕೊಂಡು ತಮ್ಮದೇ ಆದ ವೋಟ್‌ ಬ್ಯಾಂಕ್‌ ರೂಪಿಸಿಕೊಳ್ಳುವುದು ಸುದೀರ್ಘ ಅವಧಿಯನ್ನು, ಶ್ರಮವನ್ನು ಬೇಡುವಂತಹ ರಾಜಕಾರಣ ಎನ್ನುವುದನ್ನು ಅರಿತಿದ್ದ ಕೇಜ್ರಿವಾಲ್, ಫಟಾಫಟ್‌ ರಾಜಕಾರಣಕ್ಕೆ ಮೊರೆ ಹೋದರು.

ಈ ಎರಡೂ ರಾಷ್ಟ್ರೀಯ ಪಕ್ಷಗಳಿಂದ ಸುಲಭಕ್ಕೆ‌ ‘ವೋಟು ಕೀಳುವ’ ರಾಜಕಾರಣಕ್ಕೆ ತಮ್ಮನ್ನು ಮುಡಿಪಾಗಿಟ್ಟುಕೊಂಡರು. ಕೇಜ್ರಿವಾಲ್‌ ಭ್ರಷ್ಟಾಚಾರದ ವಿರುದ್ಧ ಮಾತನಾಡಿದಷ್ಟೇ ಉತ್ಸಾಹದಿಂದ ಸಾಮಾಜಿಕ ನ್ಯಾಯ, ಮತೀಯ ಸಾಮರಸ್ಯದಂತಹ ವಿಷಯಗಳ ಬಗ್ಗೆ ಮಾತನಾಡುವುದಿಲ್ಲ. ಈ ವಿಚಾರಗಳು ಬಂದಾಗ ಪ್ರಗತಿಪರರ ಮನಸ್ಸಿಗೆ ನೋವಾಗದಂತೆ ಎಚ್ಚರಿಕೆ ವಹಿಸುತ್ತಾರಾದರೂ, ಸ್ಥಳೀಯ ರಾಜಕಾರಣದಲ್ಲಿ ತಮ್ಮನ್ನು ಬೆಂಬಲಿಸುವ ಮೂಲತಃ ಬಿಜೆಪಿಯ ಮತದಾರರ ಆಕ್ರೋಶವನ್ನು ಕಟ್ಟಿಕೊಳ್ಳುವಷ್ಟು ದೂರಕ್ಕೆ ಅವರೆಂದೂ ಹೋಗುವುದಿಲ್ಲ. ಒಂದು ವೇಳೆ ಹೋದರೂ, ಅವಕಾಶ ನೋಡಿ ಚಕ್ಕನೆ ಹಿಂದಕ್ಕೆ ಪಲ್ಟಿ ಹೊಡೆದು ಬಿಡುತ್ತಾರೆ!

ಈ ವಿಷಯದಲ್ಲಿ ಅವರೊಬ್ಬ ಉತ್ತಮ ‘ಅಕ್ರೋಬ್ಯಾಟ್’. ಕೇಜ್ರಿವಾಲ್‌ ಅವರನ್ನು ಮುಂದೆ ಬಿಟ್ಟುಕೊಂಡ ಹಿಂದೆ ಓಡುವುದೆಂದರೆ ಅದೊಂದು ದುಸ್ಸಾಹಸವೇ ಸರಿ. ಕೇಜ್ರಿ, ಯಾವಾಗ ಛಕ್ಕನೆ ಲೇನ್‌ ಬದಲಿಸಿ ಹಿಂದಕ್ಕೆ ತಿರುಗಿ ಓಡಿಬಿಡುತ್ತಾರೋ ಹೇಳಲುಬಾರದು! ಹಾಗಾಗಿಯೇ, ಅವರ ಈ ವರಸೆಗಳನ್ನು ಕಂಡಾಗ, ಸದಾಕಾಲ ಅಧಿಕಾರದ ಕೇಂದ್ರದಲ್ಲಿರಲು ಅತ್ತಿಂದಿತ್ತ ಲಾಗ ಹಾಕುವ ಜೆಡಿಯು ಮುಖಂಡ ನಿತೀಶ್‌ ಕುಮಾರ್ ಅವರ ಸುಧಾರಿತ ಆವೃತ್ತಿಯಂತೆ ಕೇಜ್ರಿ ಭಾಸವಾಗುತ್ತಾರೆ!

ಬಿಜೆಪಿಯನ್ನು ವಿರೋಧಿಸುವ ಕಟ್ಟರ್‌ ಕಾಂಗ್ರೆಸ್ಸಿಗರು ಹಾಗೂ ಸಮಾಜವಾದಿಗಳಿಗೆ, ಅದೇ ರೀತಿ, ಕಾಂಗ್ರೆಸ್‌ ಹಾಗೂ ಸಮಾಜವಾದಿಗಳನ್ನು ಕಂಡರೆ ಉರಿದುಬೀಳುವ ಉಗ್ರ ಹಿಂದುತ್ವವಾದಿಗಳಿಗೆ ಕೇಜ್ರಿವಾಲ್‌ ಒಂದು ತಂಗುದಾಣದಂತೆ. ಹೇಗಾದರೂ ಸರಿ ತಮ್ಮ ವೋಟು ಕಾಂಗ್ರೆಸ್ಸಿಗೆ ಹೋಗಬಾರದು ಎಂದು ಬಯಸುವವರು, ಎಷ್ಟಾದರೂ ಸರಿ, ಬಿಜೆಪಿ ಅಧಿಕಾರಕ್ಕೆ ಬರಬಾರದು ಎಂದು ಇಚ್ಛಿಸುವವರು ಕೇಜ್ರಿವಾಲ್‌ ರ ಪರಿಣಾಮಕಾರಿ ಆಡಳಿತ ಶೈಲಿಗೆ ಜೈಕಾರ ಹಾಕಿ ಅವರಿಗೆ ಮತ ನೀಡುತ್ತಾರೆ. ಹೀಗೆ ತಮಗೆ ಯಾವುದೇ ಸೈದ್ಧಾಂತಿಕ ಬಲದ ಸಹಾಯವಿಲ್ಲದೆ ಹರಿದುಬರುವ ಮತಗಳಿಂದಾಗಿ, ಕೇಜ್ರಿಯವರು ಯಾವತ್ತೂ ಹ್ಯಾಪಿಯೇ!

ಸೈದ್ಧಾಂತಿಕವಾಗಿ ಪೊಳ್ಳಾದರೂ ಸಹ ಇದು ಅಧಿಕಾರದ ಪಡಸಾಲೆಯಲ್ಲಿ ಬಹುಕಾಲ ಉಳಿಯುವ ವಾಸ್ತವ ರಾಜಕಾರಣದ ತಂತ್ರ ಎನ್ನುವುದನ್ನು ಅವರ ಅರ್ಥ ಮಾಡಿಕೊಂಡು, ಜೀರ್ಣಿಸಿಕೊಂಡಿದ್ದಾರೆ. ಪಾಪ, ಇದಾವುದರ ಅರಿವಿಲ್ಲದೆ, ಕೇಜ್ರಿ ಅವರಲ್ಲಿ ನೆಹರು ಪ್ರಣೀತ ಅಭಿವೃದ್ಧಿ ಮಾದರಿಯನ್ನು, ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ನಿರೀಕ್ಷಿಸಲು ಹೊರಟವರು ಭ್ರಮನಿರಸನಕ್ಕೆ ಒಳಗಾಗುತ್ತಾರೆ…

ಇನ್ನು, ಈ ಭ್ರಷ್ಟಾಚಾರದ ವಿರುದ್ಧದ ಹೋರಾಟ ಎನ್ನುವ ಪರಿಕಲ್ಪನೆ ಇಂದು ಬಹುತೇಕವಾಗಿ ಅವಕಾಶವಾದಿ ರಾಜಕಾರಣದ ಸರಕಾಗಿಬಿಟ್ಟಿದೆ. ಇದು ಎಲ್ಲರನ್ನೂ ಒಳಗೊಳ್ಳುವ, ‘ರಾಜಕೀಯ ಚಲಾವಣೆ’ಯ ಹೋರಾಟ ಎನ್ನುವ ಕಾರಣಕ್ಕೆ ಸುಲಭಕ್ಕೆ ನಮ್ಮ ಅನೇಕ ಭರವಸೆಯ ನಾಯಕರು ಗೊತ್ತಿದ್ದೋ, ಗೊತ್ತಿಲ್ಲದೆಯೋ, ಉದ್ದೇಶಪೂರ್ವಕವಾಗಿಯೋ, ದುರುದ್ದೇಶಪೂರ್ವಕವಾಗಿಯೋ ಇದಕ್ಕೆ ಜೋತು ಬೀಳುತ್ತಾರೆ. ವಿಪರ್ಯಾಸವೆಂದರೆ, ಭ್ರಷ್ಟಾಚಾರವನ್ನು ಅಸಾಮರ್ಥ್ಯದೊಂದಿಗೂ, ಅಸಾಮರ್ಥ್ಯವನ್ನು ಮೀಸಲಾತಿಯೊಂದಿಗೂ, ಮೀಸಲಾತಿಯನ್ನು ಮೇಲ್ಜಾತಿ ವಿರೋಧಿ ರಾಜಕಾರಣದೊಂದಿಗೂ ಚಕಚಕನೆ ಜೋಡಿಸಿ ಬಿಡುವ ದುರಾಲೋಚನಾ ಪ್ರವಾಹವೊಂದನ್ನು ಈ ದೇಶದಲ್ಲಿ ವ್ಯವಸ್ಥಿತವಾಗಿ ನಿರ್ಮಿಸಲಾಗಿದೆ.

ಈ ಪ್ರವಾಹದ ಚಾಲಕಶಕ್ತಿಯಾಗಿರುವ ವರ್ಗವು ಯಾವುದೇ ಬಗೆಯ ಸಾಮಾಜಿಕ ಅಸಮಾನತೆಯ ಬಗ್ಗೆ ಅಪ್ಪಿತಪ್ಪಿಯೂ ಬಾಯಿಬಿಡುವುದಿಲ್ಲ, ಬದಲಿಗೆ, ಭ್ರಷ್ಟಾಚಾರದ ಬಗ್ಗೆ ಮಾತ್ರ ಉದ್ದುದ್ದ ಭಾಷಣ ಬಿಡುತ್ತದೆ. ನಿರುದ್ಯೋಗ, ಕುಸಿದಿರುವ ಆರ್ಥಿಕತೆ, ಹೆಚ್ಚುತ್ತಿರುವ ಸಾಮಾಜಿಕ ಉದ್ವಿಗ್ನತೆ, ಕಂದಾಚಾರ, ಮೌಢ್ಯಗಳ ವಿರುದ್ಧ ಇದಕ್ಕೆ ಪ್ರತಿಭಟಿಸುವ ಇರಾದೆ ಇರುವುದಿಲ್ಲ. ಮತೀಯವಾದದ ಬಗ್ಗೆಯಂತೂ ತುಟಿ ಬಿಚ್ಚುವುದೇ ಇಲ್ಲ. ಹೀಗಾಗಿಯೇ ಈ ಬಗೆಯ ಹೋರಾಟಗಳು ಬಹುತೇಕ ಬಾರಿ ಸಂವಿಧಾನ ವಿರೋಧಿಗಳಿಗೆ ಶಕ್ತಿಯನ್ನು ತುಂಬಿವೆ!

ಅಂದಹಾಗೆ, ಕೊನೆಯದಾಗಿ, ಕಾಶ್ಮೀರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ತಿಂಗಳುಗಟ್ಟಲೆ ಮೊಬೈಲ್ ಹಾಗೂ ಇಂಟರ್ನೆಟ್‌ ಸೇವೆಗಳನ್ನು ಬಂದ್‌ ಮಾಡಿದ್ದನ್ನು ಸಮರ್ಥಿಸಿಕೊಂಡಿದ್ದ ಕೇಂದ್ರ ಸರ್ಕಾರ ದೆಹಲಿಯಲ್ಲಿ ಸಾಲು ಸಾಲು ಹೆಣಗಳು ಉರುಳಿದರೂ ಇಂತಹ ನಿರ್ಧಾರ ಕೈಗೊಳ್ಳಲಿಲ್ಲ! ಕೇವಲ ಒಂದು ವಾರ ಕಾಲವಾದರೂ ದೆಹಲಿಯಲ್ಲಿ ಮೊಬೈಲ್‌ ಹಾಗೂ ಇಂಟರ್‌ನೆಟ್‌ ಸೇವೆಗಳನ್ನು ಕೇಂದ್ರ ಸರ್ಕಾರ ಬಂದ್‌ ಮಾಡಲಿಲ್ಲವೇಕೆ? ಮೊದಲೇ ಕುಸಿದು ಕೂತಿರುವ ಅರ್ಥಿಕತೆಯ ಈ ಸಂದರ್ಭದಲ್ಲಿ ದೇಶದ ಯಾವುದೇ ಮೊಟ್ರೋ ನಗರಿಯಲ್ಲಿ ಇಂಟರ್ನೆಟ್‌ ಸೇವೆಯನ್ನು ಬ್ಯಾನ್‌ ಮಾಡುವುದು ಕೇಂದ್ರ ಸರ್ಕಾರಕ್ಕೆ ಸಾಧ್ಯವೇ? ಇಲ್ಲ. ಕಾಶ್ಮೀರದ ಪ್ರಯೋಗವನ್ನೇನಾದರೂ ದೇಶದ ಇತರೆಡೆ ಮಾಡಿದರೆ ಅದರಿಂದ ದೇಶದ ಆರ್ಥಿಕತೆಗೆ ಎಂತಹ ಹೊಡೆತ ಬೀಳಬಹುದು ಎನ್ನುವುದು ಅದಕ್ಕೆ ಗೊತ್ತು. ಹಾಗಾಗಿಯೇ ಅಂತಹ ದುಸ್ಸಾಹಸಕ್ಕೆ ಕೈ ಹಾಕಲು ಹೋಗುವುದಿಲ್ಲ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

Published

on

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.

ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.

ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.

ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.

ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.

ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

Published

on

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.

ಶುಕ್ರವಾರ ಜೂನ್(19) ‌ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್‌ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್‌ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್‌ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್‌ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.

ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್‌ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್‌ಲೀನೋ, ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಯುರ್ವೇದ ಆರೋಗ್ಯಕರ ಜೀವನ ಶೈಲಿ

Published

on

ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.

ಅವರು ಶನಿವಾರ ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಸಂಸ್ಥೆಯು ಏರ್ಪಡಿಸಿದ್ದ ದ್ವಿತೀಯ ಘಟಿಕೋತ್ಸವ ಸಮಾರಂಭವನ್ನು ಉದ್ಪಾಟಿಸಿ ಮಾತನಾಡಿದರು.

ಈಗಿನ ದಿನಮಾನಗಳಲ್ಲಿ ಇಡೀ ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ, ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ತಿಳಿಸಿದರು.

ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ. ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು.

ಆಧುನಿಕ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI) ಮತ್ತು ಡಿಜಿಟಲ್ ಆರೋಗ್ಯ ಸೇವೆಗಳು ಇಂದಿನ ವೈದ್ಯಕೀಯ ಕ್ಷೇತ್ರದ ಚಿತ್ರಣವನ್ನೇ ಸಂಪೂರ್ಣವಾಗಿ ಬದಲಾಯಿಸುತ್ತಿವೆ. ಇಂತಹ ತಾಂತ್ರಿಕ ಕ್ರಾಂತಿಯ ಯುಗದಲ್ಲಿ ಪದವಿ ಪಡೆದು ಹೊರಬರುತ್ತಿರುವ ನೂತನ ವೈದ್ಯರು ಕೇವಲ ಸಾಂಪ್ರದಾಯಿಕ ವೈದ್ಯಕೀಯ ಜ್ಞಾನಕ್ಕೆ ಸೀಮಿತವಾಗದೆ, ಆಧುನಿಕ ವಿಜ್ಞಾನದ ನೂತನ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಉಭಯ ಕ್ಷೇತ್ರಗಳ ನಡುವೆ ಬಲವಾದ ಸೇತುವೆಯಾಗಿ ಕೆಲಸ ಮಾಡಬೇಕಾದ ತುರ್ತು ಅಗತ್ಯವಿದೆ ಎಂದರು.

ಕೃತಕ ಬುದ್ಧಿಮತ್ತೆಯು ರೋಗನಿರ್ಣಯವನ್ನು ಹೆಚ್ಚು ನಿಖರ ಹಾಗೂ ವೇಗವಾಗಿಸಲು ನೆರವಾದರೆ, ಡಿಜಿಟಲ್ ಆರೋಗ್ಯ ಸೇವೆಗಳು ದೂರದ ಊರುಗಳಿಗೂ ಚಿಕಿತ್ಸೆಯನ್ನು ತಲುಪಿಸಲು ಸಹಕಾರಿಯಾಗಿವೆ. ಆದ್ದರಿಂದ, ಹೊಸ ತಲೆಮಾರಿನ ವೈದ್ಯರು ಕೇವಲ ದಿನನಿತ್ಯದ ಕ್ಲಿನಿಕ್ ಅಥವಾ ಆಸ್ಪತ್ರೆಯ ಚಿಕಿತ್ಸೆಗೆ ಸೀಮಿತವಾಗದೆ, ತಂತ್ರಜ್ಞಾನದ ದತ್ತಾಂಶಗಳನ್ನು ಬಳಸಿಕೊಂಡು ಹೊಸ ರೋಗಗಳಿಗೆ ಪರಿಹಾರ ಕಂಡುಕೊಳ್ಳುವ ಉತ್ತಮ ಸಂಶೋಧಕರಾಗಬೇಕು. ಇದರೊಂದಿಗೆ, ಸಮಾಜದಲ್ಲಿ ತಂತ್ರಜ್ಞಾನ ಮತ್ತು ಆರೋಗ್ಯದ ಕುರಿತು ಇರುವ ತಪ್ಪು ಕಲ್ಪನೆಗಳನ್ನು ದೂರಾಗಿಸಿ, ಮಾನವೀಯ ಕಾಳಜಿಯೊಂದಿಗೆ ಜನರನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ ನೈಜ ಮಾರ್ಗದರ್ಶಕರಾಗಿ ಹೊರಹೊಮ್ಮಬೇಕಿದೆ ಎಂದು ತಿಳಿಸಿದರು.

ವೈದ್ಯಕೀಯ ಸೇವೆಯು ಅತ್ಯಂತ ಪವಿತ್ರವಾದ ಮಾನವೀಯ ಸೇವೆಯಾಗಿದೆ. ರೋಗಿಗಳಿಗೆ ಔಷಧಿಗಿಂತ ಮುಂಚಿತವಾಗಿ ವೈದ್ಯರ ಪ್ರೀತಿಯ ನುಡಿಗಳು ಹಾಗೂ ಸಕಾರಾತ್ಮಕ ನಡವಳಿಕೆಯ ಅಗತ್ಯವಿರುತ್ತದೆ. ಆದ್ದರಿಂದ ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು. ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯವು ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಗುಜರಾತ್‌ನ ಜಾಮ್‌ನಗರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ಗ್ಲೋಬಲ್ ಟ್ರೆಡಿಷನಲ್ ಮೆಡಿಸಿನ್ ಸೆಂಟರ್’ ಸ್ಥಾಪಿಸುತ್ತಿದೆ ಎಂದು ತಿಳಿಸಿದರು.

ರಾಜ್ಯಸಭಾ ಸದಸ್ಯರಾದ ಶ್ರೀ ನಾರಾಯಣಸಾ ಭಾಂಡಗೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾಜಿ ಡೀನ್ ಡಾ: ಶ್ರೀನಿವಾಸ್ ಬನ್ನಿಗೊಳ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ಎಸ್.ವಿ.ಹಲಸೆ, ತಪೋವನ ಸಂಸ್ಥೆಯ ಅಧ್ಯಕ್ಷ ಡಾ. ಶಶಿಕುಮಾರ್ ವಿ.ಎಂ, ಆಯುರ್ವೇದ ಕಾಲೇಜಿನ ಪ್ರಾಚಾರ್ಯರಾದ ಡಾ. ಅಶ್ವಿನಿ ಕೆ.ಆರ್., ಡಾ.ಸುಮನ ಭಟ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending