Connect with us

ದಿನದ ಸುದ್ದಿ

ದೇವಸ್ಥಾನಗಳ ಜಾಗಗಳು ಅನ್ಯರ ಪಾಲಾಗುತ್ತಿವೆ : ಸಚಿವ ಸಿ.ಟಿ ರವಿ

Published

on

ಸುದ್ದಿದಿನ,ಚಿಕ್ಕಮಗಳೂರು: ರಾಜ್ಯದಲ್ಲಿ ಪುರಾಣ ಪ್ರಸಿದ್ಧ ಇತಿಹಾಸ ಹೊಂದಿರುವ ಪಾರಂಪರಿಕ ದೇವಸ್ಥಾನ ಹಾಗೂ ವಾಸ್ತುಶಿಲ್ಪಗಳನ್ನು ಸಂರಕ್ಷಣಾ ಯೋಜನೆಯ ಹೆಸರಿನಲ್ಲಿ ಸಂರಕ್ಷಿಸಿ ಅಭಿವೃದ್ಧಿ ಪಡಿಸಲಾಗುವುದು ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ ಅವರು ಹೇಳಿದರು.

ಅವರು ಸೋಮವಾರ ಕಡೂರು, ಹಾಗೂ ತರೀಕೆರೆ, ಅಜ್ಜಂಪುರ ತಾಲ್ಲೂಕುಗಳ ಮಚ್ಚೇರಿ, ಹಿರೇನಲ್ಲೂರು, ಆಸಂದಿ, ಬಗ್ಗವಳ್ಳಿ, ಅಮೃತಾಪುರ, ಸೋಂಪುರದಲ್ಲಿರುವ ಪುರಾಣ ಪ್ರಸಿದ್ಧ ಪ್ರಾಚೀನ ದೇವಾಲಯಳಿಗೆ ಭೇಟಿ ನೀಡಿ ಪರಿಶೀಲಿಸಿ ನಡೆಸಿದರು.

ಜಿಲ್ಲೆಯಲ್ಲಿ ಹೊಯ್ಸಳರು, ಕದಂಬರು, ಚೋಳರು, ಚಾಲುಕ್ಯರು ಸೇರಿದಂತೆ ವಿವಿಧ ರಾಜಮನೆತನಗಳ ಆಳ್ವಿಕೆ ನಡೆಸಿ ಆ ಕಾಲದಲ್ಲಿ ನಿರ್ಮಿತವಾದ ಪ್ರಸಿದ್ದ ಪ್ರಾಚೀನ ಇತಿಹಾಸದ ದೇವಾಲಯಗಳಿದ್ದು ಅವುಗಳನ್ನು ಉಳಿಸುವ ಹೊಣೆ ನಮ್ಮೆಲ್ಲರದಾಗಿದ್ದು ಅವುಗಳ ಮೂಲ ಸ್ವರೂಪ ವಿರೂಪವಾಗದಂತೆ ಜೀರ್ಣೋದ್ದಾರ ಕೈಗೊಂಡು ಅಭಿವೃದ್ಧಿಪಡಿಸಲಾಗುವುದು ಎಂದರು.

ರಾಜ್ಯದಲ್ಲಿ ರಾಜ್ಯ ಹಾಗೂ ಕೇಂದ್ರ ಪುರಾತತ್ವ ಇಲಾಖೆಗೆ ಒಳಪಡುವ1400ಕ್ಕೂ ಹೆಚ್ಚು ದೇವಾಲಯಗಳಿದ್ದು, ಇವುಗಳನ್ನು ಹೊರತುಪಡಿಸಿಯೂ ಸಹ ಹಲವು ದೇವಾಲಯಗಳಿವೆ ಇವುಗಳ ಸಂರಕ್ಷಣೆಗೆ ಕ್ರಮವಹಿಸಲಾಗುವುದು ಎಂದ ಅವರು ಪ್ರಾಚೀನ ಮತ್ತು ಪುರಾತನ ದೇವಾಲಯಗಳ ಸಂರಕ್ಷಣೆಗೆ ಸರ್ಕಾರವು ಮುಂದಿನ ಬಜೆಟ್‌ನಲ್ಲಿ ಸಂರಕ್ಷಣಾ ಯೋಜನೆಯನ್ನು ತೆರೆದು ಅವುಗಳ ಅಡಿಯಲ್ಲಿ ಪುರಾತನ ದೇವಾಲಯ ಹಾಗೂ ವಾಸ್ತುಶಿಲ್ಪಗಳ ನಿರ್ವಹಣೆ ಹಾಗೂ ಅಭಿವೃದ್ಧಿಪಡಿಸಲಿದೆ ಇದಕ್ಕಾಗಿ ಪುರಾತತ್ವ್ವ ಇಲಾಖೆ ಹಾಗೂ ಧರ್ಮೊತ್ಥಾನ ಟ್ರಸ್ಟ್ ಜೊತೆಯಾಗಿ ಒಡಂಬಡಿಕೆ ಮಾಡಿಕೊಂಡು ಅಭಿವೃದ್ಧಿ ಹಾಗೂ ಸಂರಕ್ಷಣೆಗೆ ಕ್ರಮ ವಹಿಸಲಾಗುವುದು ಎಂದರು.

ಕೋವಿಡ್-19ಕಾರಣದಿಂದಾಗಿ ಈ ಬಾರಿ ಅನುದಾನದ ಕೊರತೆ ಇದ್ದು ಸದ್ಯ ಆದ್ಯತೆ ಮೇರೆಗೆ ಆಯ್ದ ಪ್ರಸಿದ್ದ ದೇವಾಲಯಗಳನ್ನು ಅಭಿವೃದ್ಧಿ ಪಡಿಸಿ ಉಳಿದವುಗಳನ್ನು ಹಂತ- ಹಂತವಾಗಿ ಜೀರ್ಣೋದ್ದಾರ ಮಾಡಲಾಗುವುದು ಹಿಂದೆ ದೇವಾಲಯಗಳಿಗಾಗಿ ಧಾನದತ್ತಿಯ ರೂಪದಲ್ಲಿ ಜಾಗಗಳನ್ನು ನೀಡಿದ್ದು ಪ್ರಸ್ತುತ ದಿನಗಳಲ್ಲಿ ಎಷ್ಟೂ ದೇವಸ್ಥಾನಗಳ ಜಾಗಗಳು ಅನ್ಯರ ಪಾಲಾಗುತ್ತಿವೆ. ಎಷ್ಟೋ ದೇವಾಲಯಗಳು ನಿರ್ಲಕ್ಷ್ಯಕ್ಕೆ ಒಳಗಾಗಿ ಪಾಳು ಬಿದ್ದಿವೆ ಅಂತವುಗಳನ್ನು ಗುರುತಿಸಿ ಸಂರಕ್ಷಣೆ ಮಾಡಲಾಗುವುದು ಎಂದರು.

ಪ್ರವಾಸಿ ತಾಣಗಳಲ್ಲಿ ಯಾತ್ರಿ ನಿವಾಸಗಳ ಸ್ಥಾಪನೆ ಕುರಿತು ಮಾತನಾಡಿದ ಅವರು ಈ ಬಾರಿಯ ಬಜೆಟ್‌ನಲ್ಲಿ ಯಾತ್ರಿ ನಿವಾಸಗಳ ಸ್ಥಾಪನೆಗೆ ಅವಕಾಶವಿಲ್ಲ ಆದರು ಈ ಬಗ್ಗೆ ಅಧ್ಯಯನ ಕೈಗೊಂಡು ಅಗತ್ಯ ಸ್ಥಳಗಳಲ್ಲಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಅನೇಕ ಯಾತ್ರಿ ನಿವಾಸಗಳು ಹಾಳುಬಿದ್ದಿವೆ ಎಂದು ದೂರು ಇದೆ ಹಾಗಾಗಿ ಹೊಸದಾದ ಯಾತ್ರಿ ನಿವಾಸಗಳ ಮಂಜೂರು ಕುರಿತು ಚರ್ಚಿಸಲಾಗವುದು ಎಂದು ತಿಳಿಸಿದರು.

ಅಮೃತಾಪುರ ದೇವಾಲಯ ವೀಕ್ಷಣೆ ಮಾಡಿ ಮಾತನಾಡಿದ ಅವರು ಸೂಕ್ಷ್ಮ ಕೆತ್ತನೆ ವಾಸ್ತಶಿಲ್ಪ ಹೊಂದಿರುವ ದೇವಾಲಯಗಳಲ್ಲಿ ಅಮೃತೇಶ್ವರ ದೇಗುಲವು ಒಂದಾಗಿದ್ದು ಪೂರ್ವಿಕರು ಕೊಟ್ಟಿರುವ ಒಂದು ಬಳುವಳಿಯಾಗಿದ್ದು ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಜೀರ್ಣೊದ್ದಾರ ಕೈಗೊಳ್ಳಲು ಹಂತ- ಹಂತವಾಗಿ ಅನುದಾನ ಬಿಡುಗಡೆಗೊಳಿಸಲಾಗುವುದು. ಇದೊಂದು ಪ್ರವಾಸಿ ಕೇಂದ್ರವಾಗಿ ಗುರುತಿಸಿಕೊಂಡಿದ್ದು ಇದರ ಸೂಕ್ಷ್ಮ ಕೆತ್ತನೆ ಕುರಿತು ಸಂಶೋಧನೆಗೆ ವಿವಿಧ ಭಾಗಗಳಿಂದ ಜನ ಇಲ್ಲಿಗೆ ಆಗಮಿಸುತ್ತಿದ್ದಾರೆ ಹಾಗಾಗಿ ಇದನ್ನು ಸಂರಕ್ಷ್ಷಿಸಿ ಪೋಷಿಸುವ ಕರ್ತವ್ಯ ನಮ್ಮೆಲ್ಲರದಾಗಿದೆ ಎಂದರು.

ಈ ಸಂದರ್ಭದಲ್ಲಿ ಕಡೂರು ಶಾಸಕ ಬೆಳ್ಳಿ ಪ್ರಕಾಶ್, ಜಿಲ್ಲಾ ಪಂಚಾಯಿತಿ ಸದಸ್ಯ ಸೋಮಶೇಖರ್, ಶರತ್ ಕೃಷ್ಣಮೂರ್ತಿ, ತರೀಕೆರೆ ಉಪವಿಭಾಗಾಧಿಕಾರಿ ರೇಣುಕಾ ಪ್ರಸಾದ್, ತಹಶೀಲ್ದಾರ್‌ಗಳಾದ ಉಮೇಶ್, ವಿಶ್ವೇಶ್ವರ ರೆಡ್ಡಿ, ಪುರಾತತ್ವ ಇಲಾಖೆಯ ಸಂರಕ್ಷಣಾ ಅಧಿಕಾರಿಗಳು. ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending