Connect with us

ದಿನದ ಸುದ್ದಿ

CAA ಗೆ ಮುಸ್ಲಿಂ ಬಣ್ಣ ಯಾಕೆ..?

Published

on

 

CAA : Citizenship Amendment Act
Provided that any person belonging to Hindu , Sikh , Buddhist , Jain , Parsi and Christian community from Afghanistan , Bangladesh or Pakistan who entered into India on or before 31at December 2014 and who has been exempted by the central govt by or under clause (c) of sub section (2) of section 3 of the Passport (entry into India) Act 1920 or from the application of the provisions of the Foriegners Act 1946 or any rule or order made thereunder , shall not be treated as illegal migrants for the purpose of this Act.

ಸಿಎಎ: ಪೌರತ್ವ ತಿದ್ದುಪಡಿ ಕಾಯ್ದೆ

ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ಪಾಕಿಸ್ತಾನದ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ಯಾವುದೇ ವ್ಯಕ್ತಿ 2014 ರ ಡಿಸೆಂಬರ್ 31 ರಂದು ಅಥವಾ ಅದಕ್ಕೂ ಮೊದಲು ಭಾರತಕ್ಕೆ ಪ್ರವೇಶಿಸಿದ ಮತ್ತು ಷರತ್ತು (ಸಿ) ಯ ಮೂಲಕ ಅಥವಾ ಕೇಂದ್ರ ಸರ್ಕಾರದಿಂದ ವಿನಾಯಿತಿ ಪಡೆದವರು. ಪಾಸ್‌ಪೋರ್ಟ್ ಕಾಯ್ದೆ 1920ರ ನಿಯಮ (c) ಉಪ ನಿಯಮ(2) ರ ಪ್ರಕಾರ ಕೇಂದ್ರ ಸರ್ಕಾರದ ವಿನಾಯಿತಿ ಪಡೆದವರು ಅಥವಾ ವಿದೇಶಿಗರ ಕಾಯ್ದೆ 1946 ಅಥವಾ ಇತರೆ ಯಾವುದೇ ಕಾನೂನು ಅಥವಾ ನಿಯಮಾವಳಿಗಳ ಪ್ರಕಾರ ಅಕ್ರಮ ವಲಸಿಗರು ಎಂದು ಪರಿಣಗಣಿಸಲಾಗುವುದಿಲ್ಲ ಎಂಬುದು ಈ ಕಾಯ್ದೆ.

ಸರಳವಾಗಿ

ಅಕ್ರಮವನ್ನು ಸಕ್ರಮ ಮಾಡುವ ಖಾಯ್ದೆ, ಇವರುಗಳು ಅಂದ್ರೆ ಅಕ್ರಮ ವಲಸಿಗರು ದೇಶದ ಒಳಗೆ ಹೇಗೆ ಬಂದ್ರು ಅಂತ ಪ್ರಶ್ನೆ ಮಾಡದೇ ಬಂದವರಿಗೆಲ್ಲ (ಮುಸ್ಲಿಮರನ್ನು ಹೊರತು ಪಡಿಸಿ) ಪೌರತ್ವ ಕೊಟ್ಟು ಇಲ್ಲಿನ ಪ್ರಜೆಗಳು ಅಂತ ಅಧಿಕೃತವಾಗಿ ಸೀಲ್ ಹೊಡೆಯೋದು.

ಪ್ರಶ್ನೆಗಳು

  1. ಎಲ್ಲಿಂದಲೋ ಬಂದ ಅಕ್ರಮ ವಲಸಿಗರಿಗೆ ಯಾವ ಆಧಾರದ ಮೇಲೆ ಪೌರತ್ವ ಕೊಡ್ತೀರಿ?
  2. ಅವರು ದೇಶದ ಗಡಿ ದಾಟಿ ಒಳಗೆ ಪ್ರವೇಶಿಸಲು ಸಾಧ್ಯವಾಗಿದ್ದು ಹೇಗೆ? ಇದರ ವಿಚಾರಣೆ ಕೈಬಿಟ್ಟರೆ ನುಸುಳುಕೋರರಿಗೆ ನೆರವಾದವರು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಅವಕಾಶ ನೀಡಿದಂತಾಗುತ್ತದೆ.
  3. ಅವರಿಗೆ ಇರೋದಕ್ಕೆ ಜಾಗ ಎಲ್ಲಿ ಮಾಡಿ ಕೊಡ್ತೀರಿ?
  4. ಉದ್ಯೋಗ , ಆಹಾರ , ಮೀಸಲಾತಿ , ಸರ್ಕಾರಿ ಸೌಲಭ್ಯಗಳು ಎಲ್ಲವನ್ನೂ ನಾವುಗಳು ಅವರುಗಳ ಜೊತೆ ಹಂಚಿಕೊಳ್ಳಬೇಕು (ಮೂಲ ನಿವಾಸಿಗಳಿಗೆ ಸರಿಯಾಗಿ ತಲುಪದ ಇವುಗಳನ್ನ ಎಲ್ಲಿಂದಲೋ ಬಂದ ವಲಸಿಗರ ಜೊತೆ ಹೇಗೆ ಹಂಚಿಕೊಳ್ಳೋದು?
  5. ಎಲ್ಲ ವಲಸಿಗರನ್ನು ಸರಿಯಾದ ಆಧಾರವಿಲ್ಲದೆ ಅವರಿಗೆ ಪೌರತ್ವ ಕೊಟ್ಟು ಒಳಗೆ ಬಿಟ್ಟುಕೊಂಡರೆ ಆಂತರಿಕ ಭದ್ರತೆಗೆ ಚ್ಯುತಿ ಬರುವುದಿಲ್ಲವೇ?
  6. ರಾಜ್ಯಗಳ ಲೆಕ್ಕಾಚಾರದಲ್ಲಿ ನನ್ನ ರಾಜ್ಯ ಅಂದರೆ ಕರ್ನಾಟಕದಲ್ಲಿ ಈಗಾಗಲೇ ಪರ ಭಾಷಿಕರ ನೆರೆ ರಾಜ್ಯದವರ ವಲಸೆಯಿಂದ ಇಲ್ಲಿನ ಕನ್ನಡಿಗರು ಉದ್ಯೋಗದ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ , ನೆರೆ ರಾಜ್ಯದ ವಲಸೆಯನ್ನು ಸಹಿಸದ ನಾವು ನೆರೆ ದೇಶದ ವಲಸಿಗರನ್ನು ಸಹಿಸುವುದಾದರು ಹೇಗೆ ?
  7. ಇದಿಷ್ಟು ನಮ್ಮ CAA ಹೋರಾಟಕ್ಕೆ ನಾವು ಬಳಸಬೇಕಿರುವ ನಿಜವಾದ ಕಾರಣಗಳು ಆದರೆ ವಾಸ್ತವದಲ್ಲಿ ಸದ್ಯಕ್ಕೆ ನಡೆಯುತ್ತಿರುವ ಹೋರಾಟ ಮುಸ್ಲಿಂ ಸಮುದಾಯವನ್ನು ಮುಂದಿಟ್ಟುಕೊಂಡು. ಅಕ್ರಮ ವಲಸಿಗರನ್ನು ಸಕ್ರಮ ಮಾಡೋದು ದೇಶದ ಇಂದಿನ ಆರ್ಥಿಕ ಪರಿಸ್ಥಿತಿಯಲ್ಲಿ ಸರಿ ಅಲ್ಲ , ದೇಶದ ಎಲ್ಲ ಸಮುದಾಯ ಧರ್ಮ ಒಟ್ಟಾರೆಯಾಗಿ ಭಾರತೀಯ ಮೂಲನಿವಾಸಿ ಪ್ರಜೆಗಳು ಹೋರಾಡಬೇಕಿದೆ, ಆದರೆ ಈ ಹೋರಾಟಕ್ಕೆ “ಮುಸ್ಲಿಂ” ಅಂತ ನೇಮ್ ಬೋರ್ಡ್ ಹಾಕಿ ದಾರಿ ತಪ್ಪಿಸಿದ್ದು ಯಾರು ??
  8. ಕೇವಲ ಮುಸ್ಲಿಂ ಸಮುದಾಯವನ್ನು ಮುಂದಿಟ್ಟುಕೊಂಡು ಮಾಡುತ್ತಿರುವ ಹೋರಾಟದ ಹಿಂದಿನ ಉದ್ದೇಶ ಏನು ಹಾಗಾದ್ರೆ ?

ಬಿಂದು ಗೌಡ
ಕೆಪಿಸಿಸಿ ಸಾಮಾಜಿಕ ಜಾಲತಾಣ
ರಾಜ್ಯ ಕಾರ್ಯದರ್ಶಿ

ಸುದ್ದಿದಿನ‌.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

Published

on

ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.

ನಡೆದಿದ್ದೇನು?

ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.

ಡೆತ್ ನೋಟ್‌ನಲ್ಲಿತ್ತು ಕೊನೆಯ ಆಸೆ

ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.

ತಮಿಳುನಾಡಿನಲ್ಲಿ ಅಂತ್ಯಕ್ರಿಯೆ

ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.

ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್‌; ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್‌ಗೆ ನೇರ ಪ್ರವೇಶಕ್ಕೆ https://khtigadag.ac.in/AdmissionForm.pdf ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) https://khtigadag.ac.in/Lateralentryadmissionform.pdf ಈ ಲಿಂಕ್‌ಗಳ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇ 30 ರೊಳಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ-582102 ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

Published

on

ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.

ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್​ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.

ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ.‌ ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending