ದಿನದ ಸುದ್ದಿ
ಮಕ್ಕಳ ಕೈಗೆ ವಾಹನ ಕೊಡುವ ಮುನ್ನ ನೂರು ಬಾರಿ ಯೋಚಿಸಿ !
![](https://suddidina.com/wp-content/uploads/2024/06/car_accident_suddidina.jpg)
- ಶರೀಫ್ ಎ ಎ, ವಕೀಲರು
ಹದಿನೆಂಟು ವರ್ಷ ತುಂಬದ ಮತ್ತು ಚಾಲನಾ ಪರವಾನಗಿ ಪಡೆಯದ ಮಕ್ಕಳ ಕೈಗೆ ಮೋಟಾರು ವಾಹನ ಕೊಡುವ ಮತ್ತು ತಮ್ಮ ಮಕ್ಕಳ ವಾಹನ ಚಾಲನಾ ಕೌಶಲ್ಯದ ಬಗ್ಗೆ ಹೆಮ್ಮೆಯಿಂದ ಬೀಗುವ ಪೋಷಕರನ್ನು ಬಹಳ ನೋಡಿದ್ದೇನೆ. ಕೇವಲ ಶ್ರೀಮಂತರ ನಡುವೆ ಮಾತ್ರ ಅಲ್ಲ, ಮಧ್ಯಮ ಮತ್ತು ಬಡ ವರ್ಗದಲ್ಲೂ ಸಹ ಇಂತಹ ಹೊಣೆಗೇಡಿ ಪೋಷಕರು ಇದ್ದಾರೆ. ಇಂತವರ ಬೇಜವಾಬ್ದಾರಿತನ ತಂದೊಡ್ದುವ ಅನಾಹುತ ಮತ್ತು ಪರಿಣಾಮಗಳ ಬಗ್ಗೆ ಸ್ವಲ್ಪ ನೋಡೋಣ.
ಬಾಲ ನ್ಯಾಯ ಮಂಡಳಿಯ ಪ್ರಧಾನ ನ್ಯಾಯಿಕ ದಂಡಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಧರ್ಬದಲ್ಲಿ ಹಲವು ರಸ್ತೆ ಅಪಘಾತ ಪ್ರಕರಣಗಳು ನನ್ನ ಮುಂದೆ ವಿಚಾರಣೆಗೆ ಬಂದಿದ್ದವು. ಹದಿನೆಂಟು ವರ್ಷ ತುಂಬದ ಮಕ್ಕಳು ಅಜಾಗರೂಕತೆ ಅಥವಾ ನಿರ್ಲಕ್ಷ್ಯತನದಿಂದ ಬೈಕ್, ಕಾರು ಮುಂತಾದ ವಾಹನ ಚಲಾಯಿಸಿ ಯಾರೋ ನತದೃಷ್ಟರ ಜೀವ ತೆಗೆದ ಅಪರಾಧಕ್ಕೆ ಅಥವಾ ಗಂಭೀರವಾಗಿ ಗಾಯಪಡಿಸಿದಕ್ಕೆ ದಾಖಲಾದ ಪ್ರಕರಣಗಳವು. ಅಂತಹ ಪ್ರಕರಣಗಳಲ್ಲಿ ಸಾಮಾನ್ಯವಾಗಿ ವಾಹನ ಚಲಾಯಿಸಿದ ಬಾಲಕನನ್ನು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಎಂದು ಪರಿಗಣಿಸಿ ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರು ಪಡಿಸಲಾಗುತ್ತದೆ. ಬಾಲಕನ ಪೋಷಕರ ವಿರುದ್ಧ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 199A ರ ಅಡಿಯಲ್ಲಿ ಮೂರು ವರ್ಷಗಳವರೆಗೆ ವಿಸ್ತರಿಸ ಬಹುದಾದ ಕಾರಾಗೃಹ ವಾಸದಿಂದ ಮತ್ತು ಇಪ್ಪತೈದು ಸಾವಿರ ರೂಪಾಯಿ ಜುಲ್ಮಾನೆಯ ಶಿಕ್ಷೆಗೆ ಗುರಿಪಡಿಸ ಬಹುದಾದ ಅಪರಾಧಕ್ಕೆ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗುತ್ತದೆ.
ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 199A ರ ಅಡಿಯಲ್ಲಿ ವಾಹನ ಚಾಲನೆಗೆ ಸಂಬಂಧಿಸಿದಂತೆ ಅಪ್ರಾಪ್ತರು ಎಸಗುವ ಅಪರಾಧಗಳಿಗೆ ಪೋಷಕರೇ ನೇರ ಹೊಣೆಗಾರರು ಎಂದು ಪರಿಭಾವಿಸಲಾಗುತ್ತದೆ. ಹಾಗಾಗಿ ಬಾಲ ನ್ಯಾಯ ಮಂಡಳಿಯ ಮುಂದಿರುವ ಪ್ರಕರಣದಲ್ಲಿ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ಆಪ್ತ ಸಮಾಲೋಚನೆಗೆ ಒಳಪಡಿಸಿ ದಂಡ ವಿಧಿಸಿ ಕಳುಹಿಸಿದರೂ ಕಾನೂನು ಕುಣಿಕೆಯಿಂದ ತಪ್ಪಿಸಿ ಕೊಳ್ಳಲು ಪೋಷಕರಿಗೆ ಸಾಧ್ಯವಿರುವುದಿಲ್ಲ. ಜೆ .ಎಂ. ಎಫ್. ಸಿ ನ್ಯಾಯಾಲಯದಲ್ಲಿ ದಂಡ ಮತ್ತು ಜೈಲು ಶಿಕ್ಷೆಯ ತೂಗುಗತ್ತಿ ಒಂದೆಡೆಯಾದರೆ ಮೋಟಾರು ವಾಹನ ಅಪಘಾತ ವಿಮಾ ಪರಿಹಾರ ನ್ಯಾಯಾಧಿಕರಣದ ಮುಂದೆ ಸಂತ್ರಸ್ತರು ಅಥವಾ ಗಾಯಾಳು ವಿಮಾ ಪರಿಹಾರ ಕೋರಿ ದಾಖಲಿಸುವ ಪ್ರಕರಣ ಮತ್ತೊಂದೆಡೆ.
ಅಪ್ರಾಪ್ತ ವಯಸ್ಕರ ಕೈಗೆ ವಾಹನ ಕೊಡುವುದು, ಚಾಲನಾ ಪರವಾನಗಿ ಇಲ್ಲದೆ ವಾಹನ ಚಲಾಯಿಸುವುದು ಇವೆಲ್ಲವೂ ವಿಮಾ ಷರತ್ತಿನ ಉಲ್ಲಂಘನೆ. ಹಾಗಾಗಿ ಅಪಘಾತದಲ್ಲಿ ಮೃತಪಟ್ಟವರ ವಾರಸುದಾರರು ಅಥವಾ ಗಾಯಾಳು ಅಪ್ರಾಪ್ತ ವಯಸ್ಕ ಚಾಲನೆ ಮಾಡಿದ ವಾಹನದ ವಿಮಾ ಕಂಪನಿಯಿಂದ ಪರಿಹಾರ ಪಡೆಯಲು ಸಾಧ್ಯವಾಗುವುದಿಲ್ಲ. ಅಂತಹ ಪ್ರಕರಣಗಳಲ್ಲಿ ಪರಿಹಾರ ನೀಡುವ ಸಂಪೂರ್ಣ ಹೊಣೆ ವಾಹನ ಮಾಲೀಕ ಅಥವಾ ಅಪ್ರಾಪ್ತನ ಪೋಷಕರ ಮೇಲೆ ಬೀಳಲಿದೆ. ನ್ಯಾಯಾಧಿಕರಣ ಆದೇಶಿಸುವ ಪರಿಹಾರದ ಮೊತ್ತ ಮೃತರ ಅಥವಾ ಗಾಯಾಳುಗಳ ವೃತ್ತಿ, ಆದಾಯ ಮತ್ತು ಪ್ರಾಯವನ್ನು ಆಧರಿಸಿ ಲಕ್ಷಾಂತರ ರೂಪಾಯಿಗಳವರೆಗೂ ಬರಬಹುದು, ಕೋಟಿ ರೂಪಾಯಿ ಮೊತ್ತ ದಾಟಲೂ ಬಹುದು.
ಮೋಟಾರು ವಾಹನ ಅಪಘಾತ ವಿಮಾ ಪರಿಹಾರ ನ್ಯಾಯಾಧಿಕರಣದ ಪೀಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ನನ್ನ ಮುಂದೆ ಬಂದ ಒಂದು ಪ್ರಕರಣದ ಘಟನೆ ಹೀಗಿತ್ತು. 15 ವರ್ಷದ ಹುಡುಗ ಬೈಕ್ ಚಾಲನೆ ಮಾಡಿ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರಿಗೆ ಡಿಕ್ಕಿ ಪಡಿಸಿ ಆ ಸಾಫ್ಟ್ವೇರ್ ಇಂಜಿನಿಯರ್ ಸಾವಿಗೆ ಕಾರಣಕರ್ತನಾಗುತ್ತಾನೆ. ಆ ಪ್ರಕರಣದಲ್ಲಿ ಮೃತನ ವಾರಸುದಾರರಿಗೆ ಎಂಬತ್ತು ಲಕ್ಷ ಹಣ ಪಾವತಿಸಲು ನ್ಯಾಯಾಧಿಕರಣದಿಂದ ಆದೇಶವಾಗುತ್ತದೆ. ಅಪಘಾತಕ್ಕೆ ಕಾರಣಕರ್ತ ನಾದ ಬಾಲಕನ ತಂದೆ ಶಾಲಾ ಶಿಕ್ಷಕ.
ಹಣ ಪಾವತಿಸಲು ಯಾವುದೇ ದಾರಿ ಕಾಣದೆ ಕೊನೆಗೆ ಜೈಲಿಗೆ ಹೋಗುವುದು ಖಚಿತವಾದಾಗ ವಾಸವಿದ್ದ ಮನೆ ಮಾರಿ ಹಣ ತಂದು ನ್ಯಾಯಾಲಯದಲ್ಲಿ ಕಟ್ಟುತ್ತಾರೆ. ಅಪ್ರಾಪ್ತ ಬಾಲಕರು ಮಾಡುವ ತಪ್ಪಿನಿಂದ ಪೋಷಕರು ದಂಡ ತೆರಬೇಕಾಗಿ ಬಂದ ಇಂತಹ ಹಲವು ಪ್ರಕರಣಗಳನ್ನು ನನ್ನ ವೃತ್ತಿ ಜೀವನದಲ್ಲಿ ನೋಡಿದ್ದೇನೆ. ಮೊನ್ನೆ ಮೇ 19 ರಂದು ಪುಣೆಯಲ್ಲಿ 17 ವರ್ಷದ ಅಪ್ರಾಪ್ತ ಬಾಲಕನೊಬ್ಬ ಮದ್ಯದ ಅಮಲಿನಲ್ಲಿ ಪೋರ್ಷೆ ಕಾರ್ ಚಲಾಯಿಸಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಪಡಿಸಿ ಅನೀಶ್ ಅವಧಿಯಾ ಮತ್ತು ಅಶ್ವಿನಿ ಕೋಷ್ಟಾ ಎಂಬ ಇಬ್ಬರು ಸಾಫ್ಟ್ವೇರ್ ಉದ್ಯೋಗಿಗಳು ಸಾವನ್ನಪ್ಪಿದ ದುರಂತ ಘಟನೆ ನಮ್ಮ ಕಣ್ಣ ಮುಂದೆಯೇ ಇದೆ. (ಕೃಪೆ : ಶಫೀರ್ ಎ .ಎ ಫೇಸ್ ಬುಕ್ ಪೇಜ್ ನಿಂದ)
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ5 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!
-
ದಿನದ ಸುದ್ದಿ3 days ago
ದೇಶದ ಶಾಲೆ – ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರೋ ವಿದ್ಯಾರ್ಥಿಗಳೆಷ್ಟು..? ಇಲ್ಲಿದೆ ಸಮೀಕ್ಷೆಯ ಸಂಪೂರ್ಣ ಮಾಹಿತಿ