Connect with us

ದಿನದ ಸುದ್ದಿ

ಕೊರೊನಾತಂಕದ ನಡುವೆ ಎಸ್.ಎಸ್.ಎಲ್.ಸಿ ಮಕ್ಕಳಿಗಿರಲಿ ನಿರಾತಂಕ ; ಪಠ್ಯ ಕಡಿತದ ಲಾಭ – ಅಂಕಗಳಿಕೆ ಸರಾಗ

Published

on

ಸಾಂದರ್ಭಿಕ ಚಿತ್ರ

 

  • ವಿ.ಕೆ ಕುಮಾರಸ್ವಾಮಿ
    ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ವಿರುಪಾಪುರ, ರಾಮನಗರ ಜಿಲ್ಲೆ

ಗತ್ತನ್ನು ಎಡಬಿಡದೆ ಕಾಡುತ್ತಿರುವ ಕೊರೋನಾ ವಿಷ ಪೀಡೆಯ ಬಾಧೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಮೊನ್ನೆ ಮೊನ್ನೆಯಷ್ಟೇ ಶಾಲಾ-ಕಾಲೇಜುಗಳು ಆರಂಭವಾಗಿದ್ದು, ಉತ್ಸಾಹ ಉಲ್ಲಾಸದಿಂದ ಮುದ್ದು ಮಕ್ಕಳು ಶಾಲೆಯತ್ತ ಮುಖ ಮಾಡುತ್ತಿದ್ದಾರೆ. ಆದರೀಗ ಮತ್ತೊಮ್ಮೆ ಕೊರೊನಾ ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದೆ. ಹೀಗಾಗಿ ಕೊರೊನಾ ನಡುವಿನ ನಮ್ಮ ಬದುಕು ಇನ್ನೆಷ್ಟು ವರ್ಷಗಳೊ ಎಂಬುದು ಅರಿಯದಾಗಿದೆ.

ಈ ಮಧ್ಯೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಮುಂಬರುವ ವಾರ್ಷಿಕ ಪರೀಕ್ಷೆಗೆ ಸಮರ ಸೇನಾನಿಗಳಂತೆ ಎದೆಗುಂದದೆ ಸಜ್ಜಾಗುತ್ತಿದ್ದಾರೆ. ಈಗಾಗಲೆ ಶಿಕ್ಷಣ ಇಲಾಖೆ ಮಕ್ಕಳಿಗೆ ಪಠ್ಯ ಕಡಿತ ಮಾಡಿ ಪ್ರತಿ ವರ್ಷಕ್ಕಿಂತ ಈ ವರ್ಷ ಕಡಿಮೆ ಹೊರೆಯನ್ನು ನೀಡಿದೆ. ಇದರ ಲಾಭ ಪಡೆಯುವುದಾದರೂ ಹೇಗೆ? ಈ ಕುರಿತಾದ ಒಂದಷ್ಟು ಸಾಧಕ-ಬಾಧಕಗಳು ಇಲ್ಲಿವೆ.

ಪಠ್ಯ ಕಡಿತದ ಲಾಭ

ಪ್ರಸ್ತುತ ವರ್ಷ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ 30%ಪಠ್ಯ ಕಡಿತ ಮಾಡಿರುವುದು ಅತ್ಯಂತ ಲಾಭದಾಯಕ ವಿಚಾರವಾಗಿದೆ. ಇದು ಮಕ್ಕಳಲ್ಲಿ ಕೊಂಚ ನೆಮ್ಮದಿ ತಂದಿದ್ದು, ಅವರು ಇನ್ನೂ ಹೆಚ್ಚಿನ ಅಭ್ಯಾಸ ಮಾಡಲು ಸಹಾಯಕವಾಗಿದೆ. ಲಭ್ಯವಿರುವ ಪಠ್ಯಾಂಶಗಳನ್ನು ಸರಳ ಮತ್ತು ಪರಿಣಾಮಕಾರಿಯಾಗಿ ವಿದ್ಯಾರ್ಥಿಗಳು ಬಳಸಿಕೊಂಡಲ್ಲಿ ಅತ್ಯುತ್ತಮ ಫಲಿತಾಂಶ ಪಡೆಯುವುದು ನಿಶ್ಚಿತ. ಹೀಗಾಗಿ ಮಕ್ಕಳು ಪ್ರತಿನಿತ್ಯ ಏಕಾಗ್ರತೆಯಿಂದ ಅಭ್ಯಾಸ ಮಾಡಬೇಕಿದೆ.

ಪಠ್ಯ ಪುಸ್ತಕವೇ ಪರ್ಯಾಯ ಮಾರ್ಗದರ್ಶಿ

ಶಿಕ್ಷಕರ ನಂತರ ಪಠ್ಯ ಪುಸ್ತಕಗಳೇ ಮಕ್ಕಳ ಪಾಲಿನ ಮಾರ್ಗದರ್ಶಿಯಾಗಿವೆ. ಯಾವ ಮಕ್ಕಳು ಪಠ್ಯ ಪುಸ್ತಕಗಳನ್ನು ಸತತವಾಗಿ ಅಭ್ಯಸಿಸುತ್ತಾರೋ ಅವರಲ್ಲಿ ಆತ್ಮ ವಿಶ್ವಾಸ ವೃದ್ಧಿಸುತ್ತದೆ ಹಾಗೂ ಪರೀಕ್ಷೆಯಲ್ಲಿ ಕೇಳುವ ಎಂತಹುದೇ ಪ್ರಶ್ನೆಗಳಿಗೆ ಉತ್ತರಿಸಲು ಸಮರ್ಥರಾಗುತ್ತಾರೆ.

ನೂರಾರು ರೂಪಾಯಿಗಳನ್ನು ವ್ಯಯಿಸಿ ಇಲ್ಲಸಲ್ಲದ ಅಧ್ಯಯನ ಸಾಮಗ್ರಿಗಳನ್ನು ಕೊಳ್ಳುವ ಮುನ್ನ ವಿದ್ಯಾರ್ಥಿಗಳು ಪಠ್ಯ ಪುಸ್ತಕವನ್ನು ಓದುವ ಹವ್ಯಾಸವನ್ನು ಹೆಚ್ಚಾಗಿ ಬೆಳೆಸಿಕೊಂಡರೆ ಅದಕ್ಕಿಂತ ದೊಡ್ಡ ಮಾರ್ಗದರ್ಶಿ ಮತ್ತೊಂದಿಲ್ಲ. ಪಠ್ಯ ಪುಸ್ತಕವನ್ನು ಓದಿದ ನಂತರ ಇನ್ನಿತರ ಅಧ್ಯಯನ ಸಾಮಗ್ರಿಗಳನ್ನು ಅಭ್ಯಸಿಸುವುದು ಸೂಕ್ತ.

ಮನೆ ವೇಳಾಪಟ್ಟಿ ಇರಲಿ

ಶಾಲೆಯಲ್ಲಿ ತಿಳಿದ ಪಠ್ಯಾಂಶಗಳನ್ನು ಮನೆಯಲ್ಲೊಮ್ಮೆ ಪುನರ್ಮನನ ಮಾಡುವುದು ಅತ್ಯಂತ ಜವಾಬ್ದಾರಿಯುತ ವಿಚಾರ. ಇದಕ್ಕಾಗಿ ಮನೆಯಲ್ಲಿ ಒಂದು ಪ್ರತ್ಯೇಕ ವೇಳಾಪಟ್ಟಿಯನ್ನು ರಚಿಸಿಕೊಳ್ಳುವುದು ಮುಖ್ಯ. ಎಲ್ಲಕ್ಕಿಂತ ಹೆಚ್ಚಾಗಿ ಇತ್ತೀಚೆಗೆ ಎಲ್ಲೆಡೆ ಕೇಳಿ ಬರುತ್ತಿರುವ ದೂರು ಎಂದರೆ ವಿದ್ಯಾರ್ಥಿಗಳು ಆಂತರಿಕ ಮೌಲ್ಯಮಾಪನಕ್ಕೆ ಸಂಬಂಧಿಸಿದ ಚಟುವಟಿಕೆಗಳನ್ನು ತಯಾರಿಸಲು ಹೆಚ್ಚು ಸಮಯ ಮೀಸಲಿಡುತ್ತಿದ್ದಾರೆ ಎಂಬುದು.

ಹೀಗಾಗಿ ಮಕ್ಕಳು ಪ್ರತಿ ವಿಷಯಗಳನ್ನು ಅಭ್ಯಸಿಸಲು ಪ್ರತ್ಯೇಕ ವೇಳಾಪಟ್ಟಿಯನ್ನು ರಚಿಸಿಕೊಳ್ಳಬೇಕು. ಅದರಂತೆ ಪ್ರತಿನಿತ್ಯ ಅಭ್ಯಸಿಸಬೇಕು. ಓದಿದ್ದನ್ನು ಬರೆದು ಖಾತ್ರಿ ಪಡಿಸಿಕೊಳ್ಳಬೇಕು.

ಪರೀಕ್ಷೆ ಬಗ್ಗೆ ಭಯ ಬೇಡ

ಪರೀಕ್ಷೆಗಳಿರುವುದು ನಮ್ಮ ಭವಿಷ್ಯವನ್ನು ನಿರ್ಧರಿಸುವುದಕ್ಕಾಗಿಯೇ ಹೊರತು ನಮ್ಮ ಧೈರ್ಯವನ್ನು ಪರೀಕ್ಷಿಸಲು ಅಲ್ಲ. ನಿರಂತರ ಅಭ್ಯಾಸ ಮಾಡಿದ ಯಾವ ವಿದ್ಯಾರ್ಥಿಗಳಿಗೂ ಸಾಮಾನ್ಯವಾಗಿ ಪರೀಕ್ಷೆಯ ಬಗ್ಗೆ ಹೆಚ್ಚಿನ ಭಯ ಹಾಗೂ ಒತ್ತಡವಿರುವುದಿಲ್ಲ.

ಹೀಗಾಗಿ ಪರೀಕ್ಷೆಯನ್ನು ಎಲ್ಲರೂ ಒಂದು ಹಬ್ಬದಂತೆ ಭಾವಿಸಿ ಎದುರಿಸಬೇಕಾಗಿದೆ. ನೆನಪಿರಲಿ, ಪರೀಕ್ಷೆಗೆ ಒಂದು ದಿನದ ಮುಂಚೆ ಈ ಹಿಂದೆ ಓದಿದ ಪಠ್ಯಾಂಶಗಳನ್ನು ಪುನರ್ಮನನ ಮಾಡಿಕೊಳ್ಳಬೇಕಷ್ಟೆ. ಅದನ್ನು ಬಿಟ್ಟು ಎಲ್ಲವನ್ನೂ ಓದುವುದು ಆರೋಗ್ಯಕರ ಹವ್ಯಾಸವಲ್ಲ.

ಕೆಲವು ಮಕ್ಕಳಲ್ಲಿ ಕಂಡುಬರುವ ಅನಪೇಕ್ಷಿತ ನಡವಳಿಕೆಗಳು

  1. ಪ್ರಶ್ನೆಗಳ ಬಗ್ಗೆ ಗಮನ ಹರಿಸದೆ ಕೇವಲ ಉತ್ತರಗಳನ್ನಷ್ಟೇ ಕಲಿಯುವುದು
  2. ಸರಳ ಪ್ರಶ್ನೋತ್ತರಗಳನ್ನು ನಿರ್ಲಕ್ಷ್ಯ ಮಾಡುವುದು
  3. ಕೇವಲ ಪರೀಕ್ಷೆಗಳು ಸಮೀಪಿಸಿದಾಗಲಷ್ಟೇ ಓದುವುದು
  4. ಓದಿದ ವಿಚಾರಗಳನ್ನು ಪುನರ್ಮನನ ಮಾಡದಿರುವುದು
  5. ಸಣ್ಣಸಣ್ಣ ಕಾರಣಗಳನ್ನು ಮುಂದಿಟ್ಟುಕೊAಡು ಶಾಲೆಗೆ ಗೈರು ಹಾಜರಾಗುವುದು
  6. ಶಿಕ್ಷಕರ ಒಡನಾಟದಿಂದ ದೂರ ಉಳಿಯುವುದು
  7. ಸಹಪಾಠಿಗಳಿಂದ ದೂರ ಉಳಿಯುವುದು
  8. ಸರಿಯಾಗಿ ಆಹಾರ ಸೇವಿಸದಿರುವುದು
  9. ಅಂದಿನ ಓದನ್ನು ಅಂದೇ ಮುಗಿಸದಿರುವುದು
  10. ಏಕಾಗ್ರತೆಯಿಲ್ಲದ ಅಧ್ಯಯನ
  11. ಓದುವುದನ್ನು ಹೊರೆ ಎಂದು ಭಾವಿಸುವುದು ಮತ್ತು ತೀವ್ರ ಆಲಸ್ಯ
  12. ಟಿವಿ ಅಥವಾ ಮೊಬೈಲ್ ಬಳಸುತ್ತಾ ಓದುವುದು
  13. ಪುಸ್ತಕಗಳನ್ನು ಎಲ್ಲೆಂದರಲ್ಲಿ ಹರಡುವುದು

ನಿಮ್ಮ ಓದು ಹೀಗಿರಲಿ

  • ಕಷ್ಟಪಟ್ಟು ಓದಬೇಡಿ; ಇಷ್ಟದಿಂದ ಓದಿರಿ
  • ಮೊದಲು ಸರಳ ಪ್ರಶ್ನೊತ್ತರಗಳನ್ನು ಖಾತ್ರಿಪಡಿಸಿಕೊಳ್ಳಿ

    ಮನೆ ವೇಳಾಪಟ್ಟಿಯ ಖಚಿತ ಪಾಲನೆ

  • ಓದಿದ ಪಠ್ಯಾಂಶಗಳನ್ನು ಪಟ್ಟಿ ಮಾಡುವುದು ಮತ್ತು ಪುನರ್ಮನನ ಮಾಡುವುದು

    ಪದ್ಯಗಳು, ವ್ಯಾಕರಣ, ಪ್ರಬಂಧ, ಪ್ರಮೇಯಗಳು, ಚಿತ್ರಗಳು, ಪತ್ರಲೇಖನಗಳ ನಿರಂತರ ಅಭ್ಯಾಸ

    ಕಠಿಣ ಪ್ರಶ್ನೆಗಳನ್ನು ಪಟ್ಟಿ ಮಾಡಿಕೊಂಡು ಶಿಕ್ಷಕರೊಂದಿಗೆೆ ಚರ್ಚಿಸುವುದು

    ನಿಯಮಿತ ಧ್ಯಾನ, ಪ್ರಾರ್ಥನೆ ಹಾಗೂ ನಿದ್ದೆ ಇರಲಿ

    ಓದುವ ಕೋಣೆಯಲ್ಲಿ ಸೂಕ್ತ ಗಾಳಿ, ಬೆಳಕಿನ ವ್ಯವಸ್ಥೆ ಮಾಡಿಕೊಳ್ಳುವುದು

  • ಸರಿಯಾದ ಭಂಗಿಯಲ್ಲಿ ಕುಳಿತು ಓದುವುದು

    ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಬಿಡಿಸುವುದು

    ಸಡಿಲವಾದ ಉಡುಪುಗಳನ್ನು ಧರಿಸುವುದು

  • ಸಹಪಾಠಿಗಳೊಂದಿಗೆ ಆರೋಗ್ಯಕರ ಚರ್ಚೆ

    ಸಮಯ ಮತ್ತು ಶಿಸ್ತಿಗೆ ಆದ್ಯತೆ ನೀಡುವುದು

  • ಪೋಷಕರೊಂದಿಗೆ ಪ್ರತಿದಿನ ಕನಿಷ್ಠ ಹತ್ತು ನಿಮಿಷಗಳ ಶೈಕ್ಷಣಿಕ ಚರ್ಚೆ

(ವಿ.ಕೆ ಕುಮಾರಸ್ವಾಮಿ
ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ವಿರುಪಾಪುರ,
ಮಾಗಡಿ ತಾಲ್ಲೂಕು, ರಾಮನಗರ ಜಿಲ್ಲೆ,
ಮೊಬೈಲ್ ಸಂಖ್ಯೆ : 9113906120)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending