Connect with us

ದಿನದ ಸುದ್ದಿ

ಕೊರೊನಾತಂಕದ ನಡುವೆ ಎಸ್.ಎಸ್.ಎಲ್.ಸಿ ಮಕ್ಕಳಿಗಿರಲಿ ನಿರಾತಂಕ ; ಪಠ್ಯ ಕಡಿತದ ಲಾಭ – ಅಂಕಗಳಿಕೆ ಸರಾಗ

Published

on

ಸಾಂದರ್ಭಿಕ ಚಿತ್ರ

 

  • ವಿ.ಕೆ ಕುಮಾರಸ್ವಾಮಿ
    ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ವಿರುಪಾಪುರ, ರಾಮನಗರ ಜಿಲ್ಲೆ

ಗತ್ತನ್ನು ಎಡಬಿಡದೆ ಕಾಡುತ್ತಿರುವ ಕೊರೋನಾ ವಿಷ ಪೀಡೆಯ ಬಾಧೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಮೊನ್ನೆ ಮೊನ್ನೆಯಷ್ಟೇ ಶಾಲಾ-ಕಾಲೇಜುಗಳು ಆರಂಭವಾಗಿದ್ದು, ಉತ್ಸಾಹ ಉಲ್ಲಾಸದಿಂದ ಮುದ್ದು ಮಕ್ಕಳು ಶಾಲೆಯತ್ತ ಮುಖ ಮಾಡುತ್ತಿದ್ದಾರೆ. ಆದರೀಗ ಮತ್ತೊಮ್ಮೆ ಕೊರೊನಾ ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದೆ. ಹೀಗಾಗಿ ಕೊರೊನಾ ನಡುವಿನ ನಮ್ಮ ಬದುಕು ಇನ್ನೆಷ್ಟು ವರ್ಷಗಳೊ ಎಂಬುದು ಅರಿಯದಾಗಿದೆ.

ಈ ಮಧ್ಯೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಮುಂಬರುವ ವಾರ್ಷಿಕ ಪರೀಕ್ಷೆಗೆ ಸಮರ ಸೇನಾನಿಗಳಂತೆ ಎದೆಗುಂದದೆ ಸಜ್ಜಾಗುತ್ತಿದ್ದಾರೆ. ಈಗಾಗಲೆ ಶಿಕ್ಷಣ ಇಲಾಖೆ ಮಕ್ಕಳಿಗೆ ಪಠ್ಯ ಕಡಿತ ಮಾಡಿ ಪ್ರತಿ ವರ್ಷಕ್ಕಿಂತ ಈ ವರ್ಷ ಕಡಿಮೆ ಹೊರೆಯನ್ನು ನೀಡಿದೆ. ಇದರ ಲಾಭ ಪಡೆಯುವುದಾದರೂ ಹೇಗೆ? ಈ ಕುರಿತಾದ ಒಂದಷ್ಟು ಸಾಧಕ-ಬಾಧಕಗಳು ಇಲ್ಲಿವೆ.

ಪಠ್ಯ ಕಡಿತದ ಲಾಭ

ಪ್ರಸ್ತುತ ವರ್ಷ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ 30%ಪಠ್ಯ ಕಡಿತ ಮಾಡಿರುವುದು ಅತ್ಯಂತ ಲಾಭದಾಯಕ ವಿಚಾರವಾಗಿದೆ. ಇದು ಮಕ್ಕಳಲ್ಲಿ ಕೊಂಚ ನೆಮ್ಮದಿ ತಂದಿದ್ದು, ಅವರು ಇನ್ನೂ ಹೆಚ್ಚಿನ ಅಭ್ಯಾಸ ಮಾಡಲು ಸಹಾಯಕವಾಗಿದೆ. ಲಭ್ಯವಿರುವ ಪಠ್ಯಾಂಶಗಳನ್ನು ಸರಳ ಮತ್ತು ಪರಿಣಾಮಕಾರಿಯಾಗಿ ವಿದ್ಯಾರ್ಥಿಗಳು ಬಳಸಿಕೊಂಡಲ್ಲಿ ಅತ್ಯುತ್ತಮ ಫಲಿತಾಂಶ ಪಡೆಯುವುದು ನಿಶ್ಚಿತ. ಹೀಗಾಗಿ ಮಕ್ಕಳು ಪ್ರತಿನಿತ್ಯ ಏಕಾಗ್ರತೆಯಿಂದ ಅಭ್ಯಾಸ ಮಾಡಬೇಕಿದೆ.

ಪಠ್ಯ ಪುಸ್ತಕವೇ ಪರ್ಯಾಯ ಮಾರ್ಗದರ್ಶಿ

ಶಿಕ್ಷಕರ ನಂತರ ಪಠ್ಯ ಪುಸ್ತಕಗಳೇ ಮಕ್ಕಳ ಪಾಲಿನ ಮಾರ್ಗದರ್ಶಿಯಾಗಿವೆ. ಯಾವ ಮಕ್ಕಳು ಪಠ್ಯ ಪುಸ್ತಕಗಳನ್ನು ಸತತವಾಗಿ ಅಭ್ಯಸಿಸುತ್ತಾರೋ ಅವರಲ್ಲಿ ಆತ್ಮ ವಿಶ್ವಾಸ ವೃದ್ಧಿಸುತ್ತದೆ ಹಾಗೂ ಪರೀಕ್ಷೆಯಲ್ಲಿ ಕೇಳುವ ಎಂತಹುದೇ ಪ್ರಶ್ನೆಗಳಿಗೆ ಉತ್ತರಿಸಲು ಸಮರ್ಥರಾಗುತ್ತಾರೆ.

ನೂರಾರು ರೂಪಾಯಿಗಳನ್ನು ವ್ಯಯಿಸಿ ಇಲ್ಲಸಲ್ಲದ ಅಧ್ಯಯನ ಸಾಮಗ್ರಿಗಳನ್ನು ಕೊಳ್ಳುವ ಮುನ್ನ ವಿದ್ಯಾರ್ಥಿಗಳು ಪಠ್ಯ ಪುಸ್ತಕವನ್ನು ಓದುವ ಹವ್ಯಾಸವನ್ನು ಹೆಚ್ಚಾಗಿ ಬೆಳೆಸಿಕೊಂಡರೆ ಅದಕ್ಕಿಂತ ದೊಡ್ಡ ಮಾರ್ಗದರ್ಶಿ ಮತ್ತೊಂದಿಲ್ಲ. ಪಠ್ಯ ಪುಸ್ತಕವನ್ನು ಓದಿದ ನಂತರ ಇನ್ನಿತರ ಅಧ್ಯಯನ ಸಾಮಗ್ರಿಗಳನ್ನು ಅಭ್ಯಸಿಸುವುದು ಸೂಕ್ತ.

ಮನೆ ವೇಳಾಪಟ್ಟಿ ಇರಲಿ

ಶಾಲೆಯಲ್ಲಿ ತಿಳಿದ ಪಠ್ಯಾಂಶಗಳನ್ನು ಮನೆಯಲ್ಲೊಮ್ಮೆ ಪುನರ್ಮನನ ಮಾಡುವುದು ಅತ್ಯಂತ ಜವಾಬ್ದಾರಿಯುತ ವಿಚಾರ. ಇದಕ್ಕಾಗಿ ಮನೆಯಲ್ಲಿ ಒಂದು ಪ್ರತ್ಯೇಕ ವೇಳಾಪಟ್ಟಿಯನ್ನು ರಚಿಸಿಕೊಳ್ಳುವುದು ಮುಖ್ಯ. ಎಲ್ಲಕ್ಕಿಂತ ಹೆಚ್ಚಾಗಿ ಇತ್ತೀಚೆಗೆ ಎಲ್ಲೆಡೆ ಕೇಳಿ ಬರುತ್ತಿರುವ ದೂರು ಎಂದರೆ ವಿದ್ಯಾರ್ಥಿಗಳು ಆಂತರಿಕ ಮೌಲ್ಯಮಾಪನಕ್ಕೆ ಸಂಬಂಧಿಸಿದ ಚಟುವಟಿಕೆಗಳನ್ನು ತಯಾರಿಸಲು ಹೆಚ್ಚು ಸಮಯ ಮೀಸಲಿಡುತ್ತಿದ್ದಾರೆ ಎಂಬುದು.

ಹೀಗಾಗಿ ಮಕ್ಕಳು ಪ್ರತಿ ವಿಷಯಗಳನ್ನು ಅಭ್ಯಸಿಸಲು ಪ್ರತ್ಯೇಕ ವೇಳಾಪಟ್ಟಿಯನ್ನು ರಚಿಸಿಕೊಳ್ಳಬೇಕು. ಅದರಂತೆ ಪ್ರತಿನಿತ್ಯ ಅಭ್ಯಸಿಸಬೇಕು. ಓದಿದ್ದನ್ನು ಬರೆದು ಖಾತ್ರಿ ಪಡಿಸಿಕೊಳ್ಳಬೇಕು.

ಪರೀಕ್ಷೆ ಬಗ್ಗೆ ಭಯ ಬೇಡ

ಪರೀಕ್ಷೆಗಳಿರುವುದು ನಮ್ಮ ಭವಿಷ್ಯವನ್ನು ನಿರ್ಧರಿಸುವುದಕ್ಕಾಗಿಯೇ ಹೊರತು ನಮ್ಮ ಧೈರ್ಯವನ್ನು ಪರೀಕ್ಷಿಸಲು ಅಲ್ಲ. ನಿರಂತರ ಅಭ್ಯಾಸ ಮಾಡಿದ ಯಾವ ವಿದ್ಯಾರ್ಥಿಗಳಿಗೂ ಸಾಮಾನ್ಯವಾಗಿ ಪರೀಕ್ಷೆಯ ಬಗ್ಗೆ ಹೆಚ್ಚಿನ ಭಯ ಹಾಗೂ ಒತ್ತಡವಿರುವುದಿಲ್ಲ.

ಹೀಗಾಗಿ ಪರೀಕ್ಷೆಯನ್ನು ಎಲ್ಲರೂ ಒಂದು ಹಬ್ಬದಂತೆ ಭಾವಿಸಿ ಎದುರಿಸಬೇಕಾಗಿದೆ. ನೆನಪಿರಲಿ, ಪರೀಕ್ಷೆಗೆ ಒಂದು ದಿನದ ಮುಂಚೆ ಈ ಹಿಂದೆ ಓದಿದ ಪಠ್ಯಾಂಶಗಳನ್ನು ಪುನರ್ಮನನ ಮಾಡಿಕೊಳ್ಳಬೇಕಷ್ಟೆ. ಅದನ್ನು ಬಿಟ್ಟು ಎಲ್ಲವನ್ನೂ ಓದುವುದು ಆರೋಗ್ಯಕರ ಹವ್ಯಾಸವಲ್ಲ.

ಕೆಲವು ಮಕ್ಕಳಲ್ಲಿ ಕಂಡುಬರುವ ಅನಪೇಕ್ಷಿತ ನಡವಳಿಕೆಗಳು

  1. ಪ್ರಶ್ನೆಗಳ ಬಗ್ಗೆ ಗಮನ ಹರಿಸದೆ ಕೇವಲ ಉತ್ತರಗಳನ್ನಷ್ಟೇ ಕಲಿಯುವುದು
  2. ಸರಳ ಪ್ರಶ್ನೋತ್ತರಗಳನ್ನು ನಿರ್ಲಕ್ಷ್ಯ ಮಾಡುವುದು
  3. ಕೇವಲ ಪರೀಕ್ಷೆಗಳು ಸಮೀಪಿಸಿದಾಗಲಷ್ಟೇ ಓದುವುದು
  4. ಓದಿದ ವಿಚಾರಗಳನ್ನು ಪುನರ್ಮನನ ಮಾಡದಿರುವುದು
  5. ಸಣ್ಣಸಣ್ಣ ಕಾರಣಗಳನ್ನು ಮುಂದಿಟ್ಟುಕೊAಡು ಶಾಲೆಗೆ ಗೈರು ಹಾಜರಾಗುವುದು
  6. ಶಿಕ್ಷಕರ ಒಡನಾಟದಿಂದ ದೂರ ಉಳಿಯುವುದು
  7. ಸಹಪಾಠಿಗಳಿಂದ ದೂರ ಉಳಿಯುವುದು
  8. ಸರಿಯಾಗಿ ಆಹಾರ ಸೇವಿಸದಿರುವುದು
  9. ಅಂದಿನ ಓದನ್ನು ಅಂದೇ ಮುಗಿಸದಿರುವುದು
  10. ಏಕಾಗ್ರತೆಯಿಲ್ಲದ ಅಧ್ಯಯನ
  11. ಓದುವುದನ್ನು ಹೊರೆ ಎಂದು ಭಾವಿಸುವುದು ಮತ್ತು ತೀವ್ರ ಆಲಸ್ಯ
  12. ಟಿವಿ ಅಥವಾ ಮೊಬೈಲ್ ಬಳಸುತ್ತಾ ಓದುವುದು
  13. ಪುಸ್ತಕಗಳನ್ನು ಎಲ್ಲೆಂದರಲ್ಲಿ ಹರಡುವುದು

ನಿಮ್ಮ ಓದು ಹೀಗಿರಲಿ

  • ಕಷ್ಟಪಟ್ಟು ಓದಬೇಡಿ; ಇಷ್ಟದಿಂದ ಓದಿರಿ
  • ಮೊದಲು ಸರಳ ಪ್ರಶ್ನೊತ್ತರಗಳನ್ನು ಖಾತ್ರಿಪಡಿಸಿಕೊಳ್ಳಿ

    ಮನೆ ವೇಳಾಪಟ್ಟಿಯ ಖಚಿತ ಪಾಲನೆ

  • ಓದಿದ ಪಠ್ಯಾಂಶಗಳನ್ನು ಪಟ್ಟಿ ಮಾಡುವುದು ಮತ್ತು ಪುನರ್ಮನನ ಮಾಡುವುದು

    ಪದ್ಯಗಳು, ವ್ಯಾಕರಣ, ಪ್ರಬಂಧ, ಪ್ರಮೇಯಗಳು, ಚಿತ್ರಗಳು, ಪತ್ರಲೇಖನಗಳ ನಿರಂತರ ಅಭ್ಯಾಸ

    ಕಠಿಣ ಪ್ರಶ್ನೆಗಳನ್ನು ಪಟ್ಟಿ ಮಾಡಿಕೊಂಡು ಶಿಕ್ಷಕರೊಂದಿಗೆೆ ಚರ್ಚಿಸುವುದು

    ನಿಯಮಿತ ಧ್ಯಾನ, ಪ್ರಾರ್ಥನೆ ಹಾಗೂ ನಿದ್ದೆ ಇರಲಿ

    ಓದುವ ಕೋಣೆಯಲ್ಲಿ ಸೂಕ್ತ ಗಾಳಿ, ಬೆಳಕಿನ ವ್ಯವಸ್ಥೆ ಮಾಡಿಕೊಳ್ಳುವುದು

  • ಸರಿಯಾದ ಭಂಗಿಯಲ್ಲಿ ಕುಳಿತು ಓದುವುದು

    ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಬಿಡಿಸುವುದು

    ಸಡಿಲವಾದ ಉಡುಪುಗಳನ್ನು ಧರಿಸುವುದು

  • ಸಹಪಾಠಿಗಳೊಂದಿಗೆ ಆರೋಗ್ಯಕರ ಚರ್ಚೆ

    ಸಮಯ ಮತ್ತು ಶಿಸ್ತಿಗೆ ಆದ್ಯತೆ ನೀಡುವುದು

  • ಪೋಷಕರೊಂದಿಗೆ ಪ್ರತಿದಿನ ಕನಿಷ್ಠ ಹತ್ತು ನಿಮಿಷಗಳ ಶೈಕ್ಷಣಿಕ ಚರ್ಚೆ

(ವಿ.ಕೆ ಕುಮಾರಸ್ವಾಮಿ
ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ವಿರುಪಾಪುರ,
ಮಾಗಡಿ ತಾಲ್ಲೂಕು, ರಾಮನಗರ ಜಿಲ್ಲೆ,
ಮೊಬೈಲ್ ಸಂಖ್ಯೆ : 9113906120)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ

Published

on

ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ.

ಭಾರತೀಯ ದಂಡ ಸಂಹಿತೆ 1860, ಭಾರತೀಯ ಸಾಕ್ಷ್ಯ ಕಾಯ್ದೆ 1872 ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ 1973 ಅನ್ನು ಬದಲಿಸುವ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಅವರು ಹೇಳಿದ್ದಾರೆ. ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.

“ಐಪಿಸಿ, ಸಿಆರ್‌ಪಿಸಿ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳು ಬದಲಾಗುತ್ತಿವೆ. ಸೂಕ್ತ ಸಮಾಲೋಚನೆ ಪ್ರಕ್ರಿಯೆ ಅನುಸರಣೆ ಹಾಗೂ ಕಾನೂನು ಆಯೋಗದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಮೂರು ಕಾನೂನುಗಳನ್ನು ಬದಲಾಯಿಸಲಾಗಿದೆ” ಎಂದು ಮೇಘವಾಲ್ ತಿಳಿಸಿದರು.”

ಈ ಮೂರು ಕಾನೂನುಗಳನ್ನು ಜುಲೈ 1 ರಿಂದ ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೆಸರಿನಲ್ಲಿ ಜಾರಿಗೆ ತರಲಾಗುವುದು. ಮೂರು ಹೊಸ ಕಾನೂನುಗಳ ತರಬೇತಿ ಸೌಲಭ್ಯಗಳನ್ನು ಎಲ್ಲಾ ರಾಜ್ಯಗಳಿಗೂ ಒದಗಿಸಲಾಗುತ್ತಿದೆ” ಎಂದು ಮೇಘವಾಲ್ ವಿವರಿಸಿದ್ದಾರೆ.”

ನಮ್ಮ ನ್ಯಾಯಾಂಗ ಅಕಾಡೆಮಿಗಳು, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು ಸಹ ಈ ಬಗ್ಗೆ ತರಬೇತಿ ನೀಡುತ್ತಿವೆ. ಎಲ್ಲವೂ ಜೊತೆಜೊತೆಯಾಗಿ ಸಾಗುತ್ತಿದೆ ಮತ್ತು ಜುಲೈ 1 ರಿಂದ, ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ನಿರ್ಣಾಯಕವಾದ ಈ ಎಲ್ಲಾ ಮೂರು ಕಾನೂನುಗಳನ್ನು ದೇಶದಲ್ಲಿ ಜಾರಿಗೆ ತರಲಾಗುವುದು” ಎಂದು ಅವರು ಸ್ಪಷ್ಟಪಡಿಸಿದರು.

ದೇಶದಲ್ಲಿ ಅಪರಾಧ ನ್ಯಾಯ ಸುಧಾರಣೆಯು ದೇಶದ ನ್ಯಾಯದಾನ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಇದು ಸೂಚಿಸುತ್ತದೆ. ಮಹಿಳೆಯರು, ಮಕ್ಕಳು ಮತ್ತು ರಾಷ್ಟ್ರದ ವಿರುದ್ಧದ ಅಪರಾಧಗಳನ್ನು ಇದು ಮುಂಚೂಣಿಯಲ್ಲಿರಿಸುತ್ತದೆ. ಅಲ್ಲದೆ ಇದು ವಸಾಹತುಶಾಹಿ ಯುಗದ ಕಾನೂನುಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ವ್ಯಾಪಕ ಟೀಕೆ

Published

on

ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ.

ರಾಜ್ಯ ಸರ್ಕಾರ ಮೊನ್ನೆಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ ನಂತರ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡೀಸೆಲ್ 3.5 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 8 ಸಾವಿರದ 500 ರೂಪಾಯಿಗಳನ್ನು ವರ್ಗಾವಣೆ ಮಾಡುವ ಭರವಸೆಯನ್ನು ಈಡೇರಿಸುವ ಬದಲು, ಕಾಂಗ್ರೆಸ್ ಆಡಳಿತದ ಕರ್ನಾಟಕ ಸರ್ಕಾರವು, ರಾಜ್ಯದ ಜನರಿಗೆ ಹೊರೆಯಾಗಿದೆ ಎಂದು ಹರ್ದೀಪ್ ಸಿಂಗ್ ಪುರಿ ಸಾಮಾಜಿಕ ಜಾಲತಾಣದಲ್ಲಿ ದೂರಿದ್ದಾರೆ. ಇಂತಹ ನಿರ್ಧಾರ ಹಣದುಬ್ಬರದ ಬಗ್ಗೆ ಮಾತನಾಡುವ ಕಾಂಗ್ರೆಸ್‌ನ ಬೂಟಾಟಿಕೆ ಬಹಿರಂಗಪಡಿಸುತ್ತದೆ. ಆದರೆ ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರತಿ ಲೀಟರ್‌ಗೆ ಸುಮಾರು 8 ರೂಪಾಯಿಗಳಿಂದ 12 ರೂಪಾಯಿಗಳಷ್ಟು ಹೆಚ್ಚುವರಿ ವ್ಯಾಟ್ ಅನ್ನು ವಿಧಿಸುತ್ತಿದೆ ಎಂದು ಸಚಿವರು ಆರೋಪಿಸಿದ್ದಾರೆ.

ಈ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಈಗ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ಆರೋಪಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಬಸ್ ದರ, ಹಾಲಿನ ದರ, ಅಗತ್ಯ ವಸ್ತುಗಳ ದರ ಹೆಚ್ಚಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಆಡಳಿತದ ವ್ಯವಸ್ಥೆ ಕುಸಿದುಹೋಗಿದೆ ಎಂದು ದೂರಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಪ್ರಲ್ಹಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ, ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ವ್ಯಾಟ್ ಹೆಚ್ಚಳ ಬಳಿಕ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲಿಯೇ ದರ ಕಡಿಮೆ ಇದೆ. ಆರ್ಥಿಕವಾಗಿ ಬಲಿಷ್ಠವಾಗಿರುವ ಮಹಾರಾಷ್ಟ್ರಕ್ಕಿಂತಲ್ಲೂ ಹಾಗೂ ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತಲ್ಲೂ ನಮ್ಮ ರಾಜ್ಯದಲ್ಲಿ ದರ ಕಡಿಮೆ ಇದೆ ಎಂದು ಹೇಳಿದ್ದಾರೆ.

ಈ ಹಿಂದಿನ ಬಿಜೆಪಿ ಸರ್ಕಾರ ತೆರಿಗೆ ಕಡಿಮೆ ಮಾಡಿದ್ದರೂ, ಕೇಂದ್ರ ಸರ್ಕಾರ ಪದೇ ಪದೆ ವ್ಯಾಟ್ ಹೆಚ್ಚಳ ಮಾಡಿತ್ತು ಎಂದು ಆರೋಪಿಸಿದ್ದಾರೆ. ರಾಜ್ಯದ ತೆರಿಗೆ ಹೆಚ್ಚಳದಿಂದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಷಹಾರ | ಹೋಟೆಲ್, ರೆಸ್ಟೋರೆಂಟ್ ತಪಾಸಣೆಗೆ ಕ್ರಮ

Published

on

ಸುದ್ದಿದಿನಡೆಸ್ಕ್: ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಉತ್ತಮ ಗುಣಮಟ್ಟ, ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹೋಟೇಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ The Food Safety and Standards Act-2006 ಮತ್ತು 2011 ನಿಯಮಗಳಲ್ಲಿ ಸೂಚಿಸಿರುವ ಮಾರ್ಗಸೂಚಿಯಂತೆ ತಪಾಸಣೆ ನಡೆಸಿ ಸೂಕ್ತ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೋಟೆಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ ಸ್ವಚ್ಚತೆ ಇಲ್ಲದೆ, ಕಲುಷಿತ, ವಿಷಹಾರ ಸೇವನೆ, ಕಲಬೆರಕೆ ಪದಾರ್ಥಗಳು, ಅವಧಿ ಮೀರಿದ ಪದಾರ್ಥಗಳ ಉಪಯೋಗಿಸುತ್ತಿರುವಂತೆ ಘಟನೆಗಳು ಸಂಭವಿಸುತ್ತಿದ್ದು, ರಾಮೇಶ್ವರ ಕೆಫೆ, ಇಂದಿರಾನಗರ ಬೆಂಗಳೂರು ಹಾಗೂ ಇನ್ನಿತರೆ ಸಮಸ್ಯೆಗಳಿಗೆ ಸಂಬಂಧಿಸಿದಂತೆ, ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಂಡದಲ್ಲಿ ವರದಿಯಾಗಿರುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending