ದಿನದ ಸುದ್ದಿ
[ ಕ್ಯಾರೆಟ್ ನ ಉಪಯೋಗ ] ಔಷಧ ಗುಣಗಳ ಕಣಜ ಕ್ಯಾರೆಟ್ !
ದೇಹ ಸದಾ ಚಟುವಟಿಕೆಯಿಂದ ಇರಬೇಕಾದರೆ ಕೊಬ್ಬಿನಾಂಶ ಅಗತ್ಯ. 30 ವರ್ಷದ ನಂತರ ಕೊಬ್ಬಿನ ಅಂಶದಲ್ಲಿ ಸಮತೋಲನ ಕಾಪಾಡಿಕೊಳ್ಳುವುದು ಕೂಡ ಮುಖ್ಯ. ಆದರೆ, ಒತ್ತಡದ ಜೀವನದಲ್ಲಿ ಬಹುತೇಕರಿಗೆ ಅದು ಸಾಧ್ಯವಾಗುತ್ತಿಲ್ಲ ಎಂಬುದು ನೋವಿನ ಸಂಗತಿ. ನಾವು ದಿನನಿತ್ಯ ತೆಗೆದುಕೊಳ್ಳುವ ಆಹಾರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತರಕಾರಿ ಬಳಸಬೇಕು. ಇದರಿಂದ ಕೊಬ್ಬಿನಾಂಶದಲ್ಲಿ ಸಮತೋಲನ ಕಾಪಾಡಿಕೊಳ್ಳಲು ಅನುಕೂಲವಾಗುತ್ತದೆ. ಅದರಂತೆ ತರಕಾರಿಯಲ್ಲಿ ಹೆಚ್ಚು ಮುಖ್ಯವಾಗಿದ್ದು ಕ್ಯಾರೆಟ್.
ಏಕೆಂದರೆ ನಮ್ಮ ದೇಹದ ಮುಖ್ಯ ಅಂಗ ಕಣ್ಣಿನ ಆರೋಗ್ಯ ಕಾಪಾಡಲು ಕ್ಯಾರೆಟ್ ಉತ್ತಮ ತರಕಾರಿ. ಜತೆಗೆ ದೇಹದ ಲವಲವಿಕೆ ಹೆಚ್ಚಿಸುತ್ತದೆ. ನಾವು ದಿನವೂ ಕ್ಯಾರೆಟ್ ಬಳಸವುದರಿಂದ ಸಾಕಷ್ಟು ಪ್ರಯೋಜನೆಗಳು ಆಗುತ್ತವೆ. ಕ್ಯಾರೆಟ್ ನಿಂದ ದೇಹಕ್ಕೆ ಸಮತೋಲನದಲ್ಲಿ ವಿಟಮಿನ್ಗಳು ಸಿಗುತ್ತವೆ. ಚರ್ಮದ ಕಾಂತಿ ಹೆಚ್ಚಿಸುತ್ತದೆ. ಮಾರಕ ಕ್ಯಾನ್ಸರ್ ತಡೆಗಟ್ಟಲು ಸಹ ಕ್ಯಾರೇಟ್ ಅವಶ್ಯ ಎನ್ನುತ್ತಾರೆ ಹಿರಿಯರು.
ಕಣ್ಣಿನ ದೃಷ್ಟಿ ಶಕ್ತಿ ವೃದ್ಧಿಸಲು ಸಹಕಾರಿ ಈ ಕ್ಯಾರೆಟ್
ಕ್ಯಾರೆಟ್ ನಲ್ಲಿವೆ ಕ್ಯಾನ್ಸರ್ ಪ್ರತಿಬಂಧಕ ಶಕ್ತಿ
ಫಲ್ಕಾರಿನಾಲ್ ಎಂಬ ನೈಸರ್ಗಿಕ ಔಷಧಿ ಕ್ಯಾರೆಟ್ ನಲ್ಲಿದೆ. ಇದು ಶೀಲಿಂದ್ರಗಳಿಂದ ಬರುವ ರೋಗಗಳನ್ನು ಬೇರುಮಟ್ಟದಲ್ಲಿ ತಡೆಯುತ್ತದೆ. ಶ್ವಾಸಕೋಶದ ಕ್ಯಾನ್ಸರ್ , ಸ್ತನ ಕ್ಯಾನ್ಸರ್ ಮತ್ತು ಕರುಳಿನ ಕ್ಯಾನ್ಸರ್ ದೂರ ಮಾಡಲು ಕ್ಯಾರೆಟ್ ಸಹಾಯ ಮಾಡುತ್ತದೆ ಎಂದರೆ ನೀವು ಅಚ್ಚರಿಪಡಬಹುದು.
ವಯಸ್ಸಾಗದಂತೆ ತಡೆಯುತ್ತದೆ ಕ್ಯಾರೆಟ್
ಚರ್ಮಕಾಂತಿ ವೃದ್ಧಿಸಲು ಉತ್ತೇಜನ ನೀಡುತ್ತದೆ ಕ್ಯಾರೆಟ್
ಸೋಂಕು ತಡೆಯಲು ಸಹಾಯ ಮಾಡುತ್ತದೆ ಕ್ಯಾರೆಟ್
ಹೃದ್ರೋಗ ತಡೆಯಲು ಸಹಕಾರಿ
ಕ್ಯಾರೇಟ್ನ ಹೇರಳವಾಗಿ ಸೇವಿಸುವುದರಿಂದ ಹೃದಯ ಸಂಬಂಧಿ ಕಾಯಿಲೆ ಕಡಿಮೆಯಾಗುತ್ತೆ ಎಂದು ಅಧ್ಯಯನಗಳು ದೃಢಪಡಿಸುತ್ತವೆ. ಹಲ್ಲು ಮತ್ತು ಒಸಡುಗಳ ರಕ್ಷಣೆಗೂ ಕೂಡ ಕ್ಯಾರೆಟ್ ಸೇವನೆ ಸಹಾಯಕ.
ಆರೋಗ್ಯ, ಆಹಾರ, ಜೀವನಶೈಲಿ ಕುರಿತು suddidina.com ಗೆ ನೀವು ಕೂಡ ಲೇಖನ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ suddidina@gmail.com ಗೆ ಸಂಪರ್ಕಿಸಿ.

ದಿನದ ಸುದ್ದಿ
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.
ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ
-
ದಿನದ ಸುದ್ದಿ6 days ago
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್
-
ದಿನದ ಸುದ್ದಿ5 days ago
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ