Connect with us

ದಿನದ ಸುದ್ದಿ

[ ಕ್ಯಾರೆಟ್ ನ ಉಪಯೋಗ ] ಔಷಧ ಗುಣಗಳ ಕಣಜ ಕ್ಯಾರೆಟ್ !

Published

on

ದೇಹ ಸದಾ ಚಟುವಟಿಕೆಯಿಂದ ಇರಬೇಕಾದರೆ ಕೊಬ್ಬಿನಾಂಶ ಅಗತ್ಯ. 30 ವರ್ಷದ ನಂತರ ಕೊಬ್ಬಿನ ಅಂಶದಲ್ಲಿ ಸಮತೋಲನ ಕಾಪಾಡಿಕೊಳ್ಳುವುದು ಕೂಡ ಮುಖ್ಯ. ಆದರೆ, ಒತ್ತಡದ ಜೀವನದಲ್ಲಿ ಬಹುತೇಕರಿಗೆ ಅದು ಸಾಧ್ಯವಾಗುತ್ತಿಲ್ಲ ಎಂಬುದು ನೋವಿನ ಸಂಗತಿ. ನಾವು ದಿನನಿತ್ಯ ತೆಗೆದುಕೊಳ್ಳುವ ಆಹಾರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತರಕಾರಿ ಬಳಸಬೇಕು. ಇದರಿಂದ ಕೊಬ್ಬಿನಾಂಶದಲ್ಲಿ ಸಮತೋಲನ ಕಾಪಾಡಿಕೊಳ್ಳಲು ಅನುಕೂಲವಾಗುತ್ತದೆ. ಅದರಂತೆ ತರಕಾರಿಯಲ್ಲಿ ಹೆಚ್ಚು ಮುಖ್ಯವಾಗಿದ್ದು ಕ್ಯಾರೆಟ್.

ಏಕೆಂದರೆ ನಮ್ಮ ದೇಹದ ಮುಖ್ಯ ಅಂಗ ಕಣ್ಣಿನ ಆರೋಗ್ಯ ಕಾಪಾಡಲು ಕ್ಯಾರೆಟ್ ಉತ್ತಮ ತರಕಾರಿ. ಜತೆಗೆ ದೇಹದ ಲವಲವಿಕೆ ಹೆಚ್ಚಿಸುತ್ತದೆ. ನಾವು ದಿನವೂ ಕ್ಯಾರೆಟ್ ಬಳಸವುದರಿಂದ ಸಾಕಷ್ಟು ಪ್ರಯೋಜನೆಗಳು ಆಗುತ್ತವೆ.  ಕ್ಯಾರೆಟ್ ನಿಂದ ದೇಹಕ್ಕೆ ಸಮತೋಲನದಲ್ಲಿ ವಿಟಮಿನ್‌ಗಳು ಸಿಗುತ್ತವೆ. ಚರ್ಮದ ಕಾಂತಿ ಹೆಚ್ಚಿಸುತ್ತದೆ.  ಮಾರಕ ಕ್ಯಾನ್ಸರ್ ತಡೆಗಟ್ಟಲು ಸಹ ಕ್ಯಾರೇಟ್ ಅವಶ್ಯ ಎನ್ನುತ್ತಾರೆ ಹಿರಿಯರು.

ಕಣ್ಣಿನ ದೃಷ್ಟಿ ಶಕ್ತಿ ವೃದ್ಧಿಸಲು ಸಹಕಾರಿ ಈ ಕ್ಯಾರೆಟ್

ಕ್ಯಾರೆಟ್ ಸೇವನೆಯಿಂದ ಕಣ್ಣುಗಳ ಆರೋಗ್ಯ ವೃದ್ಧಿಸುತ್ತದೆ. ಕ್ಯಾರೇಟ್‌ನಲ್ಲಿ ಎ ವಿಟಮಿನ್ ಹೆಚ್ಚಿರುವ ಕಾರಣ ತಜ್ಞರು ಇದರ ಸೇವನೆಗೆ ಹೆಚ್ಚು ಶಿಫಾರಸು ಮಾಡುವುದುಂಟು. ರಾತ್ರಿ ಹೊತ್ತು ದೃಷ್ಟಿಗೆ ಅಗತ್ಯವಿರುವ ಕೆನ್ನೆರಳೆ ವರ್ಣದ್ರವ್ಯ ಒದಗಿಸುವ ವಿಶೇಷ ಶಕ್ತಿ ಕ್ಯಾರೇಟ್‌ಗೆ ಇದೆ. ಜತೆಗೆ ಕಣ್ಣಿನ ಪೊರೆ ಬರದಂತೆ ಕ್ಯಾರೆಟ್ ರಕ್ಷಣಾ ಕಾರ್ಯನಿರ್ವಹಿಸುತ್ತದೆ.

ಕ್ಯಾರೆಟ್ ನಲ್ಲಿವೆ ಕ್ಯಾನ್ಸರ್ ಪ್ರತಿಬಂಧಕ ಶಕ್ತಿ

ಫಲ್ಕಾರಿನಾಲ್ ಎಂಬ ನೈಸರ್ಗಿಕ ಔಷಧಿ ಕ್ಯಾರೆಟ್ ನಲ್ಲಿದೆ. ಇದು ಶೀಲಿಂದ್ರಗಳಿಂದ ಬರುವ ರೋಗಗಳನ್ನು ಬೇರುಮಟ್ಟದಲ್ಲಿ ತಡೆಯುತ್ತದೆ. ಶ್ವಾಸಕೋಶದ ಕ್ಯಾನ್ಸರ್ , ಸ್ತನ ಕ್ಯಾನ್ಸರ್ ಮತ್ತು ಕರುಳಿನ ಕ್ಯಾನ್ಸರ್ ದೂರ ಮಾಡಲು ಕ್ಯಾರೆಟ್ ಸಹಾಯ ಮಾಡುತ್ತದೆ ಎಂದರೆ ನೀವು ಅಚ್ಚರಿಪಡಬಹುದು.

ವಯಸ್ಸಾಗದಂತೆ ತಡೆಯುತ್ತದೆ ಕ್ಯಾರೆಟ್

ಜೀವನ ಕ್ರಮ, ಆಹಾರ ಪದ್ಧತಿಯಿಂದ 20ರ ಯುವಕನು ಕೂಡ 30 ವರ್ಷ ದಾಟಿ ವಯಸ್ಸಾದಂತೆ ಕಾಣುತ್ತಾನೆ. ಇದಕ್ಕೆ ಸೇವಿಸುವ ಜಂಕ್‌ಫುಡ್, ಒತ್ತಡ ಬದುಕಿನ ಕೆಲಸಗಳೇ ಕಾರಣ. ನಾವು ಆಹಾರದಲ್ಲಿ ಕ್ಯಾರೆಟ್ ಬಳಸಿದರೆ ಪಚನ ಕ್ರಿಯೆ ವೃದ್ಧಿಸಿ ಜೀವಕೋಶಗಳು ವಯಸ್ಸಾಗುವುದನ್ನು ಮುಂದೂಡುತ್ತದೆ ಎನ್ನುತ್ತಾರೆ ತಜ್ಞರು.

ಚರ್ಮಕಾಂತಿ ವೃದ್ಧಿಸಲು ಉತ್ತೇಜನ ನೀಡುತ್ತದೆ ಕ್ಯಾರೆಟ್

ನಾವು ಕೆಲಸ ಮಾಡಲು ಮನೆಯಿಂದ ಹೊರಗೆ ಹೋಗಬೇಕಾಗುತ್ತದೆ, ಪರಿಸರದಲ್ಲಿ ಉಂಟಾಗುತ್ತಿರುವ ಮಾಲಿನ್ಯ, ಹೊಗೆ, ದೂಳಿನಿಂದ ಪಾರಾಗಿಬರುವುದು ಕಷ್ಟ. ಇವು ನಮ್ಮ ದೇಹದ ಮೇಲೆ ಬಿದ್ದು ನಮ್ಮ ಆರೋಗ್ಯವಲ್ಲದೇ ದೇಹದ ಚರ್ಮಕಾಂತಿಯನ್ನು ಕಡಿಮೆಗೊಳಿಸುತ್ತವೆ. ಇದನ್ನು ತಡೆಯಲು ನಮಗೆ ವಿಟಮಿನ್ ಎ ಹಾಗೂ ಆಂಟಿಆಕ್ಸಿಡೆಂಟ್‌ಗಳು ಬೇಕು. ವಿಟಮಿನ್ ಎ ಹೇರಳವಾಗಿರುವ ಕ್ಯಾರೆಟ್ ಸೇವಿಸಿದರೆ ಆರೋಗ್ಯವೂ ಚೆನ್ನಾಗಿದ್ದು, ಚರ್ಮಕಾಂತಿ ವೃದ್ಧಿಸುತ್ತದೆ.

ಸೋಂಕು ತಡೆಯಲು ಸಹಾಯ ಮಾಡುತ್ತದೆ ಕ್ಯಾರೆಟ್

ಸೋಂಕನ್ನು ತಡೆಗಟ್ಟಲು ಕ್ಯಾರೆಟ್ ಉತ್ತಮ ಗಿಡಮೂಲಿಕೆ. ಕ್ಯಾರೇಟ್‌ನ್ನು ಬೇಯಿಸಿ ಅಥವಾ ಹಾಗೆಯೇ ಸೇವಿಸಬಹುದು.

ಹೃದ್ರೋಗ ತಡೆಯಲು ಸಹಕಾರಿ

ಕ್ಯಾರೇಟ್‌ನ ಹೇರಳವಾಗಿ ಸೇವಿಸುವುದರಿಂದ ಹೃದಯ ಸಂಬಂಧಿ ಕಾಯಿಲೆ ಕಡಿಮೆಯಾಗುತ್ತೆ ಎಂದು ಅಧ್ಯಯನಗಳು ದೃಢಪಡಿಸುತ್ತವೆ. ಹಲ್ಲು ಮತ್ತು ಒಸಡುಗಳ ರಕ್ಷಣೆಗೂ ಕೂಡ ಕ್ಯಾರೆಟ್ ಸೇವನೆ ಸಹಾಯಕ.

ಒಟ್ಟಾರೆ ಔಷಧ ಗುಣಗಳ ಖಣಜವಾಗಿರುವ ಕ್ಯಾರೇಟ್‌ನ ನಿಯಮಿತ ಸೇವನೆಯಿಂದ ಹಲವು ರೋಗಗಳಿಂದ ದೂರವಿರಲು ಸಾಧ್ಯ, ಆದರೆ, ಸೇವಿಸುವ ಪ್ರಮಾಣ ಹಾಗೂ ಸೇವಿಸುವ ಬಗೆ ಕುರಿತು ಅರಿತುಕೊಳ್ಳುವುದು ಉತ್ತಮ.

ಆರೋಗ್ಯ, ಆಹಾರ, ಜೀವನಶೈಲಿ ಕುರಿತು suddidina.com ಗೆ ನೀವು ಕೂಡ ಲೇಖನ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ suddidina@gmail.com  ಗೆ ಸಂಪರ್ಕಿಸಿ.

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಕ್ರೀಡೆ15 hours ago

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ...

ದಿನದ ಸುದ್ದಿ15 hours ago

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ...

ದಿನದ ಸುದ್ದಿ16 hours ago

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ16 hours ago

HEAVY RAIN | ಮೂರು ದಿನ ಭಾರೀ ಮಳೆ ; ಆರೆಂಜ್ ಅಲರ್ಟ್ ಘೋಷಣೆ

ಸುದ್ದಿದಿನಡೆಸ್ಕ್:ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ಘೋಷಿಸಿದೆ. ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ,...

ದಿನದ ಸುದ್ದಿ16 hours ago

ಇಂದು – ನಾಳೆ ಹಾವೇರಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಇಂದು ಮತ್ತು ನಾಳೆ, ಹಾವೇರಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಕಡ ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ, ಐಟಿಐ ಮತ್ತು...

ದಿನದ ಸುದ್ದಿ18 hours ago

ಯುವಕರಿಗೆ ಶಿಕ್ಷಣ, ಕೌಶಲ್ಯ ಹೆಚ್ಚಿಸುವ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ

ಸುದ್ದಿದಿನಡೆಸ್ಕ್:ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ನವದೆಹಲಿಯಲ್ಲಿ ನಿನ್ನೆ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ ನೀಡಿದರು. ಸಮಾರಂಭ ಉದ್ದೇಶಿಸಿ ಮಾತನಾಡಿದ...

ದಿನದ ಸುದ್ದಿ18 hours ago

ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ

ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ...

ದಿನದ ಸುದ್ದಿ1 day ago

ದಾವಣಗೆರೆ | ನಾಳೆ ಎಲ್ಲೆಲ್ಲಿ ಕರೆಂಟ್ ಕಟ್..

ಸುದ್ದಿದಿನ,ದಾವಣಗೆರೆ:ಜಲಸಿರಿ ಕಾಮಗಾರಿ ಪ್ರಯುಕ್ತ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಎಫ್.15 ರಂಗನಾಥ ಫೀಡರ್ ವ್ಯಾಪ್ತಿಯ ವಿದ್ಯಾನಗರ ಕೊನೆ ಬಸ್ ನಿಲ್ದಾಣದಿಂದ...

ದಿನದ ಸುದ್ದಿ1 day ago

ದಾವಣಗೆರೆ | ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್

ಸುದ್ದಿದಿನ,ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ್...

ದಿನದ ಸುದ್ದಿ1 day ago

ದಾವಣಗೆರೆ ಜಿಲ್ಲೆಯಲ್ಲಿ ವಾಡಿಕೆಗಿಂತ ಈ ಬಾರಿ ಹೆಚ್ಚು ಮಳೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರಿನಲ್ಲಿ ವಾಡಿಕೆಗಿಂತ 41 ಮಿ.ಮೀ ಹೆಚ್ಚು ಮಳೆಯಾಗಿದೆ. 2024 ರ ಜನವರಿಯಿಂದ ಜುಲೈ 23 ರ ವರೆಗಿನ...

Trending