ದಿನದ ಸುದ್ದಿ

ಖ್ಯಾತ ಬಹುಭಾಷಾ ನಟ ಪ್ರಕಾಶ್ ರೈಗೆ ಸಂಕಷ್ಟ

Published

on

ಸುದ್ದಿದಿನ ಡೆಸ್ಕ್: ಹಿಂದೂಗಳ ಭಾವನೆ ಕೆರಳಿಸಿದ ಆರೋಪದ ಮೇಲೆ ಪ್ರಕಾಶ್​ ರೈ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಗೋವುಗಳ ಬಗ್ಗೆ ಕೀಳಾಗಿ ಮಾತನಾಡಿದ ಹಿನ್ನೆಲೆಯಲ್ಲಿ ವಕೀಲ ಎನ್​.ಕಿರಣ್​ ಎಂಬುವವರಿಂದ ಪಿಸಿಆರ್ ದಾಖಲಿಸಿದ್ದಾರೆ. ನಗರದ ಮ್ಯಾಜಿಸ್ಟ್ರೇಟ್​ ಕೋರ್ಟ್​ನಲ್ಲಿ ದೂರು ನೀಡಿದ್ದಾರೆ.

ಹಲವೆಡೆ ಹಿಂದುಗಳ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿದ್ದಾರೆ. ಪ್ರಕಾಶ್​ ರಾಜ್​ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಮನವಿ ಮಾಡಿದ್ದಾರೆ. ಹನುಮಂತನಗರ ಪೊಲೀಸ್​ ಠಾಣೆಗೂ ವಕೀಲ ಕಿರಣ್ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ 4ನೇ ಎಸಿಎಂಎಂ ಕೋರ್ಟ್ ವಿಚಾರಣೆ ನಡೆಸಿದ್ದು, ನವೆಂಬರ್ 25ಕ್ಕೆ
ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ.

 

Leave a Reply

Your email address will not be published. Required fields are marked *

Trending

Exit mobile version