ಬಹಿರಂಗ
ಜಾತಿ ಪದ್ದತಿ : ಎಲ್ಲರೂ ಓದಲೇ ಬೇಕಾದ ಡಾ. ಅಂಬೇಡ್ಕರ್ ಅವರ ಬರಹ..!

ಜಾತಿಪದ್ಧತಿಯ ಸಮರ್ಥನೆಗಾಗಿ ಕೆಲವರು ವಂಶಶುದ್ದಿಯ ತತ್ವವನ್ನು ಬಳಸಿಕೊಂಡಿದ್ದಾರೆ . ಒಂದು ಜನಾಂಗದ ಅಥವಾ ವಂಶದ ಶುದ್ಧತೆಯನ್ನು ಕಾಪಾಡುವುದೇ ಜಾತಿಯ ಉದ್ದೇಶವೆಂದು ವಾದಿಸಲಾಗುತ್ತದೆ . ವಂಶಶಾಸ್ತ್ರಜ್ಞರ ಮೇರೆಗೆ ಜಗತ್ತಿನಲ್ಲಿ ಈಗ ಎಲ್ಲಿಯೂ ಶುದ್ದವಂಶವೆಂಬುದು ಉಳಿದಿಲ್ಲ . ಎಲ್ಲ ಕಡೆಯೂ ವಂಶಗಳು ಸಂಕರವಾಗಿ ಹೋಗಿವೆ . ಭಾರತದಲ್ಲಿ ಈ ಸಂಕರ ವಿಶೇಷವಾಗಿ ನಡೆದಿದೆ.
ಹಿಂದೂ ಜನತೆಯಲ್ಲಿ ಪರಕೀಯ ಅಂಶಗಳು ‘ ಎಂಬ ತಮ್ಮ ಲೇಖನದಲ್ಲಿ ಶ್ರೀ ಡಿ . ಆರ್ . ಭಂಡಾರ್ಕರ್ ಅವರು ಹೀಗೆ ಹೇಳಿದ್ದಾರೆ , “ ಪರಕೀಯ ಅಂಶ ಬೆರೆಯದಂತಹ ಒಂದು ವರ್ಗವಾಗಲಿ , ಜಾತಿಯಾಗಲಿ ಭಾರತದಲ್ಲಿ ಉಳಿದಿಲ್ಲ. ರಜಪೂತ , ಮರಾಠ ಮೊದಲಾದ ಕೃತಿಯ ವರ್ಗಗಳಲ್ಲಿ ಮಾತ್ರವಲ್ಲ ತಾವು ಸಂಪೂರ್ಣ ಶುದ್ದರೆಂದು ಭ್ರಮಿಸಿಕೊಂಡಿರುವ ಬ್ರಾಹ್ಮಣರಲ್ಲೂ ಕೂಡ ಪರಕೀಯ ರಕ್ತಸಂಕರವಾಗಿದೆ ” , ವಂಶ ಸಂಕರವನ್ನು ತಡೆಯುವ ಅಥವಾ ರಕ್ತಶುದ್ದಿಯನ್ನು ರಕ್ಷಿಸಿಕೊಳ್ಳುವ ಮಾರ್ಗವಾಗಿಯೇ ಜಾತಿಪದ್ಧತಿ ಬೆಳೆಯಿತೆಂದು ಹೇಳಲಾಗದು ವಾಸ್ತವವಾಗಿ ನೋಡಿದರೆ ಭಾರತದ ವಿವಿಧ ಜನಾಂಗಗಳಲ್ಲಿ ಪರಸ್ಪರ ರಕ್ತಸಂಬಂಧ ಹಾಗೂ ಸಂಸ 3 ಸಮನ್ವಯ ನಡೆದುಹೋಗಿ ಎಷ್ಟೋ ಕಾಲದ ನಂತರ ಜಾತಿಪದ್ಧತಿ ಹುಟ್ಟಿಕೊಂಡಿತು .
ಜಾತಿ ಭೇದಗಳನ್ನು, ಜನಾಂಗ ಭೇದಗಳೆಂದು ಭ್ರಮಿಸಿ ಹಾಗೆ ನಡೆದುಕೊಳ್ಳುವುದೆಂದರೆ ವಸ್ತುಸ್ಥಿತಿಯ ವಿಪರ್ಯಾಸ. ಪಂಜಾಬ್ ಬ್ರಾಹ್ಮಣನಿಗೂ ಮದ್ರಾಸಿ ಬ್ರಾಹ್ಮಣನಿಗೂ ನಡುವೆ ಯಾವ ವಂಶ ಸಂಬಂಧವಿದೆ ? ಬಂಗಾಳದ ಅಸ ಶನಿಗೆ ಮದ್ರಾಸಿ ಅಸ್ಪಶ್ಯನೊಡನೆ ಯಾವ ವಂಶೀಯ ಸಂಬಂಧವಿದೆ ? ಪಂಜಾಬದ ಬ್ರಾಹ್ಮಣನಿಗೂ ಪಂಜಾಬದ ಚಮಾರನಿಗೂ ಯಾವ ವಂಶೀಯ ಭೇದವಿದೆ ? ಮದ್ರಾಸಿ ಬ್ರಾಹ್ಮಣನಿಗೂ ಮದ್ರಾಸಿ ಚಂಡಾಲನಿಗೂ ಯಾವ ವಂಶಭೇದವಿದೆ ? ಪಂಜಾಬದ ಬ್ರಾಹ್ಮಣ ಹಾಗೂ ಚಮ್ಮಾರ ಇಬ್ಬರೂ ಒಂದೇ ವಂಶಕ್ಕೆ ಸೇರಿದವರು . ಇದೇ ಮಾತು ಮದ್ರಾಸಿಗಳಿಗೂ ಅನ್ವಯಿಸುತ್ತದೆ. ಜಾತಿಪದ್ಧತಿ ವಂಶಭೇದವನ್ನು ಗುರುತಿಸುವುದಿಲ್ಲ . ಒಂದೇ ವಂಶದವರಲ್ಲಿ ಸಾಮಾಜಿಕ ಭೇದಗಳನ್ನು ಮಾತ್ರ ಜಾತಿಪದ್ಧತಿ ಉಂಟುಮಾಡಿದೆ.
ಒಂದು ವೇಳೆ ಜಾತಿಭೇದ ವಂಶಭೇದವೆಂದೇ ಇದ್ದಿತೆಂದು ಭಾವಿಸೋಣ . ಹಾಗಿದ್ದಾಗ ಅಂತರ್ಜಾತೀಯ ವಿವಾಹಗಳ ಮೂಲಕ ವಂಶಗಳು ಸಂಕರವಾದರೆ ತಪ್ಪೇನಾಯಿತು ? ಮನುಷ್ಯರಿಗೂ ಇತರ ಪ್ರಾಣಿಗಳಿಗೂ ಇರುವ ಅಂತರ ತುಂಬ ದೊಡ್ಡದು . ಆದುದರಿಂದ ವಿಜ್ಞಾನಿಗಳು ಮನುಷ್ಯರನ್ನು ಹಾಗೂ ಪ್ರಾಣಿಗಳನ್ನು ಎರಡು ಪ್ರತ್ಯೇಕ ವರ್ಗಗಳಾಗಿ ವಿಂಗಡಿಸಿದ್ದಾರೆ . ಜನಾಂಗದವು ಜೀವಿಗಳ ವರ್ಗಭೇದವೆಂದು ವಿಜ್ಞಾನಿಗಳು ಒಪ್ಪುವುದಿಲ್ಲ . ವಿವಿಧ ಜನಾಂಗಗಳು ಒಂದೇ ವರ್ಗದ ವಿವಿಧ ಶಾಖೆಗಳು ಮಾತ್ರ . ಹೀಗಿರುವುದರಿಂದ ಈ ವಿವಿಧ ಜನಾಂಗಗಳು ರಕ್ತಸಂಬಂಧ ಮಾಡಿದ್ದಲ್ಲಿ ಹುಟ್ಟುವ ಜೀವಿಗಳು ವಂಶಾಭಿವೃದ್ದಿಗೆ ಸಮರ್ಥವಾಗಿ ಇರುವುವಲ್ಲದೆ ನಪುಂಸಕವಾಗಲಾರವು . ಜಾತಿಪದ್ಧತಿಯನ್ನು ಸಮರ್ಥಿಸುವುದಕ್ಕಾಗಿ ವಂಶಪರಂಪರೆ , ಉತ್ತಮ ಸಂತಾನ ಮುಂತಾಗಿ ಹೇರಳವಾದ ಹುಚ್ಚು ಮಾತುಗಳನ್ನು ಆಡಲಾಗುತ್ತಿದೆ . ಜಾತಿಪದ್ಧತಿ ಉತ್ತಮ ಸಂತಾನ ತತ್ವಕ್ಕೆ ಬದ್ದವಾಗಿಯೇ ಇದ್ದ ಪಕ್ಷದಲ್ಲಿ ಅದನ್ನು ಯಾರೂ ವಿರೋಧಿಸಲಾರರು . ಆದರೆ ಜಾತಿಪದ್ಧತಿ ಉತ್ತಮ ಗಂಡು ಹಾಗೂ ಉತ್ತಮ ಹೆಣ್ಣುಗಳ ದಾಂಪತ್ಯಕ್ಕೆ ಸಹಾಯಕವಾಗಿದೆಯೆ ?
ಜಾತಿಪದ್ಧತಿ ನಿಷೇಧಾತ್ಮಕವಾಗಿದೆ, ಅಂತರ್ಜಾತಿಯ ದಾಂಪತ್ಯವನ್ನು ಅದು ಪ್ರತಿಬಂಧಿಸುತ್ತದೆ . ಜಾತಿಯೆಂಬುದು ಉತ್ತಮ ಸಂತಾನ ದೃಷ್ಟಿಯಿಂದ ಹುಟ್ಟಿದ್ದಲ್ಲ . ಜಾತಿ ಜನಾಂಗವೆಂದಾದರೆ , ಉಪಜಾತಿಗಳು ಜನಾಂಗಭೇದಗಳಾಗವು ; ಏಕೆಂದರೆ ಒಂದೇ ಜನಾಂಗದ ಉಪಭೇದಗಳಾದುದರಿಂದ ಅದು ಅದೇ ಜನಾಂಗಕ್ಕೆ ಸೇರಿರುತ್ತದೆ . ಹೀಗಿರುವುದರಿಂದ ಅಂತರ್ಜಾತೀಯ ವಿವಾಹಕ್ಕೆ ಹಾಗೂ ಅಂತರ್ಜಾತೀಯ ಭೋಜನಕ್ಕೆ ಪ್ರತಿಬಂಧವೇಕೆ ? ಜನಾಂಗದ ಅಥವಾ ವಂಶದ ಶುದ್ದಿಯನ್ನು ಕಾಪಾಡುವುದು ಇದರ ಉದ್ದೇಶವಲ್ಲ ಎಂದಾಯಿತು . ಜಾತಿ ಉಪಜಾತಿಗಳ ಸಹಭೋಜನವನ್ನು ಪ್ರತಿಬಂಧಿಸುವ ಉದ್ದೇಶವೇನು ? ಸಹಭೋಜನದಿಂದ ವಂಶ ಹಾಳಾಗಲಾರದು , ಉತ್ತಮವೂ ಆಗಲಾರದು . ಇದನ್ನೆಲ್ಲ ನೋಡಿದಾಗ ಜಾತಿಭೇದ ವೈಜ್ಞಾನಿಕವಲ್ಲವೆಂದು ಸಿದ್ದವಾಗುತ್ತದೆ . ಉತ್ತಮ ಸಂತಾನ ತತ್ವವನ್ನು ಬಳಸಿಕೊಂಡು ಜಾತಿಯನ್ನು ಸಮರ್ಥಿಸುವುದೆಂದರೆ ಅವೈಜ್ಞಾನಿಕ ವಿಷಯಕ್ಕೆ ವೈಜ್ಞಾನಿಕ ಸಮರ್ಥನೆಯನ್ನು ನೀಡಿದಂತೆಯೇ ಸರಿ . ವಂಶದಲ್ಲಿ ಪಿತ್ರಾರ್ಜಿತ ಅಂಶ ಯಾವ ನಿಯಮಗಳನ್ನು ಅನುಸರಿಸುತ್ತದೆಂಬುದು ನಿಖರವಾಗಿ ನಮಗೆ ಇನ್ನೂ ತಿಳಿದಿಲ್ಲ . ಆದುದರಿಂದ ಉತ್ತಮ ಸಂತಾನದ ಯೋಜನೆ ವ್ಯವಹಾರ ಯೋಗ್ಯವೆಂದು ಹೇಳಲಾಗದು .
‘ ಮಂಡಲ್ಲನ ಆನುವಂಶಿಕಾ ತತ್ವಗಳು ‘ ಎಂಬ ಗ್ರಂಥವನ್ನು ಕುರಿತು ಬೇಟ್ಟನ್ ಹೀಗೆನ್ನುತ್ತಾರೆ , “ ಉಚ್ಚ ತರಗತಿಯ ಮಾನಸಿಕ ಗುಣಗಳು ಅನುವಂಶಿಕವಾಗಿ ಬಂದರೆ ಅವು ಯಾವುದೇ ಒಂದು ನಿಯಮಕ್ಕೆ , ಅರ್ಥಕ್ಕೆ , ಕ್ರಮಕ್ಕೆ ಒಳಪಟ್ಟು ಬರುತ್ತವೆ ಎಂದು ತೋರುವುದಿಲ್ಲ . ದೈಹಿಕ ವೈಶಿಷ್ಟ್ಯಗಳೂ ಮಾನಸಿಕ ಗುಣಗಳೂ ಅನೇಕ ಘಟಕಗಳ ಯೋಗಾಯೋಗದಿಂದ ಉತ್ಪನ್ನವಾಗುವುದೇ ಹೊರತಾಗಿ , ಒಂದು ನಿರ್ದಿಷ್ಟ ಸಂತಾನ ಮೂಲದಿಂದಲೇ ಆದುವೆಂದು ಹೇಳಲಾಗದು.
ಜಾತಿಪದ್ಧತಿ ಉತ್ತಮ ಸಂತಾನಶಾಸ್ತ್ರ ದೃಷ್ಟಿಯಿಂದ ನಿರ್ಮಿತವಾಯಿತೆಂದು ಹೇಳಿದರೆ ಇಂದಿನ ವಿಜ್ಞಾನಿಗಳಿಗೆ ಕೂಡ ಇಲ್ಲದ ಜ್ಞಾನವನ್ನು ಈಗಿನ ಹಿಂದೂಗಳ ಪೂರ್ವಜರು ಪಡೆದಿದ್ದರೆಂದು ಹೇಳಿದಂತಾಗುತ್ತದೆ . ಹಣ್ಣುಗಳನ್ನು ನೋಡಿ ಮರದ ಬೆಲೆ ಕಟ್ಟಬೇಕು . ಸಂತಾನಶಾಸ್ತ್ರಕ್ಕನುಸಾರವಾಗಿ ಜಾತಿಪದ್ಧತಿ ಇರುವುದಾಗಿದ್ದರೆ ಅದು ಎಂತಹ ಉತ್ಕೃಷ್ಟ ಜನಾಂಗವನ್ನು ಹುಟ್ಟಿಸಬೇಕಾಗಿತ್ತು ? ವಾಸ್ತವಿಕವಾಗಿ ನೋಡಿದರೆ ಹಿಂದೂಗಳು ಸಿ3 ವರ್ಗಕ್ಕೆ ಸೇರಿದ ಜನರು . ಮೈಕಟ್ಟಿನಲ್ಲಿ ದುರ್ಬಲರಾದ ಮತ್ತು ದೈಹಿಕವಾಗಿ ತ್ರಾಣವಿಲ್ಲದ ಕುಬ್ದರ ವರ್ಗಕ್ಕೆ ಇವರು ಸೇರಿದ್ದಾರೆ . ನೂರಕ್ಕೆ ತೊಂಬತ್ತರಷ್ಟು ಮಂದಿ ಸೈನಿಕ ಸೇವೆಗೆ ಅನರ್ಹರಾದ ಜನರ ರಾಷ್ಟ್ರ ನಮ್ಮದು . ಹೀಗಾದರೆ ಉತ್ತಮ ಸಂತಾನ ತತ್ವ ಎಲ್ಲಿ ಬಂದಿತು ? ಸ್ವಾರ್ಥಿಗಳೂ ದುರಹಂಕಾರಿಗಳೂ ಆದ ಕೆಲವರು ಹಿಂದೂಗಳು ತಮ್ಮ ಸಾಮಾಜಿಕ ಸ್ಥಾನಬಲದಿಂದ ಈ ಜಾತಿಭೇದಗಳನ್ನು ನಿರ್ಮಿಸಿ ದುರ್ಬಲ ವರ್ಗಗಳ ಮೇಲೆ ಅವುಗಳನ್ನು ಒತ್ತಾಯದಿಂದ ಹೇರಿದರು .
-ಡಾ . ಬಾಬಾಸಾಹೇಬ್ ಅಂಬೇಡ್ಕರ್ ಅವರ ಬರಹಗಳು – ಭಾಷಣಗಳು : ಸಂಪುಟ – 1
ಇದನ್ನೂ ಓದಿ
https://suddidina.com/column/bahiranga/the-first-public-speech-made-by-dalit-mother-ramabai-ambedkar/
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಭಾರತದ ಜನಸಂಖ್ಯೆ ವರವೋ..? ಶಾಪವೋ..?

- ಅಂಬಿಕಾ. ಕೆ
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಬೆಂಗಳೂರು ವಿಶ್ವವಿದ್ಯಾಲಯ
ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.
ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.
ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.
ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.
ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.
ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

- ವೆನ್ನೆಲಾ ಕೆ.
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು
ಇತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.
ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.
ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.
ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.
ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.
ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಬಹಿರಂಗ
ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

- ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ ಚಿಂತಕರು, ಬೆಂಗಳೂರು
ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.
ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.
ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.
ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.
ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.
ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.
ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
