ರಾಜಕೀಯ
ಕೇಂದ್ರ ಸರ್ಕಾರ: ನೈತಿಕ ಜವಾಬ್ದಾರಿ ಹೊತ್ತ ರಾಜೀನಾಮೆಗಳ ಸುತ್ತಮುತ್ತ..!
- ಮ ಶ್ರೀ ಮುರಳಿ ಕೃಷ್ಣ, ಬೆಂಗಳೂರು
ಆಗಸ್ಟ್ 1956ರಲ್ಲಿ ಆಂಧ್ರ ಪ್ರದೇಶದ ಮೆಹಬೂಬ್ ನಗರದಲ್ಲಿ ದೊಡ್ಡ ರೈಲು ಅಪಘಾತ ಜರುಗುತ್ತದೆ. 112 ಪ್ರಯಾಣಿಕರು ಅಸುನೀಗುತ್ತಾರೆ. ನೈತಿಕ ಜವಾಬ್ದಾರಿಯನ್ನು ಹೊತ್ತ ರೈಲು ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ರಾಜೀನಾಮೆಯನ್ನು ನೀಡುತ್ತಾರೆ. ಆದರೆ ಪ್ರಧಾನಿ ನೆಹರು ಅದನ್ನು ಸ್ವೀಕರಿಸುವುದಿಲ್ಲ.
ನಂತರ ಅದೇ ವರ್ಷ ನವೆಂಬರ್ ತಿಂಗಳಲ್ಲಿ ತಮಿಳುನಾಡಿನ ಅರಿಯಲೂರ್ನಲ್ಲಿ ಜರುಗಿದ ಭೀಕರ ರೈಲು ಅಪಘಾತದಲ್ಲಿ 144 ಮಂದಿ ಸಾಯುತ್ತಾರೆ. ಆಗಲೂ ಶಾಸ್ತ್ರಿ ರಾಜೀನಾಮೆಯನ್ನು ನೀಡಲು ಮುಂದಾಗುತ್ತಾರೆ. ಬೇಗನೆ ಸ್ವೀಕರಿಸಬೇಕೆಂದು ಪ್ರಧಾನಿಯವರನ್ನು ಒತ್ತಾಯಿಸುತ್ತಾರೆ. ನೆಹರು ಮಾತನಾಡಿದ ತರುವಾಯವೂ ಶಾಸ್ತ್ರಿ ತಾವು ತೆಗೆದುಕೊಂಡ ನಿರ್ಧಾರದಿಂದ ವಿಮುಖರಾಗುವುದಿಲ್ಲ.
ಲೋಕಸಭೆಯಲ್ಲಿ ಈ ವಿಷಯದ ಬಗೆಗೆ ಮಾತನಾಡುತ್ತ ನೆಹರು ತಾವು ಶಾಸ್ತ್ರಿಯವರ ರಾಜೀನಾಮೆಯನ್ನು ಸ್ವೀಕರಿಸಲೇ ಬೇಕಾದ ಅನಿವಾರ್ಯತೆಯಿರುವುದೆಂದು ತಿಳಿಸಿದಾಗ, 30 ಸಂಸದರು ಈ ಅಪಘಾತಕ್ಕೆ ರೈಲ್ವೆ ಬೋರ್ಡ್ ಕಾರಣವೆಂದು, ಶಾಸ್ತ್ರಿಯವರು ಜವಾಬ್ದಾರರಲ್ಲ ಎಂದು ತಿಳಿಸುತ್ತಾರೆ. ಶಾಸ್ತ್ರಿ ತಮ್ಮ ಪಟ್ಟನ್ನು ಸಡಿಲಿಸುವುದಿಲ್ಲ. ಕೊನೆಗೆ ವಿಧಿಯಿಲ್ಲದೇ ನೆಹರು ರಾಷ್ಟ್ರಪತಿಗೆ ರಾಜೀನಾಮೆಯನ್ನು ರವಾನಿಸುತ್ತಾರೆ.
*ಈ ಘಟನೆಗಳು ಜರುಗಿದ 43 ವರ್ಷಗಳ ತರುವಾಯ ಅಂದರೆ ಆಗಸ್ಟ್ 1999ರಲ್ಲಿ ಅಸ್ಸಾಂನ ಗೈಸಲ್ನಲ್ಲಿ ಜರುಗಿದ ರೈಲು ದುರಂತದಲ್ಲಿ 290 ಜನ ಸಾಯುತ್ತಾರೆ. ಆಗಿನ ರೈಲು ಸಚಿವ ನಿತೀಶ್ ಕುಮಾರ್ ನೈತಿಕ ಜವಾಬ್ದಾರಿಯನ್ನು ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡುತ್ತಾರೆ.*
2000ರಲ್ಲಿ ಎರಡು ರೈಲು ಅವಘಡಗಳು ಜರುಗುತ್ತವೆ. ರೈಲು ಖಾತೆಯ ಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆಯನ್ನು ಸಲ್ಲಿಸುತ್ತಾರೆ. ಆದರೆ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ರಾಜೀನಾಮೆಯನ್ನು ತಿರಸ್ಕರಿಸುತ್ತಾರೆ.
ಪ್ರಸ್ತುತ ಉತ್ತರ ಪ್ರದೇಶದ ಲಖೀಂಪುರದ ದಾರುಣ ಘಟನೆಯತ್ತ ಗಮನವನ್ನು ಹರಿಸೋಣ. ಅಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಸರ್ಕಾರದ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾರ ಕಾರನ್ನು ಚಲಿಸಲಾಗುತ್ತದೆ. ರೈತರೂ ಸೇರಿದಂತೆ ಎಂಟು ಮಂದಿ ಮರಣವನ್ನಪ್ಪುತ್ತಾರೆ. ಪ್ರತ್ಯಕ್ಷದರ್ಶಿಗಳು ಸಚಿವರ ಮಗ ಆಶೀಶ್ ಮಿಶ್ರಾ ಸ್ವತಃ ಗಾಡಿಯನ್ನು ಓಡಿಸುತ್ತಿದ್ದರೆಂದು ತಿಳಿಸಿದ್ದಾರೆ.
ಈ ಹೇಯ ಘಟನೆಗೆ ಸಂಬಂಧಿಸಿದ ಕೆಲವು ವೀಡಿಯೊಗಳು ಹರಿದಾಡುತ್ತಿವೆ. ರೈತ ಸಂಘಗಳು ಮತ್ತು ವಿಪಕ್ಷಗಳು ಅಜಯ್ ಕುಮಾರ್ ಮಿಶ್ರಾ ರಾಜೀನಾಮೆಯನ್ನು ನೀಡಬೇಕೆಂದು ಒತ್ತಾಯಿಸಿವೆ. ಆದರೆ ತನ್ನ ಮಗ ಘಟನೆ ಜರುಗಿದ ಸ್ಥಳದಲ್ಲಿ ಇರಲಿಲ್ಲ , ತಾವು ರಾಜೀನಾಮೆಯನ್ನು ನೀಡುವುದಿಲ್ಲ ಎಂದು ಮಿಶ್ರಾ ತಿಳಿಸಿದ್ದಾರೆ.
ಸರ್ವೋಚ್ಚ ನ್ಯಾಯಾಲಯ ಉತ್ತರ ಪ್ರದೇಶದ ಪೊಲೀಸರು ಸರಿಯಾಗಿ ತನಿಖೆಯನ್ನು ಜರುಗಿಸುತ್ತಿಲ್ಲ ಎಂದು ತರಾಟೆ ತೆಗೆದುಕೊಂಡಿತು. ತರುವಾಯ ಆಶೀಶ್ ಮಿಶ್ರಾ ಪೊಲೀಸರ ವಿಚಾರಣೆಗೆ ಹಾಜರಾದದ್ದು ಎಲ್ಲ ರೀತಿಯಿಂದ ಬಲಿಷ್ಠರಾದವರ ಕಾರುಬಾರು ನಮ್ಮ ದೇಶದಲ್ಲಿ ಹೇಗೆ ಜರುಗುತ್ತಿದೆ ಎಂಬುದರ ದ್ಯೋತಕವೆನ್ನಬಹುದು.
ಇಂತಹ ಪ್ರಕರಣಗಳು ಅಂತಿಮ ಹಂತದಲ್ಲಿ ಕೇಂದ್ರ ಸರ್ಕಾರದ ಗೃಹ ಖಾತೆಗೆ ತಲುಪುವ ಸಾಧ್ಯತೆಗಳು ಇದ್ದೇ ಇರುತ್ತವೆ. ಪೊಲೀಸ್ ಇಲಾಖೆ ಕೂಡ ಕೇಂದ್ರ ಸರ್ಕಾರದ ಗೃಹ ಖಾತೆಯ ಸುಪರ್ದಿಗೆ ಬರುತ್ತದೆ. ಹೀಗಿರಬೇಕಾದರೇ, ಅಜಯ್ ಮಿಶ್ರಾ ಸಚಿವ ಸ್ಥಾನದಲ್ಲಿ ಮುಂದುವರೆದರೇ, ನ್ಯಾಯ ಹಳ್ಳದ ಹಿಡಿಯುವುದರಲ್ಲಿ ಸಂಶಯವೇ ಇಲ್ಲ ಎಂಬುದು ಸಾರ್ವಜನಿಕ ವಲಯದ ಪ್ರಜ್ಞಾವಂತರ ಅಳಲಾಗಿದೆ.
ಈ ಆಘಾತಕಾರಿ, ಅಮಾನವೀಯ ಘಟನೆಯ ಬಗೆಗೆ ನಮ್ಮ ಪ್ರಧಾನಿ ದಿವ್ಯ ಮೌನವನ್ನು ವಹಿಸಿದ್ದಾರೆ. ಅದು ಏನನ್ನು ಸೂಚಿಸುತ್ತದೆ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ. ತಮ್ಮದು ಭಿನ್ನ ಪಕ್ಷವೆಂದು ಟಾಂಟಾಂ ಮಾಡುವವರ ಈ ವರಸೆ ಸಾರ್ವಜನಿಕ ವಲಯದಲ್ಲಿ ಕಟು ಟೀಕೆಗೆ ಒಳಗಾಗಿದೆ.
(ಮ ಶ್ರೀ ಮುರಳಿ ಕೃಷ್ಣ, ಬೆಂಗಳೂರು
ಇಮೈಲ್: msmurali1961@gmail.com
ಜಂಗಮವಾಣಿ :9481200960)
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ನಿಷೇಧ : ಸಚಿವ ದಿನೇಶ್ ಗುಂಡೂರಾವ್
ಸುದ್ದಿದಿನ, ಬೆಂಗಳೂರು : ಕೃತಕ ಬಣ್ಣ ಬಳಸಿದ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ ನಿಷೇಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಆದಾಗ್ಯೂ, ಬಣ್ಣ ಹಾಗೂ ರಾಸಾಯನಿಕ ಹಾಕದೇ ಇರುವ ಈ ತಿನಿಸುಗಳ ಮಾರಾಟಕ್ಕೆ ನಿರ್ಬಂಧ ಇಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳು ಸೇರಿದಂತೆ ಎಲ್ಲ ವಯೋಮಾನದವರಿಗೂ ಅಚ್ಚುಮೆಚ್ಚಾದ ಈ ಎರಡು ತಿನಿಸುಗಳನ್ನು ಆಕರ್ಷಕವಾಗಿ ಕಾಣುವಂತೆ ಮಾಡಲು ಬಳಸುವ ಕೃತಕ ಬಣ್ಣಗಳಲ್ಲಿ ಅಪಾಯಕಾರಿ ರಾಸಾಯನಿಕಗಳು ಇರುವುದು ಪರೀಕ್ಷೆಗಳಿಂದ ದೃಢಪಟ್ಟಿದೆ ಎಂದರು. ರಾಜ್ಯದ ಹಲವೆಡೆ ಬೀದಿಬದಿಯ ಗಾಡಿಗಳು, ಹೋಟೆಲ್ಗಳಲ್ಲಿ ತಯಾರಿಸಿದ ಗೋಬಿ ಮಂಚೂರಿ ತಿನಿಸಿನ 171ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 107ಮಾದರಿಗಳಲ್ಲಿ ಅಸುರಕ್ಷಿತ ರಾಸಾಯನಿಕಗಳು ಪತ್ತೆಯಾಗಿರುವುದು ಆತಂಕಕಾರಿಯಾಗಿದೆ ಎಂದರು.
ಕೃತಕ ಬಣ್ಣಗಳಲ್ಲಿರುವ ರೋಡೊಮೈನ್-ಬಿ ಮತ್ತು ಟಾಟ್ರಝೀನ್ ರಾಸಾಯನಿಕಗಳು ಕ್ಯಾನ್ಸರ್ ರೋಗಕ್ಕೆ ಕಾರಣವಾಗಬಹುದು ಎನ್ನುವ ಅಂಶ ತಿಳಿದುಬಂದಿದೆ. ಬಣ್ಣ ಹಾಕಿದ ಗೋಬಿಮಂಚೂರಿ ಮತ್ತು ಕಾಟನ್ಕ್ಯಾಂಡಿಗಳನ್ನು ಮಾರಾಟ ಮಾಡುವವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಏಳು ವರ್ಷದರೆಗೆ ಜೈಲು ಶಿಕ್ಷೆ, 10 ಲಕ್ಷ ರೂಪಾಯಿವರೆಗೆ ದಂಡ ಅಥವಾ ಜೀವಾವಧಿ ಶಿಕ್ಷೆಗೂ ಅವಕಾಶವಿದೆ ಎಂದು ಸಚಿವರು ಎಚ್ಚರಿಕೆ ನೀಡಿದರು.
ಹೇಳಿಕೆ
- ಬಣ್ಣ ಹಾಕಿರುವ ಈ ಎರಡು ತಿನಿಸುಗಳನ್ನು ಸೇವಿಸಬಾರದು ಎಂದು ಸಾರ್ವಜನಿಕರಿಗೂ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದಲ್ಲದೇ, ಕಬಾಬ್, ಪಾನಿಪೂರಿ ಮೊದಲಾದ ತಿನಿಸುಗಳಲ್ಲೂ ಕೃತಕ ಬಣ್ಣಗಳ ಬಳಕೆ ಆಗುತ್ತಿದೆಯೇ ಎಂದು ಪರಿಶೀಲಿಸಲಾಗುತ್ತಿದೆ.
| ಸಚಿವ ದಿನೇಶ್ ಗುಂಡೂರಾವ್
ಟ್ವೀಟ್
In consideration of public health, we are banning the use of artificial colours in Gobi Manchurian and cotton candy. Violation of this ban may result in imprisonment for up to 7 years and a fine of up to 10 lakhs.
Following reports of substandard quality and the presence of… pic.twitter.com/z2KWHi8Jbd
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) March 11, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243