Connect with us

ದಿನದ ಸುದ್ದಿ

ವಂಶವಾಹಿ ರೋಗಗಳ ತಡೆಯಲು ಗರ್ಭಿಣಿಯರಿಗೆ ಜೆನೆಟಿಕ್ ಸ್ಕ್ರೀನಿಂಗ್ ಕಡ್ಡಾಯ; ಹೊಸ ಯೋಜನೆ ಜಾರಿಗೆ ಕೇಂದ್ರ ಚಿಂತನೆ

Published

on

ಸುದ್ದಿದಿನ ಡೆಸ್ಕ್:  ವಂಶವಾಹಿ ರೋಗಗಳ ನಿಯಂತ್ರಣ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಇಲಾಖೆಯು ಯೋಜನಾ ಕರಡು ಪ್ರತಿ ರಚಿಸಿದ್ದು, ಗರ್ಭಿಣಿಯರು ಜೆನೆಟಿಕ್ ಪರೀಕ್ಷೆಗೊಳಗಾಗುವುದು ಕಡ್ಡಾಯಗೊಳಿಸುವ ಚಿಂತನೆ ನಡೆಸಿದ್ದು, ಈ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಲು 30 ಕಾಲಾವಕಾಶ ನೀಡಿದೆ. ಥಲಸ್ಸೆಮಿಯಾ ಮತ್ತು ಸಿಕ್ಕಲ್ ಸೆಲ್ ಅನಿಮಿಯಾ ರೋಗಗಳ ಹತೋಟಿ ಮಾಡಲು ಅತ್ಯಾಧುನಿಕ ವೈದ್ಯಕೀಯ ಸೌಲಭ್ಯ ನೀಡಲು ಮುಂದಾಗಿದೆ.

ಈ ಯೋಜನೆಯು ವಂಶವಾಹಿ ಕಾಯಿಲೆಗಳಿಗೆ ತುತ್ತಾದ ಬಡ ಕುಟುಂಬಗಳಿಗೆ ರೋಗಗಳಿಗೆ ಔಷಧ ಸೇರಿ ಉಚಿತ ಚಿಕಿತ್ಸೆ ನೀಡುವ ಉದ್ದೇಶ ಹೊಂದಿದೆ. ಮೇಕ್ ಇನ್ ಇಂಡಿಯಾ ಸಹಯೋಗದಲ್ಲಿ ಕೈಗೊಳ್ಳುತ್ತಿರುವ ಯೋಜನೆಗೆ ಪೂರಕವಾದ ಸಾಧನ ಸಲಕರಣೆಗಳನ್ನು ಉತ್ಪಾದಿಸಲು ಉತ್ತೇಜನ ನೀಡಲಾಗುತ್ತಿದೆ. ಚಿಕಿತ್ಸಾ ವೆಚ್ಚದ ಮೇಲೆ ವಿಧಿಸುವ ಜಿಎಸ್‌ಟಿ, ಕಸ್ಟಮ್ ಡ್ಯೂಟಿಗೆ ವಿನಾಯಿತಿ ನೀಡಿದೆ. ದೇಶಾದ್ಯಂತ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳನ್ನೂ ಈ ಪರೀಕ್ಷೆಗೊಳಪಡಿಸಲು ಚಿಂತನೆ ನಡೆಸಿದೆ.

ಸರ್ಕಾರ ಈಗ ಸಿದ್ಧಪಡಿಸಿರುವ ಕರಡು ಪ್ರತಿ ಪ್ರಕಾರ ಭಾರತದಲ್ಲಿ 3.6ರಿಂದ 3.9 ಕೋಟಿ ಥಲಸ್ಸೆಮಿಯಾ ವಾಹಕರಿದ್ದಾರೆ. ಪ್ರತಿ ವರ್ಷವೂ 10,000ರಿಂದ 15,000 ಮಕ್ಕಳು ಥಲೆಸ್ಸೆಮಿಯಾಕ್ಕೆ ತುತ್ತಾಗುತ್ತಿದ್ದಾರೆ. 25,00,000 ಮಂದಿ ಸಿಕಲ್ ಸೆಲ್ ವಾಹಕರಿದ್ದು, 1,25,000 ರೋಗಿಗಳು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ.

ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಲ್ಲಿ ಚಿಕಿತ್ಸಾ ಕೇಂದ್ರ ಆರಂಭಿಸಲು ಉದ್ದೇಶಿಸಿದ್ದು, ಇವುಗಳಿಗೆ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯ ಒದಗಿಸಿ ಥಲೆಸ್ಸೆಮಿಯಾ, ಸಿಕಲ್ ಸೆಲ್ ಅನೆಮಿಯಾ ರೋಗಿಗಳಿಗೆ ಸಮಗ್ರ ಚಿಕಿತ್ಸೆ ನೀಡುವ ಚಿಂತನೆ ಹೊಂದಿದೆ. ಬೋನ್ ಮ್ಯಾರೋ ಟ್ರಾನ್ಸಪ್ಲಾಂಟ್ ಘಟಕ ಮತ್ತು ಪ್ರಸವಪೂರ್ವ ರೋಗನಿರ್ಣಯ ಕೇಂದ್ರ ಆರಂಭಿಸಲಿದೆ. ಇದಕ್ಕಾಗಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಜಿಲ್ಲಾಸ್ಪತ್ರೆ, ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ವೈದ್ಯರು, ವೈದ್ಯಕೀಯ ಸಿಬ್ಬಂದಿಗೆ ಅಗತ್ಯ ತರಬೇತಿ, ಶಿಕ್ಷಣ ನೀಡಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಮೇ 22 | ಇಂದಿನ ಅಡಿಕೆ ದರ

Published

on

ಇಂದು, ಮೇ 22, 2025 ರಂದು ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ದರಗಳು ಹೀಗಿವೆ (ಪ್ರತಿ ಕ್ವಿಂಟಾಲ್‌ಗೆ ರೂಪಾಯಿಗಳಲ್ಲಿ):

ಶಿವಮೊಗ್ಗ ಮಾರುಕಟ್ಟೆ:

ರಾಶಿ: ₹48,169 (ಕನಿಷ್ಠ) – ₹58,099 (ಗರಿಷ್ಠ), ಮೋಡಲ್ ಬೆಲೆ: ₹55,869
ಸರಕು: ₹60,399 (ಕನಿಷ್ಠ) – ₹92,510 (ಗರಿಷ್ಠ), ಮೋಡಲ್ ಬೆಲೆ: ₹77,009
ಬೆಟ್ಟೆ: ₹51,319 (ಕನಿಷ್ಠ) – ₹58,219 (ಗರಿಷ್ಠ), ಮೋಡಲ್ ಬೆಲೆ: ₹57,989
ಗೊರಬಲು: ₹15,499 (ಕನಿಷ್ಠ) – ₹30,699 (ಗರಿಷ್ಠ), ಮೋಡಲ್ ಬೆಲೆ: ₹28,429

ಚನ್ನಗಿರಿ ಮಾರುಕಟ್ಟೆ (ದಾವಣಗೆರೆ):

ರಾಶಿ: ₹41,199 (ಕನಿಷ್ಠ) – ₹59,312 (ಗರಿಷ್ಠ), ಮೋಡಲ್ ಬೆಲೆ: ₹57,767

ಸಾಗರ ಮಾರುಕಟ್ಟೆ (ಶಿವಮೊಗ್ಗ):

ಚಾಲಿ: ₹35,699 (ಕನಿಷ್ಠ) – ₹37,141 (ಗರಿಷ್ಠ), ಮೋಡಲ್ ಬೆಲೆ: ₹36,699
ಬಿಳೆಗೋಟು: ₹21,611 (ಕನಿಷ್ಠ) – ₹25,587 (ಗರಿಷ್ಠ), ಮೋಡಲ್ ಬೆಲೆ: ₹24,111
ಕೆಂಪುಗೋಟು: ₹17,599 (ಕನಿಷ್ಠ) – ₹27,499 (ಗರಿಷ್ಠ), ಮೋಡಲ್ ಬೆಲೆ: ₹24,919
ರಾಶಿ: ₹22,899 (ಕನಿಷ್ಠ) – ₹57,470 (ಗರಿಷ್ಠ), ಮೋಡಲ್ ಬೆಲೆ: ₹56,621

ಕುಮಟಾ ಮಾರುಕಟ್ಟೆ (ಉತ್ತರ ಕನ್ನಡ):

ಚಿಪ್ಪು: ₹11,199 (ಕನಿಷ್ಠ) – ₹26,919 (ಗರಿಷ್ಠ), ಮೋಡಲ್ ಬೆಲೆ: ₹24,549
ಕೋಕಾ: ₹6,899 (ಕನಿಷ್ಠ) – ₹22,189 (ಗರಿಷ್ಠ), ಮೋಡಲ್ ಬೆಲೆ: ₹20,429
ಹಣ್ಣು: ₹32,589 (ಕನಿಷ್ಠ) – ₹42,500 (ಗರಿಷ್ಠ), ಮೋಡಲ್ ಬೆಲೆ: ₹39,729

ಚಿತ್ರದುರ್ಗ ಮಾರುಕಟ್ಟೆ:

ರಾಶಿ: ₹52,449 (ಕನಿಷ್ಠ) – ₹52,899 (ಗರಿಷ್ಠ), ಮೋಡಲ್ ಬೆಲೆ: ₹52,679

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾದಕ ವ್ಯಸನಿಗಳು ಸಮಾಜಘಾತುಕ ವ್ಯಕ್ತಿಗಳು : ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಮ.ಕರೆಣ್ಣವರ

Published

on

ಸುದ್ದಿದಿನ,ದಾವಣಗೆರೆ:ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಯುವಕ – ಯುವತಿಯರೇ ಹೆಚ್ಚಿನ ಸಂಖ್ಯೆಯಲ್ಲಿ ಗಾಂಜಾ, ಹಫೀಮು, ಬೌನ್‌ಶುಗರ್, ಕೋಕೆನ್, ನಿಕೋಟಿನ್‌ನಂತಹ ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದಾರೆ. ಇವರೆಲ್ಲಾ ಸಮಾಜಘಾತುಕ ವ್ಯಕ್ತಿಗಳು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನೆರಳು ಬೀಡಿ ಕಾರ್ಮಿಕರ ಯೂನಿಯನ್ ಇವರ ಸಂಯುಕ್ತಶ್ರಯದಲ್ಲಿ ಗುರುವಾರ ನಗರದ ಭಾಷಾ ನಗರದಲ್ಲಿನ ನಗರ ಆರೋಗ್ಯ ಕೇಂದ್ರ (ಪ್ರಸೂತಿ ಆರೋಗ್ಯ ಕೇಂದ್ರ) ದಲ್ಲಿ ಆಯೋಜಿಸಲಾಗಿದ್ದ “ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 2005 ಮತ್ತು ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ” ಕುರಿತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಾರ್ವಜನಿಕವಾಗಿ ಮಾದಕ ವಸ್ತುಗಳ ಸೇವನೆ, ಮಾರಾಟ, ಸಾಗಾಣೆ ಇಂತಹ ಪ್ರಕರಣಗಳು ಕಂಡುಬAದಲ್ಲಿ ಆಲಸ್ಯ ಮಾಡದೇ ಸಂಬAಪಟ್ಟ ಇಲಾಖೆಗೆ ಮಾಹಿತಿ ನೀಡಬೇಕು. ಮಾದಕ ವ್ಯಸನಗಳಿಗೆ ದಾಸರಾಗುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಗಾಢವಾದ ಪರಿಣಾಮ ಬೀರುತ್ತದೆ. ಅಲ್ಲದೇ ಪುರುಷತ್ವ ಮತ್ತು ಲೈಂಗಿಕತೆಯನ್ನು ಕುಂದಿಸುತ್ತದೆ. ಮಾದಕ ವ್ಯಸನಗಳಿಂದ ವಿವಿ ರೀತಿಯ ಕೃತ್ಯಗಳ್ಲಲಿ ಭಾಗಿಯಾಗಿ ಶಿಕ್ಷೆಗೆ ಗುರಿಯಾಗುವುದಲ್ಲದೇ ಕುಟುಂಬಗಳು ಬೀದಿಗೆ ಬರುತ್ತವೆ. ಆದ್ದರಿಂದ ವ್ಯಸನಮುಕ್ತರಾಗಿ ಸಮಾಜದಲ್ಲಿ ಮೌಲ್ಯಯುತವಾದ ಜೀವನ ಕಟ್ಟಿಕೊಳ್ಳಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಉನ್ನತ ಮಟ್ಟದ ವ್ಯಕತಿಗಳಾಗಿ ಬಾಳಬೇಕು. ಈ ನಿಟ್ಟಿನಲ್ಲಿ ತಮ್ಮಗಳ ಸಹಕಾರ ಅತ್ಯಗತ್ಯ ಎಂದರು.

ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 2005 ರಲ್ಲಿ ಜಾರಿ ಮಾಡಿದ್ದು, ಕೇವಲ ದೈಹಿಕ ಹಿಂಸೆಗೆ ಸೀಮಿತಗೊಳಿಸದೆ, ಲೈಂಗಿಕ, ಮೌಖಿಕ, ಭಾವನಾತ್ಮಕ, ಆರ್ಥಿಕ, ಮತ್ತು ಮಾನಸಿಕ ಹಿಂಸೆಯನ್ನು ಸಹ ಒಳಗೊಂಡಿದೆ. ವರದಕ್ಷಿಣೆಗಾಗಿ ಕಿರುಕುಳ ನೀಡುವುದು, ಮನೆಯಿಂದ ಹೊರಹಾಕುವುದು ಇವೆಲ್ಲವೂ ದೌರ್ಜನ್ಯ ತಡೆ ಕಾಯ್ದೆ ವ್ಯಾಪ್ತಿಗೆ ಬರುತ್ತವೆ. ಕಾಯ್ದೆಯ ಮೂಲಕ ಮಹಿಳೆಯರಿಗೆ ಅರ್ಥಿಕ, ಸಾಮಾಜಿಕ, ಭದ್ರತೆಯನ್ನು ಒದಗಿಸಲಾಗುತ್ತದೆ. ಮಹಿಳೆಯರಿಗೆ ಕೌಟುಂಬಿಕ ದೌರ್ಜನ್ಯಗಳಂತಹ ದೈಹಕ ಮತ್ತು ಮಾನಸಿಕ ಹಿಂಸೆ, ಕಿರುಕುಳ ನೀಡಿದಲ್ಲಿ ಹತ್ತಿರದ ಸಖಿ ಒನ್ ಸ್ಟಾಪ್ ಸೆಂಟರ್ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಪರ್ಕಿಸಿ ಸಲಹೆ ಸೂಚನೆಗಳನ್ನು ಪಡೆಯಬಹುದು. ಇದಕ್ಕೆ ಸಂಬAಧಿಸಿದAತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಕಾರದ ವತಿಯಿಂದ ಉಚಿತ ಕಾನೂನು ನರೆವು ನೀಡಲು 40 ವಕೀಲರಿದ್ದಾರೆ. ಇದನ್ನು ಪ್ರತಿಯೊಬ್ಬರು ಸದುಪಯೋಗಪಡೆದುಕೊಳ್ಳಬೇಕು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತ ಕಾನೂನು ಸೇವೆಗಳ ಕುರಿತು ಮಾಹಿತಿ ನೀಡಲು 15100 ಸಹಾಯವಾಣಿ ಸಂಖ್ಯೆ ಸ್ಥಾಪಿಸಿದ್ದು, ಕರೆ ಮಾಡಿ ಸೂಕ್ತ ಕಾನೂನು ಸಲಹೆ ಪಡೆಯಬಹುದು. ಸಮಾಜದಲ್ಲಿ ಹಿಂದುಳಿದ ಪ್ರತಿಯೊಬ್ಬರನ್ನು ಮುಖ್ಯವಾಹಿನಿಗೆ ತರಲು ಕಂಕಣಬದ್ದರಾಗಿ ಕಾರ್ಯನಿರ್ವಹಿಸಬೇಕು. ಈ ಎರಡೂ ಕಾಯ್ದೆಗಳು ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಹೇಳಿದರು.

ಇದೇ ವೇಳೆ ನೆರಳು ಬೀಡಿ ಕಾರ್ಮಿಕ ಯೂನಿಯನ್ ಅಧ್ಯಕ್ಷೆ ಜಬೀನಾ ಖಾನಂ ಸಂವಿಧಾನ ಪೀಠಿಕೆ ವಾಚಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್.ಅರುಣ್ ಕುಮಾರ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯದರ್ಶಿನಿ, ತಾಲ್ಲೂಕು ಆರೋಗ್ಯಾಧಿಕಾರಿ ದೇವರಾಜ್ ಪಟ್ಟಿಗೆ, ಸಖಿ ಕೇಂದ್ರದ ಕಾನೂನು ಸಲಹೆಗಾರರಾದ ತಂಜಿಮ್ ಕೌಸರಿ, ನಗರ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಎನ್.ರೇಖಾ, ನೆರಳು ಬೀಡಿ ಕಾರ್ಮಿಕ ಯೂನಿಯನ್ ಪ್ರಧಾನ ಕಾರ್ಯದರ್ಶಿ ಎಂ.ಕರಿಬಸಪ್ಪ, ಸದಸ್ಯೆ ಸಬ್ರಿನ್ ತಾಜ್ ಸೇರಿದಂತೆ ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಮೆಟ್ರಿಕ್ ನಂತರದ ಬಾಲಕ, ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ ಮತ್ತು ಪ.ವರ್ಗದ ಪಿ.ಯು.ಸಿ. ಐ.ಟಿ.ಐ. ಮತ್ತು ಡಿಪ್ಲೊಮೋ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು https://shp.karnataka.gov.in/bcwd ಆನ್‍ಲೈನ್‍ನಲ್ಲಿ ಜೂನ್ 20 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್ https://bcwd.karnataka.gov.in ನ್ನು ನೋಡಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ, ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ದೂ.ಸಂ: 8050770004 ಮತ್ತು 8050770005.ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಲು ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending