ದಿನದ ಸುದ್ದಿ
ಸಿಜೇರಿಯನ್ ಹೆರಿಗೆಗೆ ಹೆಚ್ಚು ಆದ್ಯತೆ ಬೇಡ ವೈದ್ಯರಲ್ಲಿ ಮಾನವೀತೆ ಇರಲಿ: ಡಿಸಿ ಮಹಾಂತೇಶ್ ಬೀಳಗಿ
ಸುದ್ದಿದಿನ,ದಾವಣಗೆರೆ : ವೈದ್ಯರನ್ನು ದೇವರ ಸಮಾನ ಎಂದು ನೋಡುವ ದೇಶ ನಮ್ಮದು ಹಾಗಾಗಿ ವೈದ್ಯ ವೃತ್ತಿಯಲ್ಲಿರುವವರು ದೇವರು ಮೆಚ್ಚುವಂತೆ ಕೆಲಸ ಮಾಡಬೇಕು, ಸಿಜೇರಿಯನ್ ಹೆರಿಗೆಗೆ ಹೆಚ್ಚು ಒಲವು ತೋರದೆ ಸಾಮಾನ್ಯ ಹೆರಿಗೆಗೆ ಹೆಚ್ಚು ಒತ್ತು ನೀಡಿ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.
ಜಿಲ್ಲಾಡಳಿತ ಭವನದಲ್ಲಿ ಶನಿವಾರ ನಡೆದ ಜಿಲ್ಲಾ ಆರೋಗ್ಯ ಅಭಿಯಾನ ಕಾರ್ಯಕಾರಿ ಸಮಿತಿ ಸಭೆಯ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಹಾಗೂ ಚಟುವಟಿಕೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಂಕಿಅಂಶಗಳ ಪ್ರಕಾರ ಸಿಸೇರಿಯನ್ ಹೆರಿಗೆಗಳ ಪ್ರಮಾಣ ಜಾಸ್ತಿ ಇದೆ, ಸಾಮಾನ್ಯ ಹೆರಿಗೆ ಮಾಡಿಸಲು ಏಕೆ ಸಾಧ್ಯವಿಲ್ಲ? ಕೆಲ ಕ್ಲಿಷ್ಟಕರ ಸಂದರ್ಭಗಳಲ್ಲಿ ಹೊರತುಪಡಿಸಿ ಹೆಚ್ಚು ಸಿಸೇರಿಯನ್ ಹೆರಿಗೆಗಳಿಗೆ ಅವಕಾಶ ಬೇಡ ಎಂದರು.
ಈ ಹಿಂದಿನ ವರ್ಷಗಳಲ್ಲಿ ದಾವಣಗೆರೆ ಆರೋಗ್ಯ ಇಲಾಖೆಯ ಕಾರ್ಯಪ್ರಗತಿ ನಂಬರ್ ಒನ್ ಸ್ಥಾನದಲ್ಲಿರುತಿತ್ತು, ನಂತರದ ದಿನಗಳಲ್ಲಿ ಬರುಬರುತ್ತಾ ರ್ಯಾಂಕಿಂಗ್ನಲ್ಲಿ ಕೆಳಗಿನಿಂದ ನಾಲ್ಕೈದು ಸ್ಥಾನಗಳಲ್ಲಿ ಕಾಣಿಸಿಕೊಳ್ಳುತ್ತಿದ್ದೇವೆ, ಬಹಳ ಕ್ರಿಯಾಶೀಲ ಅಧಿಕಾರಿಗಳು, ವೈದ್ಯರು ಜಿಲ್ಲೆಯಲ್ಲಿದ್ದೀರಿ ಕೆಲಸದ ಕಡೆ ಗಮನ ನೀಡದೆ ಹೀಗಾಗಿದೆ. ಮುಂದಿನ ದಿನಗಳಲ್ಲಿ ಸರಿಪಡಿಸಿಕೊಳ್ಳದಿದ್ದರೆ ಸಹಿಸಲು ಸಾಧ್ಯವಿಲ್ಲ ಎಂದರು.
ಜಿಲ್ಲೆಯಲ್ಲಿ ಲಸಿಕಾಕರಣ ವೇಗ ಪಡೆದುಕೊಳ್ಳಬೇಕು, ಪೋಲಿಯೋ ನಿರ್ಮೂಲನೆ ಈಗಾಗಲೇ ಆಗಿದ್ದು ದಢಾರ ರುಬೆಲ್ಲಾ ನಿರ್ಮೂಲನೆಗೂ ಸರ್ಕಾರ ಶ್ರಮಿಸುತ್ತದ್ದು ಆರೋಗ್ಯ ಇಲಾಖೆ ಸಿಬ್ಬಂದಿ ಕೈ ಜೋಡಿಸಬೇಕೆಂದರು ಹಾಗೂ ಶಾಲಾ ಲಸಿಕಾಕರಣ ಜೂನ್ 15 ರೊಳಗೆ ಮುಗಿಸಬೇಕೆಂದರು. ಶಿಶುಮರಣ ತಗ್ಗಿಸುವುದರೊಂದಿಗೆ ಮಕ್ಕಳು ಗರ್ಭಿಣಿಯರು, ವಯೋವೃದ್ದರ ಬಗೆಗೆ ಕಾಳಜಿ ಇರಲಿ ಎಂದರು.
ಡಾ. ನಟರಾಜು ಮಾಹಿತಿ ನೀಡಿ ಮಲೇರಿಯ ಮಾಸಾಚರಣೆ ಆಚರಿಸಲಾಗುತ್ತಿದ್ದು, ಹಿಂದಿನ ವರ್ಷ ಮೂರು ಕೇಸ್ ದಾಖಲಾಗಿದ್ದು ಬಿಟ್ಟರೆ ಈ ವರ್ಷ ಯಾವುದೇ ಮಲೇರಿಯಾ ಪ್ರಕರಣಗಳು ಕಂಡುಬಂದಿಲ್ಲ ಎಂದರು.
ಇದೆ ವೇಳೆ ಮಲೇರಿಯ ವಿರೋಧಿ ಮಾಸಾಚರಣೆ-2022 ಬಿತ್ತಿಪತ್ರಗಳನ್ನು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಬಿಡುಗಡೆ ಮಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಚನ್ನಪ್ಪ ಎ, ಜಿಲ್ಲಾ ಆರೋಗ್ಯಾಧಿಕಾರಿ ಡಾ,ನಾಗರಾಜ್, ಡಾ.ರಾಘವನ್, ಆರ್ಸಿಹೆಚ್ ಡಾ. ಮೀನಾಕ್ಷಿ, ಎಸ್ಎಂಒ ಡಾ.ಶ್ರೀಧರ್ ಸೇರಿದಂತೆ ವಿವಿಧ ಜಿಲ್ಲಾಮಟ್ಟದ ಆರೋಗ್ಯಾಧಿಕಾರಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!