ದಿನದ ಸುದ್ದಿ
ಛಲವಾದಿ ನಾರಾಯಣ ಸ್ವಾಮಿಯವರೇ, ಯಾರ್ಯಾರದೋ ಹಳೆ ಚಡ್ಡಿ ಹೊತ್ತುಕೊಂಡ ನಿಮ್ಮನ್ನು ಕಂಡು ಮನಸ್ಸಿಗೆ ನೋವಾಯಿತು : ಸಿದ್ದರಾಮಯ್ಯ
ಸುದ್ದಿದಿನ ಡೆಸ್ಕ್ : ನಿಮ್ಮ ಸಂಘದ ಉನ್ನತ ಪದಾಧಿಕಾರಿಗಳಲ್ಲಿ ದಲಿತರು ಮತ್ತು ಹಿಂದುಳಿದ ಜಾತಿಗಳು ಯಾಕೆ ಇಲ್ಲ” ಎನ್ನುವ ನನ್ನ ಪ್ರಶ್ನೆಗೆ ಆರ್.ಎಸ್.ಎಸ್ ನವರು ಬಿಜೆಪಿ ಶಾಸಕ ಛಲವಾದಿ ನಾರಾಯಣ ಸ್ವಾಮಿಯವರ ಮೂಲಕ ಉತ್ತರ ನೀಡಿದ್ದಾರೆ. ಈ ಸಂದೇಶವನ್ನು ಬಿಜೆಪಿಯಲ್ಲಿರುವ ದಲಿತ ಬಂಧುಗಳು ಅರ್ಥಮಾಡಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಆರ್.ಎಸ್.ಎಸ್ ಗೆ ಬೆಂಬಲ ನೀಡಲು ಹಳೆ ಚಡ್ಡಿ ಹೊತ್ತು ಕೊಂಡು ಮೆರವಣಿಗೆ ಮಾಡಿದ ನಾರಾಯಣಸ್ವಾಮಿಯವರೇ,
ನಿಮ್ಮ ಸ್ಥಾನಮಾನ ಏನಿದ್ದರೂ ಇಷ್ಟಕ್ಕೆ ಸೀಮಿತ.
ಆ ಸಂಘದ ಉನ್ನತ ಪದಾಧಿಕಾರಕ್ಕೆ ನೀವು ಸದಾ ಅಸ್ಪೃಶ್ಯ ನೆನಪಿರಲಿ.
ಯಾರ್ಯಾರದೋ ಹಳೆ ಚಡ್ಡಿ ಹೊತ್ತುಕೊಂಡ ನಿಮ್ಮನ್ನು ಕಂಡು ಮನಸ್ಸಿಗೆ ನೋವಾಯಿತು.
ನಿಮ್ಮನ್ನು “ಪಠ್ಯಪುಸ್ತಕ ಪರಿಷ್ಕರಣ ಸಮಿತಿಯ ಅಧ್ಯಕ್ಷತೆ” ಯಂತಹ ಸ್ಥಾನದಲ್ಲಿ ಕಾಣುವ ಆಸೆ ನನಗೆ.
ನಿಮ್ಮ ಪ್ರತಿಭಟನೆಯ ಹಕ್ಕನ್ನು ನಾನು ಗೌರವಿಸುತ್ತೇನೆ. ಆದರೆ ಕೇವಲ ರಾಜಕೀಯ ಜಿದ್ದಾಜಿದ್ದಿಗಾಗಿ ಹಳೆಚಡ್ಡಿ ಹೊತ್ತುಕೊಳ್ಳಲೂ ಸಿದ್ಧರಾದ ನಿಮ್ಮ ಗುಲಾಮಿ ಮನಸ್ಥಿತಿಗೆ ನನ್ನ ಧಿಕ್ಕಾರ. ಸ್ವಾಭಿಮಾನವನ್ನು ಉಸಿರಾಗಿಸಿಕೊಂಡು ಬದುಕಿದ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಸ್ವಲ್ಪ ಓದಿ ಸ್ವಾಭಿಮಾನದ ಪಾಠ ಕಲಿಯಬೇಕೆಂದಷ್ಟೇ ನಿಮಗೆ ನಾನು ನೀಡುವ ಸಲಹೆ ಎಂದಿದ್ದಾರೆ.
ಛಲವಾದಿ ನಾರಾಯಣ ಸ್ವಾಮಿಯವರೇ, ಯಾರ್ಯಾರದೋ ಹಳೆ ಚಡ್ಡಿ ಹೊತ್ತುಕೊಂಡ ನಿಮ್ಮನ್ನು ಕಂಡು ಮನಸ್ಸಿಗೆ ನೋವಾಯಿತು.
ನಿಮ್ಮನ್ನು ಪಠ್ಯಪುಸ್ತಕ ಪರಿಷ್ಕರಣ ಸಮಿತಿಯ ಅಧ್ಯಕ್ಷತೆಯಂತಹ ಸ್ಥಾನದಲ್ಲಿ ಕಾಣುವ ಆಸೆ ನನಗೆ. 3/5#AryanRSS pic.twitter.com/7aSZN1f83B— Siddaramaiah (@siddaramaiah) June 7, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243