Connect with us

ದಿನದ ಸುದ್ದಿ

ದಾವಣಗೆರೆ | ಪ್ರತಿ ವಾರ್ಡ್‍ಗಳಲ್ಲಿ ಇ-ಆಸ್ತಿ ಅಂದೋಲನ ಪ್ರಾರಂಭ : ಮೇಯರ್ ಚಮನ್‍ಸಾಬ್.ಕೆ

Published

on

ಸುದ್ದಿದಿನ,ದಾವಣಗೆರೆ:ಮಹಾನಗರ ಪಾಲಿಕೆಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನವೆಂಬರ್ ತಿಂಗಳನ್ನು ಕನ್ನಡ ಸ್ವಚ್ಛತಾ ಮಾಸವನ್ನಾಗಿ ಆಚರಿಸಲಾಗುವುದು ಎಂದು ಮಹಾನಗರ ಪಾಲಿಕೆಯ ಮಹಾಪೌರ ಚಮನ್‍ಸಾಬ್ ಕೆ. ತಿಳಿಸಿದರು.

ಮಹಾನಗರ ಪಾಲಿಕೆಯ ಮೇಯರ್ ಕಾರ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಮಹಾನಗರ ಪಾಲಿಕೆಯ ಎಲ್ಲಾ ವಾರ್ಡುಗಳಲ್ಲಿ ಸ್ವಚ್ಛತಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದು. ಇದಕ್ಕೆ ಬೇಕಾಗುವ ಸಲಕರಣೆಗಳು, ವಾಹನಗಳು ಮತ್ತು ಮಾನವ ಸಂಪನ್ಮೂಲವನ್ನು ಹೆಚ್ಚುವರಿಯಾಗಿ ತೆಗೆದುಕೊಂಡು ಎಲ್ಲಾ ವಾರ್ಡುಗಳಲ್ಲಿ ಸ್ವಚ್ಛತೆ ಮಾಡಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಕಸ ಸಂಗ್ರಹಣೆ ವಾಹನಗಳು ಮನೆ ಮನೆಗೆ ಬಂದು ಹಸಿ ಕಸ, ಒಣ ಕಸವನ್ನು ಸಂಗ್ರಹಿಸುತ್ತಿದ್ದು, ಕೆಲವು ನಾಗರಿಕರು ರಾತ್ರಿ ವೇಳೆ ಎಲ್ಲೆಂದರಲ್ಲಿ ಕಸ ಹಾಕುವುದು ಕಂಡುಬಂದಲ್ಲಿ ಆರೋಗ್ಯ ನಿರೀಕ್ಷಕರು ಮನೆ ಬಾಗಿಲಿಗೆ ಬಂದು ದಂಡ ವಿಧಿಸಿ ಕಸ ಹಾಕಿದವರ ಫೋಟೋಸಹಿತ ಪತ್ರಿಕೆಗಳಲ್ಲಿ ಪ್ರಚುರಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ಆಸ್ತಿ ಮಾಲೀಕರುಗಳು ಆಸ್ತಿ ತೆರಿಗೆ, ನೀರಿನ ತೆರಿಗೆ, ಯುಜಿಡಿ ಶುಲ್ಕ, ಉದ್ದಿಮೆ ಪರವಾನಿಗೆ ಶುಲ್ಕವನ್ನು ಮಹಾನಗರ ಪಾಲಿಕೆಗೆ ಪಾವತಿಸಬೇಕು. ಒಂದು ವೇಳೆ ಪಾವತಿಸದೇ ಇದ್ದಲ್ಲಿ ಪಾಲಿಕೆಯ ಅಧಿಕಾರಿಗಳೇ ಭೇಟಿ ನೀಡಿ ಸ್ಥಳದಲ್ಲಿಯೇ ದಂಡದೊಂದಿಗೆ ತೆರಿಗೆ, ಶುಲ್ಕ ವಸೂಲಿಗೆ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ನವೆಂಬರ್ ಮಾಹೆಯಿಂದ ವಾರ್ಡ್‍ಗಳಲ್ಲಿ ಇ-ಆಸ್ತಿ ಅಂದೋಲನ ಪ್ರಾರಂಭ ಮಾಡಲಾಗುವುದು. ಎಲ್ಲಾ ಆಸ್ತಿ ಮಾಲೀಕರುಗಳು ಆಸ್ತಿ ತೆರಿಗೆ ಪಾವತಿಸಿದ ಚಲನ್, ಇ.ಸಿ. ಮನೆಗೆ ಸಂಬಂಧಿಸಿದ ದಾಖಲೆಗಳನ್ನು ಸಿದ್ದವಾಗಿಟ್ಟುಕೊಳ್ಳಬೇಕು. ಪಾಲಿಕೆಯಿಂದ ಆಂದೋಲನದ ವೇಳಾಪಟ್ಟಿಯನ್ನು ಪ್ರಕಟಪಡಿಸಿದ ನಂತರ ನಿಗದಿತ ದಿನಾಂಕಗಳಂದು ಆಯಾ ವಾರ್ಡುಗಳಲ್ಲಿ ಸ್ಥಳದಲ್ಲಿಯೇ ಇ-ಸ್ವತ್ತು ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಖಾಲಿ ನಿವೇಶನಗಳ ಮಾಲೀಕರು ತಮ್ಮ ನಿವೇಶನಗಳಲ್ಲಿ ಬೆಳೆದಿರುವ ಗಿಡಗೆಂಟಿಗಳನ್ನು ತಾವೇ ಸ್ವಚ್ಛಗೊಳಿಸಿಕೊಳ್ಳಬೇಕು. ತಪ್ಪಿದಲ್ಲಿ ಮಹಾನಗರಪಾಲಿಕೆಯಿಂದ ಸ್ವಚ್ಚಗೊಳಿಸಿ ಅವರ ಆಸ್ತಿ ತೆರಿಗೆಯಲ್ಲಿ ಸೇರಿಸಲಾಗುವುದು ಎಂದು ತಿಳಿಸಿದರು.
ಜಲಸಿರಿ ಯೋಜನೆ 14 ವಲಯಗಳಲ್ಲಿ ಪ್ರಾರಂಭಿಸಿ 24×7 ಮಾದರಿಯಲ್ಲಿ ನೀರು ಪೂರೈಕೆ ಮಾಡಲಾಗುತ್ತಿದ್ದು ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಬೇಕು. ಹೆಚ್ಚಿನ ಬಿಲ್ ಬಂದಲ್ಲಿ, ನಳ ಸಂಪರ್ಕ ಮತ್ತು ತೊಂದರೆಯಾದರೆ ದೂ.ಸಂ. 9036544419 ಗೆ ಕರೆ ಮಾಡಬೇಕೆಂದು ಮನವಿ ಮಾಡಿದರು.

ಮಹಾನಗರ ಪಾಲಿಕೆ ಪ್ರಧಾನ ಕಚೇರಿಯಲ್ಲಿ ಸಹಾಯ ಮೇಜು ಪ್ರಾರಂಭಿಸುತ್ತಿದ್ದು, ಸಾರ್ವಜನಿಕರು ಏನಾದರೂ ಕುಂದು ಕೊರತೆಗಳಿದ್ದಲ್ಲಿ ಅಥವಾ ಪಾಲಿಕೆಯಿಂದ ನೀಡಲಾಗುವ ಸೇವೆಗಳಲ್ಲಿ ಏನಾದರೂ ವ್ಯತ್ಯಯ ಉಂಟಾದಲ್ಲಿ ಹೆಲ್ಸ್ ಡೆಸ್ಕ್ ಅನ್ನು ಸಂಪರ್ಕಿಸುವುದು ಎಂದು ತಿಳಿಸಿದರು.

ಈಗ ಶೇ.50 ರಷ್ಟು ಮಾತ್ರ ಕಂದಾಯ ಪಾವತಿ ಮಾಡುತ್ತಿದ್ದಾರೆ. ಇನ್ನೂ ಕೆಲವರು 4 ಅಥವಾ 5 ವರ್ಷ ಬಿಟ್ಟು ಕಂದಾಯ ಪಾವತಿ ಮಾಡುವುದಕ್ಕೆ ಬಂದಾಗ ಬಡ್ಡಿ ಜಾಸ್ತಿಯಾಗಿದೆ ಎಂದು ಪಾಲಿಕೆಯಲ್ಲಿ ಜಗಳ ಮಾಡುತ್ತಿದ್ದಾರೆ. ಆದ್ದರಿಂದ ಪ್ರತಿಯೊಬ್ಬರು ಸರಿಯಾದ ಸಮಯಕ್ಕೆ ಕಂದಾಯ ಪಾವತಿ ಮಾಡಿದರೆ, ಯಾರಿಗೂ ಹೆಚ್ಚು ಬರುವುದಿಲ್ಲ ಎಂದು ತಿಳಿಸಿದರು.

ಪಾಲಿಕೆಯಲ್ಲಿ 400 ಪೌರಕಾರ್ಮಿಕರು ಕೊರತೆಯಿದ್ದು. ಮುಂದಿನ ದಿನಗಳಲ್ಲಿ ಖಾಲಿ ಇರುವ ಪೌರ ಕಾರ್ಮಿಕರನ್ನು ಮಾಡಿ ಭರ್ತಿಮಾಡಲು ಅನುಮತಿ ಪಡೆಯಲಾಗುವುದು ಎಂದು ತಿಳಿಸಿದರು.

ಪಾಲಿಕೆ ಆಯುಕ್ತೆ ರೇಣುಕಾ ಮಾತನಾಡಿ ಮಹಾನಗರ ಪಾಲಿಕೆಯ ಹಳೆಯ ಪ್ರಾಪರ್ಟಿಗಳ ಪಾರ್ಕ್ ಜಾಗ, ಮಾಲೀಕರು ಬೇರೆ ಕಡೆ ವಾಸವಾಗಿರುವುದನ್ನು ತಿದ್ದುಪಡಿ ಮಾಡಿ ಮ್ಯಾನುವಲ್ ನಮೂನೆ-3 ಕೊಟ್ಟು ಸಬ್‍ರಿಜಿಸ್ಟ್ರಲ್ಲಿ ರಿಜಿಸ್ಟರ್ ಆಗಿ ಖಾತೆಗೆ ಬರುತ್ತಿರುವ ಪ್ರಕರಣಗಳು ಸಂಖ್ಯೆ ಜಾಸ್ತಿ ಇದ್ದವು, ಇದಕ್ಕೆ ಸಂಬಂಧಪಟ್ಟಂತೆ ಎಲ್ಲಾ ರೀತಿಯ ಕಡಿವಾಣ ಹಾಕಿ, ಎಲ್ಲಿಯೂ ದಾಖಲೆಗಳನ್ನು ತಿದ್ದುಪಡಿ ಮಾಡಲಿಲ್ಲ ಎಂದು ತಿಳಿಸಿದರು.

ಖಾತೆಗೆ ಸಂಬಂಧಪಟ್ಟಂತೆ ಪಾರ್ಕ್‍ಗಳ ಜಾಗಗಳನ್ನು ಗುರುತಿಸಿ ಅದರ ಖಾತೆಗಳನ್ನು ರದ್ದು ಮಾಡಿ ಪಾಲಿಕೆ ವಶಕ್ಕೆ ತೆಗೆದುಕೊಳ್ಳಲಾಗಿದೆ. ಹಾಗೂ ಮಹಾನಗರ ಪಾಲಿಕೆಯಲ್ಲಿ ಪ್ರತಿಯೊಬ್ಬರೂ ಕೂಡ ಸಾಲಿನಲ್ಲಿ ನಿಂತು ಟ್ಯಾಕ್ಸ್ ಕಟ್ಟುವ ವ್ಯವಸ್ಥೆ ಇತ್ತು, ಇದನ್ನು ಆನ್ಲೈನ್ ಮೂಲಕ ಕಟ್ಟುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಉಪಮೇಯರ್ ಸೋಗಿ ಶಾಂತಕುಮಾರ್ ಹಾಗೂ ಇನ್ನಿತರರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending