ಲೈಫ್ ಸ್ಟೈಲ್
ಸರ್ವಮಂಗಳೆ ಚಾಮುಂಡೇಶ್ವರಿಯ ದರುಶನಕ್ಕಾಗಿ ಸಾಲುಗಟ್ಟಿ ನಿಂತ ಭಕ್ತರು. ಈ ದೇವಾಲಯದ ವಿಶೇಷ ಏನು?
ಆಷಾಢ ಮಾಸದ ಶುಕ್ರವಾರ ದಂದು, ಶ್ರೀರಂಗಪಟ್ಟಣದ ತಾಯಿ ಚಾಮುಂಡೇಶ್ವರಿಯ ನೋಡಲು ಜನ ತಾ ಮುಂದು ನಾ ಮುಂದು ಎಂಬಂತೆ ಸಾಲು ಗಟ್ಟಿ ನಿಂತಿದ್ದಾರೆ. ಕರುನಾಡ ತಾಯಿ ಚಾಮುಂಡೇಶ್ವರಿಯ ವಿಶೇಷ ಅಲಂಕಾರ ಜನರನ್ನು ಮೂಕವಿಸ್ಮಿತನಾಗಿಸಿದೆ. ಸುಮಾರು ಹಂತಕ್ಕೂ ಹೆಚ್ಚು ಜನ ಇಡೀ ರಾತ್ರಿ ಈ ವಿಶಿಷ್ಟ ಅಲಂಕಾರ ಸೇವೆಯಲ್ಲಿ ಭಾಗಿಯಾಗಿದ್ದಾರೆ.
ಸುಮಾರು ಇಪ್ಪತ್ತು ನಾಲ್ಕು ಬಗೆಯ, ಹದಿನಾರು ಸಾವಿರ ತಿನಿಸುಗಳನ್ನು ಬಳಸಿ, ಈ ಅಲಂಕಾರವನ್ನು ಸಂಪೂರ್ಣ ಗೊಳಿಸಲಾಗಿದೆ. ತಾಯಿಯ ಮೂಲ ಮೂರುತಿ, ಗರ್ಭಗುಡಿ ಸೇರಿದಂತೆ ಇಡೀ ದೇವಾಲಯವನ್ನು ವಿಧವಿಧವಾದ ಚಕ್ಕುಲಿ-ಕೊಡುಬಲೆ-ರವೆ ಉಂಡೆ-ಅಂಚಿನ ಉಂಡೆ-ಚೌಚೌ-ಬಗೆ ಬಗೆಯ ತಿನಿಸುಗಳಿಂದ ಅಲಂಕರಿಸಲಾಗಿದೆ. ಸರ್ವಮಂಗಳೆಯ ಈ ಅಲಂಕಾರ ನೋಡಲು ಎರಡು ಕಣ್ಣು ಗಳು ಸಾಲದು ಎಂಬಂತೆ ತಾಯಿಯ ಮುಖದ ಮಂದಹಾಸ.
ಅಂದಹಾಗೆ ಇವೆಲ್ಲವೂ ನಡೆಯುತ್ತಿರುವುದು ಶ್ರೀರಂಗಪಟ್ಟಣ ದ ಚಾಮುಂಡೇಶ್ವರಿಯ ದೇವಾಲಯದಲ್ಲಿ. ಬಹಳ ಪುರಾತನ ಕಾಲದ ದೇವಾಲಯವಾಗಿದ್ದು, ಕಾರಣಾಂತರಗಳಿಂದ ಬಹಳ ವರ್ಷಗಳಿಂದಲೂ ಮುಚ್ಚಲ್ಪಟ್ಟಿದ್ದು..ಸುಮಾರು ಹದಿನಾರು ವರ್ಷಗಳಿಂದ ಈಚೆಗೆ ಈ ದೇವಾಲಯದ ಜೀರ್ಣೋದ್ಧಾರ ಕಾರ್ಯನಡೆದಿದೆ. ಇದಕ್ಕೆಲ್ಲಾ ಮೂಲ ಕಾರಣ ಇಲ್ಲಿನ ಪ್ರಧಾನ ಅರ್ಚಕರಾದ ಲಕ್ಷ್ಮೀಷ ರವರು. ಹಲವಾರು ವರ್ಷಗಳಿಂದ ದೇವಾಲಯದಲ್ಲಿ ಪೂಜೆ ಸಲಿಸುುುತ್ತಾ ತಾಯಿಯ ಆರಧನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅಮ್ಮನವರಿಗೆ ಸಾವಿರಕ್ಕೂ ಹೆಚ್ಚಿನ ಅಲಂಕಾರಗಳನ್ನು ಮಾಡಿರುವ ಖ್ಯಾತಿ ಇವರಿಗೆ ಸಲ್ಲುತ್ತದೆ. ಅರಿಶಿಣ-ಕುಂಕುಮದ ತಾಯಿಯ ಅಭಿಷೇಕ ವಂತೂ ಅಮ್ಮನವರ ಮೂರುತಿ ಗೆ ವಿಶೇಷ ಆಕರ್ಷಣೆ ತಂದುಕೊಟ್ಟಿದೆ . ಚಾಮುಂಡೇಶ್ವರಿ ತಾಯಿಯೇ ಖುದ್ದು ಬಂದು ಕುಳಿತಂತೆ ಭಾಸವಾಗುವುದು.
ಆಶಾಢ ಶುಕ್ರವಾರ ವಾದ ಇಂದು ಜಗನ್ಮಾತೆಯ ದರುಶನಕ್ಕೆಂದು ಲಕ್ಷಾಂತರ ಜನರು ಕಾದು ಕುಳಿತ್ತಿದ್ದಾರೆ. ಚಿತ್ರರಂಗದ ಹಲವು ನಟ-ನಟಿಯರು, ಪ್ರಮುಖರು ಸೇರಿದಂತೆ ಹಲವಾರು ಗಣ್ಯರು ದೇವಸ್ಥಾನಕ್ಕೆ ಭೇಟಿ ನೀಡಿ ತಾಯಿ ಕೃಪೆಗೆ ಪಾತ್ರರಾಗಿದ್ದಾರೆ.ತಾಯಿ ಚಾಮುಂಡೇಶ್ವರಿ ಸರ್ವರಿಗೂ ಸತ್ಬುದ್ಧಿ ನೀಡಿ ಸನ್ಮಂಗಳವನ್ನು ಉಂಟು ಮಾಡಲಿ ಎಂದು ಕೋರಿಕೊಳ್ಳೋಣ.

ದಿನದ ಸುದ್ದಿ
Photo Gallery | ಚನ್ನಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ-2025
ದಿನದ ಸುದ್ದಿ
ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಅಗತ್ಯ : ಪ್ರಾಚಾರ್ಯ ಎಂ.ನಾಸಿರುದ್ದೀನ್

ಸುದ್ದಿದಿನ,ಚಿತ್ರದುರ್ಗ: ಜಗತ್ತಿನಲ್ಲಿ ಭೂಮಿಯ ಮೇಲೆ ಸಕಲ ಜೀವರಾಶಿಗಳು ಬದುಕಲು ಅವಕಾಶವಿದ್ದು ಪರಿಸರ ಸಂರಕ್ಷಣೆ ಮಾಡುವುದರ ಮೂಲಕ ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.
ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿ ಮಾತನಾಡಿದ ಅವರು ಪ್ರಸ್ತುತ ಸಂದರ್ಭದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು ಪಕ್ಷಿಗಳಿಗೆ ನೀರು ಮತ್ತು ಆಹಾರವನ್ನು ಪೂರೈಕೆ ಮಾಡುವ ಮೂಲಕ ಪಕ್ಷಿಗಳ ಬಗ್ಗೆ ಕಾಳಜಿಯೊಂದಿಗೆ ಸಂರಕ್ಷಿಸುವ ಭಾವನೆ ಬೆಳೆಸಿಕೊಳ್ಳಬೇಕು ಎಂದರು. ನಮ್ಮ ಮನೆಗಳ ಮೇಲ್ಚಾವಣಿಯಲ್ಲಿ ನೀರು, ಆಹಾರ ವ್ಯವಸ್ಥೆ ಮಾಡುವುದರಿಂದ ಪಕ್ಷಿಗಳನ್ನು ಸಂರಕ್ಷಿಸಲು ಅನುಕೂಲವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಉಪನ್ಯಾಸಕ ಆರ್.ನಾಗರಾಜು ಕಚೇರಿ ಸಿಬ್ಬಂದಿ ವರ್ಗದವರು ಇದ್ದರು.
ಫೋಟೋ: ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪ್ರಾಚಾರ್ಯ ಎಂ.ನಾಸಿರುದ್ದೀನ್ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕವಿತೆ | ಮತ್ತಿನ ಕುಣಿಕೆ

- ಗುರು ಸುಳ್ಯ
ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ
ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ
ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…
ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ
ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ
ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಸುದ್ದಿದಿನ.ಕಾಂ ಫಲಶೃತಿ | ಕಬ್ಬಿಣ ಬಿಸಾಡಿ ಓಡಿ ಹೋದ ಶಾಸಕರ ಆಪ್ತರು ; ಗೇಟ್ ಗೆ ಡಿಕ್ಕಿ, ಕ್ಯಾಮರಾಗಳಲ್ಲಿ ಸೆರೆ
-
ದಿನದ ಸುದ್ದಿ6 days ago
ವಕ್ಫ್ ತಿದ್ದುಪಡಿ ಕಾಯ್ದೆ- 2025 | ಇಂದು ಸುಪ್ರೀಂ ವಿಚಾರಣೆ
-
ರಾಜಕೀಯ4 days ago
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಚನ್ನಗಿರಿ | ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ; ಕಾನೂನು ಮೂಲಕ ಪರಿಹಾರ ಕಂಡುಕೊಳ್ಳಿ : ಡಿವೈಎಸ್ಪಿ ಸ್ಯಾಮ್ ವರ್ಗೀಸ್ ಎಚ್ಚರಿಕೆ
-
ದಿನದ ಸುದ್ದಿ5 days ago
ಅಂಬೇಡ್ಕರ್ ಸ್ಮರಣೆಯಿಂದ ದೇಶ ಪ್ರಗತಿಪರವಾಗಲು ಸಾಧ್ಯ : ಸಹಾಯಕ ಪ್ರಾಧ್ಯಾಪಕ ಷಣ್ಮುಖಪ್ಪ ಕೆ.ಎಚ್
-
ದಿನದ ಸುದ್ದಿ6 days ago
ಚನ್ನಗಿರಿ | ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ; ಆರು ಮಂದಿ ಬಂಧನ
-
ದಿನದ ಸುದ್ದಿ4 days ago
ದಾವಣಗೆರೆ | ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ದಾವಣಗೆರೆ | ಮೊಬೈಲ್ ಕ್ಯಾಟೀನ್ ; ಸಹಾಯಧನಕ್ಕಾಗಿ ಅರ್ಜಿ ಆಹ್ವಾನ