Connect with us

ದಿನದ ಸುದ್ದಿ

ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿರ್ಬಂಧ..!

Published

on

ಸುದ್ದಿದಿನ,ಮೈಸೂರು : ಕೋವಿಡ್-19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಅಕ್ಟೋಬರ್ 28 ರ ಸಂಜೆ 6 ಗಂಟೆಯಿಂದ ಅಕ್ಟೋಬರ್ 29 ರ ಮಧ್ಯಾಹ್ನ 12 ಗಂಟೆಯವರೆಗೆ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಸಾರ್ವಜನಿಕರ ಪ್ರವೇಶ ಹಾಗೂ ಮೆಟ್ಟಿಲುಗಳ ಮೂಲಕ ಬೆಟ್ಟಕ್ಕೆ ಬರುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಆದೇಶ ಹೊರಡಿಸಿರುತ್ತಾರೆ.

ಪ್ರವೇಶ ನಿಷೇಧವಿರುವ ದಿನಗಳಂದು ಕೇಂದ್ರ ಮತ್ತು ರಾಜ್ಯ ಸರ್ಕಾರವು ಘೋಷಿಸಲ್ಪಟ್ಟ ಶಿಷ್ಟಾಚಾರ ವ್ಯವಸ್ಥೆ ಹೊಂದಿರುವ ಗಣ್ಯ ವ್ಯಕ್ತಿಗಳು, ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು ಮತ್ತು ತುರ್ತು ಸೇವಾ ವಾಹನಗಳು ಹಾಗೂ ಗ್ರಾಮಸ್ಥರ ವಾಹನಗಳನ್ನು ಹೊರತುಪಡಿಸಿ ಸಾರ್ವಜನಿಕರ ವಾಹನ ಮತ್ತು ಖಾಸಗಿ ವಾಹನಗಳು ಬೆಟ್ಟಕ್ಕೆ ಬರುವುದುನ್ನು ನಿಷೇಧಿಸಿದೆ.

ಅಲ್ಲದೆ ಆ ದಿನಗಳಂದು ದೇವಾಲಯದ ಪ್ರದೇಶದಲ್ಲಿ ದೇವಾಲಯದ ವತಿಯಿಂದ ಹಾಗೂ ದಾನಿಗಳಿಂದ ಸಾಮೂಹಿಕವಾಗಿ ಹಾಗೂ ಸಾರ್ವಜನಿಕವಾಗಿ ಪ್ರಸಾದ ತಯಾರಿಸುವುದು, ವಿತರಿಸುವುದನ್ನು ನಿಷೇಧಿಸಲಾಗಿದೆ.

ದೇವಾಲದಲ್ಲಿ ಜರುಗುವ ರಥೋತ್ಸವ ಸಂಬಂಧಿತ ಧಾರ್ಮಿಕ ಕಾರ್ಯಕ್ರಮಗಳು ಸಾಂಪ್ರದಾಯಿಕವಾಗಿ ದೇವಾಲಯದ ಅರ್ಚಕರು ಮತ್ತು ಸಿಬ್ಬಂದಿಯವರ ಉಪಸ್ಥಿತಿಯಲ್ಲಿ ಎಂದಿನಂತೆ ನಡೆಸಬಹುದು ಎಂದು ಜಿಲ್ಲಾಧಿಕಾರಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ದಿನದ ಸುದ್ದಿ

ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.

ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

Trending