ದಿನದ ಸುದ್ದಿ
ಚನ್ನಗಿರಿ |ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ
ಸುದ್ದಿದಿನ,ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಹಾಗೂ ಇತರೆ ಚಟುವಟಿಕೆ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮವನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು.
ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಅವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದರು.
ಮುಖ್ಯ ಅತಿಥಿಗಳಾಗಿ ಡಿವೈಎಸ್ ಪಿ ಸ್ಯಾಮ್ ವರ್ಗೀಸ್ ಐಪಿಸ್ ಹಾಗೂ ಕಿರುತೆರೆಯ ರಿಯಾಲಿಟಿ ಶೋ ಮಹಾನಟಿ ಖ್ಯಾತಿಯ ಬಿಂದು ಹೊನ್ನಾಳಿ ಭಾಗವಹಿಸಿದ್ದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಅಮೃತೇಶ್ವರ ಬಿ.ಜಿ ವಹಿಸಿದ್ದರು. ಐ ಕ್ಯು ಎಸ್ ಸಿ ಸಂಚಾಲಕರಾದ ವಿಜಯ್ ಕುಮಾರ್ ಎನ್.ಸಿ ಅವರು ಉಪಸ್ಥಿತರಿದ್ದರು.
ಸಾಂಸ್ಕೃತಿಕ ಸಮಿತಿ ಸಂಚಾಲಕರಾದ ಷಣ್ಮುಖಪ್ಪ ಕೆ.ಹೆಚ್ ಅವರು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಡಿವೈಎಸ್ ಪಿ ಸ್ಯಾಮ್ ವರ್ಗೀಸ್ ಐ ಪಿ ಎಸ್ ಅವರ ವ್ಯಕ್ತಿಪರಿಚಯವನ್ನು ಪ್ರಾಧ್ಯಾಪಕಿ ಡಾ.ದಾಕ್ಷಾಯಿಣಿ ಡೋಂಗ್ರೆ ಅವರು ಹಾಗೂ ಕಿರುತೆರೆ ನಟಿ ಬಿಂದು ಹೊನ್ನಾಳಿಯವರ ವ್ಯಕ್ತಿಪರಿಚಯವನ್ನು ಡಾ.ಶಕೀಲ್ ಅಹಮ್ಮದ್ ಅವರು ಮಾಡಿಕೊಟ್ಟರು.
ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ನ ಸಂಯೋಜಕರಾದ ಡಾ.ರಮೇಶ್ ಅಯ್ಯನಹಳ್ಳಿ ಹಾಗೂ ಪ್ರಸನ್ನ ಷ, ರೆಡ್ ಕ್ರಾಸ್ ನ ಸಂಯೋಜಕರಾದ ಡಾ.ಪ್ರದೀಪ್ ಕುಮಾರ್ ಜಿಎಂ, ರೋವರ್ಸ್ ನ ಸುರೇಶ್ ಜಿ.ಎಸ್, ರೇಂಜರ್ಸ್ ನ ಡಾ.ಶಕುಂತಲಾ ಹಾಗೂ ಸುಪ್ರಿಯಾ ಬುಟ್ಟಿ, ಉದ್ಯೋಗ ಕೋಶದ ಸಂಚಾಲಕರಾದ ಡಾ.ಮಂಜುಳ ಟಿ, ಕಾಲೇಜು ಸಮಿತಿಯ ಸದಸ್ಯರು, ಬೋಧಕವರ್ಗ ಹಾಗೂ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿದ್ಯಾರ್ಥಿಗಳಾದ ತೇಜು, ಭಾಗ್ಯ ಜಿ.ಜಿ ಆಶಯಗೀತೆ ಹಾಡಿದರು. ಮಂಜುನಾಥ ಮತ್ತು ಲೋಹಿತ್ ನಿರೂಪಿಸಿದರು. ಸಿದ್ದೇಶ್ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243