Connect with us

ದಿನದ ಸುದ್ದಿ

ಚನ್ನಗಿರಿ | ಕೆ ಹೊಸಳ್ಳಿ ಗ್ರಾಮದ ಶಾಲೆ ಎದುರೇ ಕೆರೆ ; ಸಾವಿನ ಸನಿಹ ಮಕ್ಕಳ‌ ಕಲಿಕೆ : ಕಾಂಪೌಂಡ್ ನಿರ್ಮಿಸಲು ಗ್ರಾಮಸ್ಥರ ಮನವಿಗೆ ಕಿವಿಗೊಡದ ಅಧಿಕಾರಿಗಳು

Published

on

ಸುದ್ದಿದಿನ,ಚನ್ನಗಿರಿ:ತಾಲೂಕಿನ ಕೆ ಹೊಸಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ತಡೆಗೋಡೆ (ಕಾಂಪೌಂಡ್) ಕಾಣದೇ ಇಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಪ್ರತಿ ದಿನವೂ ಅಪಾಯದ ನಡುವೆಯೇ ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಆಟ-ಪಾಠ ಕಾಣುವಂತಾಗಿದೆ ಎಂಬ ಆರೋಪದ ಜೊತೆಗೆ ಕಾಳಜಿಯ ಒತ್ತಾಯ ಕೇಳಿ ಬರುತ್ತಿದೆ.

ಶಾಲೆಯ ಎದುರೇ ಕೆರೆ ಮತ್ತು ಗ್ರಾಮದ ಸಂಪರ್ಕಿಸುವ ರಸ್ತೆ ಜೊತೆಗೆ ವಿದ್ಯುತ್ ಸಂಪರ್ಕವುಳ್ಳ ಟ್ರ್ಯಾನ್ಫರ್ಮರ್ ಹಾಗೂ ಬೋರ್ವೆಲ್ ಇದೆ. ಅಲ್ಲದೇ ತೆರೆದ ಒಳಚರಂಡಿ ಸಹ ಇದೆ. ಹೀಗೆ ಅಪಾಯಕ್ಕೆ ಕಾದು ಕುಳಿತು ಜೀವ ಬಲಿ ಪಡೆಯುವಂತಹ ಪರಿಸ್ಥಿತಿ ಇದ್ದು, ಶಾಲೆಗೆ ತಡೆಗೋಡೆ ಇಲ್ಲದೇ ಮಕ್ಕಳ ಜೀವಕ್ಕೆ ರಕ್ಷಣೆ ಇಲ್ಲದಂತಾಗಿ 20 ರಿಂದ 30 ವಿದ್ಯಾರ್ಥಿಗಳ ಜೀವದ ಪ್ರಶ್ನೆಯಾಗಿ ಉಳಿದಿದೆ.

ಹೀಗೆ ವಿದ್ಯಾರ್ಥಿಗಳು ಆಟದ ವೇಳೆಯಲ್ಲಾಗಲೀ ಅಥವಾ ಶಾಲೆಗೆ ಬರುವಾಗ, ಮನೆಗೆ ಹೋಗುವಾಗ ಈ ಯಾವುದಾದರೂ ಅಪಾಯಕ್ಕೆ ಸಿಲುಕಿದರೆ ಅಮೂಲ್ಯ ಜೀವ ಬಲಿಯಾಗಲಿದೆ. ಅಕ್ಷರ ಜ್ಞಾನ ಪಡೆಯಲು ಬರುವ ವಿದ್ಯಾರ್ಥಿಗಳಿಗೆ ಶಾಲೆಯೇ ಭವಿಷ್ಯ ಕಟ್ಟಿಕೊಡುವ ಬದಲು ಜೀವ ಬಲಿಪಡೆಯುವ ವಾತಾವರಣ ನಿರ್ಮಾಣವಾಗಿದ್ದು, ಇದಕ್ಕೆ ಹೊಸದಾಗಿ ನಿರ್ಮಾಣವಾಗಬೇಕಿರುವ ಶಾಲಾ ಕಾಂಪೌಂಡ್ 4 ವರ್ಷಗಳೇ ಕಳೆದರೂ ನಿರ್ಮಾಣ ಕಾಣದಂತಾಗಿದೆ ಎಂಬುದು ಈ ಶಾಲೆಯ ಕೆಲ ಹಳೇ ವಿದ್ಯಾರ್ಥಿಗಳ ಮುತುವರ್ಜಿಯಾಗಿದೆ.

ಈ ಶಾಲೆಗೆ ಹಿಂದೆ ಶಾಲಾ ಕಾಂಪೌಂಡ್ ದುರಸ್ತಿಯಲ್ಲಿದ್ದ ಕಾರಣ ಹೊಸ ಕಾಂಪೌಂಡ್ ನಿರ್ಮಾಣಕ್ಕಾಗಿ 2021-22ರ ವರ್ಷದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಅಧಿನಿಯಮ -2005 ರ ಮಹಾತ್ಮ ಗಾಂಧಿ ನರೇಗಾ ಕಾಮಗಾರಿಯಡಿ 4 ಲಕ್ಷ ರೂ. ಮಂಜೂರು ಆಗಿತ್ತು. ಸುಮಾರು ನಾಲ್ಕು ವರ್ಷಗಳೇ ಕಳೆದರೂ ಇನ್ನೂ ಈ ಶಾಲೆಗೆ ಕಾಂಪೌಂಡ್ ಮರೀಚಿಕೆಯಾಗಿದೆ ಎನ್ನುತ್ತಾರೆ ಹಳೇ ವಿದ್ಯಾರ್ಥಿ ಮಂಜುನಾಥ್ ಆರ್.

“ರಸ್ತೆಯ ಸಂಪರ್ಕಕ್ಕೆ ಹತ್ತಿರವಾಗಿದ್ದು, ಮಕ್ಕಳಿಗೆ ಅಪಘಾತ ಆಗುವ ಸಂದರ್ಭ ಇದೆ ಮತ್ತು ಶಾಲೆಯ ಮುಂಭಾಗದಲ್ಲಿ ಗ್ರಾಮದ ಕೆರೆ ಇದ್ದು ಕೆರೆವು ಸಂಪೂರ್ಣವಾಗಿ ನೀರಿನಿಂದ ತುಂಬಿದೆ ಇದರಿಂದ ಮಕ್ಕಳ ಜೀವಕ್ಕೆ ತೊಂದರೆ ಆಗುವ ಸಂಭವ ಸಹ ಇದೆ. ಈ ಎಲ್ಲ ತೊಂದರೆಗಳಿಗೂ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ನಿರ್ಲಕ್ಷತನ ಎಂದು ಹೇಳಬಹುದು. ಶಾಸಕರು ಸಹ ಇದರ ಬಗ್ಗೆ ಹೆಚ್ಚಿನ ಗಮನವಹಿಸಬೇಕಾಗಿದೆ.”

|ಹಳೇ ವಿದ್ಯಾರ್ಥಿ ಮಂಜುನಾಥ್

“ಶಾಲೆಯ ಕಾಂಪೌಂಡ್ ನಿರ್ಮಾಣ ವಿಚಾರವಾಗಿ ನಾನೂ ಸಹ ಪಿಡಿಓಗೆ ಸಾಕಷ್ಟು ಮನವಿ ಸಾಕಾಗಿದೆ. ಯಾವುದೇ ಸರಿಯಾದ ಸ್ಪಂದನೆ ಇಲ್ಲ. ಕಾಂಪೌಂಡ್ ನಿರ್ಮಾಣ ವಿಚಾರದಲ್ಲಿ ಹಿಂದೆ ಅಡೆ-ತಡೆಯೂ ಉಂಟಾಯಿತು. ಹೀಗಾಗಿ ನರೇಗಾ ಯೋಜನೆಯ ಕಾರ್ಮಿಕರು ನಿರ್ಮಾಣಕ್ಕೆ ಮುಂದಾಗದಂತಾಯಿತು. ಶಾಲೆಗೆ ಕಾಂಪೌಂಡ್ ಇಲ್ಲದೇ ಅಪಾಯದ ವಾತಾವರಣವಿರುವ ಕಾರಣ ಯಾವುದೇ ಪಠ್ಯೇತರ ಚಟುವಟಿಕೆಗಳು ನಡೆಸಲು ಆಗುತ್ತಿಲ್ಲ. ಮಕ್ಕಳ ಜೀವವನ್ನು ನಾನು ಕಾವಲುಗಾರನಾಗಿ ಕಾಯುತ್ತಿದ್ದೇನೆ. ಶಾಲೆಗೆ ಕಾಂಪೌಂಡ್ ಇಲ್ಲದೇ ತೆರೆದ ಪ್ರದೇಶವಾಗಿರುವ ಕಾರಣ ಮದ್ಯ ವ್ಯಸನಿಗಳ ತಾಣವಾಗಿದ್ದು, ದಿನವೂ ಮದ್ಯದ ಬಾಟಲ್, ಪೌಚ್ಗಳ ಸ್ವಚ್ಚಗೊಳಿಸಿ ಶಾಲೆಯೊಳಗೆ ಕರ್ತವ್ಯಕ್ಕೆ ತೆರಳುವಂತಾಗಿದೆ.”

| ಜಯರಾಜ್, ಮುಖ್ಯೋಪಾದ್ಯಾಯರು

“ಇನ್ನೆರಡು ದಿನಗಳಲ್ಲಿ ನಿರ್ಮಾಣ ಕಾರ್ಯ ಪ್ರಗತಿಗೆ
ನರೇಗಾ ಯೋಜನೆಯಡಿಯ ಈ ಕಾಮಗಾರಿ ಕೈಗೊಳ್ಳಲು ಉದ್ಯೋಗ ಖಾತ್ರಿ ಕಾರ್ಡ್ವುಳ್ಳ ಕಾರ್ಮಿಕರು ಮುಂದಾಗುತ್ತಿಲ್ಲ. ಕಾಂಪೌಂಡ್ ನಿರ್ಮಾಣದಲ್ಲಿ ತಡವಾಗುತ್ತಿರುವುದಾಗಲೀ, ಅಡೆ-ತಡೆ ಬಗ್ಗೆಯಾಗಲೀ ನನಗೆ ಯಾವುದೇ ಮಾಹಿತಿ ಇಲ್ಲ. ಇದೀಗ ಶಾಲೆಯ ಹಳೇ ವಿದ್ಯಾರ್ಥಿಗಳು ಸಹಕಾರ ನೀಡಲು ಮುಂದಾಗಿದ್ದು, ಇನ್ನೆರಡು ದಿನಗಳಲ್ಲಿ ನಿರ್ಮಾಣ ಕಾರ್ಯ ಪ್ರಗತಿಗೆ ಬರಲಿದೆ”

| ರಶ್ಮಿ, ಪ್ರಭಾರ ಪಿಡಿಓ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್‌ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.

ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.

ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

Published

on

ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್‌ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್‌.ಎಚ್‌.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್‌, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್‌ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್‌ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending