Connect with us

ದಿನದ ಸುದ್ದಿ

ಚನ್ನಗಿರಿ | ಕೆ ಹೊಸಳ್ಳಿ ಗ್ರಾಮದ ಶಾಲೆ ಎದುರೇ ಕೆರೆ ; ಸಾವಿನ ಸನಿಹ ಮಕ್ಕಳ‌ ಕಲಿಕೆ : ಕಾಂಪೌಂಡ್ ನಿರ್ಮಿಸಲು ಗ್ರಾಮಸ್ಥರ ಮನವಿಗೆ ಕಿವಿಗೊಡದ ಅಧಿಕಾರಿಗಳು

Published

on

ಸುದ್ದಿದಿನ,ಚನ್ನಗಿರಿ:ತಾಲೂಕಿನ ಕೆ ಹೊಸಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ತಡೆಗೋಡೆ (ಕಾಂಪೌಂಡ್) ಕಾಣದೇ ಇಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಪ್ರತಿ ದಿನವೂ ಅಪಾಯದ ನಡುವೆಯೇ ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಆಟ-ಪಾಠ ಕಾಣುವಂತಾಗಿದೆ ಎಂಬ ಆರೋಪದ ಜೊತೆಗೆ ಕಾಳಜಿಯ ಒತ್ತಾಯ ಕೇಳಿ ಬರುತ್ತಿದೆ.

ಶಾಲೆಯ ಎದುರೇ ಕೆರೆ ಮತ್ತು ಗ್ರಾಮದ ಸಂಪರ್ಕಿಸುವ ರಸ್ತೆ ಜೊತೆಗೆ ವಿದ್ಯುತ್ ಸಂಪರ್ಕವುಳ್ಳ ಟ್ರ್ಯಾನ್ಫರ್ಮರ್ ಹಾಗೂ ಬೋರ್ವೆಲ್ ಇದೆ. ಅಲ್ಲದೇ ತೆರೆದ ಒಳಚರಂಡಿ ಸಹ ಇದೆ. ಹೀಗೆ ಅಪಾಯಕ್ಕೆ ಕಾದು ಕುಳಿತು ಜೀವ ಬಲಿ ಪಡೆಯುವಂತಹ ಪರಿಸ್ಥಿತಿ ಇದ್ದು, ಶಾಲೆಗೆ ತಡೆಗೋಡೆ ಇಲ್ಲದೇ ಮಕ್ಕಳ ಜೀವಕ್ಕೆ ರಕ್ಷಣೆ ಇಲ್ಲದಂತಾಗಿ 20 ರಿಂದ 30 ವಿದ್ಯಾರ್ಥಿಗಳ ಜೀವದ ಪ್ರಶ್ನೆಯಾಗಿ ಉಳಿದಿದೆ.

ಹೀಗೆ ವಿದ್ಯಾರ್ಥಿಗಳು ಆಟದ ವೇಳೆಯಲ್ಲಾಗಲೀ ಅಥವಾ ಶಾಲೆಗೆ ಬರುವಾಗ, ಮನೆಗೆ ಹೋಗುವಾಗ ಈ ಯಾವುದಾದರೂ ಅಪಾಯಕ್ಕೆ ಸಿಲುಕಿದರೆ ಅಮೂಲ್ಯ ಜೀವ ಬಲಿಯಾಗಲಿದೆ. ಅಕ್ಷರ ಜ್ಞಾನ ಪಡೆಯಲು ಬರುವ ವಿದ್ಯಾರ್ಥಿಗಳಿಗೆ ಶಾಲೆಯೇ ಭವಿಷ್ಯ ಕಟ್ಟಿಕೊಡುವ ಬದಲು ಜೀವ ಬಲಿಪಡೆಯುವ ವಾತಾವರಣ ನಿರ್ಮಾಣವಾಗಿದ್ದು, ಇದಕ್ಕೆ ಹೊಸದಾಗಿ ನಿರ್ಮಾಣವಾಗಬೇಕಿರುವ ಶಾಲಾ ಕಾಂಪೌಂಡ್ 4 ವರ್ಷಗಳೇ ಕಳೆದರೂ ನಿರ್ಮಾಣ ಕಾಣದಂತಾಗಿದೆ ಎಂಬುದು ಈ ಶಾಲೆಯ ಕೆಲ ಹಳೇ ವಿದ್ಯಾರ್ಥಿಗಳ ಮುತುವರ್ಜಿಯಾಗಿದೆ.

ಈ ಶಾಲೆಗೆ ಹಿಂದೆ ಶಾಲಾ ಕಾಂಪೌಂಡ್ ದುರಸ್ತಿಯಲ್ಲಿದ್ದ ಕಾರಣ ಹೊಸ ಕಾಂಪೌಂಡ್ ನಿರ್ಮಾಣಕ್ಕಾಗಿ 2021-22ರ ವರ್ಷದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಅಧಿನಿಯಮ -2005 ರ ಮಹಾತ್ಮ ಗಾಂಧಿ ನರೇಗಾ ಕಾಮಗಾರಿಯಡಿ 4 ಲಕ್ಷ ರೂ. ಮಂಜೂರು ಆಗಿತ್ತು. ಸುಮಾರು ನಾಲ್ಕು ವರ್ಷಗಳೇ ಕಳೆದರೂ ಇನ್ನೂ ಈ ಶಾಲೆಗೆ ಕಾಂಪೌಂಡ್ ಮರೀಚಿಕೆಯಾಗಿದೆ ಎನ್ನುತ್ತಾರೆ ಹಳೇ ವಿದ್ಯಾರ್ಥಿ ಮಂಜುನಾಥ್ ಆರ್.

“ರಸ್ತೆಯ ಸಂಪರ್ಕಕ್ಕೆ ಹತ್ತಿರವಾಗಿದ್ದು, ಮಕ್ಕಳಿಗೆ ಅಪಘಾತ ಆಗುವ ಸಂದರ್ಭ ಇದೆ ಮತ್ತು ಶಾಲೆಯ ಮುಂಭಾಗದಲ್ಲಿ ಗ್ರಾಮದ ಕೆರೆ ಇದ್ದು ಕೆರೆವು ಸಂಪೂರ್ಣವಾಗಿ ನೀರಿನಿಂದ ತುಂಬಿದೆ ಇದರಿಂದ ಮಕ್ಕಳ ಜೀವಕ್ಕೆ ತೊಂದರೆ ಆಗುವ ಸಂಭವ ಸಹ ಇದೆ. ಈ ಎಲ್ಲ ತೊಂದರೆಗಳಿಗೂ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ನಿರ್ಲಕ್ಷತನ ಎಂದು ಹೇಳಬಹುದು. ಶಾಸಕರು ಸಹ ಇದರ ಬಗ್ಗೆ ಹೆಚ್ಚಿನ ಗಮನವಹಿಸಬೇಕಾಗಿದೆ.”

|ಹಳೇ ವಿದ್ಯಾರ್ಥಿ ಮಂಜುನಾಥ್

“ಶಾಲೆಯ ಕಾಂಪೌಂಡ್ ನಿರ್ಮಾಣ ವಿಚಾರವಾಗಿ ನಾನೂ ಸಹ ಪಿಡಿಓಗೆ ಸಾಕಷ್ಟು ಮನವಿ ಸಾಕಾಗಿದೆ. ಯಾವುದೇ ಸರಿಯಾದ ಸ್ಪಂದನೆ ಇಲ್ಲ. ಕಾಂಪೌಂಡ್ ನಿರ್ಮಾಣ ವಿಚಾರದಲ್ಲಿ ಹಿಂದೆ ಅಡೆ-ತಡೆಯೂ ಉಂಟಾಯಿತು. ಹೀಗಾಗಿ ನರೇಗಾ ಯೋಜನೆಯ ಕಾರ್ಮಿಕರು ನಿರ್ಮಾಣಕ್ಕೆ ಮುಂದಾಗದಂತಾಯಿತು. ಶಾಲೆಗೆ ಕಾಂಪೌಂಡ್ ಇಲ್ಲದೇ ಅಪಾಯದ ವಾತಾವರಣವಿರುವ ಕಾರಣ ಯಾವುದೇ ಪಠ್ಯೇತರ ಚಟುವಟಿಕೆಗಳು ನಡೆಸಲು ಆಗುತ್ತಿಲ್ಲ. ಮಕ್ಕಳ ಜೀವವನ್ನು ನಾನು ಕಾವಲುಗಾರನಾಗಿ ಕಾಯುತ್ತಿದ್ದೇನೆ. ಶಾಲೆಗೆ ಕಾಂಪೌಂಡ್ ಇಲ್ಲದೇ ತೆರೆದ ಪ್ರದೇಶವಾಗಿರುವ ಕಾರಣ ಮದ್ಯ ವ್ಯಸನಿಗಳ ತಾಣವಾಗಿದ್ದು, ದಿನವೂ ಮದ್ಯದ ಬಾಟಲ್, ಪೌಚ್ಗಳ ಸ್ವಚ್ಚಗೊಳಿಸಿ ಶಾಲೆಯೊಳಗೆ ಕರ್ತವ್ಯಕ್ಕೆ ತೆರಳುವಂತಾಗಿದೆ.”

| ಜಯರಾಜ್, ಮುಖ್ಯೋಪಾದ್ಯಾಯರು

“ಇನ್ನೆರಡು ದಿನಗಳಲ್ಲಿ ನಿರ್ಮಾಣ ಕಾರ್ಯ ಪ್ರಗತಿಗೆ
ನರೇಗಾ ಯೋಜನೆಯಡಿಯ ಈ ಕಾಮಗಾರಿ ಕೈಗೊಳ್ಳಲು ಉದ್ಯೋಗ ಖಾತ್ರಿ ಕಾರ್ಡ್ವುಳ್ಳ ಕಾರ್ಮಿಕರು ಮುಂದಾಗುತ್ತಿಲ್ಲ. ಕಾಂಪೌಂಡ್ ನಿರ್ಮಾಣದಲ್ಲಿ ತಡವಾಗುತ್ತಿರುವುದಾಗಲೀ, ಅಡೆ-ತಡೆ ಬಗ್ಗೆಯಾಗಲೀ ನನಗೆ ಯಾವುದೇ ಮಾಹಿತಿ ಇಲ್ಲ. ಇದೀಗ ಶಾಲೆಯ ಹಳೇ ವಿದ್ಯಾರ್ಥಿಗಳು ಸಹಕಾರ ನೀಡಲು ಮುಂದಾಗಿದ್ದು, ಇನ್ನೆರಡು ದಿನಗಳಲ್ಲಿ ನಿರ್ಮಾಣ ಕಾರ್ಯ ಪ್ರಗತಿಗೆ ಬರಲಿದೆ”

| ರಶ್ಮಿ, ಪ್ರಭಾರ ಪಿಡಿಓ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

Published

on

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.

ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.

ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.

ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು‌.”

  • ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
  • ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

Published

on

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.

ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.

ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending