ದಿನದ ಸುದ್ದಿ
ವಿಡಿಯೊ | ಚನ್ನಗಿರಿ : ಶಾಸಕ ಮಾಡಾಳು ವಿರೂಪಾಕ್ಷಪ್ಪರಿಂದ ಕೋಗಲೂರು ಗ್ರಾಮದಲ್ಲಿ ಅಹಾರ ಕಿಟ್ಟುಗಳ ವಿತರಣೆ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/05/channagiri_madal_virupakshappa_Suddidina.jpg&description=ವಿಡಿಯೊ | ಚನ್ನಗಿರಿ : ಶಾಸಕ ಮಾಡಾಳು ವಿರೂಪಾಕ್ಷಪ್ಪರಿಂದ ಕೋಗಲೂರು ಗ್ರಾಮದಲ್ಲಿ ಅಹಾರ ಕಿಟ್ಟುಗಳ ವಿತರಣೆ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/05/channagiri_madal_virupakshappa_Suddidina.jpg&description=ವಿಡಿಯೊ | ಚನ್ನಗಿರಿ : ಶಾಸಕ ಮಾಡಾಳು ವಿರೂಪಾಕ್ಷಪ್ಪರಿಂದ ಕೋಗಲೂರು ಗ್ರಾಮದಲ್ಲಿ ಅಹಾರ ಕಿಟ್ಟುಗಳ ವಿತರಣೆ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ಚನ್ನಗಿರಿ : ತಾಲೂಕಿನ ಹಿರೇ ಕೋಗಲೂರು ಗ್ರಾಪಂ ವ್ಯಾಪ್ತಿಯ, ಗಿರಿಯಾಪುರ , ಚಿಕ್ಕ ಕೋಗಲೂರು ಗ್ರಾಮಗಳ ಬಡವವರಿಗೆ 500 ಆಹಾರ ಕಿಟ್ಟುಗಳನ್ನು ಶಾಸಕರಾದ ಮಾಡಾಳು ವಿರೂಪಾಕ್ಷಪ್ಪ ಅವರು ಶುಕ್ರವಾರ ವಿತರಿಸಿದರು.
ಆಹಾರದ ಕಿಟ್ಟುಗಳನ್ನು ವಿತರಿಸಿ ಮಾತನಾಡಿದ ಅವರು, ತಾಲೂಕಿನದ್ಯಾಂತ ಪ್ರತಿ ಗ್ರಾಮಗಳಿಗೆ ಬೇಟಿ ಮಾಡಿ ಗ್ರಾಮದ ಮುಖಂಡರುಗಳು ಆಯ್ಕೆ ಮಾಡಿದಂತಹ ಬಡವರಿಗಾಗಿ ಲಕ್ಷಾಂತರ ಅಹಾರ ಕಿಟ್ಟುಗಳನ್ನು ವಿತರಣೆ ಮಾಡುತಿದ್ದೇವೆ ಎಂದರು.
ಲಾಕ್ಡೌನ್ ನಿಂದಾಗಿ ಕೂಲಿ ಕೆಲಸವಿಲ್ಲದೆ ಮನೆಯಲ್ಲಿರುವಂತಹ ಕಾರ್ಮಿಕರು ಮತ್ತು ಬಡವರಿಗಾಗಿ ಅಹಾರ ಕಿಟ್ಟುಗಳ ಖರೀದಿಗಾಗಿ ಸಾರ್ವಜನಿಕರಿಂದ ದೇಣಿಗೆಯನ್ನು ಸಂಗ್ರಹಿಸಿ ಮತ್ತು ಶಾಸಕರ ಅನುಧಾನವನ್ನು ಬಳಸಿಕೊಂಡು ಕಿಟ್ಟುಗಳನ್ನು ವಿತರಿಸಿದ್ದೇವೆ ಎಂದು ಹೇಳಿದರು.
ಆದ್ದರಿಂದ ನೀವುಗಳು ಮನೆಯಲ್ಲಿಯೇ ಇರಬೇಕು ಸರ್ಕಾರದ ನಿಯಮಗಳನ್ನಾ ತಪ್ಪದೆ ಪಾಲಿಸಬೇಕು ಸರ್ಕಾರ ನಿಮ್ಮೊಂದಿಗೆ ಇದೆ ಅತ್ಮಸ್ಥೈರ್ಯ ಕಳೆದು ಕೊಳ್ಳಬಾರದು ಮಹಾಮಾರಿ ಕೊರೋನ ರೋಗವನ್ನು ದೇಶದಿಂದ ಓಡಿಸಬೇಕೆಂದರೆ ತಾವುಗಳು ಮನೆಯಲ್ಲಿಯೇ ಇರಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಗಿರೀಶ್ , ತಾಪಂ ಕಾರ್ಯನಿರ್ವಾಹಣಾಧಿಕಾರಿಯಾದ ಪ್ರಕಾಶ್ , ವೃತ್ತ ನಿರೀಕ್ಷಕರಾದ ಆರ್ ಆರ್ ಪಾಟೀಲ್ , ಸಂತೇಬೆನ್ನೂರು ಪಿಎಸ್ಐ ಶಿವರುದ್ರಪ್ಪ ಎಸ್ ಮೇಟಿ , ಹೆಚ್ ಯು ಮಲ್ಲಿಕಾರ್ಜುನ , ಜಗದೀಶ್ ಗೌಡ , ಶರಣಪ್ಪ ಎಸ್ ಬಿ ಗ್ರಾಪಂ ಅಧ್ಯಕ್ಷರಾದ ಅನುಭಾಗ್ಯಮ್ಮ , ಉಪಾಧ್ಯಕ್ಷರಾದ ಶಂಕರಮ್ಮ , ಚಿದಾನಂದಯ್ಯ , ಸುನಿಲ್ , ರಾಜಶೇಖರಪ್ಪ ಉಪಸ್ಥಿತರಿದ್ದರು.
ವಿಡಿಯೋ ನೋಡಲು ಲಿಂಕ್ ಮೇಲೆ ಕ್ಲಿಕ್ ಮಾಡಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ಅಂತರಂಗ4 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ7 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ2 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ3 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ3 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ15 hours agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

