Connect with us

ದಿನದ ಸುದ್ದಿ

ಚನ್ನಗಿರಿ | ಬಕ್ರೀದ್ ಹಬ್ಬದ ಹಿನ್ನೆಲೆ : ನಾಗರಿಕ ಸೌಹಾರ್ಧ ಸಭೆ ; ಶಾಂತಿಯುತವಾಗಿ ಹಬ್ಬ ಆಚರಿಸಿ : ಎಸ್ಪಿ ಉಮಾ ಪ್ರಶಾಂತ್

Published

on

ಸುದ್ದಿದಿನಡೆಸ್ಕ್: ದಾವಣಗೆರೆ ಜಿಲ್ಲೆ ಶಾಂತಿಯುತ ಜಿಲ್ಲೆಯಾಗಿದ್ದು, ಬಕ್ರೀದ್ ಹಬ್ಬವನ್ನು ಎಲ್ಲರೂ ಸೌಹಾರ್ದಯುತವಾಗಿ, ಶಾಂತಿಯುತವಾಗಿ ಆಚರಿಸುವಂತೆ ಪೋಲಿಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದರು.

ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಚನ್ನಗಿರಿ ಪಟ್ಟಣದ ತಾಲ್ಲೂಕು ಪಂಚಾಯ್ತಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾ ಪೊಲೀಸ್ ವತಿಯಿಂದ, ಬಕ್ರೀದ್ ಹಬ್ಬದ ಅಂಗವಾಗಿ ಚನ್ನಗಿರಿ ಉಪವಿಭಾಗದ ನಾಗರೀಕ ಶಾಂತಿ ಸಭೆಯನ್ನು ಇಂದು ನಡೆಸಲಾಯಿತು.

ಈ ಸಭೆಯಲ್ಲಿ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರು ಹಾಗೂ ಉಪವಿಭಾಗಾಧಿಕಾರಿ ಶ್ರೀ ಅಭಿಷೇಕ್, ತಹಶೀಲ್ದಾರ್ ಶ್ರೀ ಯರಿ ಸ್ವಾಮಿ, ಇಒ ಶ್ರೀ ಉತ್ತಮ್, ಡಾ.ಅಶೋಕುಮಾರ್ ಪಶು ವೈದ್ಯಾಧಿಕಾರಿಗಳು, ಡಿಎಸ್‌ಪಿ ಚನ್ನಗಿರಿ ಉಪವಿಭಾಗ, ಪೊಲೀಸ್ ನಿರೀಕ್ಷಕರು ಚನ್ನಗಿರಿ, ನ್ಯಾಮತಿ, ಹೊನ್ನಾಳಿ ಮತ್ತು ಡಿಎಸ್‌ಬಿ ಶಾಖೆ ರವರು ಉಪಸ್ಥಿತರಿದ್ದರು.

ನಾಗರೀಕರಾದ ಹೊನ್ನಾಳಿ ಎಂ.ಆ‌ರ್ ಮಹೇಶ್, ಅಮಾನುಲ್ಲಾ ಚನ್ನಗಿರಿ ಕಾಂಗ್ರೆಸ್ ಮುಖಂಡರು, ಶ್ರೀನಿವಾಸ ಮೂರ್ತಿ ರೈತ ಮುಂಡರು, ಸರ್ಧಾ‌ರ್ ಅಹ್ಮದ್ ಚನ್ನಗಿರಿ, ದೇವೆಂದ್ರಪ್ಪ ಸಂತೇಬೆನ್ನೂರು, ಮಹಬೂಬ್ ಪೀರ್ ಚನ್ನಗಿರಿ, ಮಹ್ಮದ್ ಸೈಫುಲ್ಲಾ, ಜಬ್ಬಾರ್ ಆಲಿಖಾನ್ ಸಾಸ್ಟೇಹಳ್ಳಿ, ಮಂಜುನಾಥ ವಿಶ್ವಹಿಂದೂ ಪರಿಷತ್ ಚನ್ನಗಿರಿ, ಯೂನಿಷ್ ಭಾಷ ಹಾಗೂ ನಾಗಪ್ಪ ಹೊನ್ನಾಳಿ. ಡಿ ಬಸವರಾಜ್ ಮಾಜಿ ನಿಗಮಮಂಡಳಿ ಅಧ್ಯಕ್ಷರು, ಫಾಜಿಲ್, ಲಾಲುಸಾಬ್ ನಲ್ಲೂರು ಸೇರಿದಂತೆ ಸುಮಾರು 80- 100 ಜನ ಭಾಗವಹಿಸಿದ್ದರು.

ಸಭೆಯಲ್ಲಿ ನಾಗರೀಕರ ಅನಿಸಿಕೆಗಳನ್ನು ಆಲಿಸಿದ್ದು, ಈ ಸಂದರ್ಭದಲ್ಲಿ ಬಕ್ರೀದ್ ಹಬ್ಬವನ್ನು ನಾವುಗಳು ಎಲ್ಲರೂ ಶಾಂತರೀತಿಯಿಂದ ಆಚರಿಸುವುದಾಗಿ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending