Connect with us

ದಿನದ ಸುದ್ದಿ

ಚನ್ನಗಿರಿ | ಕುಡಿಯುವ ನೀರಿಗೆ ರೂ.5.47 ಕೋಟಿ ಹಣ ಮಂಜೂರು: ಸಚಿವ ಭೈರತಿ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ : ಚನ್ನಗಿರಿ ಪಟ್ಟಣದ ಕುಡಿಯುವ ನೀರಿಗಾಗಿ ನಗರಾಭಿವೃದ್ದಿ ಇಲಾಖೆಯಿಂದ ರೂ.5.47 ಕೋಟಿ ಮಂಜೂರು ಮಾಡಲಾಗಿದೆ ಎಂದು ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಹೇಳಿದರು.

ಚನ್ನಗಿರಿ ತಾಲ್ಲೂಕಿನ ತಣಿಗೆರೆ ಗ್ರಾಮದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಸಂತೆಬೆನ್ನೂರು ಹೋಬಳಿ ಮಟ್ಟದ ಜನಸ್ಪಂದನ ಸಭೆಯಲ್ಲಿ ಮಾತನಾಡಿದ ಅವರು ತಾಲ್ಲೂಕಿನಲ್ಲಿ ಕಳೆದ 3 ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಗ್ರಾಮಸ್ಥರಿಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ಸರ್ಕಾರದಿಂದ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಕುಡಿಯುವ ನೀರಿನ ಯೋಜನೆಯಡಿ ಪ್ರತಿಯೊಂದು ಗ್ರಾಮದಲ್ಲೂ ಜನರ ಮನೆ ಮನೆಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದು ಮುಂದಿನ ದಿನಗಳಲ್ಲಿ ಗ್ರಾಮಗಳಲ್ಲಿ ಜನರು ಕುಡಿಯುವ ನೀರಿಗಾಗಿ ಪರದಾಡುವುದು ತಪ್ಪಲಿದೆ ಎಂದರು.

ಸೋಮವಾರ ಈ ಭಾಗದಲ್ಲಿ ರೂ.28.79 ಕೋಟಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮಗಳು ನೆರವೇರಿದ್ದು, ಶಾಸಕರ ಕಾಳಜಿಯಿಂದಾಗಿ ತಾಲ್ಲೂಕು ಅಭಿವೃದ್ದಿ ಪಥದಲ್ಲಿ ಸಾಗುತ್ತಿದೆ ಎಂದ ಅವರು ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ನಾಯಕತ್ವದ ನಮ್ಮ ಸರ್ಕಾರ ರಾಜ್ಯದ ಸಮಗ್ರ ಅಭಿವೃದ್ದಿ ದೃಷ್ಟಿಯಲ್ಲಿಟ್ಟುಕೊಂಡು ಕರೋನಾ ಸಂದರ್ಭದಲ್ಲೂ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗದಂತೆ ಕಾರ್ಯಕ್ರಮಗಳನ್ನು ನೀಡಿದೆ ಎಂದರು.

ಇದನ್ನೂ ಓದಿ | ಚಿತ್ರದುರ್ಗ | ನೀರಾವರಿ ಸಮಿತಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸರಿಯಿಲ್ಲ : ಸಮಿತಿ ಸಂಚಾಲಕರ ಅಭಿಮತ

ಈ ಜನಸ್ಪಂದನ ಕಾರ್ಯಕ್ರಮದ ಮುಖ್ಯ ಉದ್ದೇಶ ಗ್ರಾಮಗಳ ಅಭಿವೃದ್ಧಿಯಾಗಿದೆ. ಗ್ರಾಮಗಳಲ್ಲಿ ಕಾಂಕ್ರೀಟ್ ರಸ್ತೆ, ದೇವಸ್ಥಾನಗಳ ಜೀರ್ಣೋದ್ದಾರ, ಸಮುದಾಯ ಭವನಗಳ ನಿರ್ಮಾಣ, ಶಾಲೆಗಳ ನವೀಕರಣಕ್ಕಾಗಿ ಸರ್ಕಾರದಿಂದ ರೂ28.79 ಲಕ್ಷವನ್ನು ಮಂಜೂರು ಮಾಡಲಾಗಿದೆ ಎಂದರು.

ರೈತರು, ಬಡವರು, ಮತ್ತು ದೀನದಲಿತರಿಗಾಗಿ ಕೃಷಿಯಂತ್ರೋಪಕರಣಗಳನ್ನು, ಹಾಗೂ ಕೈಗಾಡಿಗಳನ್ನು ಫಲಾನುಭವಿಗಳಿಗೆ ವಿತರಿಸಿದ ಅವರು, ಗ್ರಾಮದ ಜನರಿಗೆ ಆರ್ಥಿಕವಾಗಿ ಸಬಲರಾಗಬೇಕಾದರೆ ಸರ್ಕಾರದಿಂದ ಬರುವ ಅನುದಾನದ ಸೌಲಭ್ಯ ಪಡೆದು ಸದುಪಯೋಗ ಪಡೆದುಕೊಳ್ಳಬೇಕು. ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ಪಡೆದು ವ್ಯವಸಾಯಕ್ಕೆ ರೈತರು ಬಳಸಿಕೊಳ್ಳಬಹುದು.

ಪಿ.ಎಂ.ಕಿಸಾನ್ ಯೋಜನೆಯಡಿಯಲ್ಲಿ ರೈತರಿಗೆ ಕೇಂದ್ರದಿಂದ ರೂ.6 ಸಾವಿರ ಮತ್ತು ರಾಜ್ಯ ಸರ್ಕಾರದಿಂದ ರೂ.4 ಸಾವಿರ ಹಣ ರೈತರ ಖಾತೆಗೆ ಜಮಾ ಮಾಡಲಾಗುತ್ತಿದೆ. ಹಾಗೂ ಕೃಷಿ ಇಲಾಖೆಯಿಂದ ಕೃಷಿ ಯಂತ್ರೋಪಕರಣಗಳನ್ನು ನಿಗದಿತ ಬಾಡಿಗೆ ರೂಪದಲ್ಲಿ ಪಡೆದು ವ್ಯವಸಾಯಕ್ಕೆ ಅನುಕೂಲ ಪಡೆಯಬಹುದು.

ಹಾಗೆಯೇ ಈ ಬಾರಿಯ ಬಜೆಟ್‍ನಲ್ಲಿ ನಾವು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು ದಾವಣಗೆರೆ ಜಿಲ್ಲೆಯ ಚಿಗಟೇರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಕಾಲೇಜು ಆರಂಭ ಮಾಡಲು ಚರ್ಚಿಸಲಾಗಿದೆ. ಹಾಗೂ ನಮ್ಮ ಜಿಲ್ಲೆಯಲ್ಲಿ ಕೃಷಿ ವಿಜ್ಞಾನ ಕಾಲೇಜು ಸ್ಥಾಪನೆಯಾಗಬೇಕು ಎಂದು ಅವರಲ್ಲಿ ಮನವಿ ಮಾಡಿದ್ದೇವೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆ.ಎಸ್.ಡಿ.ಎಲ್. ನ ಅಧ್ಯಕ್ಷರು ಹಾಗೂ ಚನ್ನಗಿರಿ ಕ್ಷೇತ್ರದ ಶಾಸಕ ಕೆ.ಮಾಡಾಳ್ ವಿರುಪಾಕ್ಷಪ್ಪ, ಜನರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು ಹುಡುಕುವ ಬದಲಾಗಿ ಅವರೇ ಜನರ ಬಳಿ ಬಂದಾಗ ಸಮಸ್ಯೆಗಳು ಜನಪ್ರತಿನಿಧಿಗಳಿಗೆ ಮತ್ತು ಅಧಿಕಾರಿಗಳಿಗೆ ತಿಳಿಯುತ್ತದೆ ಇದರಿಂದ ನಾವು ಮಾಡಬೇಕಾಗಿರುವ ಕೆಲಸದ ಅರಿವು ನಮಗಾಗುತ್ತದೆ ಎಂದರು.

ಅಧಿಕಾರಿಗಳ ಭೇಟಿಗೆ ಸಾಮಾನ್ಯ ಜನ ತೆರಳಿದರೆ ಗಂಟೆಗಟ್ಟಲೇ ಕಾಯುವ ಪರಿಸ್ಥಿತಿಯಿದೆ. ಬದಲಿಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಜನರ ನಡುವೆ ಇದ್ದಲ್ಲಿ ಜನರ ಕಷ್ಟ-ಸುಖಗಳನ್ನು ಮಕ್ತವಾಗಿ ಗ್ರಹಿಸುವ ಮತ್ತು ಅವರ ಬೇಡಿಕೆಗಳನ್ನು ಈಡೇರಿಸಲು ಈ ಕಾರ್ಯಕ್ರಮದಿಂದ ಸಾಧ್ಯವಾಗಲಿದೆ.

ಸಂಧ್ಯಾ ಸುರಕ್ಷಾ, ವೃದ್ಧಾಪ್ಯ, ನಿರ್ಗತಿಕ ವಿಧವಾ ವೇತನ, ಅಂಗವಿಕಲರ ವೇತನ, ಮನಸ್ವಿನಿ ವೇತನ, ಅಕ್ರಮ ಸಕ್ರಮ ಯೋಜನೆ ನಿವೇಶನ ಹಕ್ಕು ಪತ್ರಗಳಿಗಾಗಿ ವಿ.ಎ, ಆರ್.ಐ ಬಳಿ ತಿಂಗಳಗಟ್ಟಲೇ ಅಲೆದಾಡುವ ಸಮಸ್ಯೆ ಇತ್ತು. ಇಂದು ಸರ್ಕಾರ ಮತ್ತು ಅಧಿಕಾರಿಗಳು ನಿಮ್ಮ ಬಳಿಗೆ ಬಂದು ಸುಮಾರು ರೂ. 37.70 ಲಕ್ಷಗಳ ವಿವಿಧ ಪ್ರಯೋಜನಗಳನ್ನು ವಿತರಿಸಲಾಗಿದೆ. ಹಾಗೂ 60 ವರ್ಷ ಮೇಲ್ಪಟ್ಟಂತಹ ಜನರನ್ನು ಅಧಿಕಾರಿಗಳೇ ಗುರುತು ಮಾಡಿ ಅವರಿಗೆ ಮುಂದಿನ ತಿಂಗಳಿಂದಲೇ ಮಾಶಾಸನ ನೀಡುವಂತೆ ನಿರ್ದೇಶನ ನೀಡಲಾಗಿದೆ ಎಂದರು.

ಇಂದು ಬಹಳ ಜನ ರೈತರು ಬಗರ್ ಹುಕುಂ ಸಾಗುವಳಿ ಮಾಡಿದ್ದು ಅಂತಹವರಿಗೆ ಸರ್ಕಾರದ ಜಮೀನನ್ನು ಕೊಡಲು ಅವಕಾಶವಿದ್ದರೆ ಹಾಗೂ ಅರಣ್ಯ ಇಲಾಖೆಯ ಆಕ್ಷೇಪಣೆ ಇಲ್ಲದಿದ್ದಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ. ಮರಡಿ ಗ್ರಾಮದಲ್ಲಿ 1965-66 ನೇ ಸಾಲಿನಲ್ಲಿ ನೀಲಕಂಠಪ್ಪ ಎಂಬುವರು ಕೈಗಾರಿಕೆ ಸ್ಥಾಪನೆ ಉದ್ದೇಶದಿಂದ ಸುಮಾರು 40 ರಿಂದ 50 ಎಕರೆ ಜಮೀನನ್ನು ಮಂಜೂರು ಮಾಡಿಸಿಕೊಂಡಿದ್ದು ಇದುವರೆಗೂ ಯಾವುದೇ ಕೈಗಾರಿಕೆ ಸ್ಥಾಪನೆಯಾಗಿಲ್ಲ.

ಇಂದಿಗೂ ಆ ಪ್ರದೇಶ ಕೈಗಾರಿಕೆ ಪ್ರದೇಶವಾಗಿಯೇ ಉಳಿದಿದೆ. ಆ ಪ್ರದೇಶವನ್ನು ಬಗರ್ ಹುಕುಂ ಸಾಗುವಳಿದಾರರಿಗೆ ವಿತರಿಸಲು ಅವಕಾಶ ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಬಹಳಷ್ಟು ಬಡ ಜನರು ಮರಣ ಹೊಂದಿದಲ್ಲಿ ಹೂಳಲು ಜಾಗವಿಲ್ಲದೆ ಪರದಾಡುವ ಸ್ಥಿತಿಯಿದೆ ಹಾಗಾಗಿ ಸರ್ಕಾರಿ ಜಮೀನು ಲಭ್ಯವಿರುವೆಡೆ ಗ್ರಾಮಕ್ಕೊಂದು ರುದ್ರಭೂಮಿ ನಿರ್ಮಾಣ ಮಾಡಲು ತಹಶೀಲ್ದಾರ್ ಅವರಿಗೆ ನಿರ್ದೇಶನ ನೀಡಲಾಗಿದೆ. ಮಾದರಿಯಾಗಿ ಮಂಗೇನಹಳ್ಳಿ ಗ್ರಾಮದಲ್ಲಿ ಸುಮಾರು ರೂ.50 ಲಕ್ಷ ವೆಚ್ಚದಲ್ಲಿ ರುದ್ರಭೂಮಿ ನಿರ್ಮಾಣ ಮಾಡಲಾಗಿದೆ.

ಪ್ರತಿ ಗ್ರಾಮದಲ್ಲಿ ತಲಾ ರೂ.20 ಲಕ್ಷ ವೆಚ್ಚದಲ್ಲಿ ಎಸ್ ಟಿ ಸಮುದಾಯ ಭವನ ನಿರ್ಮಾಣ ಮಾಡಲಾಗುತ್ತಿದೆ. ತಾಲ್ಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಲ್ಲ. ತಾಲ್ಲೂಕಿನಲ್ಲಿ ಕೆ.ಇ.ಬಿ ಯಿಂದ ತಂತಿಗಳು ಮತ್ತು ಹಳೆ ಕಂಬಗಳನ್ನು ಬದಲಾಯಿಸಿ ಹೊಸ ಟಿ.ಸಿ ಗಳನ್ನು ಸ್ಥಾಪಿಸಲು ಸುಮಾರು ರೂ.120 ಕೋಟಿ ಹಣ ಮಂಜೂರಾತಿ ಮಾಡಿಸಲಾಗಿದೆ ಎಂದರು.

ಸಂಸದರಾದ ಜಿ.ಎಂ. ಸಿದ್ದೇಶ್ವರ ಮಾತನಾಡಿ ಈ ಕಾರ್ಯಕ್ರಮದ ಮೂಲಕ ಜನರು ತಾಲ್ಲೂಕು ಮತ್ತು ಜಿಲ್ಲಾ ಕಚೇರಿಗಳ ಬಳಿ ಹಾಗೂ ವಿವಿಧ ಇಲಾಖೆಗಳಿಗೆ ಅಲೆದಾಡುವುದನ್ನು ತಪ್ಪಿಸಿ ಇಲಾಖೆಗಳೇ ನಿಮ್ಮ ಮನೆ ಬಾಗಿಲಿಗೆ ಬಂದು ವಿವಿಧ ಸರ್ಕಾರದ ಸೌಲಭ್ಯಗಳನ್ನು ಫಲಾನುಭವಿಗಳಿಗೆ ನೀಡುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯದಂತಹ ಕಾರ್ಯಕ್ರಮವನ್ನು ಆಯೋಜಿಸಿ ಅಲ್ಲಿನ ಗ್ರಾಮಗಳ ಜನರ ಸಮಸ್ಯೆಗಳನ್ನು ಪರಿಶೀಲಿಸಿದರೆ ಪರಿಹಾರ ನೀಡಲು ನೆರವಾಗುತ್ತದೆ.

ಸರ್ಕಾರದ ಮತ್ತೊಂದು ಯೋಜನೆಯಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಇಂತಹ ಕಾರ್ಯಕ್ರಮಗಳ ಮೂಲಕ ಸರ್ಕಾರ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ನೇರವಾಗಿ ಫಲಾನುಭವಿಗಳಿಗೆ ಸೌಲಭ್ಯ ನೀಡುತ್ತಿದೆ. ಜನರಿಗೆ ವೃದ್ಧಾಪ್ಯವೇತನ, ವಿಧವಾವೇತನ, ಅಂಗವಿಕಲರ ವೇತನ, ಮುಂತಾದ ಸೌಲಭ್ಯಗಳನ್ನು ಕಾಲವಿಳಂಬವಿಲ್ಲದೇ ಮಾಡಲು ಅನುಕೂಲವಾಗಿದೆ. ಸರ್ಕಾರವು ರೈತರಿಗಾಗಿ, ಬಡವರಿಗಾಗಿ ದೀನ-ದಲಿತರಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಉಜ್ವಲ ಯೋಜನೆಯಡಿ ದೇಶದಲ್ಲಿ ಸುಮಾರು ರೂ.12 ಕೋಟಿ ಫಲಾನುಭವಿಗಳಿಗೆ ಉಚಿತ ಒಲೆ ಮತ್ತು ಗ್ಯಾಸ್ ಸೌಲಭ್ಯ ನೀಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಅಧ್ಯೆಕ್ಷೆ ಕೆ.ವಿ.ಶಾಂತಕುಮಾರಿ, ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಸಾಕಮ್ಮ ಗಂಗಾಧರನಾಯ್ಕ್, ಚನ್ನಗಿರಿ ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ಕವಿತಾ ಕಲ್ಲೇಶ್, ತಾಲ್ಲೂಕು ಪಂಚಾಯಿತಿ ಉಪಾಧ್ಯೆಕ್ಷೆ ಚಂದ್ರಮ್ಮ ರುದ್ರಪ್ಪ, ತಣಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಾಣಿ ಪ್ರಕಾಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಮುಖ್ಯ ಕಾರ್ಯನಿರ್ವಹಕಾಧಿಕಾರಿ ವಿಜಯ ಮಹಾಂತೇಶ ಬಿ ದಾನಮ್ಮನವರ್, ಉಪವಿಭಾಗಾಧಿಕಾರಿ ಮಮತ ಹೊಸಗೌಡರ, ಪ್ರಭಾರ ಪೊಲೀಸ್ ಉಪಾಧೀಕ್ಷಕ ಬಸವರಾಜ್ ಬಿ ಎಸ್, ಚನ್ನಗಿರಿ ತಹಶೀಲ್ದಾರ್ ಡಾ. ಪಟ್ಟರಾಜ ಗೌಡ ಮುಂತಾದವರು ಉಪಸ್ಥತಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.

ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

Published

on

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ...

ದಿನದ ಸುದ್ದಿ3 days ago

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ...

ದಿನದ ಸುದ್ದಿ2 weeks ago

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ...

ದಿನದ ಸುದ್ದಿ2 weeks ago

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು...

ದಿನದ ಸುದ್ದಿ2 weeks ago

ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ...

ದಿನದ ಸುದ್ದಿ3 weeks ago

ಸರ್ಕಾರಿ ಪ್ರಥಮ‌ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್...

ದಿನದ ಸುದ್ದಿ1 month ago

ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ಸೋಮವಾರ(ಫೆ.23) ರಂದು ನಗರದ...

ದಿನದ ಸುದ್ದಿ1 month ago

ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ

ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ,...

ದಿನದ ಸುದ್ದಿ1 month ago

ಜನರಿಗೆ ಗುಣಮಟ್ಟದ ಪೌಷ್ಟಿಕ ಆಹಾರ ಒದಗಿಸುವುದು ಅಧಿಕಾರಿಗಳ ಕರ್ತವ್ಯ : ಡಾ.ಹೆಚ್.ಕೃಷ್ಣ

ಸುದ್ದಿದಿನ,ದಾವಣಗೆರೆ:ಆಹಾರ ಪಡೆಯುವುದು ಜನರ ಹಕ್ಕು, ಅದನ್ನು ಅನುಷ್ಠಾನಗೊಳಿಸುವುದು ನಮ್ಮ, ನಿಮ್ಮೆಲ್ಲರ ಕರ್ತವ್ಯ. ಅದಕ್ಕೆ ಪೂರಕವಾದ ವಾತಾವರಣವನ್ನು ನಿರ್ಮಿಸುವುದು ಸಹ ನಮ್ಮೆಲ್ಲರ ಜವಾಬ್ದಾರಿ. ಜನರಿಗೆ ಕೇವಲ ಆಹಾರ ಧಾನ್ಯಗಳನ್ನು...

ದಿನದ ಸುದ್ದಿ1 month ago

ದಾವಣಗೆರೆ | ಕಂದಾಯ ಹಕ್ಕು ಪತ್ರ ಮತ್ತು ಪಾವತಿ ಆಂದೋಲನ

ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ 298 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲಾಗಿದ್ದು, ಈಗಾಗಲೇ 12,000ಕ್ಕೂ ಹೆಚ್ಚು ಹಕ್ಕು ಪತ್ರಗಳನ್ನು ವಿತರಿಸಲಾಗಿದ್ದು, ಬಾಕಿ ಇರುವವರು ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ...

Trending